Kodagu
ಅತೀ ಹೆಚ್ಚು ತಾಪಮಾನ: ಮುಂಜಾಗ್ರತಾ ಕ್ರಮಗಳು

ಜನಮಿತ್ರ ಮಡಿಕೇರಿ : ಭಾರತೀಯ ಹವಾಮಾನ ಇಲಾಖೆಯು ಪ್ರಸ್ತುತ ಹಾಗೂ ಮೇ ಅಂತ್ಯದವರೆಗೆ ಸೂರ್ಯನ ಬಿಸಿಲು ಮತ್ತು ಬಿಸಿಗಾಳಿ ಹೆಚ್ಚಾಗುವ ಬಗ್ಗೆ ಮುನ್ನೆಚ್ಚರಿಕೆಯನ್ನು ನೀಡಿರುತ್ತದೆ. ಜಿಲ್ಲೆಯಲ್ಲಿ ಸೂರ್ಯನ ಶಾಖವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ವೇವ್ (ಶಾಖದ ಹೊಡೆತ) ಸ್ಟ್ರೋಕ್ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಎಲ್ಲಾ ಸಾರ್ವಜನಿಕರಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಲಹೆಗಳನ್ನು ನೀಡಿದೆ.
ಬೇಸಿಗೆಯಲ್ಲಿನ ಅತೀ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ವಹಿಸಬೇಕಾದ ಸೂಚನೆಗಳು : ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು. (ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ), ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯುವುದು. ಮಜ್ಜಿಗೆ, ಎಳನೀರು, ಹಣ್ಣಿನ ರಸ, ಗ್ಲೂಕೋಸ್, ಓಆರ್ಎಸ್ ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು. ಸಾರ್ವಜನಿಕರು ಬಿಸಿಲಿನ ದಿನಗಳಲ್ಲಿ ಕೊಡೆ/ಛತ್ರಿ ಹಾಗೂ ತಂಪು ಕನ್ನಡಕ, ಟವಲ್ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯುವುದು, ತೆಳುವಾದ ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸಬೇಕು. ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು. ಗಾಳಿಯಾಡುವ ಪಾದರಕ್ಷೆ ಧರಿಸಬೇಕು.
ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಬೇಕು. ಹಿರಿಯ ನಾಗರಿಕರು ಹಾಗೂ ಮಕ್ಕಳು ಹೆಚ್ಚು ನೀರು ಕುಡಿಯಬೇಕು. ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು, ಹೀಟ್ ಸ್ಟ್ರೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಠ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಂಡು ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಬಾತ್ ಮಾಡಬೇಕು ಅಥವಾ ಐಸ್ ಪ್ಯಾಕ್ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ಪ್ಯಾಕ್ಗಳ ಮದ್ಯ ಇಡಬಹುದು.
ಹೀಟ್ವೇವ್ ಸ್ಟ್ರೋಕ್ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡು ಬರದಿದ್ದರೆ ಅವರನ್ನು ಕೂಲಿಂಗ್ ವ್ಯವಸ್ಥೆಯೊಂದಿಗೆ ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು. ಹೊರಾಂಗಣದಲ್ಲಿ ಬಿಸಿಲಿನಲ್ಲಿ ಕೆಲಸ ಮಾಡುವವರಿಗೆ ಕಡ್ಡಾಯ ವಿರಾಮವನ್ನು ನಿಗಧಿಪಡಿಸುವುದು, ಆಹಾರದಲ್ಲಿ ಮಸಾಲೆ ಪದಾರ್ಥಗಳನ್ನು ಹೆಚ್ಚು ಬಳಸಬಾರದು. ಬೇಸಿಗೆ ದಿನಗಳಲ್ಲಿ ತಣ್ಣೀರಿನ ಸ್ನಾನ ಒಳ್ಳೆಯದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.
Kodagu
ಕೊಡಗು ಜಿಲ್ಲಾಡಳಿತ ಭವನದಲ್ಲಿ ಆಧುನಿಕ ತಂತ್ರಜ್ಞಾನದ ಲಿಫ್ಟ್ ಭಾಗ್ಯ

ಕೊಡಗು: ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾಡಳಿತ ಭವನದ ಸಂಕೀರ್ಣಕ್ಕೆ ಆಧುನಿಕ ತಂತ್ರಜ್ಞಾನದ ನೂತನ ಲಿಫ್ಟ್ ಅಳವಡಿಕೆ ಆಗಲಿದೆ. ಸುಮಾರು 14 ಲಕ್ಷ ರೂ ವೆಚ್ಚದಲ್ಲಿ ಸಂಪೂರ್ಣ ರಸ್ಟ್ ಪ್ರೂಫ್ ಲಿಫ್ಟ್ ಇನ್ನು ಮೂರು ವಾರಗಳ ಒಳಗಾಗಿ ಅಳವಡಿಸಿ ಸಾರ್ವಜನಿಕ ಬಳಕೆಗೆ ಲಭ್ಯವಾಗಲಿದೆ ಎಂದು ನಿರ್ವಹಣೆ ಹೊತ್ತ ಸಂಸ್ಥೆ ಮಾಹಿತಿ ನೀಡಿದೆ.
ಜಿಲ್ಲಾಡಳಿತ ಭವನ ಲೋಕಾರ್ಪಣೆ ಗೊಂಡು ಐದು ವರ್ಷಗಳಲ್ಲಿಯೇ ಪದೇ ಪದೇ ರಿಪೇರಿಯಾಗಲು ಆರಂಭಿಸಿತ್ತು. ಕಟ್ಟಡ ನಿರ್ಮಾಣ ಕಾಲದಲ್ಲಿ ಕಾಮಗಾರಿ ವಸ್ತುಗಳನ್ನು ಸಾಗಿಸಲು ಲಿಫ್ಟ್ ಬಳಕೆಯಾದ್ದರಿಂದ ಅದರ ಸಾಮರ್ಥ್ಯ ಕೂಡ ಕುಗ್ಗಿತ್ತು. ಕಳೆದ ಡಿಸೆಂಬರ್ ನಲ್ಲಿ ಸಂಪೂರ್ಣ ಬಂದ್ ಆಗಿತ್ತು. ಕೊಡಗು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರಿಂದ ಸಂಪೂರ್ಣ ಮಾಹಿತಿ ಪಡೆದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಅವರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಡಾ ಮಂತರ್ ಗೌಡ ಅವರು ಲಿಫ್ಟ್ ನ್ನು ರಿಪೇರಿ ಮಾಡುವ ಬದಲು ಹೊಸ ಲಿಫ್ಟ್ ಖರೀದಿಗೆ ಸೂಚನೆ ನೀಡಿದ ಮೇರೆಗೆ ದಿನಾಂಕ 31-1-2025 ರಂದು ಜಿಲ್ಲಾಧಿಕಾರಿಗಳು ಟೆಂಡರ್ ಕರೆದು ದಿನಾಂಕ 4-3-2025 ರಂದು ಕಾರ್ಯಾದೇಶವನ್ನು ಲಿಫ್ಟ್ ತಯಾರಿಕೆಯಲ್ಲಿ ಪ್ರತಿಷ್ಠಿತ ಸಂಸ್ಥೆ ಯಾಗಿರುವ ಬೆಂಗಳೂರಿನ ಸ್ವಿಫ್ಟ್ ಸ್ಪೇಸ್ ಎಲಿವೇಟರ್ಸ್ ಸಂಸ್ಥೆಗೆ ನೀಡಲಾಯಿತು.
ಹಳೆಯ ಲಿಫ್ಟ್ ನ್ನು ಸ್ಥಳಾಂತರಿಸುವ ಕೆಲಸ ಮುಗಿದಿದ್ದು, ಹೊಸ ಲಿಪ್ಟ್ ಅಳವಡಿಕೆಗೆ ಸಂಸ್ಥೆ ಸಿದ್ದತೆ ನಡೆಸುತ್ತಿದೆ. ಇನ್ನು ಮೂರು ವಾರಗಳಲ್ಲಿ ಸಾರ್ವಜನಿಕ ಉಪಯೋಗಕ್ಕೆ ಲಭ್ಯವಾಗಲಿದೆ. ಲಿಫ್ಟ್ ಇಲ್ಲದೆ ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ವೃದ್ದರು ಮತ್ತು ವಿಶೇಷ ಚೇತನರು ಜಿಲ್ಲಾಡಳಿತ ಭವನದ ಮೂರನೇ ಮಹಡಿ ತಲುಪಲು ಪ್ರಯಾಸ ಪಡುತ್ತಿದ್ದು, ಈಗ
ಉಸ್ತುವಾರಿ ಸಚಿವರು, ಕೊಡಗಿನ ಶಾಸಕದ್ವಯರು ಹಾಗೂ ಕೊಡಗು ಜಿಲ್ಲಾಧಿಕಾರಿಗಳ ಕಾಳಜಿಯಿಂದ ನಿಟ್ಟುಸಿರು ಬಿಡುವಂತೆ ಆಗಿದೆ.
Kodagu
ಮಾ.25 ಮತ್ತು 26 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಮಾರ್ಚ್, 25 ಮತ್ತು 26 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಮಾರ್ಚ್, 25 ರಂದು ಬೆಳಗ್ಗೆ 11 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ’ ಎಂಬ ಶೀರ್ಷಿಕೆಯಡಿ ಕನ್ನಡದಲ್ಲಿ 5ನೇ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 4.30 ಗಂಟೆಗೆ ಪೊನ್ನಂಪೇಟೆ ತಾಲ್ಲೂಕು ನಾಗರಹೊಳೆ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಭೇಟಿ ನೀಡಲಿದ್ದಾರೆ.
ಮಾರ್ಚ್, 26 ರಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕುಗಳ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.
Kodagu
ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ

ಮಡಿಕೇರಿ : ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಕೆಎಸ್ಆರ್ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಎಂ.ಎಂ.ಮೆಹಬೂಬ್ ಅಲಿ ಅವರು ತಿಳಿಸಿದ್ದಾರೆ.
ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯರಾತ್ರಿ 2.30 ಗಂಟೆಗೆ ಹೊರಟು ಮಡಿಕೇರಿಗೆ ಬೆಳಗ್ಗೆ 7.30 ಗಂಟೆಗೆ ತಲುಪಲಿದೆ.
ನಂತರ ಬೆಳಗ್ಗೆ 11.30 ಗಂಟೆಗೆ ಮಡಿಕೇರಿಯಿಂದ ಹೊರಟು ಸಂಜೆ 6 ಗಂಟೆಗೆ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದೆ. ಕೆಎಸ್ಆರ್ಟಿಸಿ ಬೆಂಗಳೂರು ಕೇಂದ್ರ ವಿಭಾಗದ ನಾಲ್ಕನೇ ಘಟಕದಿಂದ ಪ್ಲೈ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮೆಹಬೂಬ್ ಅಲಿ ಅವರು ತಿಳಿಸಿದ್ದಾರೆ
-
Mandya7 hours ago
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
-
Hassan15 hours ago
ಹಾಸನದಲ್ಲಿ ಭಾರೀ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ
-
Mandya11 hours ago
ಜೆಎಸ್ಎಸ್ ಕಾಲೇಜಿನಲ್ಲಿ ಪತ್ರಿಕಾ ಬರಹ ಕುರಿತು ಕಾರ್ಯಾಗಾರ
-
Kodagu12 hours ago
ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
-
Mandya9 hours ago
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ
-
Kodagu7 hours ago
ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ
-
Hassan14 hours ago
ಕ್ಷಯ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲಾರೂ ಕೈಜೋಡಿಸಿ: ಡಿಸಿ ಸಿ. ಸತ್ಯಭಾಮ
-
Kodagu10 hours ago
ನಿವೃತ್ತ ಶಿಕ್ಷಕಿಯಿಂದ ಕಕ್ಕಬ್ಬೆ ಯುವಕಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಭಾಗ್ಯ