Politics
NEET-UG 2026 ರದ್ದತಿ ಮತ್ತು ಮರುಪರೀಕ್ಷೆ ನಿರ್ಧಾರಕ್ಕೆ ಮಧು ಬಂಗಾರಪ್ಪ ತೀವ್ರ ಆಕ್ರೋಶ
ಬೆಂಗಳೂರು: ಕೇಂದ್ರ ಸರ್ಕಾರವು ನೀಟ್-ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿರುವುದರ ಜೊತೆಗೆ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತೀವ್ರ ಕಳವಳ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರೀಕ್ಷಾ ವ್ಯವಸ್ಥೆಯಲ್ಲಿನ ಪದೇ ಪದೇ ಉಂಟಾಗುತ್ತಿರುವ ವೈಫಲ್ಯಗಳು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂದು ಆರೋಪಿಸಿದ್ದಾರೆ. ವರ್ಷಗಟ್ಟಲೆ ಶ್ರಮಪಟ್ಟ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮರುಪರೀಕ್ಷೆಯ ನಿರ್ಧಾರ ದೊಡ್ಡ ಆಘಾತವಾಗಿದೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರವು ದೊಡ್ಡ ದೊಡ್ಡ ನೀತಿಗಳ ಕುರಿತು ಮಾತನಾಡುವುದಕ್ಕಿಂತ ಮೊದಲು ಪರೀಕ್ಷಾ ಪಾರದರ್ಶಕತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ಅವರು ಟೀಕಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಗಳಂತಹ ಘಟನೆಗಳು ಪುನರಾವರ್ತಿಸುತ್ತಿರುವುದನ್ನು ಅವರು ಗಂಭೀರ ವೈಫಲ್ಯವೆಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯ ಬಿಜೆಪಿ ನಾಯಕರ ಮೌನವನ್ನು ಪ್ರಶ್ನಿಸಿದ ಸಚಿವರು, ಇದು ಕೇವಲ ಪರೀಕ್ಷೆಯ ವಿಷಯವಲ್ಲ, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಗಂಭೀರ ವಿಚಾರವಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಬಲಿಷ್ಠ ಮತ್ತು ಪಾರದರ್ಶಕ ಪರೀಕ್ಷಾ ವ್ಯವಸ್ಥೆ ರೂಪಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
Politics
ಹರ್ಮನ್ಪ್ರೀತ್ ಕೌರ್ಗೆ ಪದ್ಮಶ್ರೀ ಗೌರವ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ 2026ರ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 66 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನಿಸಿದರು.
ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಅವರ ಪತ್ನಿ ಹೇಮ ಮಾಲಿನಿ ಸ್ವೀಕರಿಸಿದರು.
ಪ್ರಸಿದ್ಧ ಪಿಟೀಲು ವಾದಕಿ ಎನ್.ರಾಜಮ್ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಲಭಿಸಿತು. ಮಾಜಿ ರಾಜ್ಯಪಾಲ ಗವ್ ಭಗತ್ ಸಿಂಗ್ ಕೋಶ್ಯಾರಿ ಹಾಗೂ ಖ್ಯಾತ ಬ್ಯಾಂಕರ್ ಉದಯ್ ಕೋಟಕ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಟ ಪ್ರೊಸೆನ್ಜಿತ್ ಚಟರ್ಜಿ ಅವರಿಗೂ ಪದ್ಮಶ್ರೀ ಗೌರವ ದೊರೆಯಿತು.
ಈ ವರ್ಷ ಒಟ್ಟು 131 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಅದರಲ್ಲಿ 5 ಪದ್ಮ ವಿಭೂಷಣ, 13 ಪದ್ಮ ಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳಿವೆ. ಮೊದಲ ಹಂತದಲ್ಲಿ ಇಂದು 2 ಪದ್ಮ ವಿಭೂಷಣ, 6 ಪದ್ಮ ಭೂಷಣ ಹಾಗೂ 58 ಪದ್ಮಶ್ರೀ ಪ್ರಶಸ್ತಿಗಳನ್ನು ವಿತರಿಸಲಾಯಿತು. ಉಳಿದ ಪ್ರಶಸ್ತಿಗಳನ್ನು ಎರಡನೇ ಹಂತದಲ್ಲಿ ಪ್ರದಾನ ಮಾಡಲಾಗುತ್ತದೆ.
Politics
ಕರ್ನಾಟಕ ರಾಜ್ಯಸಭೆ ಚುನಾವಣೆ: ಜೂನ್. 18ಕ್ಕೆ ಮತದಾನ
Politics
ಗೃಹಲಕ್ಷ್ಮಿ ಹಣ ಬಾಕಿ| ಹೈಕೋರ್ಟ್ ಮೆಟ್ಟಿಲೇರಿದ ಮಹಿಳೆಯರು: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ
-
State18 hours agoಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ
-
Kodagu23 hours agoದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ
-
Hassan21 hours agoಜಿಲ್ಲಾಧಿಕಾರಿಯ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳಿಂದ ತಹಸೀಲ್ದಾರ್ಗೆ ಮನವಿ
-
Hassan2 hours ago2025-26ರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಫುಟ್ಬಾಲ್ನಲ್ಲಿ ಹಾಸನ ಜಿಲ್ಲೆಗೆ ರನ್ನರ್-ಅಪ್ ಗೌರವ
-
Chamarajanagar20 hours agoಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಜೀವಿತ ಪ್ರಮಾಣ ಪತ್ರ ಸಲ್ಲಿಸಲು ಮನವಿ
-
Mysore7 hours agoಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ .
-
Hassan24 minutes ago“ರಾಜ್ಯದ ಸಾಲ ₹10 ಲಕ್ಷ ಕೋಟಿ ತಲುಪಲಿದೆ”: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
-
Kodagu21 hours agoಬೇಡು ಹಬ್ಬ : ಮದ್ಯ ಮಾರಾಟ ನಿಷೇಧ

