Connect with us

Location

ಗಂಡ ಸತ್ತ ಮುಂಡೆ ಎಂದಿದ್ದ ಎಚ್‌ಡಿಕೆ: ಪ್ರಕಾಶ್‌ ರೈ ಕಿಡಿ

Published

on

ಗಂಡ ಸತ್ತ ಮುಂಡೆ ಎಂದಿದ್ದ ಎಚ್‌ಡಿಕೆ: ಪ್ರಕಾಶ್‌ ರೈ ಕಿಡಿ

ಈ ಬಾರಿಯೂ ಹೆಣ್ಣಿಗೆ ಅವಮಾನಿಸಿದ ಕುಮಾರಸ್ವಾಮಿ

ಮಂಡ್ಯ: ಕಳೆದ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಷ್‌ ಅವರನ್ನು ‘ಗಂಡ ಸತ್ತ ಮುಂಡೆ’ ಎಂಬ ಮಾತು ಹೇಳಿ ಸೋಲು ಅನುಭವಿಸಿದ್ದವರಿಗೆ ಅರ್ಥವಾಗಬೇಕಿದೆ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸರಿಯಾದ ಮಗ ಯಾರು, ಕಳ್ಳನನ್ನ ಮಗ ಯಾರು ಎಂಬುದನ್ನ ಮಂಡ್ಯದ ಜನತೆ ನಿರ್ಧರಿಸುತ್ತಾರೆ ಎಂದು ನಟ ಪ್ರಕಾಶ್‌ ರೈ ಕಿಡಿಕಾರಿದರು.

ನಗರದ ರೈತ ಸಭಾಂಗಣದಲ್ಲಿ ಮಂಡ್ಯ ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟದ ಸಹಯೋಗಲ್ಲಿ ಭಾನುವಾರ ಆಯೋಜಿಸಿದ್ದ ಶ್ರಮಿಕರ ಸ್ವಾಭಿಮಾನಿ ಗೆಲುವಿನ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಹಾಗೂ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದಾರಿ ತಪ್ಪಿದ ಮಗರಾಗಿದ್ದಾರೆ, ಹೆಣ್ಣುಮಕ್ಕಳ ಬಗ್ಗೆ ಇಷ್ಟು ಕೆಳಮಟ್ಟಕ್ಕೆ ಇಳಿದು ಮಾತನಾಡಲು ಇವರಿಗೆ ನಾಚಿಕೆ, ಮಾನ ಮರ್ಯಾದೆ ಇಲ್ಲವೇ ಎಂದು ಪ್ರಶ್ನಿಸಿದರು.

ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು ‘ಗಂಡ ಸತ್ತ ಮುಂಡೆ’ ಎಂದು ಕರೆದಿದ್ದಕ್ಕೆ, ಮಂಡ್ಯ ಜಿಲ್ಲೆಯ ಮಹಿಳೆಯರು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲೂ ಅಂತದ್ದೆ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ. ಈಗ ಮಹಿಳೆಯರು ಎಚ್ಚೆತ್ತುಕೊಳ್ಳಬೇಕು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸರಿಯಾದ ಮಗ ಯಾರು, ಕಳ್ಳನನ್ನ ಮಗ ಯಾರು ಎಂದು ಮಂಡ್ಯದ ಜನತೆಯೇ ನಿರ್ಧಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆ ಬಂದಿರುವುದರಿಂದ ಮೈಸೂರಿನ ಮಹಾರಾಜರನ್ನು ನೋಡಲು ದಿಲ್ಲಿಯ ಮಹಾಪ್ರಭುಗಳು ಬಂದಿದ್ಧಾರೆ, ಇದರಿಂದಾಗಿ ಮಹಾಪ್ರಭುವಿನ ಕಾರ್ಯಕ್ರಮಕ್ಕೆ ಜನರನ್ನು ಕರೆದುಕೊಂಡು ಬಸ್ಸುಗಳು ಹೊರಟಿವೆ ಹಾಗಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನಮ್ಮ ಮಹಾಪ್ರಭುಗಳು ಕೋವಿಡ್ ಕಾಲದಲ್ಲಿ ಯಾಕೆ ಬರಲಿಲ್ಲ ಎಂದು ನರೇಂದ್ರ ಮೋದಿ ಅವರನ್ನು ಟೀಕಿಸಿದರು.

ಕಳೆದ ಸೆಪ್ಟಂಬರ್‌ನಲ್ಲಿ ಬರ ಪರಿಹಾರ ನೀಡಿ ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಆದರೆ, ಏಪ್ರಿಲ್ ಬಂದರೂ ಬರ ಪರಿಹಾರ ನೀಡಲಿಲ್ಲ, ಇದರಿಂದ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಹೋಗಿದೆ, ಇದರ ವಿಚಾರಣೆ ನಡೆಸಿದ ನ್ಯಾಯಾಲಯವು ಕೇಂದ್ರ ನೋಟೀಸ್ ನೀಡಲು ಮುಂದಾದಾಗ, ನೋಟೀಸ್ ನೀಡಬೇಡಿ ಮಾನ ಮರ್ಯಾದೆ ಹೋಗುತ್ತೇ ಎಂದು ಬೇಡಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲ ನಾಟಕ ಏಕೆ ಎಂದು ಹರಿಯಾಯ್ದರು.

ಮುಖಂಡರಾದ ಡಾ.ವಾಸು, ಕುಮಾರ್ ಸಮತಳ, ಬಿ.ಟಿ.ವಿಶ್ವನಾಥ್‌, ಕೃಷ್ಣ ಪ್ರಕಾಶ್, ಸಿ.ಕುಮಾರಿ, ಲತಾ ಶಂಕರ್, ಸಿದ್ದರಾಜು. ಊರ್ಣಿಮಾ, ಜಗದೀಶ್‌ ನಗರಕೆರೆ ಭಾಗವಹಿಸಿದ್ದರು.

………..

Continue Reading
Click to comment

Leave a Reply

Your email address will not be published. Required fields are marked *

Chikmagalur

ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸಿ ವಿವಿಧ ಗ್ರಾಮಸ್ಥರಿಂದ ಪ್ರತಿಭಟನೆ

Published

on

ಮೂಡಿಗೆರೆ: ಕಾಡಾನೆಗಳಿಂದ ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಮಾಕೋನಹಳ್ಳಿ ಹಾಗೂ ನಂದೀಪುರ ಗ್ರಾ.ಪಂ. ವ್ಯಾಪ್ತಿಯ ಗ್ರಾಮಸ್ಥರು ಶನಿವಾರ ತಾಲೂಕಿನ ಮಾಕೋನಹಳ್ಳಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಇಲ್ಲಾ ಉಪಾಧ್ಯಕ್ಷ ಗಬ್ಬಳ್ಳಿ ಚಂದ್ರೇಗೌಡ ಮಾತನಾಡಿ, ಈ ಹಿಂದೆ ಕಾಡಾನೆಗಳು ಬಂದು ಹೋಗುತ್ತಿತ್ತು. ಆದರೆ ಈಗ ಇಲ್ಲಿಯೇ ನೆಲೆಸಿಬಿಟ್ಟಿದೆ. ತೋಟದಲ್ಲಿ ಬೆಳೆದ ಬೆಳೆ ಸಂಪೂರ್ಣ ನಾಶಪಡಿಸುತ್ತಿವೆ. ನಮಗೆ ಬೆಳೆ ಪರಿಹಾರಕ್ಕಿಂತ ಜೀವ ಉಳಿಸಿಕೊಂಡರೆ ಸಾಕೆಂಬ ಸ್ಥಿತಿಗೆ ಬಂದಿದ್ದೇವೆ. ಯಾವ ಸಮಯದಲ್ಲಾದರು ಪ್ರಾಣ ಹಾನಿಯಾಗುವ ಸಂಭವವಿದೆ. ಆದರೂ ಇಲ್ಲಿನ ಸಮಸ್ಯೆ ಬಗ್ಗೆ ಸ್ಥಳೀಯ ಶಾಸಕರು ಹಾಗೂ ಉಪಸಭಾಪತಿಗಳು ತಲೆಕೆಡಿಸಿಕೊಂಡಿಲ್ಲ. ಇನ್ನು ಅರಣ್ಯ ಸಚಿವರು ಕಳೆದೇ ಹೋಗಿದ್ದಾರೆ. ನಮ್ಮ ಸಮಸ್ಯೆ ಕೇಳುವವರೇ ಇಲ್ಲದಂತಾಗಿದೆ. ಕಾಡು ಪ್ರಾಣಿಗಳಿಂದ ರಕ್ಷಣೆ ಕೊಡದ ಅರಣ್ಯ ಇಲಾಖೆ ನಮಗೆ ಅಗತ್ಯವಿಲ್ಲ. ಇನ್ನು ೨ ದಿನದಲ್ಲಿ ಕಾಡಾನೆಗಳನ್ನು ಸ್ಥಳಾಂತರಿಸಬೇಕು. ಇಲ್ಲವಾದರೆ ಅರಣ್ಯ ಇಲಾಖೆಗೆ ಗೆರಾವ್ ಹಾಕಲಾಗುವುದು. ನಂತರ ಶಾಸಕರ ಮನೆ ಮುಂದೆ ಅನಿರ್ಧಿಷ್ಟಾವದಿ ದರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರೈತ ಮುಖಂಡ ಎಸ್.ಪಿ.ರಾಜು ಮಾತನಾಡಿ, ಮಾಕೋನಹಳ್ಳಿ ಹಾಗೂ ನಂದೀಪುರ ಗ್ರಾ.ಪಂ. ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಭುವನೇಶ್ವರಿ ಮತ್ತು ಕೆಪಿ ಕಾಲರ್ ತಂಡದ ಸುಮಾರು ೪೨ಕ್ಕೂ ಅಧಿಕ ಕಾಡಾನೆಗಳು ಕಳೆದ ೧೫ ದಿನದಿಂದ ಇಲ್ಲಿಯೇ ಬೀಡು ಬಿಟ್ಟಿವೆ. ಅವುಗಳು ಕಾಫಿ ತೋಟ ಹಾಳು ಮಾಡುವ ಜತೆಗೆ ಮನೆಗಳ ಸಮೀಪ ಬರುತ್ತಿವೆ. ಮನೆಯಲ್ಲಿ ಮಕ್ಕಳನ್ನು ಬಿಟ್ಟು ಹೋಗದ ಸ್ಥಿತಿ ಉಂಟಾಗಿದೆ. ತೋಟದಲ್ಲಾಗಿರುವ ಹಾನಿ ವೀಕ್ಷಿಸಲು ರೈತರು ತೋಟಕ್ಕೆ ಹೋಗಲು ಭಯಪಡುವಂತಾಗಿದೆ. ಅಲ್ಲದೇ ಕೂಲಿ ಕಾರ್ಮಿಕರು ಕೂಲಿ ಕೆಲಸಕ್ಕೆ ತೆರಳಲು ಸಾಧ್ಯವಾಗದೇ ಕುಟುಂಬ ನಿರ್ವಹಣೆಗೆ ಕಷ್ಟಪಡಬೇಕಾಗಿದೆ. ರಾತ್ರಿ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿಲ್ಲ. ಜೀವ ಉಳಿಸಿಕೊಳ್ಳುವುದೇ ಕಷ್ಟವಾಗಿದೆ. ಕಾಡಾನೆಗಳನ್ನು ಕೂಡಲೇ ಸ್ಥಳಾಂತರಿಸುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಉತ್ತರಿಸಬೇಕೆಂದು ಒತ್ತಾಯಿಸಿದರು.
ನಂತರ ಎಸಿಎಫ್ ಮೋಹನ್ ಹಾಗೂ ಆರ್‌ಎಫ್‌ಒ ಕಾವ್ಯ ಸ್ಥಳಕ್ಕೆ ಆಗಮಿಸಿ, ಈಗಾಗಲೇ ೧೫ ಕಾಡಾನೆಗಳು ಕಾಡಿಗೆ ವಾಪಾಸು ತೆರಳಿವೆ. ಭುವನೇಶ್ವರಿ ಹಾಗೂ ಕೆ.ಪಿ.ಕಾಲರ್ ತಂಡದ ಸುಮಾರು ೨೦ ಕಾಡಾನೆಗಳು ಕೆಲ್ಲೂರು ಮತ್ತು ಬಾರದಹಳ್ಳಿ ಗ್ರಾಮದಲ್ಲಿವೆ. ಅವುಗಳನ್ನು ಏಕ ರೀತಿಯಲ್ಲಿ ಓಡಿಸಿದರೆ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ ಅವುಗಳ ಸ್ವಾಭಾವಿಕ ಸಂಚಾರಕ್ಕೆ ಅನುವು ಮಾಡಿ, ಹತ್ತಿರದ ಕಾಡಿಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.

ಮಾಕೋನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಮಂಜುಳ, ಸದಸ್ಯ ಪುಟ್ಟರಾಜು, ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ಬ್ರಿಜೇಶ್, ಗ್ರಾಮಸ್ಥರಾದ ಲಕ್ಷ್ಮಣ್‌ಗೌಡ ಗೌತಳ್ಳಿ, ವೀರೇಶ್ ಮಾಕೋನಹಳ್ಳಿ, ವಿಕ್ರಮ್, ಪ್ರಹ್ಲಾಧ್, ಅನಿಲ್ ಬಾರದಹಳ್ಳಿ, ಬಿ.ಎ.ಇಂದ್ರೇಶ್, ಸತ್ಯ ತುದಿಯಾಲ, ಶಶಿಕಿರಣ್ ಮತ್ತಿತರರಿದ್ದರು.

Continue Reading

Mysore

ಆಧುನಿಕ ಔಷದಿ ಚಿಕಿತ್ಸೆಗಿಂತ, ಆಯುರ್ವೇದ ಚಿಕಿತ್ಸೆಗಾಗಿ ಸಲಹೆ ನೀಡುತ್ತಾರೆ: ಕಮಲಾ ಬಾಯಿ

Published

on

ಮೈಸೂರು: ಇಂದಿಗೂ ಹಲವಾರು ಆರೋಗ್ಯ ತಜ್ಞರು, ವಿವಿಧ ಖಾಯಿಲೆಗಳಿಗೆ ಆಧುನಿಕ ಔಷದಿ ಚಿಕಿತ್ಸೆಗಿಂತ, ಆಯುರ್ವೇದ ಚಿಕಿತ್ಸೆಗಾಗಿ ಸಲಹೆ ನೀಡುತ್ತಾರೆ. ಕಾರಣ ಆಯುರ್ವೇದ ಚಿಕಿತ್ಸೆಯಲ್ಲಿ ಯಾವುದೇ, ಅಡ್ಡಪರಿಣಾಮಗಳಾಗುವುದಿಲ್ಲ ಎಂದು ಕರ್ನಾಟಕ ಸರ್ಕಾರ ಆಯುಷ್ ನಿಯೋಜನೆ ಮುಖ್ಯ ಆಡಳಿತಧಿಕಾರಿ ಕಮಲಾ ಬಾಯಿ(ಕೆಎಎಸ್) ತಿಳಿಸಿದರು.

ನಗರದ ಜೆ.ಕೆ ಮೈದಾನದ ಎಂಎಂಸಿ ಪ್ಲಾಟಿನಮ್ ಜುಬಿಲೀ ಸಭಾಂಗಣದಲ್ಲಿ ಶನಿವಾರ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗ 50ರ ಸಂಭ್ರಮ ಅಂಗವಾಗಿ ಹಳೆಯ ವಿದ್ಯಾರ್ಥಿ ಸಂಘ ಸಹಯೋಗದಲ್ಲಿ ಆಯೋಜಿಸಿದ್ದ, ಸುವರ್ಣ ಕಾಯ ರಾಷ್ಟ್ರೀಯ ಮಟ್ಟದ ವೈಜ್ಞಾನಿಕ ವಿಚಾರ ಸಂಕಿರಣ ಮತ್ತು ಸ್ನೇಹ ಕೂಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಒಂದು ಶಿಕ್ಷಣ ಸಂಸ್ಥೆಯ 50 ರ ಸಂಭ್ರಮ ಕೇವಲ ಆಚರಣೆಯಲ್ಲ, ಅದೊಂದು ಆ ಸಂಸ್ಥೆಯ ಅತ್ಯುತ್ತಮ ಹಾದಿಯ ಶಿಕ್ಷಣ. ನೈತಿಕ ಮೌಲ್ಯಗಳು, ಅಧ್ಯಾತ್ಮಿಕ ಮೌಲ್ಯಗಳು ಸೇರಿದಂತೆ ಒಳ್ಳೆಯ ಸಂದರ್ಭಗಳನ್ನ ಹಾಗೂ ಒಳ್ಳೆಯ ವಿಷಯಗಳನ್ನ ಪುನರ್ಮನನ ಮಾಡಿಕೊಳ್ಳುವ ಸುಸಂರ್ಭ ಸಮಯ. ಇದಲ್ಲದೇ ಒಂದು ಸಂಸ್ಥೆಯ ಸಾಧನೆ ಹಾಗೂ ಉತ್ತಮ ಭವಿಷ್ಯಕ್ಕಾಗಿ ಪೂರ್ವ ಸಿದ್ಧತೆ, ಯೋಜನೆಗಳನ್ನು ರೂಪಿಸಲು ಇಂದಿನ ದಿನ ಪ್ರೇಪಿಸುತ್ತದೆ, ಎಂದು ಹರುಷಪಟ್ಟರು.

Continue Reading

Mysore

ಈ ದೇಶಕಂಡ ಅತ್ಯಂತ ದುರ್ಬಲ ಪ್ರಧಾನಿ ನರೇಂದ್ರ ಮೋದಿ: ಉಗ್ರಪ್ಪ

Published

on

ಮೈಸೂರು: ಈ ದೇಶಕಂಡ ಅತ್ಯಂತ ದುರ್ಬಲ ಪ್ರಧಾನಿ ಅಂದರೆ ಅದು ನರೇಂದ್ರ ಮೋದಿ ಎಂದು ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಎಸ್.‌ ಉಗ್ರಪ್ಪ ಆರೋಪಿಸಿದರು.

ಇಲ್ಲಿನ ಕಾಂಗ್ರೆಸ್‌ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜನವಿರೋಧಿ, ಸಮಾಜವನ್ನು ಒಡೆದು ಆಳುವುದನ್ನು ಮೈಗೂಡಿಸಿಕೊಂಡಿರೋ ಪ್ರಧಾನ ಮಂತ್ರಿ ನರೇಂದ್ರ ಮೋದಿ. ಕಳೆದ 11 ವರ್ಷಗಳಿಂದ ದೇಶದಲ್ಲಿ 185 ಲಕ್ಷ ಕೋಟಿ ರೂ ಅಷ್ಟು ಸಾಲ ಮಾಡಿರುವ ಹೆಗ್ಗಳಿಕೆ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಸಲ್ಲುತ್ತದೆ ಎಂದರು.

ನಮ್ಮ ರಾಜ್ಯದಲ್ಲಿ ಕೆ. ಆರ್‌ ಎಸ್, ತುಂಗಭದ್ರಾ ಅಣೆಕಟ್ಟೆಯನಾದರೂ ಕಟ್ಟಿದ್ದೀರ. ಯಾವುದಾದರು ಜನರಿಗೆ ಉದ್ಯೋಗ ದೊರಕುವಂತ ಕಂಪನಿ ಮಾಡಿದ್ದೀರ? ಇಷ್ಟೊಂದು ಸಾಲವನ್ನು ಯಾವುದಕ್ಕಾಗಿ ಮಾಡಿದ್ದೀರ. ಯಾವ ಅಭಿವೃದ್ದಿ ಕೆಲಸವಾಗಿದೆ ತೋರಿಸಿ ಎಂದು ಕೇಂದ್ರದ ಎನ್.ಡಿ.ಎ ಸರಕಾರವನ್ನು ಪ್ರಶ್ನಿಸಿದರು.

ಸಮಾಜದ ನಡುವೇ ಧರ್ಮ. ಜಾತಿ, ಭಾಷೆ ಎಂಬ ಕಂದಕ ಸೃಷ್ಟಿ ಮಾಡಿದ್ದೀರ. ಜನರ ನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿ ಅವರ ಬದುಕಿನ ಮೇಲೆ ಚಪ್ಪಡಿಕಲ್ಲು ಎಳೆಯುವ ಕೆಲಸ ಮಾಡುತ್ತಿದ್ದಾರೆ.

ಕೇಂದ್ರ ಸರಕಾರದ ಬೆಲೆ ಏರಿಕೆಯನ್ನು ಮುಚ್ಚಿಕೊಳ್ಳುವುದಕ್ಕಾಗಿ ರಾಜ್ಯದಲ್ಲಿ ಬಿಜೆಪಿ ಅವರು ಜನಕ್ರೋಶ ಯಾತ್ರೆ ಮಾಡಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಜನರ ಆಕ್ರೋಶ ಸಿಎಂ. ಸಿದ್ದರಾಮಯ್ಯ, ಡಿಸಿಎಂ. ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್‌ ಸರಕಾರದ ಮೇಲೆ ಇಲ್ಲ. ಮೋದಿ ನೇತೃತ್ವದ ಕೇಂದ್ರ ಎನ್‌.ಡಿ.ಎ ಸರಕಾರದ ಮೇಲೆ ಇರೋದು ಎಂದು ಹರಿಹಾಯ್ದರು.

ರಾಜ್ಯದ ಬಿಜಿಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ,ಪತ್ರಿಪಕ್ಷನಾಯಕ ಆರ್‌, ಅಶೋಕ ಅವರೆ ಈ ರಾಜ್ಯದಲ್ಲಿ ಬೆಲೆ ಏರಿಕೆಗೆ ಕೇಂದ್ರ ಸರಕಾರ ಕಾರಣವೋ. ರಾಜ್ಯ ಕಾಂಗ್ರೆಸ್‌ ಸರಕಾರ ಕಾರಣವೋ ಸಾರ್ವಜನಿಕ ಚರ್ಚೆ ಮಾಡೋಣ. ಈ ಚರ್ಚೆಗೆ ಬರುವ ನೈತಿಕತೆ ನಿಮಗೆ ಇದೇಯ. ಕಾಂಗ್ರೆಸ್‌ ಸರಕಾರ ಸಿದ್ದವಿದೇ. ಸಾರ್ವಜನಿಕರಿಗೆ ಬೆಲೆ ಏರಿಕೆ ಬಗ್ಗೆ ಉತ್ತರಿಸುವ ಧೈರ್ಯ ಇದೆಯ. ನಿಮ್ಮಲ್ಲಿ ಆತ್ಮವಿಶ್ವಸ ಬದುಕಿದೇಯ ಎಂದು ಉಗ್ರಪ್ಪ ಕಿಡಿಕಾರಿದರು.

ಈ ದೇಶದಲ್ಲಿ 2013 ರ ಅಂತರಾಷ್ಟ್ರೀಯ ಮಾರಿಕಟ್ಟೆಯಲ್ಲಿ ಕ್ರೂಡ್‌ ಆಯಿಲ್‌ ಬೆಲೆ ಒಂದು ಬ್ಯಾರೆಲ್ ಗೆ120 ರಿಂದ 130 ಡಾಲರ್‌ ಇತ್ತು. ಆಗ ಒಂದು ಲೀಟರ್‌ ಡೇಸಲ್‌ 56.83 ರೂ ಪೈಸೆ, ಪೆಟ್ರೋಲ್‌ ಲೀಟರ್‌ 63.62 ರೂ ಪೈಸೆಗೆ ಮಾರಾಟಮಾಗುತ್ತಿತ್ತು. ಅಡುಗೆ ಅನಿಲ ದರ 400 ರೂ ಗಳಂತೆ ನೀಡಿ ಸಾರ್ವಜನಿಕರಿಕೆ ಪ್ರತಿ ತಿಂಗಳು ಅದರ ಸಬ್ಸಿಡಿ ನೀಡುತ್ತಿದ್ದೋ. ಆದರೆ ನೀವು ಹೀಗ ಬೆಲೆ ಏರಿಕೆ ಮಾಡಿ ಏನು ಕೊಡುತ್ತಿದ್ದೀರ ಎಂದು ಕೇಂದ್ರ ಸರಕಾರವನ್ನು ಪ್ರಶ್ನಿಸಿದರು. ರಾಜ್ಯ ದಲ್ಲಿ ಅಡುಗೆ ಅನಿಲದ ದರ 50 ರೂ ಏರಿಕೆಯನ್ನು ಈಕೂಡಲೇ ವಾಪಾಸು ಪಡೆಯಬೇಕು ಎಂದು ಕೇಂದ್ರ ಸರಕಾರವನ್ನು ಒತ್ತಾಯಿಸಿದರು.

ರಾಜ್ಯ ಬಿಜೆಪಿ ಶಾಸಕರು, ಸಂಸದರು ಕೇಂದ್ರ ಸರಕಾರ ಬೆಲೆ ಏರಿಕೆಯನ್ನು ಪಾರ್ಲಿಮೆಂಟ್ ನಲ್ಲಿ ಏಕೆ ಪ್ರಶ್ನೆ ಮಾಡದೇ ಬಾಯಿಗೆ ಬೀಗ ಜಡಿದು ಕುಳಿತ್ತಿದ್ದೀರೆ. ರಾಜ್ಯದಲ್ಲಿ ಜನಕ್ರೋಶ ಯಾತ್ರೆ ಮಾಡುತ್ತ ಜನರಿಗೆ ಮಂಕು ಬೂದಿ ಎರಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಸರಕಾರ ಅಂಬಾನಿ. ಅದಾನಿ ಅವರ 16 ಸಾವಿ ಕೋಟಿ ರೂ ಸಾಲ ಮನ್ನ ಮಾಡುತ್ತಾರೆ ಆದರೆ ರೈತರ ಸಾಲ ಏಕೆ ಮನ್ನ ಮಾಡೋದಿಲ್ಲ. ನಮ್ಮ ಕಾಂಗ್ರೆಸ್ ಸರಕಾರದ 5 ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಜನರು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಹಾಲಿನ ದರ ಏರಿಕೆ ಮಾಡಿ ಆ ಹಣವನ್ನು ನೇರವಾಗಿ ರೈತರಿಗೆ ನೀಡುವ ಮೂಲಕ ರೈತರ ಪರವಾಗಿ ನಿಂತಿದ್ದೇವೆ ಎಂದರು.

ಮಾಜಿ ಶಾಸಕ ಜಿ.ಎನ್‌ ನಂಜುಂಡಾಸ್ವಾಮಿ, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.‌ ಮೂರ್ತಿ, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಡಾ, ಬಿ.ಜೆ ವಿಜಯ್‌ ಕುಮಾರ್ ಮಾಧ್ಯಮ ಸಂಚಾಲಕ ಕೆ ಮಹೇಶ ಉಪಸ್ಥಿತರಿದ್ದರು.

Continue Reading

Trending

error: Content is protected !!