Location
ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭ*
*ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭ*
*ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ*- *ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು*
ಮೈಸೂರು;
ಜಿಲ್ಲೆಯಲ್ಲಿ ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 49 ಕೇಂದ್ರಗಳಲ್ಲಿ ಜರುಗಲಿದ್ದು ಯಾವುದೇ ಲೋಪದೋಷಗಳವಾಗದಂತೆ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಕಗಳ ಕಛೇರಿಯಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಸುಗಮ ಸಂಚಾಲನೆಗಾಗಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
ಮೈಸೂರು ನಗರದಲ್ಲಿ 26 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 23 ಪರೀಕ್ಷಾ ಕೇಂದ್ರಗಳಲ್ಲಿ 31,628 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು
ಎಲ್ಲಾ ಪರೀಕ್ಷಾ ಕೇಂದ್ರಗಳ ಮೇಲೆ ತೀವ್ರ ನಿಗಾ ವಹಿಸಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ಹಾಗೂ ಪರೀಕ್ಷೆ ಬರೆಯಲು ಡೆಸ್ಕ್ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು, ಶೌಚಾಲಯದ ಸೇರಿದಂತೆ ಮೂಲಭೂತ ಸೌಕರ್ಯದ ವ್ಯವಸ್ಥೆಯಾಗಬೇಕು ಎಂದರು.
ಕೊಠಡಿಗಳಲ್ಲಿ ಗಡಿಯಾರ, ಸಿ.ಸಿ.ಟಿ.ವಿ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತಾಗಬೇಕು ಎಂದರು.
ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಸುತ್ತಳತೆಯಲ್ಲಿ 144 ನೇ ಕಲಂ ಜಾರಿಗೊಳಿಸಲು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಬೇಕು ಎಂದರು.
ಪರೀಕ್ಷಾ ಕೇಂದ್ರಕ್ಕೆ ಮುಖ್ಯ ಅಧೀಕ್ಷಕರುಗಳನ್ನು ನೇಮಕ ಮಾಡಲಾಗಿದೆ. ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಕೊಠಡಿ ಮೇಲ್ವಿಚಾರಕರು, ಇತರೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್ ಇತ್ಯಾದಿ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದರು.
ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ವಿತರಿಸಲು ಪ್ರಶ್ನೆ ಪತ್ರಿಕೆ ಮಾರ್ಗಾಧಿಕಾರಿ ತಂಡಗಳಿಗೆ ಅಗತ್ಯವಿರುವ ವಾಹನಗಳ ಸೌಕರ್ಯ ಒದಗಿಸಿ ಎಂದರು
ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿಯನ್ನು online ನಲ್ಲಿ upload (PU exam login portal) ಮಾಡುವುದರಿಂದ ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಎಂದರು.
ಪರೀಕ್ಷಾ ದಿನಗಳಂದು ಪ್ರಶ್ನೆ ಪತ್ರಿಕೆ ವಿತರಕರ ತಂಡದ ಬೆಂಗಾವಲಾಗಿ ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗುವುದು ಎಂದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಮರಿಸ್ವಾಮಿ ಹಾಗೂ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.
ಪಿರಿಯಾಪಟ್ಟಣ: ದಂಪತಿಗಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ.
ಪಟ್ಟಣದ ಬಿ.ಎಂ ರಸ್ತೆಯ ಪ್ರವಾಸಿ ಮಂದಿರ ಬಳಿ ಕ್ಯಾಂಟೀನ್ ವ್ಯಾಪಾರ ನಡೆಸುತ್ತಿದ್ದ ಪ್ರಕಾಶ್ (51) ಹಾಗೂ ಚಿಲ್ಲರೆ ಅಂಗಡಿ ಮತ್ತು ಹಲ್ಲರ್ ಮಿಲ್ ಇಟ್ಟುಕೊಂಡು ಜೀವನ ಮಾಡುತ್ತಿದ್ದ ಪ್ರಕಾಶ್ ಅವರ ಪತ್ನಿ ಯಶೋದ (48) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ದಂಪತಿಗಳು,
ಗುರುವಾರ ರಾತ್ರಿ ಸಂಬಂಧಿಕರ ಮನೆಯಲ್ಲಿ ಊಟ ಮುಗಿಸಿ ಮನೆಗೆ ತೆರಳಿದ್ದ ದಂಪತಿಗಳು
ಶುಕ್ರವಾರ ಬೆಳಗ್ಗೆ ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಮಗಳು ತನುಶ್ರೀ ಕರೆ ಮಾಡಿದಾಗ ಕರೆ ಸ್ವೀಕರಿಸಿಲ್ಲ ರಾತ್ರಿವರೆಗೂ ಹಲವಾರು ಬಾರಿ ಕರೆ ಮಾಡಿ ಕರೆ ಸ್ವೀಕರಿಸದ ಕಾರಣ ಸಂಬಂಧಿಕರಿಗೆ ಫೋನ್ ಮೂಲಕ ಮನೆಯ ಬಳಿ ತೆರಳಿ ನೋಡುವಂತೆ ಕೋರಿದಾಗ ಸಂಬಂಧಿಕರು ಮನೆಯ ಬಳಿ ತೆರಳಿ ಕಿಟಕಿ ತೆರೆದು ನೋಡಿದಾಗ ಅನುಮಾನ ರೀತಿಯಲ್ಲಿ ಇಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ, ತಕ್ಷಣ ಪೊಲೀಸರಿಗೆ ಕರೆ ಮಾಡಿ ಪೊಲೀಸರು ಬಾಗಿಲು ಮುರಿದು ಮನೆ ಒಳಗಡೆ ಪ್ರವೇಶಿಸಿ ಶವಗಳನ್ನು ಪಟ್ಟಣದ ಶವಗಾರಕ್ಕೆ ಸಾಗಿಸಿದ್ದಾರೆ.
ಘಟನೆ ಸಂಭಂದ ಅನುಮಾನ ವ್ಯಕ್ತಪಡಿಸಿ ಮೃತ ದಂಪತಿ ಪುತ್ರಿ ತನುಶ್ರೀ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Hassan
ಅಕ್ರಮ ಮರಳು ಗಣಿಗಾರಿಕೆ
ಆಲೂರು: ಅಕ್ರಮ ಮರಳು ಗಣಿಗಾರಿಕೆ, ಮರಳು ಸಾಗಾಟ ನಡೆಯುತ್ತಿದ್ದರೂ, ಗಣಿ ಇಲಾಖೆ ಅಧಿಕಾರಿಗಳು, ಪೊಲೀಸರು, ಕಂದಾಯ ಇಲಾಖೆ, ಗ್ರಾಪಂ ಅಧಿಕಾರಿಗಳು ಮೌನವಾಗಿದ್ದಾರೆ. ಇವರ ಈ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಇವರ ಈ ಮೌನ ಕಂಡಾಗ ಪರೋಕ್ಷವಾಗಿ ಇವರು ಇದನ್ನು ಬೆಂಬಲಿಸುವಂತೆ ಕಾಣುತ್ತಿದೆ. ಆದ್ದರಿಂದ ಮರಳು ಮಾಫಿಯಾದವರು ನೀಡುವ ‘ಮಾಮೂಲಿ’ ಇವರನ್ನೆಲ್ಲ ಮೌನವಾಗಿರುವಂತೆ ಮಾಡಿತ್ತಾ ಎಂಬ ಪ್ರಶ್ನೆ ಸಾರ್ವಜನಿಕರದ್ದಾಗಿದೆ
ತಾಲೂಕಿನ ಕೆಂಚಮ್ಮ ಹೊಸಕೋಟೆ ಹೋಬಳಿಯ ವ್ಯಾಪ್ತಿಯ ಎಂಬಲ್ಲಿ ಬರುವ ಹೇಮಾವತಿ ನದಿಯಲ್ಲಿ ಜೆಸಿಬಿ ಯಂತ್ರ ಬಳಸಿ ರಾಜಾರೋಷವಾಗಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ಅಮೂಲ್ಯ ಪ್ರಾಕೃತಿಕ ಸಂಪತ್ತನ್ನು ರಾಜಾರೋಷವಾಗಿ ಕೊಳ್ಳೆ ಹೊಡೆಯುತ್ತಿದ್ದರೂ, ಅಧಿಕಾರಿಗಳು ಮೌನ ವಹಿಸುತ್ತಿರುವುದು ಸಾರ್ವಜನಿಕರ ಸಂಶಯಕ್ಕೆ ಕಾರಣವಾಗಿದೆ.
ಹೇಮಾವತಿ ನದಿ ದಡದಲ್ಲಿ ಹೇರಳವಾಗಿ ಮರಳು ಸಂಪತ್ತಿದ್ದು, ಜೆಸಿಬಿ ಯಂತ್ರ ಹಾಗೂ ದೋಣಿಯ ಮೂಲಕ ಕಾರ್ಮಿಕರನ್ನು ಬಳಸಿಕೊಂಡು ಮರಳು ಲೂಟಿ ಮಾಡಲಾಗುತ್ತಿದೆ. ಇಲ್ಲಿ ಹಗಲು ಮತ್ತು ರಾತ್ರಿ ಅಕ್ರಮವಾಗಿ ನದಿಯ ಗರ್ಭ ಸೀಳಿ ಅವೈಜ್ಞಾನಿಕವಾಗಿ ಮರಳು ತೆಗೆಯಲಾಗುತ್ತಿದೆ. ಈ ಮರಳಿಗೆ ಉತ್ತಮ ಬೆಲೆಯಿದ್ದು, ದಿನನಿತ್ಯ 25ರಿಂದ 30 ಲಾರಿ ಮರಳನ್ನು ಯಾವುದೇ ದಾಖಲೆ ಪತ್ರಗಳಿಲ್ಲದೆ, ಜಿಲ್ಲೆ ಸೇರಿದಂತೆ ಹೊರ ಜಿಲ್ಲೆ ತಾಲೂಕುಗಳಿಗೆ ಸಾಗಿಸಲಾಗುತ್ತದೆ ಎಂಬ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಇಲ್ಲಿ ನದಿಯಲ್ಲಿ ಸುಮಾರು ಅರ್ಧ ಕಿಮೀ. ತನಕ ಮರಳು ತೆಗೆಯಲಾಗಿದ್ದು, ಇದಕ್ಕಾಗಿ ನದಿಯ ಬದಿಯಲ್ಲಿ ಅಕ್ರಮವಾಗಿ ರಸ್ತೆ ನಿರ್ಮಿಸಲಾಗಿದೆ. ರಸ್ತೆಗಾಗಿ ಪ್ರಕೃತಿದತ್ತವಾಗಿ ಹರಿಯುವ ನದಿ ನೀರನ್ನು ತಡೆ ಹಿಡಿಯಲಾಗಿದೆ.
ಮರಳು ಮಾಫಿಯಾಕ್ಕೆ ಮೌನವಾದರಾ ಅಧಿಕಾರಿಗಳು?: ಪ್ರತಿ ವರ್ಷ ಮಳೆ ಕಡಿಮೆಯಾದ ಬಳಿಕ ಮರಳು ಮಾಫಿಯ ತನ್ನ ಕಾರ್ಯ ಚಟುವಟಿಕೆ ಆರಂಭಿಸುತ್ತಿದ್ದು, ಇಲ್ಲಿ ಕಳೆದೆರಡು ತಿಂಗಳಿನಿಂದ ಮರಳು ಅಕ್ರಮವಾಗಿ ಸಾಗಾಣಿಕೆ ನಡೆಸಲಾಗುತ್ತಿದೆ. ಪ್ರಾಕೃತಿಕ ಸಂಪತ್ತನ್ನು ಅಪೋಶನ ತೆಗೆದುಕೊಳ್ಳುವಂತೆ ಲೂಟಿ ಮುಂದುವರೆಸಿರುವ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಇನ್ನಾದರೂ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಾರ ಎಂಬುದನ್ನು ಕಾದು ನೋಡಬೇಕಿದೆ.
Hassan
ಇಂದು ದೇವರಾಜೇಗೌಡರನ್ನು ಕೋರ್ಟ್ಗೆ ಕರೆತಂದಿದ್ದ ಎಸ್ಐಟಿ ತಂಡ
ಹಾಸನ : ಪೆನ್ಡ್ರೈವ್ ವೈರಲ್ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ ಅಂತ್ಯ ಹಿನ್ನೆಲೆ
ಇಂದು ದೇವರಾಜೇಗೌಡರನ್ನು ಕೋರ್ಟ್ಗೆ ಕರೆತಂದಿದ್ದ ಎಸ್ಐಟಿ ತಂಡ
ಇನ್ನೂ ಎರಡು ದಿನ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರ ಎದುರು ಮನವಿ ಮಾಡಿದ್ದ ಎಸ್ಐಟಿ ಟೀಂ
ಎರಡು ದಿನ ಎಸ್ಐಟಿ ವಶಕ್ಕೆ ನೀಡಿ ಹಾಸನದ ಐದನೇ ಅಧಿಕ ಸಿವಿಲ್ ನ್ಯಾಯಾಲಯ
ಮೇ.20 ಸಂಜೆ 5 ಗಂಟೆಯವರೆಗೆ ಎಸ್ಐಟಿ ಕಸ್ಟಡಿಗೆ ನೀಡಿದ ನ್ಯಾಯಾಲಯ
ನಿನ್ನೆ ಕೋರ್ಟ್ನಿಂದ ಹೊರ ಬರುವ ವೇಳೆ ಹೇಳಿಕೆ ನೀಡಿದ್ದ ದೇವರಾಜೇಗೌಡ
ಇಂದು ಕೋರ್ಟ್ ಬಳಿ ಬಿಗಿ ಪೊಲೀಸ್ ಭದ್ರತೆ
-
Mysore3 weeks ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State3 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
Hassan3 weeks ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
State4 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health4 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Uncategorized5 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State3 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.
-
Education3 months ago
ಎಸ್ಎಸ್ಎಲ್ಸಿ. PUC ವಿದ್ಯಾರ್ಥಿಗಳ ʼMarks Card’ ನಲ್ಲಿ ಮಹತ್ವದ ಬದಲಾವಣೆ