Connect with us

State

ಡಿವೈಡರ್‌ಗೆ ಕಾರ್‌ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ

Published

on

ಧಾರವಾಡ: ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಹೊತ್ತಿ ಉರಿದ ಕಾರಿನಿಂದ ಹೊರಬರಲು ಸಾಧ್ಯವಾಗದೇ ಇನ್ಸ್‌ಪೆಕ್ಟರ್ ಕೂಡ ಅದರ ಒಳಗೆ ಸಜೀವವಾಗಿ ದಹನವಾಗಿದ್ದಾರೆ.

ಕಾರ್‌ನಲ್ಲಿ ಇನ್ಸ್‌ಪೆಕ್ಟರ್‌ ಸಾಲಿಮಠ ಪ್ರಯಾಣ ಮಾಡುತ್ತಿದ್ದರು. ಕಾರಿನಲ್ಲಿಯೇ ಅವರ ದೇಹ ಸುಟ್ಟುಹೋಗಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರ ಹೊಲಯದಲ್ಲಿ ಘಟನೆ ನಡೆದಿದೆ.

ಗದಗದಿಂದ ಹುಬ್ಬಳ್ಳಿ ಮಾರ್ಗವಾಗಿ ಕಾರ್‌ ಪ್ರಯಾಣ ಮಾಡುವಾಗ, ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಭೀಕರ ಘಟನೆ ನಡೆದಿದೆ.

I20 ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸಾಲಿಮಠ ಅವರು ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡಿದ್ದರು. ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುವ ಸಲುವಾಗಿ ಅವರು ಹೊರಟಿದ್ದರು.

ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಣ್ಣಿಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

State

SSLC ಪಾಸ್ ಆದವರಿಗೆ ಸರ್ಕಾರಿ ನೌಕರಿ ಚಾನ್ಸ್! ಸಂಪೂರ್ಣ ಮಾಹಿತಿ ಇಲ್ಲಿದೆ…

Published

on

ಕರ್ನಾಟಕದಲ್ಲಿ SSLC ಪಾಸ್ ಮಾಡಿದವರಿಗೆ ಇದೀಗ ಸರ್ಕಾರದ ವಿವಿಧ ಇಲಾಖೆಗಳಡಿ ಕೆಲಸ ಪಡೆಯುವ ದೊಡ್ಡ ಅವಕಾಶ ದೊರಕಿದೆ. ಕಡಿಮೆ ವಿದ್ಯಾರ್ಹತೆಯಲ್ಲೇ ಸ್ಥಿರ ಸರ್ಕಾರಿ ಉದ್ಯೋಗ ಪಡೆಯಲು ಹಲವು ಹುದ್ದೆಗಳು ಲಭ್ಯವಾಗಿದ್ದು, ಯುವಕರಿಗೆ ಭದ್ರ ಭವಿಷ್ಯ ನಿರ್ಮಿಸಿಕೊಳ್ಳಲು ಇದು ಮಹತ್ವದ ಅವಕಾಶವಾಗಿದೆ.

ಹುದ್ದೆಗಳ ವಿವರ:
•ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹಾಗೂ ಜೈಲು ವಾರ್ಡರ್ ಹುದ್ದೆಗಳು
•ಅಂಚೆ ಇಲಾಖೆಯ GDS, ಪೋಸ್ಟ್‌ಮನ್ ಮತ್ತು MTS ಹುದ್ದೆಗಳು
•KSRTC, BMTC ಮೊದಲಾದ ಸಾರಿಗೆ ಸಂಸ್ಥೆಗಳಲ್ಲಿ ಕಂಡಕ್ಟರ್/ಡ್ರೈವರ್ ಹುದ್ದೆಗಳು
•ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು
•ವಿವಿಧ ಇಲಾಖೆಗಳ ಪಿಯೋನ್, ಅಟೆಂಡರ್, ಕ್ಲರ್ಕ್ ಮತ್ತು ಗ್ರೂಪ್–D ಹುದ್ದೆಗಳು

ವೇತನ: ₹18,000 ರಿಂದ ₹32,000ರವರೆಗೆ

ಅರ್ಹತೆ:
•ಕನಿಷ್ಠ SSLC ಪಾಸ್ ಆಗಿರಬೇಕು
•ವಯೋಮಿತಿ;18ರಿಂದ 35ವರ್ಷ
•ಕೆಲವು ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಅಗತ್ಯ
•ಡ್ರೈವರ್ ಹುದ್ದೆಗೆ ಮಾನ್ಯ ಡ್ರೈವಿಂಗ್ ಲೈಸೆನ್ಸ್

ಅರ್ಜಿ ಹೇಗೆ ಸಲ್ಲಿಸಬೇಕು?
•ಅಧಿಕೃತ ಪ್ರಕಟಣೆ ಹೊರಬಂದ ನಂತರ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿ ಹಾಕಬಹುದು
•ಆಧಾರ್, SSLC ಮಾರ್ಕ್ಸ್ ಕಾರ್ಡ್, ಜಾತಿ ಪ್ರಮಾಣಪತ್ರ, ವಿಳಾಸ ದೃಢೀಕರಣ ಮುಂತಾದ ದಾಖಲಾತಿಗಳು ಅಗತ್ಯ
•ಶುಲ್ಕವನ್ನು ಆನ್‌ಲೈನ್ ಪಾವತಿಸಿ ಅರ್ಜಿ ಪೂರ್ಣಗೊಳಿಸಬಹುದು
•ಆಯ್ಕೆ ಪ್ರಕ್ರಿಯೆಯಲ್ಲಿ ಪರೀಕ್ಷೆ/ದೈಹಿಕ ಪರೀಕ್ಷೆ ಇರಬಹುದು

ಸರ್ಕಾರಿ ಉದ್ಯೋಗ ಎಂದರೆ ಸ್ಥಿರತೆ, ಭದ್ರತೆ ಮತ್ತು ಉತ್ತಮ ಭವಿಷ್ಯ. ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಹಾಗೂ ಅಗತ್ಯವಿರುವರಿಗೆ ಕಳುಹಿಸಿ.

Continue Reading

Politics

ಡಿಕೆ ಬ್ರದರ್ಸ್‌ಗೆ ನೋಟಿಸ್‌ ಜಾರಿ ಮಾಡಿದ ದೆಹಲಿ ಪೊಲೀಸರು

Published

on

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಮತ್ತು ಅವರ  ಸಹೋದರ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರಿಗೆ ದೆಹಲಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ  ಸಂಬಂಧಿಸಿದಂತೆ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್‌ ನೀಡಲಾಗಿದೆ. ಪ್ರಕರಣದ ತನಿಖೆಯ ಭಾಗವಾಗಿ ವಿವರವಾದ ಹಣಕಾಸು ಹಾಗೂ ವಹಿವಾಟು ಮಾಹಿತಿಯನ್ನು ಕೋರಿ ನೋಟಿಸ್ ನೀಡಿದ್ದಾರೆ.

ನ.29 ರಂದು ನೋಟಿಸ್ ನೀಡಿರುವ ಪೊಲೀಸರು, ಡಿ.19 ರೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ಅಥವಾ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಸೂಚಿಸಿದ್ದಾರೆ.

ಡಿ.ಕೆ.ಸುರೇಶ್ ಅವರಿಗೂ ನೋಟಿಸ್ ನೀಡಿರುವ ದೆಹಲಿ ಪೊಲೀಸರು, ಎಷ್ಟು ದುಡ್ಡು ನೀಡಿದ್ದೀರಿ, ಯಾವ ಉದ್ದೇಶಕ್ಕೆ ಬಳಕೆಯಾಗಿದೆ, ಹಣವನ್ನು ನೀಡಿದ್ದು ಹೇಗೆ, ಎಷ್ಟು ಹಣ ನೀಡಿದ್ದೀರಿ ಎಂಬ ಪ್ರಶ್ನೆಗಳಿಗೆ ವಿವರ ಕೇಳಿದ್ದಾರೆ.

Continue Reading

State

ಹಣ ಪಡೆದು ಯಾವುದೇ ಪೋಲಿಸರಿಗೆ ಪೋಸ್ಟಿಂಗ್ ಮಾಡಿಲ್ಲ: ಡಾ.ಜಿ.ಪರಮೇಶ್ವರ್‌

Published

on

ಬೆಂಗಳೂರು: ನಾನು ಗೃಹ ಸಚಿನಾದ ಮೇಲೆ ಯಾರಿಂದಲೂ ಹಣ ಪಡೆದಿಲ್ಲ. ಹಣ ಪಡೆದು ಯಾವುದೇ ಪೋಲಿಸರಿಗೆ ಪೋಸ್ಟಿಂಗ್ ಮಾಡಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಲಂಚ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.  ಈಗಾಗಲೇ 124 ಪೊಲೀಸರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ.  7.11 ಕೋಟಿ ರೂ. ದರೋಡೆ ಕೇಸ್ ನಲ್ಲಿ ಓರ್ವ ಪಿಸಿ ಭಾಗಿಯಾಗಿದ್ದ. ಆತನನ್ನು ಕೆಲಸದಿಂದ ವಜಾಗೊಳಿಸುತ್ತೇವೆ.  ದಾವಣಗೆರೆಯಲ್ಲಿ ಚಿನ್ನಭಾರಣ ವ್ಯಾಪಾರಿ ದರೋಡೆ ಪ್ರಕರಣದಲ್ಲಿ ಓರ್ವ ಪ್ರೊಬೆಷನರಿ ಪಿಎಸ್ ಐ ವಜಾಗೊಳಿಸಿದ್ದೇವೆ, ಮತ್ತೊಬ್ಬ ಪಿಎಸ್ ಐ ಅಮಾನತು ಮಾಡಿದ್ದೇವೆ.  ಕೋಲಾರದ ಪೊಲೀಸ್ ಸಿಬ್ಬಂದಿಯನ್ನು  ವಜಾ ಮಾಡುತ್ತೇವೆ. ಅವರು ಕೋರ್ಟ್ ಗೆ ಹೋದರೆ ನಾವು ಸಹ ಹೋಗುತ್ತೇವೆ ಎಂದು ಹೇಳಿದರು.

ನಾನು ಗೃಹ ಸಚಿವನಾದ ಮೇಲೆ ಯಾರಿಂದಲೂ ಹಣ ಪಡೆದಿಲ್ಲ, ಹಣ ಪಡೆದು ಯಾವುದೇ ಪೋಲಿಸರಿಗೆ ಪೋಸ್ಟಿಂಗ್ ಮಾಡಿಲ್ಲ. ಲಂಚ ಪಡೆದಿದ್ದು ಸಾಬೀತು ಪಡಿಸಿದರೆ ಗೃಹ ಸಚಿವ ಸ್ಥಾನದಲ್ಲಿರಲ್ಲ. ಯಾರೋ ಒಬ್ಬ ನನ್ನ ಪರಿಚಯವಿದೆ ಎಂದು ಲಂಚ ಪಡೆದರೆ ಆತನ ವಿರುದ್ದವೂ ಕ್ರಮ ಕೈಗೊಳ್ಳುತ್ತೇವೆ. ಮೊನ್ನೆ ಕಮಿಷನರ್ ಕಚೇರಿಯಲ್ಲಿ ಓರ್ವ ಪಿಸಿ ಹಣ ಪಡೆದಿದ್ದ. ಆತನ ವಿರುದ್ದವೂ ಕ್ರಮ ಕೈಗೊಳ್ಳುತ್ತೇವೆ ಬೆಳಗಾವಿ ಲಾಠಿ ಚಾರ್ಜ್ ಬಗ್ಗೆ ನ್ಯಾಯಾಂಗ ತನಿಖೆ ನಡೆಯುತ್ತಿದೆ ಎಂದರು.

Continue Reading

Trending

error: Content is protected !!