Connect with us

Mysore

ಮಹಿಷಾ ದಸರಾ ಸರ್ಕಾರ ಮಾಡುತ್ತಿಲ್ಲ : ಸಿದ್ದರಾಮಯ್ಯ

Published

on

ಮೈಸೂರು: ಮಹಿಷ ದಸರಾವನ್ನು ಸರ್ಕಾರ ಮಾಡಿಲ್ಲ. ನಾವು ಹಿಂದೆಯೂ ಮಾಡಿಲ್ಲ ಈಗಲೂ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಹೊಸ ಬಾರ್ ಲೈಸನ್ಸ್ ಕೊಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ಡಿ.ಕೆ ಶಿವಕುಮಾರ್ ಎಲ್ಲೂ ಕೂಡ ಹೊಸ ಲೈಸನ್ಸ್ ಕೊಡುತ್ತೇವೆ ಅಂತಾ ಹೇಳಿಲ್ಲ‌.
ಸದ್ಯಕ್ಕೆ ಆ ವಿಚಾರದಲ್ಲಿ ಯಾವ ಚರ್ಚೆಗಳು ಬೇಡ. ಜನರ ಭಾವನೆಗಳನ್ನು ಕೇಳಬೇಕು, ಗೌರವಿಸಬೇಕು‌
ನಾನು ಸ್ಪಷ್ಟವಾಗಿಲ್ಲ ಹೇಳುತ್ತಿದ್ದೇನೆ. ಹೊಸ ಲೈಸನ್ಸ್‌ಗಳು ಯಾವುದು ಇಲ್ಲವೆಂದರು.

ಮಹಿಷ ದಸರವನ್ನ ಸರ್ಕಾರ ಮಾಡಿಲ್ಲ. ನಾವು ಹಿಂದೆಯೂ ಮಾಡಿಲ್ಲ ಈಗಲೂ ಮಾಡುತ್ತಿಲ್ಲ.
ಅವರ್ ಯಾರೋ ಹಿಂದಿನಿಂದ ಮಹಿಷ ದಸರಾ ಮೈಸೂರಿನಲ್ಲಿ ಮಾಡುತ್ತಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಏನು ಮಾಡಿಲ್ಲ.
ಈಗ ಆ ವಿಚಾರದಲ್ಲಿ ಜಿಲ್ಲಾಡಳಿತ ತೀರ್ಮಾನ ಕೈಗೊಳ್ಳುತ್ತದೆ ಎಂದರು.
ಕೇಂದ್ರದಿಂದ ಬರ ಅಧ್ಯಯನ ವಿಚಾರವಾಗಿ ಮಾತನಾಡಿ, ಎಲ್ಲಾ ಹಳ್ಳಿಯ ಜನರನ್ನು ಖುದ್ದಾಗಿ ಭೇಟಿ ಮಾಡಿ ಸಮಸ್ಯೆ ಆಲಿಸಿ ಎಂದು ಕೇಂದ್ರದ ತಂಡಕ್ಕೆ ಕೇಳಿಕೊಂಡಿದ್ದೇನೆ.
ಬರ ಪ್ರವಾಸದ ಪ್ಲಾನ್ ಅವರೇ ಮಾಡಿಕೊಂಡಿದ್ದಾರೆ. ಆಕಡೆ ಹೋಗಿ ಈ ಕಡೆ ಬನ್ನಿ ಅಂತ ನಾವು ನಿರ್ಧರಿಸಲು ಸಾಧ್ಯವಿಲ್ಲ.
ಹೊಲದಲ್ಲಿ ಹಸಿರು ಇದ್ದ ಕಾರಣಕ್ಕೆ ಅದು ಫಲ ಎಂಬ ಅರ್ಥವಲ್ಲ. ಬೆಳೆ ಬರಬೇಕು
ಹೀಗಾಗಿ ಹಸಿರನ್ನು ನೋಡಿ ತೀರ್ಮಾನವಾಗಬಾರದು. ಹೆಚ್ಚಿನ ಬೆಳೆ, ಮನೆ ಹಾಗೂ ರಸ್ತೆ ಎಲ್ಲವೂ ಸೇರಿ 7 ಸಾವಿರಕ್ಕೂ ಹೆಚ್ಚಿನ ನಷ್ಟ ಆಗಿದೆ. ಆದರೆ, ಎನ್ ಡಿಆರ್ ಎಫ್ ಪ್ರಕಾರ ನಾವು 4500 ಕೋಟಿ ಬರ ಪರಿಹಾರ ಕೇಳಿದ್ದೇವೆ. ಕೇಂದ್ರ ತಂಡ ಇಲ್ಲಿಂದ ಹೋಗಿ ವರದಿ ಕೊಡುತ್ತದೆ. ಆನಂತರ ಅಧ್ಯಯನದ ವರದಿ ಬರುತ್ತದೆ.
ಬರಕ್ಕೂ ಗ್ಯಾರಂಟಿ ಯೋಜನೆಗಳಿಗೂ ಸಂಬಂಧ ಇಲ್ಲ. ಬರದ ಪರಿಸ್ಥಿತಿ ಇದ್ದರೂ ಗ್ಯಾರಂಟಿಗಳು ಎಂದಿನಂತೆ ನಡೆಯುತ್ತವೆಂದರು.
ಜಾತಿ ಗಣತಿ ವಿಚಾರ
ನವೆಂಬರ್‌ನಲ್ಲಿ ಕರ್ನಾಟಕದ ಜಾತಿಗಣತಿ ವರದಿ ನನ್ನ ಕೈ ಸೇರಬಹುದು. ಆನಂತರ ಪರಿಶೀಲಿಸಿ ತೀರ್ಮಾನ ಮಾಡುತ್ತೇವೆ. ಸಮಿತಿಯ ಅಧ್ಯಕ್ಷರು ಬದಲಾಗಿದ್ದಾರೆ. ಹೀಗಾಗಿ ನವೆಂಬರ್‌ನಲ್ಲಿ ವರದಿ ಕೊಡುತ್ತಾರೆ. ಜಾತಿಗಣತಿ ಸಮಾಜವನ್ನ ವಿಂಗಡಿಸುವುದಿಲ್ಲ. ಯಾವ ಸಮುದಾಯ ಎಷ್ಟಿದೆ ಎಂಬುದು ಅಂಕಿಅಂಶಗಳು ಸರ್ಕಾರಕ್ಕೆ ಬೆಡಕು. ಯೋಜನೆಗಳ ಸುದ್ಧಪಡಿಸಲು ಈ ಯೋಜನೆಗಳು ಅವಶ್ಯಕವಾಗಿದೆ‌. ಪ್ರಧಾನಿ ಬಾಯಲ್ಲಿ ಮಾತ್ರ ಸಬ್‌ ಕಾ ಸಾಥ್ ಸಬ್ ಕಾ ವಿಕಾಸ್ ಅನ್ನುತ್ತಾರೆ. ಆದರೆ ಅವರ ನಡೆನುಡಿಗೆ ಬಹಳ ವ್ಯತ್ಯಾಸಗಳಿವೆ. ಹೀಗಾಗಿ ಜಾತಿ ಗಣತಿ ವಿರೋಧಿಸುತ್ತಾರೆ ಎಂದರು.

Continue Reading
Click to comment

Leave a Reply

Your email address will not be published. Required fields are marked *

Mysore

ನಂಜನಗೂಡಿನಲ್ಲಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಚಿಕ್ಕ ಜಾತ್ರಾ ಮಹೋತ್ಸವ ವಿಜೃಂಭಣೆ

Published

on

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ
ಚಿಕ್ಕ ಜಾತ್ರೆ ಮಹೋತ್ಸವ ಮಂಗಳವಾರ ವೈಭವಯುತವಾಗಿ ನೆರವೇರಿತು.

ಬೆಳಿಗ್ಗೆ 10.45 ರಂದು ಸಲ್ಲುವ ಶುಭ ಮಕರ ಲಗ್ನದಲ್ಲಿ ದೇಗುಲದ ಪ್ರಧಾನ ಆಗಮಿಕ ಜೆ. ನಾಗ ಚಂದ್ರ ದೀಕ್ಷಿತ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕೈಂಕಯ೯ ನೆರವೇರಿಸಿ ರಥಗಳಿಗೆ ಪೂಜೆ ಸಲ್ಲಿಸಿದರು.

ಪೂಜೆ ಸಲ್ಲಿಸಿದ ಬಳಿಕ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಉತ್ಸವ ರಥಕ್ಕೆ ಚಾಲನೆ ನೀಡಿ ತೇರನ್ನು ಎಳೆದರು.

ಹೂವಿನ ಹಾರ ಅಲಂಕೃತಗೊಂಡ ರಥೋತ್ಸವ ನಂಜುಂಡೇಶ್ವರ ಸ್ವಾಮಿಯ ಹಾಗೂ ಪಾರ್ವತಿ ದೇವಿ ಸಮೇತ ಉತ್ಸವ ಮೂರ್ತಿ, ಗಣಪತಿ ಚಂಡಿಕೇಶ್ವರ, ಸೇರಿದಂತೆ ಮೂರು ರಥಗಳು ರಥ ಬೀದಿಯಲ್ಲಿ
ರಥಗಳನ್ನು ಸಾವಿರಾರು ಭಕ್ತಾದಿಗಳು ಹಗ್ಗ ಹಿಡಿದು ಜೈ ನಂಜುಂಡೇಶ್ವರ, ಜೈ ಶ್ರೀಕಂಠೇಶ್ವರ, ಜೈ ನಂಜುಂಡ, ಎಂಬ ಘೋಷಣೆಗಳನ್ನು ಕೂಗುತ್ತಾ ಎಳೆದರು.

ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ರಥಕ್ಕೆ ಹಣ್ಣು ದವನ ಎಸೆದು ಪುನೀತರಾದರು.

ರಥ ಬೀದಿಗಳಲ್ಲಿ ನಿಧಾನವಾಗಿ ಚಲಿಸಿ ಭಕ್ತಾದಿಗಳು ಭಕ್ತಿಯಿಂದ ನಮಿಸಿದರು.

ಪೋಲಿಸ್ ಇಲಾಖೆಯಿಂದ ಬಿಗಿ ಬಂದೋಬಸ್ತು ಇರುವುದರಿಂದ ರಥದಲ್ಲಿ ಯಾವುದೇ ಅಡೆ-ತಡೆಗಳಿಲ್ಲದೆ ಮೂರು ರಥಗಳು 12.50 ಗಂಟೆಗೆ ಸ್ವಸ್ಧಾನಕ್ಕೆ ಸೇರಿದವು.

ಜಾತ್ರಾಯಲ್ಲಿ: ಶಾಸಕರಾದ ದರ್ಶನ್ ಧ್ರುವನಾರಾಯಣ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್, ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಕಾರ್ಯನಿವ೯ಹಣಾಧಿಕಾರಿ ಎಂ. ಜಗದೀಶ್ ಕುಮಾರ್, ಪೌರಾಯುಕ್ತಧಿಕಾರಿ ನಂಜುಂಡಸ್ವಾಮಿ, ಡಿಎಸ್ಪಿ ಗೋವಿಂದ್ ರಾಜ್, ಇದ್ದರು.

Continue Reading

Mysore

ಗೃಹಲಕ್ಷ್ಮಿ : 1,18,000 ರೂಪಾಯಿ ಹಣ ನಾಡದೇವತೆ ತಾಯಿ ಚಾಮುಂಡೇಶ್ವ ದೇಗುಲಕ್ಕೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್.

Published

on

ಮೈಸೂರು : ರಾಜ್ಯದ ಮಹತ್ವದ ಯೋಜನೆ ಗೃಹಲಕ್ಷ್ಮಿ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಯೋಜನೆ ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆಯಾಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್‌ಗೆ ಪತ್ರ ಬರೆದಿದ್ದರು.ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಪತ್ರಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸೂಚಿಸಿದ್ದ ಡಿ ಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದರು. ಇದೀಗ ಪ್ರತಿ ತಿಂಗಳು ಯೋಜನೆಯ ಹಣ ನಾಡದೇವತೆಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದ್ದು, ಅದರಂತೆ 59 ತಿಂಗಳ ಹಣವನ್ನು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಅರ್ಪಣೆ ಮಾಡಲಾಗಿದೆ.

ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಹಣ ಸಂದಾಯವಾಗಿದೆ.1,18,000 ರೂಪಾಯಿ ಹಣ ದೇಗುಲಕ್ಕೆ ನೀಡಿಕೆಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಹಣ ಸಂದಾಯ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯ ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್.

Continue Reading

Mysore

ಪತ್ರಕರ್ತ ಪುನೀತ್ ಗೆ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿ

Published

on

ಪಿರಿಯಾಪಟ್ಟಣ: ತಾಲೂಕಿನ ಚಪ್ಪರದಹಳ್ಳಿ ಗ್ರಾಮದ ಜನಮಿತ್ರ ವರದಿಗಾರ ಪತ್ರಕರ್ತ ಸಿ.ಜಿ ಪುನೀತ್ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ಪ್ರತಿ ವರ್ಷ ಸಾಧಕರನ್ನು ಗುರುತಿಸಿ ನೀಡಲಾಗುವ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿಗೆ ಪ್ರಸ್ತಕ ಸಾಲಿನಲ್ಲಿ ಮಾಧ್ಯಮ ಕ್ಷೇತ್ರದ ಸೇವೆಗೆ ಸಿ.ಜಿ ಪುನೀತ್ ಆಯ್ಕೆಯಾಗಿದ್ದು, ನ.29ರ ಬುಧವಾರ ಮೈಸೂರಿನ ಕಲಾಮಂದಿರದಲ್ಲಿ ನಡೆಯಲಿರುವ ಕನ್ನಡಾಂಬೆ ಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ರಾಜಶೇಖರ್ ಪ್ರಕಟಣೆಯಲ್ಲಿ ಹೇಳಿದ್ದಾರೆ.

Continue Reading

Trending