Connect with us

Chamarajanagar

ಯರಿಯೂರು ಗ್ರಾಮದಲ್ಲಿ ವಿಜೃಂಭಣೆಯಿಂದ ಮಂಟೇಸ್ವಾಮಿ ಕೊಂಡೋತ್ಸವ.

Published

on

ಯಳಂದೂರು: ತಾಲ್ಲೂಕಿನ ಯರಿಯೂರು ಗ್ರಾಮದ ಅಂಬೇಡ್ಕರ್ ಭವನದ ಆವರಣದಲ್ಲಿ ಧರೆಗೆ ದೊಡ್ದವರಾದ ಮಂಟೇಸ್ವಾಮಿ , ಸಿದ್ದಪ್ಪಾಜಿ, ದೊಡ್ಡಮ್ಮತಾಯಿ, ಗ್ರಾಮ ದೇವತೆಯ ಕೊಂಡೋತ್ಸವವು ಭಾರಿ ಜನಸ್ತೋಮದೊಂದಿಗೆ ವಿಜೃಂಭಣೆಯಿಂದ ಹಾಗೂ ಸಾಂಪ್ರದಾಯಿಕವಾಗಿ ನಡೆಯಿತು.
ಭಾನುವಾರ ಮುಸಂಜೆಯಲ್ಲಿ ಕುರುಬನಕಟ್ಟೆ ಕಂಡಾಯಗಳಿಗೆ ಗ್ರಾಮಸ್ಥರು ಪೂಜೆ ಮಾಡಿ ಬರಮಾಡಿಕೊಂಡರು.‌ ರಾತ್ರಿ 10 ರ ಸಮಯದಲ್ಲಿ ಮರಗಳಿಂದ ಜೋಡಿಸಿದ ಕೊಂಡದ ಸೌದೆಗೆ ಕಂಡಾಯ ಹೊತ್ತವರು ಕಿಚ್ಚಿನ್ನು ಇಟ್ಟರು. ಮಂಗಳವಾದ್ಯಗಳೊಂದಿಗೆ ಕಂಡಾಯ ಮೂರ್ತಿಗಳು ಹಾಗೂ ಸತ್ತಿಗೆ ಗಳು ಕೊಂಡದ ಬೆಂಕಿಯ ಸುತ್ತಲೂ ಮೂರು ಬಾರಿ ಪ್ರದಕ್ಷಿಣೆ ಹಾಕಿದರು. ಯುವಕರು ಗ್ರಾಮೀಣರ ಕುಣಿತದಲ್ಲಿ ತಲ್ಲಿಣರಾದರು. ಎತ್ತ ನೋಡಿದರೂ ಗ್ರಾಮವು ದೀಪಾಲಂಕದಿಂದ ಕೂಡಿತ್ತು. ರಸ್ತೆಯ ಸಂಚಾರಿಗಳನ್ನು ತನ್ನತ್ತ ಸೆಳೆಯಿತು. ಹಾಗೂ ಗ್ರಾಮವು ಮಾವಿನ ತೋರಣಗಳಿಂದ ಮದುವನಗಿತ್ತಿಯಂತೆ ಕಂಗೊಳಿಸಿತು.


ಮುಂಜಾನೆ ಯಳಂದೂರು ಪಟ್ಟಣದ ಆಸ್ಪತ್ರೆಯ ಹಿಂಭಾಗ ಇರುವ ತೋಟಕ್ಕೆ ತೆರಳಿ ಅಲ್ಲಿನ ಬಾವಿಯಿಂದ ನೀರನ್ನು ತೆಗೆದು ಕಂಡಾಯಗಳನ್ನು ಹಾಗೂ ಛತ್ರಿ, ಚಾಮರ ಹಾಗೂ ಸತ್ತಿಗೆ ಗಳನ್ನು ತೊಳೆದು ಹೂ, ಹೊಂಬಾಳೆಗಳಿಂದ ಅಲಂಕರಿಸಿದರು. ಹೂ ಹೊಂಬಾಳೆಗಳಿಂದ ಅಲಂಕೃತಗೊಂಡ ಕಂಡಾಯ ಮೂರ್ತಿಗಳು, ಸತ್ತಿಗೆ , ಛತ್ರಿ ಚಾಮರಗಳು ಹಾಗೂ ನೀಲಗಾರರ ಜಾಗಟೆ ಸದ್ದು ಹಾಗೂ ಮಂಗಳವಾದ್ಯಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ ಮೂಲಕ ಉತ್ಸವದೊಂದಿಗೆ ತೆರಳಿದರು.ರಸ್ತೆಯಲ್ಲಿ ಹೆಂಗಳಿಯರು ರಂಗೋಲಿಗಳನ್ನು ಇಟ್ಟಿದರೂ ಹಾಗೂ ಭಕ್ತರು ರಸ್ತೆಯ ಉದ್ದಕ್ಕೂ ಕಾಯಿಗಳನ್ನು ಹೊಡೆದು ಹರಕೆ ತೀರಿಸಿದರು. ಕಂಡಾಯ ಮೂರ್ತಿಗಳು ಹಾಗೂ ಸತ್ತಿಗಳು ಕೊಂಡದ ಬಳಿ ಬರುವಾಗ ಭಕ್ತಾಧಿಗಳು ಜೈಕಾರ ಕೂಗಿದರು. ಕೊಂಡವನ್ನು ಹಾಯುವುದನ್ನು ನೋಡಲು ಭಕ್ತರು ಸಮೀಪದ ಮನೆಗಳ ಮೇಲೆ ಏರಿದರು. ಭಾರಿ ಪೋಲೀಸ್ ಭದ್ರತೆಯನ್ನು ನಿಯೋಜಿಸಲಾಗಿತ್ತು. ಸೋಮವಾರ ‌ಬೆಳಿಗ್ಗೆ 8.45 ರ ಸಮಯದಲ್ಲಿ ಭಾರಿ ವಿಜೃಂಭಣೆಯೊಂದಿಗೆ ಮಂಟೇಸ್ವಾಮಿ, ಸಿದ್ದಪ್ಪಾಜಿ, ದೊಡ್ಡತಾಯಮ್ಮ, ಹಾಗೂ ಗ್ರಾಮದೇವತೆಯ ಕೊಂಡೋತ್ಸವವು ನಡೆಯಿತು.


ಭಕ್ತರು ಕೊಂಡವನ್ನು ಹಾಯುವುದನ್ನ ನೋಡಿ ಪುಳಕಿತರಾದರು.ನಂತರ ಕೊಂಡದ ಮಾಳಕ್ಕೆ ತೆರಳಿ ಧೂಪಗಳನ್ನು ಹಾಕುವುದರ ಮೂಲಕ ದೇವರನ್ನು ನೆನೆದರು.. ಈ ಸಂದರ್ಭದಲ್ಲಿ ಗ್ರಾಮದ ಯಜಮಾನರು ಮತ್ತು ಮುಖಂಡರು, ಹಾಗೂ ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು, ರಾಜಕೀಯ ಗಣ್ಯರು ಹಾಗೂ ವಿವಿಧ ಕೋಮಿನ ಯಜಮಾನರು ಮುಖಂಡರು ಹಾಗೂ ಪೋಲೀಸ್ ಸಿಬ್ಬಂದಿಗಳು , ಭಕ್ತಾದಿಗಳು ಹಾಜರಿದ್ದರು.

ವರದಿ: – ಸೈಯದ್ ಮುಷರಫ್

Continue Reading
Click to comment

Leave a Reply

Your email address will not be published. Required fields are marked *

Chamarajanagar

ಸುರೇಶ್ ಎನ್. ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ

Published

on

ಚಾಮರಾಜನಗರ: ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷರು ಹಾಗೂ ಸಂಸ್ಕೃತಿ ಚಿಂತಕರಾದ ಸುರೇಶ್ ಎನ್ ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಮಾನ ಮನಸ್ಕರ ಮಾಧ್ಯಮ ಮಿತ್ರರ ವೇದಿಕೆಯ ಸಂಸ್ಥಾಪಕ ಕಾರ್ಯದರ್ಶಿ ಹನುಮೇಶ್ ಕೆ ಯಾವಗಲ್‌ ತಿಳಿಸಿದ್ದಾರೆ.

ಹಾಸನ ತಾಲೂಕಿನ ಬೇಲೂರಿನಲ್ಲಿ ಸಂಸ್ಕಾರ ಸಂಸ್ಕೃತಿ ಸಂಘಟನೆಗಾಗಿ ವಿಕಾಸ ಸಾರಥ್ಯದಲ್ಲಿ ಬೇಲೂರು ಹಬ್ಬ ಕಾರ್ಯಕ್ರಮವು ಜು.20 ರಂದು ಭಾನುವಾರ ಬೇಲೂರಿನ ಶ್ರೀ ಶೃಂಗೇರಿ ಶಾರದಾ ಪೀಠದ ಶ್ರೀ ಭಾರತಿ ತೀರ್ಥ ಸಭಾ ಭವನದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷರು ಹಾಗೂ ಸಂಸ್ಕೃತಿ ಚಿಂತಕರಾದ ಸುರೇಶ್ ಎನ್ ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ವಿಪ್ರ ವಿಕಾಸ ಪ್ರಶಸ್ತಿ ಸ್ವೀಕರಿಸಲ್ಲಿರುವ ಸುರೇಶ್ ಎನ್ ಋಗ್ವೇದಿ ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ರಾಷ್ಟ್ರೀಯ ಚಿಂತನೆ, ಸ್ವದೇಶಿ, ಯುವ ಸಂಘಟನೆ, ಪರಿಸರ ಸಂರಕ್ಷಣೆ, ಸಂಸ್ಕೃತಿ, ಪರಂಪರೆ, ರಾಷ್ಟ್ರೀಯ ಮೌಲ್ಯಗಳ ಪ್ರಸಾರ, ಶಿಕ್ಷಣ, ಕನ್ನಡ ನಾಡು ನುಡಿ ಹಾಗೂ ಸಮಾಜದ ಸಮಗ್ರ ವಿಕಾಸದ ಬೆಳವಣಿಗೆಯಲ್ಲಿ ಅಮೂಲ್ಯ ಸೇವೆಯನ್ನು ಸಲ್ಲಿಸುತ್ತಿದ್ದು ಇವರಿಗೆ ವಿಕಾಸ ಬೇಲೂರು ಹಬ್ಬ 2025 ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ದಿ.ಗರುಡನಗಿರಿ ನಾಗರಾಜ್ ಸ್ಮರಣಾರ್ಥ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

ಸುರೇಶ್ ಎನ್ ಋಗ್ವೇದಿಯವರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ , ಕರ್ನಾಟಕ ಗಮಕ ಕಲಾ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ, ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷರು ಶ್ರೀ ಕೃಷ್ಣ ಪ್ರತಿಷ್ಠಾನದ ಅಧ್ಯಕ್ಷರು ಋಗ್ವೇದಿ ಯೂತ್ ಕ್ಲಬ್ ಗೌರವಾಧ್ಯಕ್ಷರು, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ವಿವಿಧ ಸಂಘಟನೆಗಳಲ್ಲಿ ಕ್ರಿಯಾಶೀಲರಾಗಿ, ಕಾರ್ಯನಿರ್ವಹಿಸಿದ್ದು, ಇತಿಹಾಸ ಉಪನ್ಯಾಸಕರಾಗಿ ಕಳೆದ 31 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

Continue Reading

Chamarajanagar

ಹಸುಗೂಸನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು

Published

on

ಚಾಮರಾಜನಗರ: ಒಂದು ವಾರದ ಹಿಂದೆ ಜನಿಸಿರುವ ಹಸುಗೂಸನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋಗಿರುವ ಘಟನೆ ಸಂಭವಿಸಿದೆ.

ತಾಲೂಕಿನ ಸಾಗಡೆ ಮತ್ತು ತಮ್ಮಡಹಳ್ಳಿ ಗ್ರಾಮಗಳ ನಡುವಿನ ರಸ್ತೆಯ ಬದಿಯಲ್ಲಿ ಹೆಣ್ಣು ಹಸುಗೂಸನ್ನು ಪೋಷಕರು ಬಿಟ್ಟು ಹೋಗಿದ್ದು, ಸಾಗಡೆ ಗ್ರಾಮದ ಪರಮೇಶ್ ಎಂಬುವವರು ಅದೇ ರಸ್ತೆಯಲ್ಲಿ ನಗರ ಕಡೆ ಸಂಚಾರ ಮಾಡುತ್ತಿದ್ದಾಗ ಹಸುಗೂಸು ಅಳುವ ಶಬ್ಧ ಕೇಳಿಬಂದಿದೆ.

ಸ್ಥಳಕ್ಕೆ ಬಂದು ನೋಡಿದಾಗ ಹೆಣ್ಣು ಮಗುವನ್ನು ರಸ್ತೆ ಬದಿಯಲ್ಲಿ ಬಿಟ್ಟಿರುವುದು ತಿಳಿದು, ಬಳಿಕ ಸಾಗಡೆ ಗ್ರಾಮದ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಕರೆ ಮಾಡಿ ಮಾಹಿತಿ ತಿಳಿಸಿ ಮಗುವನ್ನು ಆಂಬುಲೆನ್ಸ್ ಮೂಲಕ ಚಾ.ನಗರ ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾರೆ. ಮಗುವಿನ ಪೋಷಕರು ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ.

Continue Reading

Chamarajanagar

ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು

Published

on

ಚಾಮರಾಜನಗರ: ಗುಂಡ್ಲುಪೇಟೆ – ಚಾಮರಾಜನಗರ ಮುಖ್ಯ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ರಾಮಸಮುದ್ರದ ನಿವಾಸಿ ಸಂತೋಷ್ (25) ಮೃತ ದುರ್ದೈವಿ. ಈತ ತೆರಕಣಾಂಬಿಯ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಮೃತ ಸಂತೋಷ್ ಬೈಕ್ ನಲ್ಲಿ ಗುಂಡ್ಲುಪೇಟೆ- ಚಾಮರಾಜನಗರ ಮುಖ್ಯ ರಸ್ತೆಯಲ್ಲಿ ಬರುವಾಗ ಕೆ.ಕೆ ಹುಂಡಿ ಗ್ರಾಮದ ಬಳಿ ವಾಹನವೊಂದು ಹೊಡೆದುಕೊಂಡು ಹೋಗಿರುವ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ದೇಹವನ್ನು ನಗರದ ಸಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಮುಂದಿನ ಕ್ರಮಕೈಗೊಳ್ಳಲಾಗಿದೆ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Trending

error: Content is protected !!