Hassan
ಏ.13 ರಂದು ಬ್ರಾಹ್ಮಣ ಮಹಾಸಭಾದ ಚುನಾವಣೆ: ಹೆಚ್.ಎಸ್. ಮಂಜುನಾಥ್ ಮೂರ್ತಿ

ಹಾಸನ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ೨೦೨೫-೨೦೩೦ರ ಅವಧಿಗೆ ಅಧ್ಯಕ್ಷೀಯ ಹಾಗೂ ಜಿಲ್ಲಾ ಪ್ರತಿನಿಧಿ ಚುನಾವಣೆ ಏ.13 ರಂದು ನಿಗದಿಯಾಗಿದೆ ಎಂದು ಹಾಸನ ಜಿಲ್ಲಾ ಬ್ರಾಹ್ಮಣ ಸಭಾದ ಅಧ್ಯಕ್ಷ ಹೆಚ್.ಎಸ್. ಮಂಜುನಾಥ್ ಮೂರ್ತಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಅಧ್ಯಕ್ಷೀಯ ಚುನಾವಣೆಗೆ ಈಗಾಗಲೇ ಎರಡು ಬಣಗಳ ಚುನಾವಣಾ ಆಕಾಂಕ್ಷಿಗಳು ಬಂದು ಪ್ರಚಾರ ನಡೆಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ಬ್ರಾಹ್ಮಣ ಸಭಾ, ಜಿಲ್ಲಾ ಪ್ರತಿನಿಧಿ ಆಯ್ಕೆ ಸಂಬಂಧ, ಎಲ್ಲಾ ತಾಲ್ಲೂಕಿನ ಪದಾಧಿಕಾರಿಗಳ ಹಾಗೂ ಉಪಪಂಗಡದ ಮುಖಂಡರೊಂದಿಗೆ ಸಭೆ ನಡೆಸಿ ಪಿ.ಎಸ್. ವೆಂಕಟೇಶ್ ಇವರನ್ನು ಜಿಲ್ಲಾ ಪ್ರತಿನಿಧಿ ಅಭ್ಯರ್ಥಿಯಾಗಿದ್ದಾರೆ ಎಂದರು.
ಜಿಲ್ಲಾ ಬ್ರಾಹ್ಮಣ ಸಭಾ ಹಾಗೂ ಉಪಪಂಗಡಗಳು ಮತ್ತು ತಾಲೂಕು ಸಂಘಗಳ ಮುಖಂಡರು ಯಾವುದೇ ಬಣದ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುವುದಿಲ್ಲವೆಂದು ನಿರ್ಣಯಿಸಿ, ಜಿಲ್ಲಾ ಬ್ರಾಹ್ಮಣ ಸಭಾ ಅಧ್ಯಕ್ಷರಾದ ಹೆಚ್. ಎಸ್. ಮಂಜುನಾಥ ಮೂರ್ತಿ ನೇತೃತ್ವದಲ್ಲಿ ತೀರ್ಮಾನಿಸಲಾಗಿದೆ. ಮುಂದೆ ರಾಜ್ಯ ಸಮಿತಿಗೆ ಮಾತ್ರ ಚುನಾವಣೆ ನಡೆಯಬೇಕಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಭಾದ ಅಧ್ಯಕ್ಷ ವೆಂಕಟೇಶ್ ಮೂರ್ತಿ, ಬಬ್ಬರೂ ಕಮ್ಮೆ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ನಾಗರಾಜು, ನಗರ ಬ್ರಾಹ್ಮಣ ಸಭಾ ಅಧ್ಯಕ್ಷ ವೆಂಕಟೇಶ್, ಮಾದವ ಸಂಘದ ಅಧ್ಯಕ್ಷ ಕೆ.ಪಿ.ಎಸ್. ಪ್ರಮೋದ್, ಸೀತಾರಾಮಾಂಜನೇಯ ದೇವಸ್ಥಾನದ ಅಧ್ಯಕ್ಷ ಶ್ರೀಕಾಂತ್ ಇತರರು ಉಪಸ್ಥಿತರಿದ್ದರು.
Hassan
ಯಾವ ಸಮಾಜವನ್ನು ಒಡೆದಾಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿಲ್ಲ: ಸಂಸದ ಶ್ರೇಯಸ್ ಪಟೇಲ್

ಹಾಸನ : ನಮ್ಮದು ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಡುವ ಪಕ್ಷ ಹಾಗಾಗಿ ಇದರ ಬಗ್ಗೆ ಜವಾಬ್ದಾರಿಯುತ ತೀರ್ಮಾನವನ್ನು ಸರ್ಕಾರದ ಮುಖ್ಯಮಂತ್ರಿಗಳು ತೆಗೆದುಕೊಳ್ಳುತ್ತಾರೆ ಎಂದು ಭಾವಿಸಿದ್ದೇವೆ. ಎಲ್ಲಾ ಸಮಾಜವನ್ನು ಸಮವಾಗಿ ನೋಡಿ ಜಾತಿಗಣತಿಯಲ್ಲಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಜಾತಿಗಣತಿ ವರದಿ ಗೊಂದಲ ವಿಚಾರ ಹಾಸನದಲ್ಲಿ ಸಂಸದ ಶ್ರೇಯಸ್ಪಟೇಲ್ ಹೇಳಿಕೆ ನೀಡಿದರು.
ಮೊನ್ನೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಪರಾಮರ್ಶಿಸಿ ತೀರ್ಮಾನ ತೆಗೆದುಕೊಳ್ಳುಬೇಕೆಂದು ಒತ್ತಾಯಿಸಿದ್ದಾರೆ. ಸಚಿವರ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ತೆಗೆದುಕೊಂಡಿದ್ದಾರೆ. ಯಾವುದೇ ಸಮಾಜಕ್ಕೆ ಅನ್ಯಾಯವಾಗುವ ಕೆಲಸವನ್ನು ನಮ್ಮ ಪಕ್ಷ ಮಾಡಲ್ಲ. ಯಾವ ಸಮಾಜವನ್ನು ಒಡೆದಾಡಿಸುವ ಕೆಲಸವನ್ನು ನಮ್ಮ ಸಮಾಜ ಮಾಡಿಲ್ಲ, ಮಾಡುವುದಿಲ್ಲ. ಜನಸ್ನೇಹಿಯಾಗಿ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ. 2015 ರಲ್ಲಿ ಜಾತಿಗಣತಿ ನಡೆದಿತ್ತು, ಎಲ್ಲರ ಬೇಡಿಕೆ ಇತ್ತು ಜಾತಿಗಣತಿಗಾಗಿ ಕೋಟ್ಯಾಂತರ ರೂ ವೆಚ್ಚ ಮಾಡಿದ್ದಾರೆ. ಈಗೀನ ವರದಿಯ ನೈಜತೆಯನ್ನು, ಸತ್ಯಾಸತ್ಯತೆಯನ್ನು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರದಿಯನ್ನು ಇನ್ನೂ ಮಂಡಿಸಿಲ್ಲ, ವರದಿ ಹೊರಗೆ ಬಂದ ಮೇಲೆ ಗೊತ್ತಾಗುತ್ತೆ. ಇನ್ನೂ ಯಾರಿಗೂ ವರದಿಯಲ್ಲಿದೆ ಎಂದು ಗೊತ್ತಿಲ್ಲ.
ಬಿಜೆಪಿ ಸರ್ಕಾರ ಕೆಡವಲು ಯತ್ನಿಸುತ್ತಿದೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರ ಯಾವಾಗಲೂ ಆ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವುದೇ ವಿರೋಧ ಪಕ್ಷಗಳ ಗುರಿ ಎಲ್ಲರಿಗೂ ಅಧಿಕಾರದ ಆಸೆ ಇರುತ್ತೆ ನಮಗೂ ಆಸೆ ಇದೆ, ಆದರೆ ಸಿದ್ಧಾಂತ ಇದೆ, ಜನಸೇವೆ ಮಾಡಲು ನಾವು ಬಂದಿದ್ದೇವೆ. ಅಧಿಕಾರದ ದುರಾಸೆಗೋಸ್ಕರ ಈ ಕೆಲಸ ಮಾಡಬಹುದು.ನಾವು ಎಚ್ಚರಿಕೆಯಿಂದ ಇರಬೇಕು. ನಮ್ಮಲ್ಲಿ ಒಗ್ಗಟ್ಟಿದೆ, ಒಗ್ಗಟ್ಟು ಎಂದರೆ ಕಾಂಗ್ರೆಸ್ ಪಕ್ಷ ಎಂದು ಹೇಳಿದರು.
ಸಿಇಟಿ ಪರೀಕ್ಷೆಗೆ ಹೋಗುವ ವೇಳೆ ಜನಿವಾರ ತೆಗೆಸಿದ ವಿಚಾರವಾಗಿ ಮಾತನಾಡಿ, ಅದನ್ನು ನಾನು ಖಂಡಿತವಾಗಿ ವಿರೋಧಿಸುತ್ತೇನೆ, ಆ ತರ ಮಾಡಬಾರದು. ನಾನು ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಒಬ್ಬ ಸಾರ್ವಜನಿಕನಾಗಿ ಹೇಳುತ್ತಿದ್ದೇನೆ. ಅವರವರ ಆಚರಣೆಗಳು, ಅವರವರ ವೈಯುಕ್ತಿಕ. ಜನಿವಾರ ತೆಗೆದು ಹೋಗಿ ಎನ್ನುವುದು ಅಪರಾಧ. ನಾನಂತು ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು.
Hassan
ಆಟೋ ಹತ್ತಿಸುವ ನೆಪದಲ್ಲಿ ಮಾಂಗಲ್ಯ ಸರ ಕಿತ್ತು ಪರಾರಿ

ಹಾಸನ: ಆಟೋ ಹತ್ತಿಸುವ ನೆಪದಲ್ಲಿ ವೃದ್ಧೆಯ ಗಮನ ಬೇರೆಡೆ ಸೆಳೆದು ಚಿನ್ನದ ಮಾಂಗಲ್ಯ ಸರ ಸುಲಿಗೆ ಮಾಡಿಕೊಂಡು ಅಪರಿಚಿತ ಪರಾರಿಯಾಗಿರುವ ಘಟನೆ
ಸಾಲಗಾಮೆ ಹೋಬಳಿ ಸುಂಕದಕೊಪ್ಪಲು ಗ್ರಾಮದ ಲಕ್ಷ್ಮಮ್ಮ ಎಂಬುವರು ಸಾಲಗಾಮೆ ಗೇಟ್ನಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದು, ಏ.೧೮ ರಂದು ಊರಿನಿಂದ ಬಸ್ಸಿನಲ್ಲಿ ಹಾಸನಕ್ಕೆ ಹೋಗಿದ್ದರು.
ಅಲ್ಲಿಂದ ಹೂವಿನಹಳ್ಳಿ ಕಾವಲು ಹೊಸೂರಿಗೆ ಬಸ್ಸಿನಲ್ಲಿ ಬಂದು ಇಳಿದು ಸರ್ಕಾರಿ ಆಸ್ಪತ್ರೆಗೆ ಹೋದರು. ಆದರೆ ಗುಡ್ಫ್ರೈಡೆ ನಿಮಿತ್ತ ರಜೆ ಇದ್ದುದರಿಂದ ವಾಪಸ್ ಊರಿಗೆ ಹೋಗಲೆಂದು ಮಧ್ಯಾಹ್ನ ೧ ಗಂಟೆ ಸಮಯದಲ್ಲಿ ಆಸ್ಪತ್ರೆ ಮುಂದೆ ರಸ್ತೆಯ ಬದಿಯಲ್ಲಿ ನಿಂತಿದ್ದರು.
ಅಲ್ಲಿಗೆ ಬಂದ ಸುಮಾರು ೩೦-೩೫ ವರ್ಷ ವಯಸ್ಸಿನ ವ್ಯಕ್ತಿ, ಅಜ್ಜಿ ನಿಂತಿದ್ದಲ್ಲಿಗೆ ಬಂದು ಯಾವೂರವ್ವ ಎಂದು ಕೇಳಿ, ನನ್ನ ಬೈಕಿಗೆ ಬನ್ನಿ ಕರೆದುಕೊಂಡು ಹೋಗುತ್ತೇನೆಂದು ಹೇಳಿದ್ದಾನೆ.
ಮಗಳ ಊರಾದ ಅರೇಕಲ್ ಹೊಸಳ್ಳಿ ಗ್ರಾಮದ ಮನೆಗೆ ಹೋಗುತ್ತೇನೆಂದು ಹೇಳಿದಾಗ ಆಟೋದಲ್ಲಿ ಹೋಗಿ ಎಂದು ಅಜ್ಜಿಯ ಕೈ ಹಿಡಿದು ರಸ್ತೆ ದಾಟಿಸಿದ ಆಸಾಮಿ, ರಸ್ತೆಯಲ್ಲಿ ಹೋಗುತ್ತಿದ್ದ ಆಟೋವನ್ನು ಅಡ್ಡಹಾಕಿ ನಿಲ್ಲಿಸಿ, ಅಜ್ಜಿ ಆಟೋದ ಒಳಕ್ಕೆ ಕಾಲಿಟ್ಟು ಹತ್ತುವಾಗ ಅವರ ಕೊರಳಿನಲ್ಲಿದ್ದ ಸುಮಾರು ೪೦ ಗ್ರಾಂ. ತೂಕದ ಚಿನ್ನದ ಮಾಂಗಲ್ಯ ಸರವನ್ನು ಅಪರಿಚಿತ ಕಿತ್ತುಕೊಂಡು ಪರಾರಿಯಾಗಿದ್ದಾನೆ.
ಮಾಂಗಲ್ಯ ಸರದ ಅಂದಾಜು ಬೆಲೆ ೩ ಲಕ್ಷ ಎನ್ನಲಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hassan
ಎಸ್ಡಿಎಂ ಜನಮಂಗಳ ಯೋಜನೆಯಡಿ ಉಚಿತ ಕಮೋಡಾ ವೀಲ್ ಚೇರ್ ವಿತರಣೆ

ವರದಿ: ಸತೀಶ್ ಚಿಕ್ಕಕಣಗಾಲು
ಆಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನಮಂಗಳ ಕಾರ್ಯಕ್ರಮದ ಅಡಿಯಲ್ಲಿ ಫಲಾನುಭವಿಗೆ ಉಚಿತವಾಗಿ ಕಮೋಡಾ ವೀಲ್ ಚೇರ್ ವಿತರಣೆ ಮಾಡಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಲೂರು ತಾಲೂಕಿನ ಯೋಜನಾಧಿಕಾರಿ ರತ್ನಾಕರ್ ಕೊಠಾರಿ ಮಾತನಾಡಿ, ತಾಲೂಕಿನಲ್ಲಿ ಇದುವರೆಗೂ ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಅಂಗವಿಕಲರಿಗೆ ಅವಶ್ಯಕತೆ ಸಲಕರಣೆಗಳಾದ ವೀಲ್ ಚೇರ್, ಸೇಫ್ ವಾಕರ್, ವಾಟರ್ ಬೆಡ್, ವಾಕಿಂಗ್ ಸ್ಟಿಕ್ ಸೇರಿದಂತೆ ಒಟ್ಟು ಉಪಕರಣಗಳನ್ನು ನೀಡಲಾಗಿದೆ. ಅಲ್ಲದೆ 105 ಮಂದಿ ಸದಸ್ಯರಿಗೆ ಪ್ರತಿ ತಿಂಗಳು ತಲಾ ಒಂದೊಂದು ಸಾವಿರ ಮಾಸಾಸನವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪಾಳ್ಯ ಹೋಬಳಿಯ ಮೇಲ್ವಿಚಾರಕಿ ಯಶೋಧ ಮಾತನಾಡಿ, ತಾಲೂಕಿನ ಪಾಳ್ಯ ಹೋಬಳಿ ನಲ್ಲೂರು ಗ್ರಾಮದ ನಿವಾಸಿಯಾದ ಬೈರಯ್ಯರ ಎಂಬುವವರು ಅನಾರೋಗ್ಯಕ್ಕೆ ತುತ್ತಾಗಿ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ಉಚಿತವಾಗಿ ನೀಡಲಾಯಿತು ಎಂದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಸದಸ್ಯ ಮಲ್ಲಿಕಾರ್ಜುನ್, ಕಾರ್ಯಕ್ಷೇತ್ರ ಸೇವಾ ಪ್ರತಿನಿಧಿ ಗೀತಾ ಸೇರಿದಂತೆ ಫಲಾನುಭವಿಯ ಮನೆಯ ಸದಸ್ಯರು ಉಪಸ್ಥಿತರಿದ್ದರು.
-
Chamarajanagar22 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore19 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Hassan23 hours ago
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ
-
Kodagu24 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Kodagu19 hours ago
ಹುಲಿ ದಾಳಿಗೆ ಕರು ಬಲಿ
-
Kodagu22 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Chikmagalur23 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.
-
Chikmagalur24 hours ago
ಜನಿವಾರ ತೆಗೆಸಿರುವುದು ಖಂಡನೀಯ