Mandya
ಮನೆಗಳ್ಳತನಕ್ಕೆ ವಿಫಲ ಯತ್ನ
ಶ್ರೀರಂಗಪಟ್ಟಣ: ಮನೆಗಳ್ಳತನಕ್ಕೆ ಯತ್ನಿಸಿ ವಿಫಲಗೊಂಡಿರುವ ಘಟನೆ ಶ್ರೀರಂಗಪಟ್ಟಣ ಹೊರವಲಯದ ಸುಮುಖ ಲೇ ಔಟ್ ನ ಶ್ರೀ ನಿಮಿಷಾಂಬ ನಿಲಯದಲ್ಲಿ ಶನಿವಾರ ಮದ್ಯ ರಾತ್ರಿ ನಡೆದಿದೆ.

ಕೆಳ ಅಂತಸ್ತಿನಲ್ಲಿ ಮನೆ ಬಾಡಿಗೆದಾರರು ಇಲ್ಲದಿರುವುದನ್ನು ಅರಿತ ಖದೀಮರು, ಶನಿವಾರ ಮದ್ಯರಾತ್ರಿ ಬಾಗಿಲು ಮುರಿಯುವ ವಿಫಲ ಯತ್ನ ನಡೆಸಿದ್ದಾರೆ. ಅಲ್ಲದೆ ಮೇಲಂತಸ್ಥಿನ ಮನೆಯವರು ಹೊರಗಡೆ ಬಾರದಂತೆ ಹೊರಗಡೆಯಿಂದ ಬಾಗಿಲಿನ ಚಿಲಕವನ್ನು ಹಾಕಿದ್ದು ಬಾಗಿಲು ಹೊಡೆಯುವ ಶಬ್ದಕ್ಕೆ ಅಕ್ಕ- ಪಕ್ಜದವರು ಓಡಿ ಬರಲಾಗಿ ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ಸಂಬಂಧ ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ಖದೀಮರನ್ನು ಸೆರೆ ಹುಡಿಯುವುದರ ಜೊತೆಗೆ ರಕ್ಷಣೆ ನೀಡುವಂತೆ ನಿವಾಸಿಗಳು ಮನವಿ ಮಾಡಿದ್ದಾರೆ.



Mandya
ಫೆ.06 ರಂದು ಬೀರೇಶ್ವರ ದೇವಸ್ಥಾನಕ್ಕೆ ಸಿಎಂ ಭೇಟಿ : ಜಿಲ್ಲಾಧಿಕಾರಿಯಿಂದ ಪರಿಶೀಲನೆ
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 6ರಂದು ಮಂಡ್ಯ ತಾಲ್ಲೂಕಿನ ಬೇವುಕಲ್ಲು ಗ್ರಾಮದಲ್ಲಿರುವ ಶ್ರೀ ಬೀರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದರು.
ಮುಖ್ಯಮಂತ್ರಿಗಳ ಭೇಟಿ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಿಕೆ, ಸುಗಮ ಸಂಚಾರ ವ್ಯವಸ್ಥೆ, ಸಾರ್ವಜನಿಕರ ಸುರಕ್ಷತೆ, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಸಮರ್ಪಕ ನಿರ್ವಹಣೆ ಕುರಿತು ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ದೇವಸ್ಥಾನ ಆವರಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು, ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಹಾಗೂ ತುರ್ತು ಪರಿಸ್ಥಿತಿಗಳಿಗೆ ಅಗತ್ಯವಿರುವ ವೈದ್ಯಕೀಯ ಮತ್ತು ಅಗ್ನಿಶಾಮಕ ಸೌಲಭ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮುಖ್ಯಮಂತ್ರಿಗಳ ಕಾರ್ಯಕ್ರಮವು ಸುಗಮವಾಗಿ ಹಾಗೂ ಯಶಸ್ವಿಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಹಾಗೂ ನಿಗದಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.
ಪರಿಶೀಲನೆ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಮಂಡ್ಯ ತಹಶೀಲ್ದಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಇತರೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
Mandya
ಬೃಹತ್ ಕಾಲ್ನಡಿಗೆ ಜಾಥಾಗೆ ಜಿಲ್ಲಾಧಿಕಾರಿ ಚಾಲನೆ
ಮಂಡ್ಯ : 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ–2026ರ ಅಂಗವಾಗಿ ಹಮ್ಮಿಕೊಳ್ಳಲಾದ ಬೃಹತ್ ಕಾಲ್ನಡಿಗೆ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಸ್ತೆ ಸುರಕ್ಷತೆಯ ಮಹತ್ವವನ್ನು ವಿವರಿಸಿ ಮಾತನಾಡಿದ ಅವರು, ಅತಿವೇಗ, ಮದ್ಯಪಾನ ಮಾಡಿ ವಾಹನ ಚಾಲನೆ, ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸದೇ ಚಾಲನೆ ಮಾಡುವುದು ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ ಎಂದು ತಿಳಿಸಿದರು.

ಸಂಚಾರ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ರಸ್ತೆ ಅಪಘಾತಗಳಿಂದ ಉಂಟಾಗುವ ಜೀವಹಾನಿ ಹಾಗೂ ಆಸ್ತಿ ನಷ್ಟವನ್ನು ತಡೆಯಲು ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಸಂಚಾರ ನಿಯಮಗಳನ್ನು ಪಾಲಿಸುವುದು, ರಸ್ತೆ ಸುರಕ್ಷತೆಯನ್ನು ಕಾಪಾಡುವುದು ಹಾಗೂ ಅಪಘಾತ ರಹಿತ ಸಮಾಜ ನಿರ್ಮಾಣಕ್ಕೆ ಸಹಕರಿಸುವುದು ಎಂಬ ಪ್ರತಿಜ್ಞೆಯನ್ನು ಸ್ವೀಕರಿಸಿದರು.
Mandya
ಸರ್ಕಾರಿ ಶಾಲೆಗಳು ಉಳಿಸಲು ಎಲ್ಲರೂ ಮುಂದಾಗಬೇಕು: ಪ್ರಸನ್ನ
ಮದ್ದೂರು: ಸರ್ಕಾರಿ ಶಾಲೆಗಳು ಉಳಿಸಲು ನಿಟ್ಟಿನಲ್ಲಿ ಸರ್ಕಾರದ ಜತೆಗೆ ಶಾಲೆಯ ಹಿರಿಯ ವಿದ್ಯಾರ್ಥಿಗಳು, ದಾನಿಗಳು ಹಾಗೂ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಮುಂದಾಬೇಕೆಂದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಸನ್ನ ಮನವಿ ಮಾಡಿದರು.
ತಾಲೂಕಿನ ಆತಗೂರು ಹೋಬಳಿ ಹೊಸಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸ್ವಂತ ಹಣದಲ್ಲಿ ಟ್ರಾಕ್ ಸೂಟ್ ವಿತರಿಸಿದ ಮಾತನಾಡಿದರು.

ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಲವಾರು ವಿದ್ಯಾರ್ಥಿಗಳು ರಾಷ್ಟ್ರ ಮತ್ತು ಅಂತರಾಷ್ಟ್ರಿಯ ಮಟ್ಟದಲ್ಲಿ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಯಲ್ಲಿ ಓದುವುದರಿಂದ ಪಾಲಕರಿಗೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ ಎಂದರು.
ಸರ್ಕಾರಿ ಶಾಲೆಗಳು ಗ್ರಾಮೀಣ ಪ್ರದೇಶದಲ್ಲಿ ಉಳಿಯಬೇಕು ಎಂಬ ಉದ್ದೇಶದಿಂದ ನಮ್ಮ ಊರಿನ ಶಾಲಾ ಮಕ್ಕಳು ಖಾಸಗಿ ಶಾಲಾ ಮಕ್ಕಳಿಗೆ ಕಡಿಮೆ ಇಲ್ಲಾದಂತೆ ಇರಬೇಕು ಎಂಬ ಉದ್ದೇಸದಿಂದ ಮಕ್ಕಳಿಗೆ ಟ್ರಾಕ್ ಸೀಟ್ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಮುಖ್ಯ ಶಿಕ್ಷಕ ರಮೇಶ್ ಮಾತನಾಡಿ, ನಾವು ಮುಂದಿನ ದಿನಗಳಲ್ಲಿ ಶಾಲೆಗೆ ದಾಖಲಾತಿ ಪ್ರಮಾಣ ಹೆಚ್ಚಾಗಬೇಕು ಎಂದರೆ ನಾವು ಸಹ ಮಕ್ಕಳಿಗೆ ಸರ್ಕಾರ ನೀಡುವ ಸಮವಸ್ತ್ರ ಜತೆಗೆ ಟ್ರಾಕ್ ಸೂಟ್ ನೀಡಿದರೆ ಚೆನ್ನಾಗಿರುತ್ತಾದೆ ಎಂಬ ಉದ್ದೇಶದಿಂದ ಎಸ್ಡಿಎಂಸಿಯವರಿಗೆ ತಿಳಿಸಿದಾಗ ಅಧ್ಯಕ್ಷರು ಸಮವಸ್ತ್ರ ನೀಡಿದ್ದಾರೆ. ಮಕ್ಕಳು ಇದರ ಸದುಪಯೋಗ ಪಡೆದುಕೊಂಡು ಓದಿನ ಕಡೆ ಗಮನ ಹರಿಸಬೇಕು ಎಂದು ಹೇಳಿದರು.
ಶಿಕ್ಷಕ ರಾಮದಾಸ್, ಅಡುಗೆ ಸಿಬಂದಿ ಸೌಮ್ಯ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
-
National23 hours agoದೇಶದ ನಿಯಮಗಳನ್ನು ಪಾಲಿಸಲು ಸಾಧ್ಯವಾಗದಿದ್ದರೆ ದೇಶ ಬಿಟ್ಟು ತೊಲಗಿ: ವಾಟ್ಸಪ್ಗೆ ಸುಪ್ರೀಂ ಎಚ್ಚರಿಕೆ
-
Hassan17 hours agoಎಸ್ಡಿಪಿಐ ಮುಖಂಡನ ಮೇಲೆ ಹಲ್ಲೆ ಆರೋಪ: ಮುನೀರ್ ಹಲ್ಲೆಗೊಳಗಾದ ಎಸ್ಡಿಪಿಐ ಮುಖಂಡ
-
Special16 hours agoಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಶ್ರೀಮಂತ ದೇಶ ಭಾರತ: ನ್ಯಾ.ಗೋಪಾಲಗೌಡ
-
State17 hours agoಕಮಿಷನ್ಗಾಗಿ ಡೀಲ್ ಆರೋಪದ ಆಡಿಯೋ ವೈರಲ್: ಗುತ್ತಿಗೆದಾರ ಸಂಘದ ಗೌರವಾಧ್ಯಕ್ಷ ಬಿ.ಜಗನ್ನಾಥ್ ಅಮಾನತು
-
Hassan16 hours agoಹಾಸನ ಮಹಾನಗರ ಪಾಲಿಕೆ ವಾರ್ಡ್ ಪುನರ್ ವಿಂಗಡಣೆ: ಕರಡು ಪ್ರಕಟ
-
Kodagu24 hours agoಫೆ.5 ರಿಂದ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
-
Kodagu19 hours agoಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ
-
Hassan18 hours agoಪರೀಕ್ಷೆ ಎಂಬ ಭಯವನ್ನು ಮನಸ್ಸಿನಿಂದ ಹೋಗಲಾಡಿಸಬೇಕು: ಕೆ. ಟಿ. ಮೇಘನಾ
