Crime
ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಪತಿ…!

ನಾಗಮಂಗಲ :- ಕ್ರಿಕೆಟ್ ಬೆಟ್ಟಿಂಗ್ ಹಾಗೂ ಪರಸ್ತ್ರೀ ಜೊತೆಗಿನ ಮೋಜಿನಿಂದ ಸಾಲದ ಸುಳಿಗೆ ಸಿಲುಕಿದ್ದ ಪತಿಯೊಬ್ಬ ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ ವಿಷ ವುಣಿಸಿ ಕೊಲೆಗೈದು ತಾನು ಸಹ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಎಂಟನೇ ವಾರ್ಡ್ ನ ಪೇಟೆ ಹೊಲ ರಸ್ತೆಯ ನಿವಾಸಿ ನರಸಿಂಹ ಪತ್ನಿ ಮತ್ತು ಮಕ್ಕಳನ್ನು ಕೊಲಗೈದಿದ್ದಲ್ಲದೆ ತಾನು ಸಹ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದಾನೆ.
ಈತನ ಪತ್ನಿ ಕೀರ್ತನ (23) ಮಕ್ಕಳಾದ ಜಯಸಿಂಹ (4) ಮತ್ತು ಒಂದೂವರೆ ವರ್ಷದ ರಿಷಿಕಾ ಸಾವನ್ನಪ್ಪಿದ್ದು, ನರಸಿಂಹನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಾಲೂಕಿನ ತೆಂಗಿನಭಾಗ ಗ್ರಾಮದ ಸ್ವಾಮಿ ರ ಪುತ್ರ ನರಸಿಂಹ ಕಟಿಂಗ್ ಶಾಪ್ ಅಂಗಡಿ ಇಟ್ಟುಕೊಂಡು ಜೀವನ ಮಾಡುತ್ತಿದ್ದನು ಮಂಡ್ಯ ತಾಲೂಕಿನ ಬಸರಾಳು ಸಮೀಪದ ಕಂಬದಹಳ್ಳಿ ಗ್ರಾಮದ ಕೀರ್ತನ ಳನ್ನು ಮದುವೆಯಾಗಿದ್ದು ದಂಪತಿಗೆ ಮುದ್ದಾದ ಎರಡು ಮಕ್ಕಳು ಇದ್ದವು.
ಪರಸ್ತ್ರೀ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಈತ ಕ್ರಿಕೆಟ್ ಬೆಟ್ಟಿಂಗ್ ನಿಂದ ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದನು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಪತ್ನಿಗೆ ಹಣ ತರುವಂತೆ ಪೀಡಿಸುತ್ತಿದ್ದು ನ್ಯಾಯ ಪಂಚಾಯಿತಿ ನಡೆಸಿ ಹಣವನ್ನು ನೀಡಲಾಗಿತ್ತು, ಆದರೂ ಸಹ ಈತ ಬದಲಾಗಿರಲಿಲ್ಲ, ಐಪಿಎಲ್ ಪಂದ್ಯಾವಳಿ ಆರಂಭ ಗೊಂಡ ನಂತರ ಬೆಟ್ಟಿಂಗ್ ನಲ್ಲಿ ಹೆಚ್ಚು ಹಣ ಕಳೆದುಕೊಂಡಿದ್ದನು.
ಸುಮಾರು ಎಂಟು ಲಕ್ಷ ಸಾಲದ ಹೊರೆ ಈತನ ಮೇಲಿತ್ತು, ಸಾಲಗಾರರ ಕಿರುಕುಳಕ್ಕೆ ಒಳಗಾಗಿದ್ದ ಈತ ಸಾಲ ತೀರಿಸುವ ಮಾರ್ಗ ಇಲ್ಲದೆ ಪತ್ನಿ ಜೊತೆ ಆಗಾಗ್ಗೆ ಜಗಳ ಮಾಡಿಕೊಳ್ಳುತ್ತಿದ್ದನು,
ಗುರುವಾರ 11 ರ ಮನೆಗೆ ಬಂದ ಈತ ಪತ್ನಿ ಕೀರ್ತನ ಮತ್ತು ಇಬ್ಬರು ಮಕ್ಕಳಿಗೆ ವಿಷ ವುಣಿಸಿದ ನಂತರ ಅವರು ಸಾವನ್ನಪ್ಪಿರುವುದನ್ನು ಖಚಿತ ಮಾಡಿಕೊಂಡು ತಾನು ಸಹ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು,ಮದ್ಯಾಹ್ನದ ವೇಳೆ ಮನೆಯವರು ಹೋಗಿ ನೋಡಿದಾಗ ಪ್ರಕರಣ ನೆಡೆದಿರುವುದು ಬೆಳಕಿಗೆ ಬಂದಿದೆ, ತಕ್ಷಣ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ತವರು ಮನೆಯಿಂದ ಹಣ ತರುವಂತೆ ಒತ್ತಡ ಹಾಕುತ್ತಿದ್ದ ನರಸಿಂಹ ಬಲವಂತವಾಗಿ ಹೆಂಡತಿ ಮಕ್ಕಳಿಗೆ ವಿಷ ವುಣಿಸಿದ್ದಾನೆ, ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಕುಟುಂಬವನ್ನು ಕೊಲೆಗೈದಿದ್ದಾನೆ ಎಂದು ಹೇಳಲಾಗುತ್ತಿದ್ದು ಪ್ರಕರಣದ ಸುತ್ತ ಹಲವು ಅನುಮಾನ ಸೃಷ್ಟಿಯಾಗಿದೆ.
ಕೀರ್ತನ ತಂದೆ ಶಿವನಂಜು ಮಾತನಾಡಿ ವರದಕ್ಷಿಣೆ ಕಿರಿಕುಳವನ್ನು ಪದೇ ಪದೇ ನೀಡುತ್ತಿದ್ದನು, 8 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡು ನ್ಯಾಯ ಪಂಚಾಯತಿ ಎಲ್ಲ ನಡೆದಿದ್ದವು. ಆದರೂ ಕೂಡ ನಾನು ಅವರ ಹಣವನ್ನು ನೀಡಿದ್ದೆ ಅಳಿಯ ನರಸಿಂಹನ ಆಕ್ರಮ ಸಂಬಂಧದ ಹಿನ್ನೆಲೆಯಲ್ಲಿ ನನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ತಿಳಿಸಿದರು
ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
Crime
ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು : ಶವಕ್ಕಾಗಿ ಮುಂದುವರೆದ ಶೋಧಾಕಾರ್ಯ

ಶ್ರೀರಂಗಪಟ್ಟಣ : ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮಹದೇವಪುರದ ಬಳಿ ಸಂಭವಿಸಿದ್ದು, ಶವಕ್ಕಾಗಿ ಶೋಧಾಕಾರ್ಯ ಮುಂದುವರೆದಿದೆ.
ಮಹೇಶ ಕೊಂ ವೀರಜಪ್ಪ(35) ಮೃತ ವ್ಯಕ್ತಿಯಾಗಿದ್ದು, ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಗಾಗೇನಹಳ್ಳಿ ಗ್ರಾಮದವರು ಎನ್ನಲಾಗಿದೆ.
ಆತ ಮೈಸೂರು ವಿಕ್ರಾಂತ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತಿದ್ದು, ಮಹದೇವಪುರ ಬಳಿಯ ತರಿಪುರ ಗ್ರಾಮದ ಸ್ನೇಹಿತನ ಮನೆಯ ಗೃಹಪ್ರವೇಶಕ್ಕೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮಹದೇವಪುರ ಗ್ರಾಮದಲ್ಲಿರುವ ರಾಜ ಪರಮೇಶ್ವರಿ ನಾಲೆ ಅಣೆಕಟ್ಟೆ ಬಳಿ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮೃತನ ಶವ ಪತ್ತೆಯಾಗದ ಕಾರಣ ಶೋಧಾಕಾರ್ಯ ಮುಂದುವರೆದಿದೆ.
ಅರಕೆರೆ ಠಾಣಾ ಪೋಲೀಸರು ಸ್ಥಳಕ್ಕಾಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Crime
ಚೌಕಬರೆ(ಕಟ್ಟೆಮನೆ) ಆಡುತ್ತಿದ್ದ ವೇಳೆ ಗಲಾಟೆ: ಬಿಡಿಸಲು ಹೋದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊ*ಲೆ

HSN… ಚೌಕಬರೆ(ಕಟ್ಟೆಮನೆ) ಆಡುತ್ತಿದ್ದ ವೇಳೆ ಗಲಾಟೆ
ಜಗಳ ಬಿಡಿಸಲು ಹೋದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆ
ಲಕ್ಕಪ್ಪ( 48) ,ಕೊಲೆಯಾದ ವ್ಯಕ್ತಿ
ಬಸವರಾಜ, ಚಾಕುವಿನಿಂದ ಇರಿದು ಕೊಲೆಗೈದ ಆರೋಪಿ
ಅರಸೀಕೆರೆ ತಾಲ್ಲೂಕಿನ ದೋಣನಕಟ್ಟೆ ಗ್ರಾಮದಲ್ಲಿ ಘಟನೆ
ಮೂವರ ಮೇಲೆ ಚಾಕುವಿನಿಂದ ಹಲ್ಲೆ
ವಸಂತ್, ಶಶಿ, ಲಕ್ಕಪ್ಪ ಎಂಬ ಮೂವರ ಮೇಲೆ ಚಾಕುವಿನಿಂದ ಹಲ್ಲೆ
ಎದೆ ಭಾಗಕ್ಕೆ ಲಕ್ಕಪ್ಪನಿಗೆ ಚಾಕುವಿನಿಂದ ಇರಿತ
ಲಕ್ಕಪ್ಪ ಸ್ಥಳದಲ್ಲೆ ಸಾವು
ಶಶಿ,ವಸಂತ ಎಂಬುವರಿಗೆ ಬೆನ್ನು, ಕೈಗೆ ಚಾಕುವಿನಿಂದ ಹಲ್ಲೆ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಶಶಿ, ವಸಂತ
ಶಶಿ,ವಸಂತ ಚೌಕಬರೆ ಆಡುತ್ತಿದ್ದಾಗ ಜಗಳ ತೆಗೆದ ಬಸವರಾಜ
ಶಶಿ, ವಸಂತ ಮೇಲೆ ಹಲ್ಲೆ ಮಾಡುತ್ತಿದ್ದ ಬಸವರಾಜ
ಜಗಳ ಬಿಡಿಸಲು ಎಂಟ್ರಿಯಾದ ಲಕ್ಕಪ್ಪಗೆ ಚಾಕುವಿನಿಂದ ಎದೆ ಭಾಗಕ್ಕೆ ಇರಿದ ಬಸವರಾಜ
ಬಸವರಾಜ ಜೊತೆಗಿದ್ದ ನಂಜುಂಡಿ ಹಲ್ಲೆಗೆ ಬೆಂಬಲ
ತಲೆಮರೆಸಿಕೊಂಡಿರೋ ಬಸವರಾಜ, ನಂಜುಂಡಿ ಬಂಧಿಸಲು ಶೋಧ ನೆಯ ನಡೆಸುತ್ತಿರೋ ಪೊಲೀಸರು
ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು
Crime
ಕಟ್ಟಡದ ಸಜ್ಜಾ ಕುಸಿತ ಪ್ರಕರಣ: ತೀವ್ರವಾಗಿ ಗಾಯಗೊಂಡಿದ್ದ ಜ್ಯೋತಿ (45) ಚಿಕಿತ್ಸೆ ಫಲಕಾರಿಯಾಗದೆ ಸಾ*ವು

ಬೇಲೂರು: ಹಳೇಯ ಕಟ್ಟಡದ ಸಜ್ಜಾ ಕುಸಿತ ಪ್ರಕರಣ
ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ (45) ಸಾವು
ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ
ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ ಜ್ಯೋತಿ
ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ
ಬೇಲೂರು ಪಟ್ಟಣದ ಹೊಸನಗರ ನಿವಾಸಿ ಜ್ಯೋತಿ
ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಜ್ಯೋತಿ
ಕೆಲವು ತಿಂಗಳ ಹಿಂದೆ ಸಾವನ್ನಪ್ಪಿದ್ದ ಜ್ಯೋತಿ ಪತಿ ಗೋಪಿ
ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಜ್ಯೋತಿ
ಅನಾಥವಾದ ಇಬ್ಬರು ಹೆಣ್ಣುಮಕ್ಕಳು
ಮಾ.9 ರಂದು ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಎದುರು ನಡೆದಿದ್ದ ದುರಂತ
ಕಳೆದ ಭಾನುವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ
-
Chamarajanagar22 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore20 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Hassan24 hours ago
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ
-
Kodagu20 hours ago
ಹುಲಿ ದಾಳಿಗೆ ಕರು ಬಲಿ
-
Kodagu22 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Chikmagalur24 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.
-
Mysore21 hours ago
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ
-
Hassan6 hours ago
ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾ*ವು