Mandya
ಸರ್ವೇ ಮಾಡಿ ವರದಿ ನೀಡಲು 1 ಸಾವಿರ ರೂ. ಬೇಡಿಕೆ – ಲೋಕಾಯುಕ್ತ ಬಲೆಗೆ ಬಿದ್ದ ತಾಲೋಕು ಸರ್ವೇಯರ್

ಮಂಡ್ಯ :ಸರ್ವೇ ಮಾಡಿ ವರದಿ ನೀಡಲು 1 ಸಾವಿರ ರೂ. ಬೇಡಿಕೆಇಟ್ಟಿದ್ದ ತಾಲೋಕು ಸರ್ವೇಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಡ್ಯ ತಾಲ್ಲೂಕು ಎಡಿಎಲ್’ಆರ್ ಕಚೇರಿ ಸರ್ವೇಯರ್ ಶಿವಕುಮಾರ್ ಕೆ.ಎನ್ ಲೋಕಾಯುಕ್ತ ಬಲೆಗೆ ಬಿದ್ದ ಮಿಕವಾಗಿದ್ದಾರೆ.
ಫಿರ್ಯಾದಿ ರೈತ ಡಣಾಯಕನಪುರ ರವಿಕುಮಾರ್ ಡಿ ಎಸ್ ರವರಿಂದ
ಪಾಂಡವಪುರ ಬಸ್ ನಿಲ್ದಾಣದಲ್ಲಿ ರೈತನಿಂದ ಹಣ ಸ್ವೀಕರಿಸುವಾಗ ಸರ್ವೇಯರ್ ಶಿವಕುಮಾರ್ ಬಲೆಗೆ ಬಿದ್ದಿದ್ದಾರೆ.
ಲಂಚದ ಹಣ ಪಡೆಯಲು ದೂರುದಾರ ರೈತನನ್ನು ಪಾಂಡವಪುರ ಕ್ಕೆ ಬಾ ಎಂದು ರೈತನನ್ನು ಕರೆಸಿಕೊಂಡಿದ್ದ ಅಧಿಕಾರಿಯನ್ನು ಸಾಕ್ಷ್ಯಾ ಸಮೇತ ಲೋಕಾಯುಕ್ತ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲೋಕಾಯುಕ್ತ ಎಸ್ ಪಿ ಸಜೀತ್ ರವರ ನೇತೃತ್ವ ದಲ್ಲಿ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ಮತ್ತು ಮೋಹನ್ ರೆಡ್ಡಿ ಸಿಬ್ಬಂದಿಗಳಾದ ಶರತ್ ಶಂಕರ್ ಮಹದೇವಸ್ವಾಮಿ ಕಾರ್ಯಾಚರಣೆಯಲ್ಲಿ ಭಾಗೀಯಾಗಿದ್ದು ತನಿಖೆ ಮುಂದುವರಿದಿದೆ.
ಮಂಡ್ಯ ತಾಲ್ಲೂಕು ಎಡಿಎಲ್’ಆರ್ ಕಚೇರಿ ಸರ್ವೇಯರ್ ಶಿವಕುಮಾರ್ ಕೆ.ಎನ್ ಲೋಕಾಯುಕ್ತ ಬಲೆಗೆ
ಫಿರ್ಯಾದಿ ರೈತ ಡಣಾಯಕನಪುರ ರವಿಕುಮಾರ್ ಡಿ ಎಸ್
ಪಾಂಡವಪುರ ಬಸ್ ನಿಲ್ದಾಣದಲ್ಲಿ ರೈತನಿಂದ ಹಣ ಸ್ವೀಕರಿಸುಚಾಗ ಸಿಕ್ಕಿ ಬಿದ್ದ ಆರೋಪಿ
ಪಾಂಡವಪುರ ಕ್ಕೆ ಬಾ ಎಂದು ರೈತನನ್ನು ಕರೆಸಿಕೊಂಡಿದ್ದ ಅಧಿಕಾರಿ
ಲೋಕಾಯುಕ್ತ ಎಸ್ ಪಿ ಸಜೀತ್ ರವರ ನೇತೃತ್ವ ದಲ್ಲಿ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ಮತ್ತು ಮೋಹನ್ ರೆಡ್ಡಿ ಸಿಬ್ಬಂದಿಗಳಾದ ಶರತ್ ಶಂಕರ್ ಮಹದೇವಸ್ವಾಮಿ ಭಾಗಿ
Mandya
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ

ಮಂಡ್ಯ: ಪೂರ್ವಿಕರ ಕಾಲದಿಂದಲೂ ಗ್ರಾಮದ ಸ್ಮಶಾನ, ಧನ ಕರುಗಳು ಕುಡಿಯಲು ಕೆರೆಕಟ್ಟೆ ಹಾಗೂ ಜಮೀನುಗಳಿಗೆ ತೆರಳಲು ಬಳಸುತ್ತಿದ್ದ ರಸ್ತೆಗೆ ಅಡ್ಡಲಾಗಿ ರೈತನೋರ್ವ ತಂತಿ ಬೇಲಿ ಹಾಕಿಕೊಂಡಿದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ಮದ್ಯೆದಲ್ಲಿಯ ಮೃತನ ಶವ ಸುಟ್ಟ ಘಟನೆಗೆ ಸಂವಂಧಿಸಿದಂತೆ ಜನಮಿತ್ರ ಪತ್ರಿಕೆ ಹಾಗೂ ಡಿಜಿಟಲ್ ವರದಿಗೆ ಫಲಶೃತಿ ದೊರೆತಿದೆ.
ಜನಮಿತ್ರ ವರದಿಯಿಂದ ಎಚ್ಚತ್ತ ತಾಲ್ಲೂಕು ಆಡಳಿತ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಗ್ರಾಮಕ್ಕೆ ದೌಡಾಯಿಸಿ, ರಸ್ತೆಯ ಇಕ್ಕೆಲಗಳ ಇಬ್ಬರೂ ರೈತರಿಂದ ಹತ್ತು, ಹತ್ತು ಅಡಿ ಜಾಗವನ್ನು ಸ್ಮಶಾಬದ ರಸ್ತೆಗೆ ಬಿಡಿಸಿ ಸಫಲತೆ ಕಂಡಿದೆ.
ಜನಮಿತ್ರ ವರದಿಯಿಂದ ಎಚ್ಚೆತ್ತ ತಾಲ್ಲೂಕು ಆಡಳಿತ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಗ್ರಾಮಕ್ಕೆ ತೆರಳಿದ್ದ ಅಧಿಕಾರಿಗಳ ತಂಡ, ಸ್ಮಶಾನ ಹಾಗೂ ಜನ ಜಾನುವಾರುಗಳ ಕುಡಿಯುವ ನೀರಿಗಾಗಿ ತೆರಳುವ ರಸ್ತೆಯ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ್ದಾರೆ.
ರಸ್ತೆಯ ಎರಡೂ ಬದಿಯಲ್ಲಿನ ರೈತರಾದ ಅಂಧಾನಿಗೌಡ ಹಾಗೂ ಯಶೋಧಮ್ಮ ರವರಿಂದ ತಲಾ ಹತ್ತು ಹತ್ತು ಅಡಿ ಜಾಗವನ್ನು ಸ್ಮಶಾನದ ರಸ್ತೆಗೆ ಬಿಟ್ಟುಕೊಡುವಂತೆ ಮನವಲೈಸಿದ್ದಾರೆ.
ತಾಲ್ಲೂಕು ಆಡಳಿತದ ಮದ್ಯಸ್ಥಿಕೆಯಿಂದಾಗಿ ಇದೀಗ ಹೆಬ್ಬಾಡಿಹುಂಡಿ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಜನಮಿತ್ರ ಪತ್ರಿಕೆ ಹಾಗೂ ಜನಮಿತ್ರ ಡಿಜಿಜಿಟಲ್ ನ್ಯೂಸ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
Mandya
ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಸಚಿವ ಚೆಲುವರಾಯಸ್ವಾಮಿ

ನಾಗಮಂಗಲ : ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಆ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.
ಅವರು ಪಟ್ಟಣದ ಕಾಂಗ್ರೆಸ್ ಕಚೇರಿಯ ಮುಂಬಾಗದಲ್ಲಿ ಅಂಗವಿಕಲರಿಗೆ 2024 -25 ನೇ ಸಾಲಿನ ಶಾಸಕರ ಪ್ರದೇಶ ಅಭಿವೃದ್ಧಿ ನಿಧಿಯಿಂದ ತ್ರಿಚಕ್ರ ವಾಹನ ಸಮಾರಂಭದಲ್ಲಿ ಭಾಗವಹಿಸಿ ಸುಮಾರು 25 ಫಲಾನುಭವಿಗಳಿಗೆ ವಾಹನ ವಿತರಣೆ ಮಾಡುತ್ತ ಮಾತನಾಡಿದರು.
ಅಂಗವಿಕಲರು ದಿನನಿತ್ಯದ ತಮ್ಮ ವ್ಯವಹಾರಿಕ ಕಾರ್ಯನಿಮಿತ್ತ ಕೆಲಸಗಳಿಗೆ ತ್ರಿಚಕ್ರ ವಾಹನ ಬಳಸುವ ಮುಖಾಂತರ ಸರ್ಕಾರದ ಇಂತಹ ಸೌವಲತ್ತುಗಳನ್ನು ಸದುಪಯೋಗ ಮಾಡಿಕೊಂಡು ಇತರೆ ಚಟುವಟಿಕೆಗಳಲ್ಲಿ ಈ ವಾಹನಗಳನ್ನು ಬಳಸದಂತೆ ತಮ್ಮ ಸ್ವಂತ ವಾಹನಗಳಾಗಿ ಬಳಸಿಕೊಳ್ಳುವ ಮುಖಾಂತರ ಸರ್ಕಾರದ ಯೋಜನೆಗಳನ್ನು ಪಡೆದು ಅನುಕೂಲ ಮಾಡಿಕೊಳ್ಳುವಂತೆ ಈ ಸಂದರ್ಭದಲ್ಲಿ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಶ್ ಕೃಷಿ ವಿವಿ ಆಡಳಿತ ಮಂಡಳಿ ನಿರ್ದೇಶಕರಾದ ದಿನೇಶ್. ಎಚ್ ಟಿ ಕೃಷ್ಣೆ ಗೌಡ. ಪುರಸಭಾ ಅಧ್ಯಕ್ಷರು ಗಣ್ಯರು ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.
Mandya
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ

ಮಂಡ್ಯ : ಈ ಚಿತ್ರದಲ್ಲಿರುವ ವ್ಯಕ್ತಿ ಇಂದು (ಮಾ.14) ರಂದು ಮಂಡ್ಯ ರೈಲು ನಿಲ್ದಾಣದಲ್ಲಿ ರೈಲುಗಾಡಿಯಿಂದ ಬಿದ್ದು ಗಾಯಗೊಂಡಿರುತ್ತಾರೆ.
ಸದರಿಯವರ ಹೆಸರು ಮತ್ತು ವಿಳಾಸ ಪತ್ತೆಯಾಗಿರುವುದಿಲ್ಲ ಯಾವುದಾದರೂ ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆಯಾದ ಪ್ರಕರಣ ದಾಖಲಾಗಿದ್ದಲ್ಲಿ, ಅಥವ ಇವರ ಬಗ್ಗೆ ಮಾಹಿತಿ ಗೊತ್ತಿದ್ದಲ್ಲಿ ಮಾಹಿತಿ ನೀಡಲು
ರೈಲ್ವೆ ಹೊರ ಉಪ ಠಾಣೆ ಮಂಡ್ಯ ಕೋರಿದೆ.
-
Mandya6 hours ago
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
-
Hassan13 hours ago
ಹಾಸನದಲ್ಲಿ ಭಾರೀ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ
-
Mandya9 hours ago
ಜೆಎಸ್ಎಸ್ ಕಾಲೇಜಿನಲ್ಲಿ ಪತ್ರಿಕಾ ಬರಹ ಕುರಿತು ಕಾರ್ಯಾಗಾರ
-
Kodagu11 hours ago
ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
-
Hassan12 hours ago
ಕ್ಷಯ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲಾರೂ ಕೈಜೋಡಿಸಿ: ಡಿಸಿ ಸಿ. ಸತ್ಯಭಾಮ
-
Kodagu9 hours ago
ನಿವೃತ್ತ ಶಿಕ್ಷಕಿಯಿಂದ ಕಕ್ಕಬ್ಬೆ ಯುವಕಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಭಾಗ್ಯ
-
Mandya8 hours ago
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ
-
Hassan8 hours ago
ಮತಾಂತರಕ್ಕೆ ಪ್ರಯತ್ನಿಸುತ್ತಿರುವುದಾಗಿ ಸುಳ್ಳು ದೂರು ದಾಖಲು: ಪ್ರಶಾಂತ್