Kodagu
ಮಹಾತ್ಮ ಗಾಂಧಿ ನರೇಗಾ ಬಚಾವೋ ಸಂಗ್ರಮ
ಗೋಣಿಕೊಪ್ಪ: ಮಹಾತ್ಮ ಗಾಂಧಿ ನರೇಗಾ ಬಚಾವೋ ಸಂಗ್ರಮಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಐದು ಕಿಲೋಮೀಟರ್ ಕಾಲ್ನಡಿಗೆ ಜಾಥ ನಡೆಸಿದರು.
ಗೋಣಿಕೊಪ್ಪ ಉಮಾಮಹೇಶ್ವರಿ ದೇವಸ್ಥಾನದಿಂದ ಪೊನ್ನಂಪೇಟೆ ಗಾಂಧಿ ಪ್ರತಿಮೆವರೆಗೆ ಪಾದಯಾತ್ರೆ ಸಾಗಿ ಬಂದಿತ್ತು.
ಸಾವಿರಾರು ಕಾರ್ಯಕರ್ತರು ಮನರೇಗಾ ಯೋಜನೆ ಹೆಸರು ಬದಲಾವಣೆಯ ಕೇಂದ್ರ ಸರ್ಕಾರದ ನಡೆಯ ಪ್ರಶ್ನಿಸಿ, ಘೋಷಣೆಗಳು ಹಾಕಿ ವಿರೋಧಿಸಿದರು.
ಪಾದಯಾತ್ರೆಯಲ್ಲಿ ಭಾಗವಹಿಸಿದ ಕಾರ್ಯಕರ್ತರಿಗೆ ರಸ್ತೆಯ ಉದ್ದಕ್ಕೂ ಕುಡಿಯುವ ನೀರು, ಮಜ್ಜಿಗೆ, ತಂಪುಪಾನೀಯ, ಪಾಯಸ, ವಡೆ ವಿತರಿಸಲಾಯಿತು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್ ಪೊನ್ನಣ್ಣ ಅವರ ಮುಂದಾಳತ್ವದಲ್ಲಿ ಕಾಲ್ನಡಿಗೆ ಜಾಥ ಸಾಗಿ ಬಂದಿತ್ತು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೆ.ಪಿ.ಸಿ.ಸಿ ವಕ್ತಾರ ಎಂ. ಲಕ್ಷ್ಮಣ್, ರಾಜ್ಯ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಕಾರ್ಯದರ್ಶಿ, ಶಾಂತೆಯಡ ವೀಣಾ ಅಚ್ಚಯ್ಯ, ಪ್ರಮುಖರುಗಳಾದ ಆಪಟ್ಟೀರ ಟಾಟು ಮೊಣ್ಣಪ್ಪ, ಕುಲ್ಲಚಂಡ ಪ್ರಮೋದ್ ಗಣಪತಿ, ಕೊಲ್ಲೀರ ಬೋಪಣ್ಣ, ಚಂದ್ರಕಲಾ, ಮಿದೇರಿರ ನವೀನ್, ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಗಫೂರ್ ಇದ್ದರು.
ನಂತರ ಪೊನ್ನಂಪೇಟೆ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಾಥಕ್ಕೆ ಸಮಾಪ್ತಿ ಮಾಡಲಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಎ.ಎಸ್ ಪೊನ್ನಣ್ಣ, ಭಾರತ ದೇಶವನ್ನು ಪ್ರಪಂಚದಲ್ಲೇ ಗುರುತಿಸುವಂತೆ ಮಾಡಿದ ಮಹಾತ್ಮನ ಹೆಸರನ್ನ ಕಾಯ್ದೆಯಿಂದ ಕಿತ್ತೊಗೆಯುವ ಕಾರಣಕ್ಕೆ ಸ್ಪಷ್ಟತೆಯನ್ನು ಕೊಡಿ ಎಂದು ಕಾನೂನಾತ್ಮಕವಾದ ಪ್ರಶ್ನೆಗಳನ್ನು ಕೇಂದ್ರ ಸರ್ಕಾರಕ್ಕೆ ಕೇಳಿದರೆ ಯಾವುದೇ ಉತ್ತರ ನೀಡುತ್ತಿಲ್ಲ. ಇದಕ್ಕೆ ವಿರೋಧವಾಗಿ ಭಾವನಾತ್ಮಕವಾದ, ದ್ವೇಷ ಆಧಾರಿತವಾದ, ಪ್ರಜಾತಂಕಕಾರಿಯಾದ ರಾಜಕಾರಣವನ್ನ ಮಾಡುತ್ತಿದ್ದಾರೆ. ನರೇಗಾ ಕಾನೂನು ತಿದ್ದುಪಡಿಯಿಂದ ರೈತರ ಗ್ರಾಮೀಣ ಜನರ ದಲಿತರ ಕೂಲಿ ಕಾರ್ಮಿಕರ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕುವ ಪ್ರಯತ್ನ ಸಾಗುತ್ತಿದೆ ಎಂದು ದೂರಿದರು.

ಭಾರತದ ಸ್ವಾತಂತ್ರ್ಯಕ್ಕಾಗಿ 17 ವರ್ಷಗಳ ಕಾಲ ಕಾರಗೃಹ ಶಿಕ್ಷೆಯನ್ನು ಅನುಭವಿಸಿದ ಗಾಂಧೀಜಿ ಹೆಸರನ್ನು ಕೇಂದ್ರ ಸರ್ಕಾರ ಮರೆತು ಹೋಗುತ್ತಿದೆ ಎಂಬುದೇ ವಿಪರ್ಯಾಸ. ಇಂತಹ ಬೆಳವಣಿಗೆಗೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಆತಂಕಕಾರಿಯಾಗಿದೆ ಎಂದು ಹೇಳಿದರು.
ಭಾರತವನ್ನು ತಿಳಿಯಬೇಕಾದರೆ ಭಾರತದ ಗ್ರಾಮಗಳನ್ನ ನೋಡಬೇಕು ಎಂಬ ಗಾಂಧಿ ಕಲ್ಪನೆಯನ್ನು ಮುಂದಾಲೋಚನೆಯ ಮೂಲಕ 2005ರಲ್ಲಿ ಜಾರಿಗೆ ತಂದ ನರೇಗಾ ಯೋಜನೆ ಕಳೆದ 20 ವರ್ಷಗಳಿಂದ ಗ್ರಾಮೀಣ ಜನರಿಗೆ ಉದ್ಯೋಗ ಸೃಷ್ಟಿ ಮಾಡಿದೆ. ಆದರೆ ಇಂದು ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಬಹುದೊಡ್ಡ ಹೊರೆಯನ್ನು ಹಾಕಿ ಯೋಜನೆ ಅನುಷ್ಠಾನವಾಗದಂತೆ ನೋಡಿಕೊಳ್ಳುವ ಪ್ರಯತ್ನ ಸಾಗುತ್ತಿದೆ ಎಂದರು.
ಹಿಂದೆ ಕೇಂದ್ರ ಸರ್ಕಾರ ಶೇಕಡ 90ರಷ್ಟು ಮತ್ತು ರಾಜ್ಯ ಸರ್ಕಾರ 10ರಷ್ಟು ಒದಗಿಸುತ್ತಿತ್ತು. ಇದೀಗ ರಾಜ್ಯ ಸರ್ಕಾರ 40ರಷ್ಟು ಅನುದಾನ ಒದಗಿಸುವಂತೆ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದೊಂದು ಮರಣ ಶಾಸನದಂತಾಗಿದೆ ಎಂದು ಹೇಳಿದರು.

ಯಾವುದೇ ರಾಜ್ಯ ಸರ್ಕಾರದ ಜೊತೆ ಚರ್ಚೆ ಮಾಡದೆ ಏಕಾಏಕಿ ಕಾನೂನು ಜಾರಿ ಮಾಡುವ ಮೂಲಕ ಸಂವಿಧಾನ ವಿರೋಧ ಚಟುವಟಿಕೆಯನ್ನು ಕೇಂದ್ರ ಸರ್ಕಾರ ಅನುಸರಿಸಿದೆ ಇದು ಮಹಾತ್ಮನ ತತ್ವ, ಸಿದ್ಧಾಂತ ನಡೆಗಳಿಗೆ ವಿರೋಧದ ವ್ಯವಸ್ಥೆಯಾಗಿದೆ. ಈ ವಿಚಾರವನ್ನು ತೀವ್ರವಾಗಿ ಖಂಡಿಸಲಾಗುತ್ತಿದೆ ಎಂದು ಹೇಳಿದರು.
Kodagu
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಡಿಕೇರಿ : ಕರ್ನಾಟಕ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ-2026ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ-ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಪ್ರಕರಣವು ದಿನಾಂಕ:01-08-2025 ರಿಂದ 31-07-2026 ರೊಳಗೆ ನಡೆದಿರಬೇಕು ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ. 10 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1 ಲಕ್ಷ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ.

ಮಕ್ಕಳ ದಿನಾಚರಣೆ-2026 ನೇ ಸಾಲಿನ ಪ್ರಶಸ್ತಿಗಾಗಿ ನಿಗಧಿ ಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ಗೇಟ್ ಹತ್ತಿರ, ಮೈಸೂರು ರಸ್ತೆ ಮಡಿಕೇರಿ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ:20-08-2026ರೊಳಗೆ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಕೋರಲಾಗಿದೆ.
ದಿನಾಂಕದ ನಂತರ ಸಲ್ಲಿಸಿದ ಅರ್ಜಿಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08272-228010, 9482194105 ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ ಅವರು ತಿಳಿಸಿದ್ದಾರೆ.
Kodagu
ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಕೊಡಗಿನ 9 ವಿದ್ಯಾರ್ಥಿಗಳು ಆಯ್ಕೆ
ಮಡಿಕೇರಿ : ಇದೇ ಜು.29 ರಿಂದ 31 ರ ವರೆಗೆ ನೇಪಾಳದ ಕಾಟ್ಮಂಡ್ ನಲ್ಲಿ ನಡೆಯುವ ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಭಾರತ ತಂಡಕ್ಕೆ ಕರ್ನಾಟಕ ರಾಜ್ಯದಿಂದ 21 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಮಿಕ್ಸ್ ಬಾಕ್ಸಿಂಗ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಎನ್.ಸಿ.ಸುದರ್ಶನ್ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಿಂದ ಮಿಥಶ್ ಜೆ., ರೀತನ್ ಡಿ.ಎಸ್,, ಅಜಯ್ ಎನ್.ಎಸ್., ಶ್ರಿಯಾನ್ ಗೌಡ, ಯಾಸಿನ್, ಹಫೀಸ್, ಕೌಶಿಕ್ ಕುಮಾರ್ ಯು.ಸಿ., ಮನ್ಸಿತ್ ಮೋಹನ್ ಹಾಗೂ ಸ್ವಾತಿಕ್ ಬಿ.ಎಸ್ ಆಯ್ಕೆಯಾಗಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
Kodagu
ಹಾರಂಗಿ ಜಲಾಶಯದ ನೀರು ಕುಡಿಯಲು ಮಾತ್ರ: ರೈತರಿಗೆ ಬೆಳೆ ಬೆಳೆಯದಂತೆ ಮನವಿ
ಕುಶಾಲನಗರ: ಮುಂಗಾರು ಮಳೆಯ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಕಡಿಮೆಯಾಗಿದೆ. 2026-27ನೇ ಸಾಲಿನ ಜೂನ್ 1 ರಿಂದ ಜುಲೈ 21 ರವರೆಗೆ ಜಲಾಶಯದಲ್ಲಿ ಕೇವಲ 5.848 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂದು ಕಾವೇರಿ ನೀರಾವರಿ ನಿಗಮ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ನೀರನ್ನು ಮೀಸಲಿಡಲು ಸರ್ಕಾರ ನಿರ್ಧರಿಸಿದೆ. ಜುಲೈ 2 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು “ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ” ಎಂದು ಸೂಚಿಸಿದ್ದಾರೆ.

ಈಗಾಗಲೇ ಫೆಬ್ರವರಿ 26 ಮತ್ತು ಜೂನ್ 5 ರ ಸರ್ಕಾರದ ಆದೇಶದಂತೆ ಜಲಾಶಯದ ನೀರನ್ನು ಕುಡಿಯಲು ಮಾತ್ರ ಬಳಸಲಾಗುತ್ತಿದೆ. ಜಿಲ್ಲಾಡಳಿತ ಮತ್ತು ಸ್ಥಳೀಯ ಅಧಿಕಾರಿಗಳು ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ನೀರನ್ನು ಅವಲಂಬಿಸಿ ಯಾವುದೇ ಬೆಳೆ ಬೆಳೆಯದಂತೆ ರೈತರು ಹಾಗೂ ಅಚ್ಚುಕಟ್ಟುದಾರರು ಸಹಕರಿಸಬೇಕು ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ಮನವಿ ಮಾಡಿದ್ದಾರೆ.
-
Politics24 hours agoಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ: 3.68 ಲಕ್ಷಕ್ಕೂ ಅಧಿಕ ಅರ್ಜಿಗಳು – ಜಿಲ್ಲಾವಾರು ಅಂಕಿಅಂಶ ಪ್ರಕಟ!!
-
Mysore7 hours agoಹುಣಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆ; ಸಾವಿನ ಕಾರಣ ನಿಗೂಢ
-
Mysore13 hours agoನಂಜನಗೂಡಿನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರಿಂದ ಧರ್ಮದೇಟು, ಪೊಲೀಸರ ವಶಕ್ಕೆ
-
Kodagu10 hours agoಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ
-
Politics23 hours agoಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಸ್ನೇಹಿತರು, ಸಂಬಂಧಿಗಳ ಭೇಟಿಗೆ ಕೋರ್ಟ್ ಅನುಮತಿ
-
Politics3 hours agoರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ: 18 ಮಂದಿಗೆ ಸಚಿವ ಸ್ಥಾನ ಸಾಧ್ಯತೆ
-
Manglore31 minutes agoಮನೆ ಕಾಮಗಾರಿಗೆ ಬಂದು 6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು- ಕೃತ್ಯ ಎಸಗಿದ 24 ಗಂಟೆಯೊಳಗೆ ಆರೋಪಿ ಅಂದರ್
-
Kodagu5 hours agoಕೂಡಿಗೆ ವ್ಯಾಪ್ತಿಯಲ್ಲಿ 1 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಡಾ. ಮಂತರ್ ಗೌಡ ಚಾಲನೆ
