Connect with us

Mandya

ಮರಿತಿಬ್ಬೇಗೌಡರನ್ನು ಗೆಲ್ಲಿಸಲು ಶಿಕ್ಷಕರಿಗೆ ಸಾಹಿತಿಗಳ ಕರೆ

Published

on

ಮಂಡ್ಯ : ದಕ್ಷಿಣ ಶಿಕ್ಷಕರ ಕ್ಷೇತ್ರದ ಚಿಲುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರನ್ನು ಬೆಂಬಲಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಮತದಾರರಿಗೆ ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿರುವ ಮರಿತಿಬ್ಬೇಗೌಡರನ್ನು ಬೆಂಬಲಿಸಿ ಮಾತನಾಡಿದ ಅವರು ಕೇಂದ್ರದ ಹೊಸ ಶಿಕ್ಷಣ ನೀತಿ ನಮ್ಮನ್ನು ನೂರು ವರ್ಷ ಹಿಂದಕ್ಕೆ ತೆಗೆದುಕೊಂಡು ಹೋಗುವಂತದ್ದು.

ಈ ಸರ್ಕಾರ ತನ್ನದೇ ಆದ ಗುಪ್ತ ನೀತಿ(ಹಿಡನ್ ಅಜೆಂಡಾ) ಇಟ್ಟುಕೊಂಡು ಅನಕ್ಷರಸ್ಥರು,ಹಿಂದುಳಿದ ಸಮುದಾಯದವರು ಶಿಕ್ಷಣ ಮತ್ತು ಉದ್ಯೋಗದಿಂದ ವಂಚಿತರಾಗುವಂತೆ ಮಾಡುತ್ತದೆ. ಶಿಕ್ಷಣ ಮಾರುಕಟ್ಟೆಯ ಸರಕಾಗುತ್ತದೆ. ಉನ್ನತ ಶಿಕ್ಷಣ ಪಡೆಯಲು ಆಗದಂತಹ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಕಿಡಿ ಕಾರಿದರು.

ಮರಿತಿಬ್ಬೇಗೌಡ ವಿದ್ಯಾರ್ಥಿಯಾದಾಗಿನಿಂದ ಹೋರಾಟದಿಂದ ಬಂದವರು. ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಬಲ್ಲರು. ಶಿಕ್ಷಣ ವ್ಯವಸ್ಥೆ, ಶಿಕ್ಷಕರ ಪರವಾಗಿ ನಿಲ್ಲುವಂತಹವರು. ಈ ನಂಬಿಕೆಯ ನೆಲೆಗಟ್ಟಿನಲ್ಲಿ ಶಿಕ್ಷಕರು ಕಳೆದ ನಾಲ್ಕು ಬಾರಿ ಆಯ್ಕೆ ಮಾಡಿದ್ದಾರೆ. ನೂತನ ಪಿಂಚಣಿ ನೀತಿಯಿಂದ ನಿವೃತ್ತ ಶಿಕ್ಷಕರು,ನೌಕರರು ಬದುಕುವುದು ದುಸ್ತರವಾಗಿದೆ. ಎನ್‌ಪಿಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಪದ್ಧತಿ ಜಾರಿಗೆ ತರಬೇಕು. ಆಳುವ ಪಕ್ಷವಿರುವ ಕಾರಣ ಶಿಕ್ಷಕರಿಗೆ ಅನುಕೂಲವಾಗುವುದರಿಂದ ಶಿಕ್ಷಕರು ಮರಿತಿಬ್ಬೇಗೌಡರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಚಿಂತಕ ಜಾಣಗೆರೆ ವೆಂಕಟರಾಮಯ್ಯ ಮಾತನಾಡಿ, ಗೌಡರು ಶಿಕ್ಷಕ ವರ್ಗದ ಆಪ್ತ ಬಂಧು.ಶಿಕ್ಷಕರ ಅಭಿಮಾನ, ಗೌರವ, ನಂಬಿಕೆ ಉಳಿಸಲು ಯಾವುದೇ ಪಕ್ಷದಲ್ಲಿದ್ದರೂ ಹೋರಾಟ ಮಾಡಿದ್ದಾರೆ. ಇಂದಿನ ವ್ಯವಸ್ಥೆಯಲ್ಲಿ ಅವರ ಗೆಲುವು ಅನಿವಾರ್ಯವಾಗಬೇಕು. ಅನೇಕ ಅಧಿಕಾರಿಗಳಿಂದ ಶಿಕ್ಷಕರು ಶೋಷಣೆಗೆ ಒಳಗಾಗುವ ವ್ಯವಸ್ಥೆ ಇದೆ. ಅಂತಹುದನ್ನು ಪ್ರಶ್ನೆ ಮಾಡಲು,ಶಿಕ್ಷಕರ ಹಿತ ಕಾಪಾಡುವ ಧೀಮಂತಿಕೆ, ನಂಬಿಕೆ ಉಳಿಸಿಕೊಂಡಿದ್ದಾರೆ. ಅಕ್ರಮ ತಡೆಯುವ ಸಾಮರ್ಥ್ಯವಿದೆ. ಜಾತಿ ಮತ ಮೀರಿ ದುಡಿದಿರುವ ಮರಿತಿಬ್ಬೇಗೌಡರನ್ನು ಬೆಂಬಲಿಸಿ ಎಂದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜು ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಎನ್‌ಇಪಿ ಮೂಲಕ ಕುಲಗೆಡಿಸಲು ಹೊರಟಿದೆ. ಕೆಳವರ್ಗದ ಜನರಿಗೆ ಭವಿಷ್ಯ ಇಲ್ಲದ ರೀತಿ ಮಾಡಿದೆ. ಆದರೆ ರಾಜ್ಯ ಸರ್ಕಾರ ಎಸ್‌ಇಪಿ ಮೂಲಕ ಭರವಸೆ ಮೂಡಿಸಿದೆ. ಶಿಕ್ಷಕರಿಗೆ ನೂರಾರು ಸಮಸ್ಯೆಗಳಿವೆ. ಬೋಧನೆಯನ್ನು ಮಾಡಲು ಸ್ವಾತಂತ್ರ‍್ಯ ಇಲ್ಲ. ಶಿಕ್ಷಕರಿಗೆ ಮಾನಸಿಕ ನೆಮ್ಮದಿ ಮುಖ್ಯ. ಕಳೆದ ಬಿಜೆಪಿ ಸರ್ಕಾರ ಶಿಕ್ಷಕರಿಗೆ ನೀಡಿದ್ದ ಕಾಲ್ಪನಿಕ ವೇತನ ಬಡ್ತಿಯನ್ನು ತಡೆಹಿಡಿಯಲು ಆದೇಶಿಸಿತು. ಇದನ್ನು ಸರಿಪಡಿಸಲು ಮರಿತಿಬ್ಬೇಗೌಡ ರಂತ ಪ್ರತಿನಿಧಿಯ ಅವಶ್ಯಕತೆಯಿದೆ. ಶಿಕ್ಷಕರು ದಯವಿಟ್ಟು ಆಮಿಷಗಳಿಗೆ ಬಲಿಯಾಗದೇ, ಮತವನ್ನು ಮಾರಿಕೊಳ್ಳದೇ, ಆತ್ಮಸಾಕ್ಷಿಯಿಂದ ಪ್ರಾಮಾಣಿಕ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದರು.

ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷ ಭೈರಮಂಗಲ ರಾಮೇಗೌಡ ಮಾತನಾಡಿ, ವಿಧಾನ ಪರಿಷತ್ತು ಎಂದರೆ ಘನತೆ, ಸತ್ವ, ಸಾತ್ವಿಕ ಹೋರಾಟದ ವೇದಿಕೆ. ಇದು ಮಾದರಿಯಾಗಿ ನಿರ್ಮಾಣವಾಗಬೇಕು. ವಿಧಾನಸಭೆಯ ಇನ್ನೊಂದು ರೂಪವಾಗಬಾರದು. ಆದರ್ಶ ವ್ಯಕ್ತಿಗಳ ಕೊರತೆ ಎದುರಿಸುತ್ತಿರುವ ಪರಿಷತ್ತು ಆದರ್ಶಕ್ಕೆ ಮೇಲ್ಪಂಕ್ತಿ ಹಾಕುವವರನ್ನು ಹೊಂದಬೇಕು. ಶಿಕ್ಷಕರ ಗೋಳು ಕೇಳುವವರಿಲ್ಲ ಅತಿಥಿ, ಅರೆಕಾಲಿಕ, ಗುತ್ತಿಗೆಯಂತ ಶಿಕ್ಷಕರ ಸಮಸ್ಯೆಗಳನ್ನು ವಿಚಾರಿಸುವವರು ಕಡಿಮೆ. ಶಿಕ್ಷಕರು ತಮ್ಮ ಹಿತ ಕಾಪಾಡಿಕೊಳ್ಳಲು ಮರಿತಿಬ್ಬೇಗೌಡರನ್ನು ಬೆಂಬಲಿಸಬೇಕು ಎಂದರು.

ಸಂಸ್ಕೃತಿ ಚಿಂತಕ, ಸಾಹಿತಿ, ಬಂಜಗೆರೆ ಜಯಪ್ರಕಾಶ್ ಮಾತನಾಡಿ ಬಿಜೆಪಿ ಶಿಕ್ಷಕರ ಆಲೋಚನಾ ಶಕ್ತಿ,ಸೃಜನಶೀಲತೆಯನ್ನು ಕೊಲ್ಲುವ ವ್ಯವಸ್ಥೆ ರೂಪಿಸುತ್ತಿದೆ. ಇಂತಹ ಶಿಕ್ಷಣ ಪ್ರಜಾಪ್ರಭುತ್ವಕ್ಕೆ ಪೂರಕವಲ್ಲ,ಮಾರಕ. ಶಿಕ್ಷಕರಿಗೆ ಮುಕ್ತ ಅವಕಾಶವಿರಬೇಕು. ಸಮಾಜ ಕಟ್ಟುವ ನಿಟ್ಟಿನಲ್ಲಿ ಯೋಚಿಸಿ ಜನಪರವಾಗಿರುವ ಮರಿತಿಬ್ಬೇಗೌಡರ ಗೆಲುವು ಶಿಕ್ಷಣ ಕ್ಷೇತ್ರದ ಆರೋಗ್ಯಕ್ಕೆ ಪೂರಕ ಎಂದರು.

ಸುದ್ದಿಗೋಷ್ಠಿಯಲ್ಲಿ ಸಾಹಿತಿ ಕಾ.ತ.ಚಿಕ್ಕಣ್ಣ,ಕರ್ನಾಟಕ ಬಂಜಾರ ಅಭಿವೃದ್ಧಿ ಅಕಾಡೆಮಿ ಅಧ್ಯಕ್ಷ ಡಾ.ಎ.ಆರ್.ಗೋವಿಂದಸ್ವಾಮಿ,ಉಪನ್ಯಾಸಕ ಕೂಡ್ಲೂರು ವೆಂಕಟಪ್ಪ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ ರೂಪ*

Published

on

*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ
ರೂಪ*

ಶ್ರೀರಂಗಪಟ್ಟಣ : ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆಯನ್ನ ಆಚರಿಸಲಾಗುತ್ತಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಎಂ.ಡಿ ರೂಪ ಹೇಳಿದರು.

ಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ, ತಾಲೂಕು ಆಡಳಿತ ಹಾಗೂ ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ನಡೆದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ೨೦೧೧ ರಿಂದ ಪ್ರತಿ ವರ್ಷ ಜ. ೨೫ ರಂದು ದೇಶಾದ್ಯಂತ ರಾಷ್ಟೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಹೊಸ ಮತದಾರರನ್ನು ಸೆಳೆಯುವ, ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.

ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್. ಮಹದೇವಪ್ಪ ಮಾತನಾಡಿ, ಭಾರತದ ಚುನಾವಣಾ ಆಯೋಗದ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಭಾರತದಲ್ಲಿ ಶಾಸಕಾಂಗದ ಎಲ್ಲಾ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. “ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯ ತಿಳುವಳಿಕೆ ನೀಡಲು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಕಾಲೇಜು ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನ್ಯಾಯಾಧೀಶರಾದ ಹರೀಶ್‌ಕುಮಾರ್, ಹನುಮಂತ ರಾಯಪ್ಪ, ತಹಸೀಲ್ದಾರ್ ಪರಶುರಾಮ್ ಸತ್ತಿಗೆರಿ, ಬಿಇಒ ಮಹೇಶ್, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ನೌಕರರು, ಕಾಲೇಜು ವಿದ್ಯಾರ್ಥಿಗಳು ಇದ್ದರು.

Continue Reading

Mandya

ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ

Published

on

ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನಿತ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಶಸ್ತಿ ನೀಡಿ ಗೌರವಿಸಿದರು

Continue Reading

Mandya

ಜ.29 ರಂದು ನಬಾರ್ಡ್ ನೀತಿ ವಿರೋಧಿಸಿ ಪ್ರತಿಭಟನೆ

Published

on

ಮಂಡ್ಯ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜನವರಿ ೨೯ರ ಬೆಳಿಗ್ಗೆ ೧೧ಗಂಟೆಗೆ ಬೆಂಗೂರಿನ ರಿಸರ್ವ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಕಾರ ಕಳೆದ ಮೂರು ವರ್ಷದಿಂದ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಿಲೇ ಬಂದಿದ್ದು, ಕಳೆದ ವರ್ಷ ರಾಜ್ಯಕ್ಕೆ ೫೬೦೦ ಕೋಟಿ ನೀಡಲಾಗಿದ್ದ ಸಾಲ ಪ್ರಸಕ್ತ ವರ್ಷಕ್ಕೆ ೨೩೪೦ಕ್ಕೆ ಇಳಿಸಿದೆ ಎಂದು ಆರೋಪಿಸಿದರು.

ರಾಜ್ಯಕ್ಕೆ ನೀಡುವ ಸಾಲದ ಮೊತ್ತವನ್ನು ಶೇ.೫೮ರಷ್ಟು ತಗ್ಗಿಸುವ ಮೂಲಕ ರಾಜ್ಯದ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿದೆ. ರೈತರು ಹೆಚ್ಚು ಬಡ್ಡಿ ತೆತ್ತು ವಾಣಿಜ್ಯ ಬ್ಯಾಂಕುಗಳ ಮೊರೆ ಹೋಗಿ, ಖಾಸಗಿ ಸಾಲದ ಸುಳಿಗೆ ಸಿಲುಕೊಂಡು ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ಇದರಿಂದ ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ಅವರ ಕಿರುಕುಳದಿಂದ ಗ್ರಾಮೀನ ಪ್ರದೇಶದ ಮಹಿಳೆಯರು ಹಾಗೂ ಇತರೆ ದುಡಿಯುವ ವರ್ಗ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿಯೂ ಮಹಿಳೆ ಆತ್ಮಹತ್ಯೆಗೆ ಶರಣಾದ ಪ್ರಕರಣ ನಡೆದಿದ್ದು, ಇದಕ್ಕೆ ಕೇಂದ್ರ ಸರ್ಕಾರದ ನಡೆಯೇ ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ರೈತರು, ಸ್ವ ಸಹಾಯ ಸಂಘಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ಭಾಗವಹಿಸುವಂತೆ ಕರೆ ನೀಡಿದರು.

ಗೋಷ್ಠಿಯಲ್ಲಿ ಬೋರಾಪುರ ಶಂಕರೇಗೌಡ, ಲಿಂಗಪ್ಪಾಜಿ, ಅಣ್ಣಯ್ಯ, ವಿ.ಸಿ.ಉಮೇಶ್, ವಿಜಿಕುಮಾರ್, ಮಂಜು ಇತರರಿದ್ದರು.

Continue Reading

Trending

error: Content is protected !!