Mandya
ಕುಷ್ಠ ರೋಗ ಗುಣಪಡಿಸಬಹುದಾದ ಕಾಯಿಲೆ : ಡಾ ಸೂರ್ಯ
ಶ್ರೀರಂಗಪಟ್ಟಣ : ಚರ್ಮದ ಮೇಲೆ ತಿಳಿ, ಬಿಳಿ ಹಾಗೂ ತಾಮ್ರ ವರ್ಣದ ಮಚ್ಚೆಗಳು ಕಂಡುಬರುವುದು ಅವುಗಳಲ್ಲಿ ಸ್ಪರ್ಶ ಜ್ಞಾನ ವಿಲ್ಲದಿದ್ದರೆ ಕೂಡಲೇ ವೈದ್ಯರ ಬಳಿ ತಪಾಸಣೆ ಮಾಡಿಸಿಕೊಳ್ಳಬೇಕು ಕುಷ್ಟರೋಗಕ್ಕೆ ಭಯಪಡುವ ಅವಶ್ಯಕತೆ ಇಲ್ಲ ಖಂಡಿತ ಗುಣಪಡಿಸಬಹುದಾದ ಕಾಯಿಲೆಯಾಗಿದೆ ಎಂದು ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ.ಸೂರ್ಯ ಎ.ಎಸ್ ಹೇಳಿದರು.
ಪಟ್ಟಣದ ಲೆಪ್ರಸಿ ಕಾಲೋನಿ ಬಳಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ನಮ್ಮ ಕ್ಲಿನಿಕ್ ವತಿಯಿಂದ ಆಯೋಜಿಸಿದ್ದ “ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ” ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕುಷ್ಠ ರೋಗವು ಮುಖ್ಯವಾಗಿ ಮೈಕೋಬ್ಯಾಕ್ಟೀರಿಯಂ ಲೆಪ್ರೆ ಎಂಬ ರೋಗಾಣುವಿನಿಂದ ಬರುತ್ತದೆ ದೇವರ ಶಾಪ, ಪಾಪದ ಫಲದಿಂದ ಬರುವದಿಲ್ಲ ಜನರಲ್ಲಿ ಈ ಮೂಢನಂಬಿಕೆ ಬೇರೂರಿದ್ದು ಅದನ್ನು ಹೋಗಲಾಡಿಸಲು ಅರಿವು ಮೂಡಿಸಲಾಗುತ್ತದೆ ಕುಷ್ಠ ರೋಗಕ್ಕೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಔಷಧಿ ಕೊಡಲಾಗುತ್ತದೆ ಎಂದು ಅವರು ಸಲಹೆ ನೀಡಿದರು.

ನಂತರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ್ ಮಾತನಾಡಿ, ಕಾಯಿಲೆಯನ್ನು ಪ್ರಾರಂಭದಲ್ಲೇ ಕಂಡುಹಿಡಿದು ಚಿಕಿತ್ಸೆ ನೀಡುವುದು ಇಲಾಖೆಯ ಪ್ರಮುಖ ಗುರಿಯಾಗಿದೆ ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಹಾಗಾಗಿ ಈ ರೋಗಕ್ಕೆ ನಿಸ್ಕಾಳಜಿ ಮಾಡಿದರೆ ಅಂಗವಿಕಲತೆ ಉಂಟಾಗುತ್ತದೆ ಆದ್ದರಿಂದ ಸಾರ್ವಜನಿಕರು ತಮ್ಮ ದೇಹದ ಮೇಲೆ ಯಾವುದಾದರೂ ಮಚ್ಚೆಗಳು ಕಂಡು ಬಂದರೆ ನಿರ್ಲಕ್ಷ ಮಾಡದೆ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕೆಂದು ಸಲಹೆ ನೀಡಿದರು.
ಈ ವೇಳೆ ನಮ್ಮ ಕ್ಲಿನಿಕ್ ಶುಶ್ರೂಷಣಾಧಿಕಾರಿ ಕೋಮಲ ಪಿ ಎಸ್,ಆರೋಗ್ಯ ನಿರೀಕ್ಷಣಾಧಿಕಾರಿ ಮೇಘನಾ ಎ ಎಸ್,ಅಂಗನವಾಡಿ ಕಾರ್ಯಕರ್ತೆ ಪುಟ್ಟಲಕ್ಷ್ಮೀ ಹಾಗೂ ಧನಲಕ್ಷ್ಮೀ ಸಾರ್ವಜನಿಕರು. ಉಪಸ್ಥಿತರಿದ್ದರು.
Mandya
SSLC ಪೂರ್ವಸಿದ್ದತಾ ಪರೀಕ್ಷೆ ಪರಿಶೀಲಿಸಿದ ಜಿ.ಪಂ. ಸಿಇಓ ಕೆ.ಆರ್.ನಂದಿನಿ



Mandya
ವಿವಿಧೆಡೆ ಚಿನ್ನಾಭರಣ ಕಳವು ಮಾಡಿದ್ದ ಖದೀಮರ ಸೆರೆ ; 35 ಲಕ್ಷ ರೂ. ಮೌಲ್ಯದ ಮಾಲುಗಳ ವಶ
ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲೂಕಿನ ನಾನಾ ಭಾಗಗಳಲ್ಲಿ ಕಳವು ಪ್ರಕರಣಗಳಿಗೆ ಸಂಬಂದಿಸಿದಂತೆ ಸುಮಾರು 35 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ, ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಡಾ.ವಿ.ಜೆ.ಶೋಭರಾಣಿ ತಿಳಿಸಿದರು.
ಮಳವಳ್ಳಿ ತಾಲೂಕಿನ ಪಟ್ಟಣ ವ್ಯಾಪ್ತಿಯ ಮನೆಗಳ್ಳತನ, ಸಾಗ್ಯ ಸರಗೂರು ಗ್ರಾಮದ ಪಟ್ಟಲದಮ್ಮ ದೇವಾಸ್ಥಾನದಲ್ಲಿ ಕಳ್ಳತನ ಪೈಕಿ 168 ಗ್ರಾಂ ಚಿನ್ನ, 291 ಗ್ರಾಂ ಬೆಳ್ಳಿ ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರರಕಣದಲ್ಲಿ 19 ಬೈಕ್ಗಳನ್ನು ಆರೋಪಿಗಳನ್ನು ಬಂಧಿಸಿ ವಶಕ್ಕೆ ಪಡೆಯಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.

ಮಳವಳ್ಳಿ ಟೌನ್ನ ಗಂಗಾಧರ್ ಅವರ ಮನೆಯಲ್ಲಿ ಕಳ್ಳತನ ಪ್ರಕರಣದಲ್ಲಿ 16 ವರ್ಷದ ಬಾಲಕ ಹಾಗು ಆತನ ತಂದೆ ಬಾಬ್ಜಾನನ್ನು ಬಂಧಿಸಲಾಗಿದೆ. ತನಿಖೆಯ ವೇಳೆ ಮಳವಳ್ಳಿ ಪುರ ಪೊಲೀಸ್ ಠಾಣೆಯಲ್ಲಿ 3 ಹಲಗೂರು ಹಾಗೂ ಬನ್ನೂರು ಪೊಲೀಸ್ ಠಾಣೆಯಲ್ಲಿ ತಲಾ ಒಂದು ಪ್ರಕರಣದ ಪೈಕಿ ಒಟ್ಟು 20 ಲಕ್ಷ ರೂ ಮೌಲ್ಯದ 144 ಗ್ರಾಂ ಚಿನ್ನ, 46 ಗ್ರಾಂ ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ಪಿಎಸ್ಐಗಳಾದ ಶಿವಲಿಂಗ ದಳವಾಯಿ ಲೋಕೇಶ್, ಎಎಸ್ಐಗಳಾದ ಎಂ.ಬಿ.ಸುರೇಶ್, ರಮೇಶ್, ಸಿಬ್ಬಂದಿಗಳಾದ ಮಾದೇಶ್, ಹರ್ಷವರ್ಧನ್, ವಿಖಾಶ್, ಸಿದ್ದರಾಜು, ರಫೀಕ್ ನಧಾಫ್, ಮಂಜು ಕಾರ್ಯನಿರ್ವಹಿಸಿದ್ದಾರೆ ಎಂದರು.
ಸಾಗ್ಯ ಸರಗೂರು ಗ್ರಾಮದ ಶ್ರೀಪಟ್ಟಲದಮ್ಮ ದೇವಸ್ಥಾನದ ಬಾಗಿಲು ಒಡೆದು ಕಳ್ಳತನ ಪ್ರಕರಣದಲ್ಲಿ ತಮಿಳುನಾಡಿನ ವಿಜಯ್, ಮಣಿ, ಮಂಡ್ಯದ ಮಧುರ, ಭರತ್, ರಾಮನಗರದ ನವೀನ್, ಮೈಸೂರಿನ ಶಬ್ಬೀರ್ ಎನ್ನುವವರನ್ನು ಬಂಧಿಸಲಾಗಿದೆ. ಎಲ್ಲರ ವೃತ್ತಿ ಚಿಂದಿ ಆಯುವುದು, ಪಾತ್ರೆ ರಿಪೇರಿ ಮಾಡುವುದಾಗಿದೆ. ಆರೋಪಿಗಳ ಮೇಲೆ ಹಲಗೂರು ಠಾಣಾ ವ್ಯಾಪ್ತಿಯಲ್ಲಿ 4 ಪ್ರಕರಣಗಳಿವೆ. ಅವುಗಳಿಂದ ಮೌಲ್ಯದ 24 ಗ್ರಾಂ ಚಿನ್ನ, 245 ಗ್ರಾಂ ಬೆಳ್ಳಿ, 5094 ರೂ ಹುಂಡಿ ಹಣ, ಎರಡು ಜತೆ ದೀಪಾಲೆ ಕಂಬ, ಎರಡು ಪೂಜಾ ತಟ್ಟೆ, 5 ಗಂಟೆ, ಬೈಕ್ ಮತ್ತು ಗೂಟ್ಸ್ ಆಟೋ ಹಾಗೂ ಎರಡು ಮೇಕೆಗಳ ಮಾರಾಟದ ಹಣ ಸೇರಿ ಒಟ್ಟು 7,17,844 ರೂ. ವಶಕ್ಕೆ ಪಡೆಯುವಲ್ಲಿ ಠಾಣೆಯ ಪಿಎಸ್ಐ ಲೋಕೇಶ್, ರಿಯಾಜ್ ಪಾಷ, ಪ್ರಭುಸ್ವಾಮಿ, ರವಿಕಿರಣ್, ಲೋಕೇಶ್, ಸಿದ್ದರಾಜು, ಮೋಹನ್ಕುಮಾರ್, ರಫಿಕ್ ನಧಾಫ್ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

ಮಳವಳ್ಳಿ ಪಟ್ಟಣದ ಕೆಎಸ್ಆರ್ಟಿಸಿ ಬಸ್ನಿಲ್ದಾಣದ ಬಳಿ ಬೈಕ್ ಕಳ್ಳತನ ಬೇದಿಸಿರುವ ಟೌನ್ ಪೊಲೀಸರು ಮೈಸೂರಿನ ಕೆ.ಕಾರ್ತಿಕ್ ಮಳವಳ್ಳಿಯ ಎಸ್.ಎಸ್.ಸಾಗರ್ ಮತ್ತು ಎಂ.ಸಿ.ಪ್ರಜ್ವಲ್ ಎಂಬ ರೋಪಿಗಳನ್ನು ಬಂಧಿಸಿದ್ದಾರೆ. ತನಿಖೆಯ ವೇಳೆ ಬನ್ನೂರು ಠಾಣಾ ವ್ಯಾಪ್ತಿಯಲ್ಲಿ 10, ಕೊಳ್ಳೇಗಾಲ ಟೌನ್ನಲ್ಲಿ 2, ಕೊಳ್ಳೇಗಾಲ ಗ್ರಾಮಾಂತರ, ಮಂಡ್ಯ ಪಶ್ಚಿಮ ವ್ಯಾಪ್ತಿಯಲ್ಲಿ ತಲಾ 2, ಮೈಸೂರು ನಗರ, ಮಳವಳ್ಳಿ, ಕಿರುಗಾವಲು ಠಾಣಾ ವ್ಯಾಪ್ತಿಯಲ್ಲಿ ತಲಾ 1 ಪ್ರಕರಣಗಳಿಂದ 19 ಬೈಕ್ ವಶಕ್ಕೆ ಪಡೆಯಲಾಗಿದೆ. ಕರ್ಯಾಚರಣೆಯಲ್ಲಿ ಮಳವಳ್ಳಿ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಶಿವಲಿಂಗ ದಳವಾಯಿ, ಎಎಸ್ಐಗಳಾದ ಸುರೇಶ್, ಗೋಪಾಲ್, ಸಿಬ್ಬಂದಿಗಳಾದ ಮಾದೇಶ್, ಮಹದೇವಸ್ವಾಮಿ, ಹರ್ಷವರ್ಧನ್, ಪ್ರಭುಸ್ವಾಮಿ, ರಿಯಾಜ್ ಪಾಷಾ, ವಿಕಾಶ್, ಶ್ರೀನಿವಾಸ್, ಮಧುಕಿರಣ್ ಭಾಗವಹಿಸಿದ್ದರು. ಎಲ್ಲ ಪ್ರಕರಣಗಳನ್ನು ಡಿವೈಎಸ್ಪಿ ಎಸ್.ಬಿ.ಯಶವಂತ್ಕುಮಾರ್, ಸಿಐ ಬಿ.ಎಸ್.ಶ್ರೀಧರ್ ಮಾರ್ಗದರ್ಶನದಲ್ಲಿ ಬೇದಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಸಿಬ್ಬಂದಿ ವರ್ಗದ ಕಾರ್ಯವನ್ನು ಅವರು ಶ್ಲಾಘಿಸಿದರು.
Mandya
ಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
ಪಾಂಡವಪುರ : ಪುಸ್ತಕ ಮನೆ ಸ್ಥಾಪನೆ ಮಾಡಿ ಇಪ್ಪತ್ತು ಭಾಷೆಯ ಇಪ್ಪತ್ತು ಲಕ್ಷಕ್ಕೂ ಅಧಿಕ ಪುಸ್ತಕಗಳನ್ನು ಸಂಗ್ರಹಿಸಿ ವಿಶಿಷ್ಟ ಸಾಧನೆ ಮಾಡಿರುವ ಅಂಕೇಗೌಡ ಅವರ ಪುಸ್ತಕ ಪ್ರೀತಿ ಇಂದಿನ ಯುವಪೀಳಿಗೆಗೆ ಆದರ್ಶಪ್ರಾಯವಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಹೇಳಿದರು.
ತಾಲೂಕಿನ ಹರಳಹಳ್ಳಿಯಲ್ಲಿರುವ ಪುಸ್ತಕ ಮನೆಯಲ್ಲಿ 2026 ನೇ ಸಾಲಿನ ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಎಂ..ಅಂಕೇಗೌಡ ಅವರನ್ನು ಪುಸ್ತಕ ಪ್ರಾಧಿಕಾರದ ವತಿಯಿಂದ ಗೌರವ ಸಮರ್ಪಣೆ ಮಾಡಿ ಅವರು ಮಾತನಾಡುತಿದ್ದರು.
ನಾವು ಪುಸ್ತಕ ಪ್ರೀತಿಯನ್ನು ಉತ್ತೇಜಿಸುವ ಸಲುವಾಗಿ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆ ಆರಂಭಿಸಿದ್ದೇವೆ. ಆದರೆ ಅಂಕೇಗೌಡರ ಮನೆಯ ಈ ಗ್ರಂಥಾಲಯ ನಿಬ್ಬೆರಗಾಗಿಸುವಂತಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಪುಸ್ತಕಗಳನ್ನು ಒಬ್ಬ ವ್ಯಕ್ತಿ ತನ್ನ ಸ್ವಂತ ಪರಿಶ್ರಮ ಮತ್ತು ಆಸಕ್ತಿಯಿಂದ ಸಂಗ್ರಹ ಮಾಡಿರುವುದು ಅತ್ಯಂತ ಅಚ್ಚರಿಯ ಸಂಗತಿ. ಅವರ ಈ ಸಾಧನೆ ಶಾಶ್ವತವಾಗಿ ಉಳಿಯುತ್ತದೆ. ಇದರ ಮೂಲಕ ಜ್ಞಾನದ ತಳಹದಿಯ ಮೇಲೆ ದೇವಾಲಯ ಕಟ್ಟುವುದು ಹೇಗೆ ಎಂಬುದನ್ನು ಅಂಕೇಗೌಡರು ತೋರಿಸಿಕೊಟ್ಟಿದ್ದಾರೆ. ಜನ ದೇವಾಲಯಗಳಿಗೆ ಮತ್ತು ತಮ್ಮ ಭಕ್ತಿಯ ಕಾಣಿಕೆಗಾಗಿ ಖರ್ಚು ಮಾಡುವ ಶೇಕಡಾ 10%ರಷ್ಟನ್ನಾದರು ಪುಸ್ತಕ ಕೊಂಡುಕೊಳ್ಳಲು ಉಪಯೋಗಿಸಿದ್ದಲ್ಲಿ ಪುಸ್ತಕ ಲೋಕದ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

ಅಂಕೇಗೌಡರ ಅಂತಿಮ ಕಾಲದಲ್ಲಿ ಯಾರು ಬರಲಿ, ಬಿಡಲಿ, ಸರ್ಕಾರ ಅವರ ಮನೆ ಮುಂದೆ ಇರುತ್ತದೆ. ಅವರ ಸಾಧನೆಗೆ ಸಂದಗೌರವ ಇದಾಗಿದೆ ಎಂದು ಅವರು ತಿಳಿಸಿದರು. ಸನ್ಮಾನಕ್ಕೆ ಪ್ರತಿಕ್ರಿಯಿಸಿದ ಅಂಕೇಗೌಡರು, ತಮ್ಮ ಹಿಂದಿನ ದಿನಗಳನ್ನು ನೆನೆದು ಭಾವುಕರಾದರು. ತಾವು ಬಸ್ ಕಂಡೆಕ್ಟರ್ ಆಗಿ ಕೆಲಸ ಮಾಡುತಿದ್ದ ದಿನಗಳಲ್ಲಿ ನಡೆದ ಘಟನೆಗಳನ್ನು ನೆನಪಿಸಿಕೊಂಡ ಅವರು ನಂತರ ಆ ಕೆಲಸ ತೊರೆದು ಪಾಂಡವಪುರದ ಫ್ಯಾಕ್ಟರಿಯೊಂದರಲ್ಲಿ ಕೆಲಸಕ್ಕೆ ಸೇರಿ ಪುಸ್ತಕ ಮನೆ ಸ್ಥಾಪಿಸಿದ ಸಂದರ್ಭವನ್ನು ಕುರಿತು ವಿವರಿಸಿದರು.
ಈ ಪುಸ್ತಕಗಳನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಿಡುವುದೇ ನನ್ನ ದೊಡ್ಡ ಕನಸು ಎಂದ ಅವರು, ಇಲ್ಲಿಗೆ ಬರುವ ಸಂಶೋಧನಾ ವಿದ್ಯಾರ್ಥಿಗಳು ಅಧ್ಯಯನ ಮಾಡಲು ಹಾಗೂ ತಂಗಲು ಕಟ್ಟಡವೊಂದರ ಅವಶ್ಯಕತೆ ಇದೆ ಎಂದು ಹೇಳಿದರು.
ಈ ವೇಳೆ ಸಾರ್ವಜನಿಕ ಗ್ರಂಥಾಲಯ ಆಯುಕ್ತ ಹೆಚ್. ಬಸವರಾಜೇಂದ್ರ, ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಹಾಗೂ ಖ್ಯಾತ ಪತ್ರಕರ್ತ, ಬರಹಗಾರ ರಾಜಶೇಖರ ಕದಂಬ, ರಾಮಣ್ಣ, ತಿಪ್ಪಣ್ಣ ಹಾಗೂ ಶ್ರೀನಿವಾಸ ಕರಿಯಪ್ಪ ಅವರು ಉಪಸ್ಥಿತರಿದ್ದರು.
-
Manglore19 hours agoಜಿ.ಎಲ್. ಟ್ರೋಫಿ-2026: ಜಿ.ಎಲ್. ಹಾಸನ ತಂಡ ಚಾಂಪಿಯನ್
-
Hassan20 hours agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
Hassan19 hours agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
Hassan18 hours agoಅರಸೀಹಳ್ಳಿ ಹರೀಶ್ಗೆ ಪಿಹೆಚ್ಡಿ ಪದವಿ
-
Mandya24 hours agoಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
-
National21 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
State22 hours agoಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
-
Hassan22 hours agoಬಾರ್ನಲ್ಲಿ ಕುಡಿಯುವಾಗ ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಗಲಾಟೆ
