Connect with us

Politics

ಆಡಳಿತ- ವಿಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾದ ವಿಧಾನ ಪರಿಷತ್  ಕಲಾಪ

Published

on

ಬೆಂಗಳೂರು: ವಿಧಾನ ಪರಿಷತ್  ಕಲಾಪ ಇಂದು ಸಹ ಆಡಳಿತ ಮತ್ತು ವಿರೋಧ ಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾಗಿದ್ದು, ಬಿಜೆಪಿ ಎಂಎಲ್‌ಸಿ ಡಾ. ಸಿ.ಟಿ. ರವಿ ವಿಷಾದ ವ್ಯಕ್ತಪಡಿಸಬೇಕು ಎಂಬ ವಿಚಾರ ಇಂದು ಕಲಾಪದಲ್ಲಿ ಸದ್ದು ಮಾಡಿತು. ಹಾಗಾಗಿ ಆಡಳಿತ-ವಿಪಕ್ಷಗಳ ನಡುವೆ ಗಲಾಟೆ ಆಗಿ ಕಲಾಪ ಮುಂದೂಡುವ ಪರಿಸ್ಥಿತಿ ಬಂದಿತ್ತು.

ಕಲಾಪ ಆರಂಭ ಆದ ತಕ್ಷಣ ಶೂನ್ಯ ವೇಳೆ ಕಲಾಪಗಳು ನಡೆದವು. ಶೂನ್ಯ ವೇಳೆ ಮುಗಿದ ಕೂಡಲೇ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ಮಾತಾಡಿ, ನಿನ್ನೆ ನಮ್ಮ ಸದಸ್ಯರು ಪ್ರಧಾನಿ ಮೋದಿ ಅವರ ಬಗ್ಗೆ ಮಾತಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಅದರಂತೆ ಸಿ.ಟಿ.ರವಿ ಪಾಕಿಸ್ತಾನದ ನಾಲಿಗೆ ಅಂದಿದ್ದಕ್ಕೆ ವಿಷಾದ ವ್ಯಕ್ತಪಡಿಸಬೇಕೆಂದು ಆಗ್ರಹಿಸಿ ಸಭಾಪತಿಗಳ ಪೀಠ ಮನವಿ ಮಾಡಿದರು. ಆದರೆ ವಿಷಾದ ವ್ಯಕ್ತಪಡಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಲೀಂ ಅಹಮದ್ ಮಾತಿಗೆ ಸಚಿವ ಹೆಚ್.ಕೆ.ಪಾಟೀಲ್ ಸೇರಿ ಕಾಂಗ್ರೆಸ್ ಸದಸ್ಯರು ಧ್ವನಿಗೂಡಿಸಿದರು. ಸಿಟಿ ರವಿ ವಿಷಾದ ವ್ಯಕ್ತಪಡಿಸಬೇಕು. ಇಲ್ಲ ಅಂದರೆ ಸದನದಿಂದ ಹೊರಗೆ ಹಾಕಬೇಕು ಅಂತ ಅಡಳಿತ ಪಕ್ಷದ ಸದಸ್ಯರು ಒತ್ತಾಯಿಸಿದರು. ಇದಕ್ಕೆ ಕೌಂಟರ್ ನೀಡಿದ ವಿಪಕ್ಷ ಸದಸ್ಯರು ಸಿ.ಟಿ.ರವಿ ಪರ ಬ್ಯಾಟಿಂಗ್ ಮಾಡಿದರು.

ಇನ್ನೂ  ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತಾಡಿ, ಸಿ.ಟಿ. ರವಿ ಯಾರ ಹೆಸರು ಉಲ್ಲೇಖ ಮಾಡಿಲ್ಲ.  ರವಿ ಯಾವುದೇ ತಪ್ಪು ಮಾಡಿಲ್ಲ. ಅವರು ಕ್ಷಮೆ ಕೇಳೋ ಅವಶ್ಯಕತೆ ಇಲ್ಲ. ಕೇಳೋದು ಇಲ್ಲ ಎಂದು ತಿಳಿಸಿದರು.

ಛಲವಾದಿ ನಾರಾಯಣಸ್ವಾಮಿ ಮಾತಿಗೆ ಬಿಜೆಪಿ-ಜೆಡಿಎಸ್ ಸದಸ್ಯರು ಧ್ವನಿಗೂಡಿಸಿದರು. ಇದೇ ವೇಳೆ ಮಾತಾಡಿದ ಆಡಳಿತ-ವಿಪಕ್ಷಗಳ ನಡುವೆ ವಿಷಾದದ ಪಟ್ಟು ಜೋರಾಗಿ ನಡೆದು, ಮಾತಿನ ಸಮರಗಳು ನಡೆಯಿತು. ಸಭಾಪತಿ ಪೀಠವೂ ಯಾವುದೇ ನಿರ್ಧಾರ ಮಾಡಲು ಆಗದೇ ಕಲಾಪವನ್ನು ಊಟಕ್ಕೆ ಮುಂದೂಡಿಕೆ ಮಾಡಿದರು.

Hassan

2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ

Published

on

ಬೆಂಗಳೂರು/ಹಾಸನ: ಎತ್ತಿನಹೊಳೆ ನೀರನ್ನು 2027ರ ಅಂತ್ಯದೊಳಗೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರಿನ ಕೆರೆಗಳಿಗೆ ನೀರು ತುಂಬಿಸಲು ಎಲ್ಲಾ ಅಗತ್ಯ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಏತ್ತಿನಹೊಳೆ ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಳ್ಳಲು ಈ ಮೂರು ಜಿಲ್ಲೆಗಳ ನೀರಿನ ಸಮಸ್ಯೆಗೆ ಪರಿಹಾರ ನೀಡುವುದೇ ಮುಖ್ಯ ಉದ್ದೇಶ. ಈ ಉದ್ದೇಶ ಈಡೇರಬೇಕಾದರೆ ಬಾಕಿ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂಬುದನ್ನು ಎಲ್ಲರಿಗೂ ಮನವರಿಕೆ ಮಾಡಲಾಯಿತು.

ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಜಂಟಿ ಸಭೆಯಲ್ಲಿ ಕೋಲಾರ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವರಾದ ಎಂಸಿ ಸುಧಾಕರ್ ಹಾಗೂ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಭಾಗಿಯಾಗಿದ್ದರು. ಈ ಸಭೆಯಲ್ಲಿ, “2027ರಲ್ಲಿ ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆಯ ಮೂಲಕ ಕುಡಿಯುವ ನೀರು ಹರಿಯುವುದನ್ನು ಖಚಿತಪಡಿಸುವಂತೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಲಾಯಿತು.

ಸಚಿವರ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಸಮೀರ್ ಶುಕ್ಲಾ, ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೆಶಕರಾದ ರಾಜೇಶ್ ಅಮ್ಮಿನಭಾವಿ ಹಾಗೂ 3 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಿಇಓಗಳು, ಎಸ್ಎಲ್ಓ ಗಳು ಉಪಸ್ಥಿತರಿದ್ದು ಸಂಬಂಧಿತ ಎಲ್ಲಾ ಅಧಿಕಾರಿಗಳಿಗೂ ಅಗತ್ಯ ಸೂಚನೆ ನೀಡಲಾಗಿದೆ.

ಪ್ರಮುಖವಾಗಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಯ ಗಡಿಯವರೆಗೆ ತರಲು ಕಾಮಗಾರಿ ಪ್ರಗತಿಯಲ್ಲಿದೆ. ಮುಂದೆ ದೊಡ್ಡಬಳ್ಳಾಪುರದಿಂದ ಕುಂದಾಣ ಮಾರ್ಗವಾಗಿ ಒಂದು ಪೈಪ್‌ ಲೈನ್ ಕೋಲಾರ ಹಾಗೂ ಬಂಗಾರಪೇಟೆ ಕಡೆಗೆ, ಮತ್ತೊಂದು ಪೈಪ್‌ ಲೈನ್ ಚಿಂತಾಮಣಿ ಶ್ರೀನಿವಾಸಪುರ ಮಾರ್ಗವಾಗಿ ಮುಳಬಾಗಿಲು ಕಡೆಗೆ ಅಳವಡಿಸಲು ಕೂಡಲೇ ಕಾಮಗಾರಿ ಆರಂಭಿಸಲು ಸಭೆಯಲ್ಲಿ ಸೂಚಿಸಲಾಯಿತು.

ಈ ಪೈಪ್‌ ಲೈನ್‌ಗಳು ಒಟ್ಟು 261.90 ಕಿ.ಮೀ. ದೂರು ಅಳವಡಿಸಬೇಕಿದೆ. ಪೈಪ್‌ ಲೈನ್ ಅಳವಡಿಸಲು ಅಗತ್ಯವಿರುವ ಭೂ ಸ್ವಾಧೀನವನ್ನು ಕೂಡಲೇ ಮಾಡಲು ಭೂ ಸ್ವಾಧೀನ ಅಧಿಕಾರಿಗಳಿಗೆ ಸೂಚಿಸಲಾಯಿತು. ಭೂ ಸ್ವಾಧೀನ ಆದೇಶ ಹೊರಡಿಸಿದ ಭಾಗದಲ್ಲಿ ಪೈಪ್‌ ಲೈನ್ ಅಳವಡಿಕೆಯನ್ನು ಕೂಡಲೇ ಆರಂಭಿಸಲು ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಮುಂದುವರೆದು, ಕುಡಿಯುವ ನೀರು ಒದಗಿಸಬೇಕಾದರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೀರು ಶುದ್ದೀಕರಣ ಘಟಕ ಹಾಗೂ ಗ್ರಾಮಗಳಿಗೆ ನೀರು ತಲುಪಿಸುವ ಪೈಪ್‌ ಲೈನ್ಗಳನ್ನು ಅಳವಡಿಸಲು ಅಂದಾಜು ಪಟ್ಟಿ ಹಾಗೂ ಪ್ರಸ್ತಾವನೆಗಳನ್ನು ಕೂಡಲೇ ತಯಾರಿಸಿ ಅನುಮೋದನೆಗೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಒಟ್ಟಾರೆ 2027ರ ಅಂತ್ಯಕ್ಕೆ ನೀರನ್ನು ಈ ಮೂರೂ ಜಿಲ್ಲೆಗಳಿಗೆ ತಲುಪಿಸಲು ಮತ್ತು ನೀರನ್ನು ಶುದ್ದೀಕರಿಸಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಸಂಬಂಧಿತ ಎಲ್ಲಾ ಇಲಾಖೆಗಳು ಸಮನ್ವಯದಿಂದ ಮತ್ತು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ತೀರ್ಮಾನಿಸಲಾಯಿತು.

Continue Reading

Politics

ವಿಬಿ ಜಿ ರಾಮ್‌ಜಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡನೆ: ಸಿಎಂ ಹೇಳಿಕೆಗೆ ಸದನದಲ್ಲಿ ಭಾರೀ ಗದ್ದಲ

Published

on

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ವಿಬಿ ಜಿ ರಾಮ್‌ಜಿ ಕಾಯ್ದೆವಿಚಾರದ ಬಗ್ಗೆ  ಆಡಳಿತ ಹಾಗೂ ವಿರೋಧ ಪಕ್ಷಗಳ ಮಧ್ಯೆ ಕಿಚ್ಚು ಹಚ್ಚಿತ್ತು. ಸಿಎಂ ಸಿದ್ದರಾಮಯ್ಯ ಅವರು ವಿಬಿ-ಜಿರಾಮ್‌ಜಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡನೆ ವೇಳೆ ವಿಪಕ್ಷ ಸದಸ್ಯರು ತೀವ್ರವಾಗಿ ಖಂಡಿಸಿದ್ದರಿಂದ ಸದನದಲ್ಲಿ ತೀವ್ರ ಗದ್ದಲ, ವಾಕ್ಸಮರಕ್ಕೆ ದಾರಿ ಮಾಡಿಕೊಟ್ಟಿದೆ.

ವಿಧಾನಸೌಧದಲ್ಲಿ ಇಂದು  ಸರ್ಕಾರದ ನಿರ್ಣಯ ಓದಿದ ಸಿಎಂ, ಈ ಸದನ ವಿಬಿ-ಜಿರಾಮ್‌ಜಿ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತದೆ. ವಿಬಿ ಜಿ ರಾಮ್‌ ಜಿ ಕಾಯ್ದೆ ರದ್ದು ಮಾಡಬೇಕು. ಮನರೇಗಾ ಕಾಯ್ದೆ ಮೂಲ ಸ್ವರೂಪದಲ್ಲಿ ಮರು ಜಾರಿ ಮಾಡಬೇಕು. ವಿಬಿ ಜಿ ರಾಮ್‌ ಜಿ ಕಾಯ್ದೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಮನರೇಗಾ ಸಂವಿಧಾನದ ಹಕ್ಕುಗಳನ್ನು ನೀಡುವ ಯೋಜನೆ. ಕೆಲಸದ ಹಕ್ಕು ಯೋಜನೆ ನೀಡುತ್ತಿದ್ದ ಯೋಜನೆ ಮನರೇಗಾ. ನರೇಗಾ ವಾಪಸ್ ಜಾರಿ, ವಿಬಿ ಜಿ ರಾಮ್‌ ಜಿ ರದ್ದಿಗೆ ಈ ನಿರ್ಣಯ ಮೂಲಕ ಈ ಸದನ ಕೇಂದ್ರಕ್ಕೆ ಆಗ್ರಹಿಸುತ್ತದೆ. ಈ ನಿರ್ಣಯವನ್ನು ಈ ಸದನ ನಿರ್ಣಯ ಅಂಗೀಕರಿಸುತ್ತದೆ ಎಂದು ಗದ್ದಲದ ಮಧ್ಯೆಯೇ ಸಿಎಂ ನಿರ್ಣಯ ಓದಿದರು.

ಇದೇ ವೇಳೆ  ಈ ಸದನ ಅಲ್ಲ, ನಿಮ್ಮ ಸರ್ಕಾರ ವಿರೋಧಿಸುತ್ತದೆ ಎಂದು ಹೇಳಿ ಎಂದು ಅಶೋಕ್‌ ಒತ್ತಾಯಿಸಿದರು. ಆಗ ಈ ಸದನ ಈ ಸದನವೆಂದು ಒತ್ತಿ ಹೇಳಿ ವಿಪಕ್ಷಗಳಿಗೆ ಸಿಎಂ ಗುದ್ದು ನೀಡಿದರು. ಇದಕ್ಕೆ ಸರ್ಕಾರ ಸರ್ಕಾರ ಈ ಸದನ ಅಲ್ಲವೆಂದು ವಿಪಕ್ಷ ಸದಸ್ಯರು ಟಾಂಗ್‌ ನೀಡಿದರು.

ವಿಪಕ್ಷಗಳಿಂದ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಮುಂದುವರೆಯಿತು. ಆರ್‌.ಬಿ. ತಿಮ್ಮಾಪೂರ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದು ಸಿಎಂ ನಿರ್ಣಯ ಮಂಡನೆಗೆ ವಿಪಕ್ಷಗಳ ಸದಸ್ಯರು ಎದ್ದು ನಿಂತು ಅಡ್ಡಿ ಪಡಿಸಿದರು. ಈ ವೇಳೆ ವಿಪಕ್ಷಗಳ ಮೇಲೆ ಸಿಎಂ ಗರಂ ಆದರು. ಅಧ್ಯಕ್ಷರೇ ಅವರನ್ನು ಕೂರಿಸಿ, ಯಾರು ನಿಮ್ಮ ಮಾತು ಕೇಳೋದಿಲ್ಲವೋ ಅವರನ್ನು ಹೊರಗೆ ಹಾಕಿ ಎಂದು ಸಿಎಂ ವಾಗ್ದಾಳಿ ನಡೆಸಿದರು.

ಸದನದಲ್ಲಿ ಗದ್ದಲ, ಕೋಲಾಹಲ, ಪರಸ್ಪರ ಆರೋಪ, ವಾಕ್ಸಮರಗಳಿಂದ ಗೊಂದಲದ ಗೂಡಾಯ್ತು. ಇದು ಲೂಟಿ ಸರ್ಕಾರವೆಂದು ಘೋಷಣೆ ವಿಪಕ್ಷ ಸದಸ್ಯರು ಘೋಷಣೆ ಕೂಗುತ್ತಲೇ ಇದ್ದರು. ವಿಪಕ್ಷಗಳ ನಡೆಗೆ ಸಿಎಂ ತೀವ್ರ ಖಂಡಿಸಿ ಮತ್ತೆ ಆಕ್ರೋಶ ವ್ಯಕ್ತಪಡಿಸಿದರು.

ಗದ್ದಲ ನಿಯಂತ್ರಣಕ್ಕೆ ಬರದ ಹಿನ್ನೆಲೆ ಸದನವನ್ನೇ ಸ್ಪೀಕರ್ ಮುಂದೂಡಬೇಕಾಯಿತು. ಭೋಜನದ ನಂತರ ಕಲಾಪ ಶುರುವಾದರೂ ಮತ್ತೆ ಸದನದಲ್ಲಿ ಗದ್ದಲ, ಜಟಾಪಟಿ ಮುಂದುವರೆಯಿತು.

Continue Reading

Politics

ಪ್ರಧಾನಿ ಮೋದಿ-ಟ್ರಂಪ್‌ ನಡುವಿನ ಒಪ್ಪಂದ ಮಹತ್ವದ ಮೈಲಿಗಲ್ಲು: ಬಸವರಾಜ ಬೊಮ್ಮಾಯಿ

Published

on

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್‌ ನಡುವೆ ನಡೆದ ಎರಡು ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವಿನ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲು  ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು,   ಈ ಮಹತ್ವದ ಸಾಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವವರ ನಾಯಕತ್ವಕ್ಕೆ ಮತ್ತು ಅವರ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಎರಡು ರಾಷ್ಟ್ರಗಳ ನಡುವಿನ ಈ ಒಪ್ಪಂದ ರೈತರು, ನವೋದ್ಯಮಿಗಳಿಗೆ, ಕೌಶಲ್ಯ ಹೊಂದಿರುವ ಕಾರ್ಮಿಕರು, ಸಣ್ಣ ಕೈಗಾರಿಕೆಗಳು ವಿಶ್ವ ಮಟ್ಟದಲ್ಲಿ ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಲು ಹೊಸ ಅವಕಾಶಗಳನ್ನು ಒದಗಿಸಲಿದೆ ಎಂದು ಹೇಳಿದ್ದಾರೆ.

ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು ವಿಶ್ವ ಮಟ್ಟದಲ್ಲಿ ಭಾರತದ ಅಭಿವೃದ್ಧಿಗೆ ಪೂರಕವಾಗಿ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಪ್ರಧಾನಿಯವರು ಯಶಸ್ವಿಯಾಗಿದ್ದಾರೆ ಎಂದು  ತಿಳಿಸಿದ್ದಾರೆ.

Continue Reading

Trending

error: Content is protected !!