Connect with us

Chikmagalur

ಮರುಳಸಿದ್ದೇಶ್ವರರು ಹಾಗೂ ಬಸವಣ್ಣನವರು ಒಂದೇ ಕಾಲದಲ್ಲಿ ಜೀವಿಸಿದವರು

Published

on

ಚಿಕ್ಕಮಗಳೂರು: ಮನುಷ್ಯನ ಹೃದಯಾಳದಿ ಭಗವಂತನು ನೆಲೆಸಿರುವನು. ಎಲ್ಲೆಲ್ಲೋ ತೆರಳಿ ಶೋಧಿಸುವ ಮೊದಲು, ಆತ್ಮದಲ್ಲಿ ಅಡಗಿರುವ ಪರಮಾತ್ಮನೊಟ್ಟಿಗೆ ಸನ್ಮಾರ್ಗದಲ್ಲಿ ಸಾಗಿದಾಗ ಬದು ಕು ಸಾತ್ವಿಕ ರೂಪು ಪಡೆದುಕೊಳ್ಳಲಿದೆ ಎಂದು ಬಸವತತ್ವ ಪೀಠದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಲಕ್ಯಾ ಹೋಬಳಿ ಸಮೀಪ ಗಾಣದಾಳು ಗ್ರಾಮದಲ್ಲಿ ಸೋಮವಾರ ವಿಶ್ವಬಂಧು ಶ್ರೀ ಮರುಳಸಿದ್ಧೇಶ್ವರ ಸ್ವಾಮಿ ನೂತನ ದೇವಾಲಯ ಪ್ರವೇಶೋತ್ಸವ, ಕುಂಭಾಭಿಷೇಕ, ಕಳಸಾರೋಹಣ ಹಾಗೂ ಧಾರ್ಮಿಕ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಸೋಮವಾರ ಅವರು ಆರ್ಶೀವಚನ ನೀಡಿದರು.

ಭಕ್ತಾಧಿಗಳು ಮತ್ತು ಗ್ರಾಮಸ್ಥರು ದೇವಾಲಯ ನಿರ್ಮಾಣ ಅಥವಾ ಜೀರ್ಣೋದ್ದಾರಕ್ಕೆ ಮುಂದಾದರೆ ಸಾಲದು, ದೈನಂದಿನ ಪೂಜಾಕೈಂಕರ್ಯಗಳಲ್ಲಿ ತಲ್ಲೀನರಾಗಬೇಕು. ಪ್ರಾರ್ಥನೆ, ಪೂಜೆಯ ಜೊತೆಗೆ ವೈಮನಸ್ಸಿನ ಕೆಡಕನ್ನು ತೊಡೆದು, ಸದ್ಗುಣಗಳನ್ನು ಮೈಗೂಡಿಸಿಕೊಂಡು ಸಾಗಿದರೆ ದೇವಾಲಯ ನಿರ್ಮಾಣಗೊಂ ಡಿದ್ದಕ್ಕೆ ಸಾರ್ಥಕವಾದಂತೆ ಎಂದು ತಿಳಿಸಿದರು.

ಶ್ರೀ ಮರುಳಸಿದ್ದೇಶ್ವರರು ಹಾಗೂ ಬಸವಣ್ಣನವರು ಒಂದೇ ಕಾಲದಲ್ಲಿ ಜೀವಿಸಿದವರು. ಶೋಷಿತರ ಧ್ವನಿ ಯಾಗಿ ಮತ್ತು ಸಂಸ್ಕೃತಿ, ಸಂಪ್ರದಾಯದ ಅಂಕುಡೊಂಕುಗಳನ್ನು ತಿದ್ದಲು ಇಡೀ ಜೀವನವನ್ನೆ ಸಮಾಜಕ್ಕಾಗಿ ಮುಡಿಪಿಟ್ಟ ಶ್ರೇಷ್ಟ ದಾರ್ಶನಿಕರು. ಯಜ್ಞಾಧಿಗಳನ್ನು ವಿರೋಧಿಸಿ ಉತ್ತಮ ಪರಂಪರೆಯನ್ನು ಸಮಾಜಕ್ಕೆ ಧಾರೆಗೈದವರು ಎಂದು ಬಣ್ಣಿಸಿದರು.

ಎದೆಗೂಡಿನಲ್ಲಿ ಪರಮಾತ್ಮನನ್ನು ಕಾಣಲು ಮಾನವ ತನ್ನ ದೃಷ್ಟಿಕೋನ ಬದಲಿಸಿ, ಶ್ರದ್ದಾರ್ಪೂಕವಾಗಿ ಒಳಗಣ್ಣಿನಿಂದ ಪ್ರಾರ್ಥಿಸಿದರೆ, ತಾನಾಗಿಯೇ ದರ್ಶನ ಭಾಗ್ಯ ಕರುಣಿಸುವನು. ತನ್ನೊಳಗಿನ ದೇವರನ್ನು ಪೂ ಜಿಸುವ ಪರಿಯನ್ನು ಅರಿತುಕೊಳ್ಳಬೇಕು. ಈ ರೀತಿಯಲ್ಲೂ ಮರುಳಸಿದ್ದರು ತನ್ನ ವ್ಯಾಪ್ತಿಯಲ್ಲಿ ಸಕಲದೈವವು ಒಂದೆಡೆ ನೆಲೆಸಿದ್ದಾನೆ ಎಂಬ ಸಿದ್ಧಾಂತ ಸಾರಿದ್ದರು ಎಂದು ಹೇಳಿದರು.

ಗ್ರಾಮಸ್ಥರು, ದಾನಿಗಳು ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ಗಾಣದಾಳು ಶ್ರೀ ಮರುಳಸಿದ್ಧೇಶ್ವರ ಸ್ವಾಮಿಯವರ ಭವ್ಯ ಮಂದಿರ ನಿರ್ಮಾಣಗೊಂಡಿರುವುದು ಶ್ಲಾಘನೀಯ. ಆ ನಿಟ್ಟಿನಲ್ಲಿ ಗ್ರಾಮಸ್ಥರು ಮಕ್ಕ ಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸುವುದಾಗಿ ಬಾಲ್ಯದಿಂದಲೇ ದೇವಾಲಯಕ್ಕೆ ಕಳುಹಿಸುವ ಪದ್ಧತಿ ರೂಢಿಸಬೇಕು ಎಂದು ಕಿವಿಮಾತು ಹೇಳಿದರು.

ಶಾಸಕ ಹೆಚ್.ಡಿ.ತಮ್ಮಯ್ಯ ಮಾತನಾಡಿ ಶ್ರೀ ಮರುಳಸಿದ್ಧರ ಕಾಲಘಟ್ಟದಲ್ಲಿ ಆರ್ಥಿಕ ಸಮಾನತೆ, ಮಹಿ ಳೆಯರಿಗೆ ಗೌರವಿಸುವುದು, ಕಾಯಕವೇ ಕೈಲಾಸ ಎಂಬುದನ್ನು ವಚನಗಳ ಮುಖಾಂತರ ಸಾರಿ ಸಮಸಮಾ ಜಕ್ಕೆ ಹೆಜ್ಜೆಯಿಟ್ಟ ಶ್ರೇಷ್ಟರ ದೇವಾಲಯವನ್ನು ಪುಟ್ಟ ಗ್ರಾಮದಲ್ಲಿ ಪ್ರತಿಷ್ಟಾಪಿಸಿರುವ ಗ್ರಾಮಸ್ಥರ ಮನಸ್ಸು ಅ ತೀವ ದೊಡ್ಡದು ಎಂದು ಹೇಳಿದರು.

ಪ್ರಸ್ತುತ ದೇವಾಲಯ ಅಭಿವೃಧ್ದಿಗೆ ಶಾಸಕರ ನಿಧಿಯಿಂದ ೧೦ ಲಕ್ಷ ಅನುದಾನ ಪೂರೈಸುವ ಜೊತೆಗೆ ವಿವಿಧ ದಾನಿಗಳು, ಗ್ರಾಮಸ್ಥರ ಸಹಕಾರದಿಂದ ಇಂದು ವಿಜೃಂಭ್ರಮಣೆಯಿಂದ ಲೋಕಾರ್ಪಣೆಗೊಂಡಿದ್ದು ಶ್ರೀ ಮರುಳಸಿದ್ಧೇಶ್ವರ ಸ್ವಾಮಿ ಒಕ್ಕಲಿನ ಕುಟುಂಬವು ಮುಕ್ತವಾಗಿ ತೆರಳಿ ಪೂಜಾವಿಧಿವಿಧಾನ ಕೈಗೊಳ್ಳಲು ಅನುವು ಮಾಡಲಾಗಿದೆ ಎಂದರು.

ಬಸವತತ್ವ ಪೀಠವು ಕೇವಲ ಚಿಕ್ಕಮಗಳೂರು ತಾಲ್ಲೂಕಿಗೆ ಸೀಮಿತವಾಗಿತ್ತು. ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ ಗದ್ದುಗೆ ವಹಿಸಿಕೊಂಡ ಬಳಿಕ ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗದಲ್ಲೂ ಪ್ರತೀತಿ ಪಡೆ ಯುತ್ತಿದೆ. ಮುಂದೆ ಚಿಕ್ಕಮಗಳೂರಿಗೆ ಆಗಮಿಸುವವರು ಶೃಂಗೇರಿ, ರಂಭಾಪುರೀ ಮಠಗಳಿಗೆ ಭೇಟಿ ನೀ ಡಿದಂತೆ, ಬಸವತತ್ವಪೀಠಕ್ಕೆ ಭೇಟಿ ನೀಡುವಂತೆ ಅಭಿವೃದ್ದಿಪಡಿಸಲು ಮುಂದಾಗುತ್ತೇವೆ ಎಂದರು.

ಉದ್ಯಮಿ ಹಾಗೂ ದಾನಿ ಬಿ.ಎನ್.ಚಿದಾನಂದ್ ಮಾತನಾಡಿ ದೇವಾಲಯ ಅಭಿವೃಧ್ದಿ ಹಣ ಕೊಡು ವಷ್ಟು ದೊಡ್ಡವರಲ್ಲ, ಕೇವಲ ಸೇವೆಯ ದೃಷ್ಟಿಯಿಂದ ಕೆಲಸ ನಿರ್ವಹಿಸಿದ್ದೇವೆ. ಭಕ್ತಾಧಿಗಳು ಪ್ರಾರ್ಥನೆ ಹಾ ಗೂ ಆಚರಣೆಗಾಗಿ ತಾವು ಸೇರಿದಂತೆ ಅನೇಕರ ದಾನದಿಂದ ಶ್ರೀ ಮರುಳಸಿದ್ದೇಶ್ವರರ ಭವ್ಯ ಮಂದಿರ ನಿ ರ್ಮಾಣಗೊಂಡು ಲೋಕಾರ್ಪಣೆಗೊಂಡಿದೆ ಎಂದು ಹೇಳಿದರು.

ಜಿ.ಪಂ. ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಮಾತನಾಡಿ ಚಂಚಲ ಮನಸ್ಸನ್ನು ನಿಗ್ರಹಿಸಲು ದೇ ವಾಲಯ ಅತ್ಯಂತ ಪುಣ್ಯಸ್ಥಳಗಳು. ಪೂರ್ವಿಕರ ಕಾಲದಲ್ಲಿ ಹಿರಿಯರು ಹಾಕಿಕೊಟ್ಟ ಸಂಪ್ರದಾಯ ಪಾಲಿಸ ಬೇಕು. ಮೊದಲು ಸ್ಥಳೀಯ ದೇವಾಲಯ ಆದ್ಯತೆ ನೀಡಿ, ತದನಂತರ ಪ್ರಸಿದ್ಧ ದೇಗುಲಗಳಿಗೆ ತೆರುವ ಪದ್ಧ ತಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರಡಿಗವಿ ಮಠದ ಶ್ರೀ ಶಿವಶಂಕರ ಶಿವಯೋಗಿ ಸ್ವಾಮೀಜಿ, ಜಿ.ಪಂ. ಮಾಜಿ ಉಪಾ ಧ್ಯಕ್ಷ ಬಿ.ಜಿ.ಸೋಮಶೇಖರ್, ಉದ್ಯಮಿಗಳಾದ ಬಿ.ಎನ್. ರಾಜಶೇಖರ್, ಬಿ.ಎನ್.ಷಡಾಕ್ಷರಿ, ಸಾಹಿತಿ ಚಟ್ನ ಹಳ್ಳಿ ಮಹೇಶ್, ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಮಹಡಿಮನೆ ಸತೀಶ್, ಶ್ರೀ ಮರುಳಸಿದ್ದೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಜಿ.ಎಂ.ರಮೇಶ್, ಉಪಾಧ್ಯಕ್ಷ ಜಿ.ರಮೇಶ್, ಗ್ರಾಮಸ್ಥರಾದ ಚಂದ್ರಶೇಖರ್, ಮಲ್ಲಿಕಾರ್ಜುನ್, ಗಿರೀಶ್, ಎಲ್.ಆರ್.ಈಶ್ವರಪ್ಪ ಉಪಸ್ಥಿತರಿದ್ದರು.

Continue Reading

Chikmagalur

ಹೋಂ ಸ್ಟೇಯೊಂದರಲ್ಲಿ ಯುವತಿ ಅನುಮಾನಾಸ್ಪದ ಸಾ*ವು: 4 ತಿಂಗಳ ನಂತರ ಮಾಲೀಕನ ವಿರುದ್ಧ FIR ದಾಖಲು

Published

on

ಚಿಕ್ಕಮಗಳೂರು: ಆಲ್ದೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಹೋಂ ಸ್ಟೇಯೊಂದರಲ್ಲಿ ಯುವತಿ ಅನುಮಾನಾಸ್ಪದ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 4 ತಿಂಗಳ ನಂತರ ಮಾಲೀಕರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ.

ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ರಂಜಿತಾ 2025ರ ಅ. 25ರಂದು ಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಬಂದಿದ್ದಳು. ಅದೇ ದಿನ ಹೋಂ ಸ್ಟೇ ಬಾತ್‍ರೂಮ್‍ನಲ್ಲಿ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಮರಣೋತ್ತರ ಪರೀಕ್ಷೆಯಲ್ಲಿ ಯುವತಿ ಸಾವಿನ ಸತ್ಯಾಂಶ ಬಹಿರಂಗವಾಗಿದ್ದು, ಗ್ಯಾಸ್ ಗೀಸರ್‌ನಿಂದ ಕಾರ್ಬನ್ ಮೋನಾಕ್ಸೈಡ್ ಅನಿಲ ಸೋರಿಕೆಯಿಂದ ಸಾವು ದೃಢಪಟ್ಟಿದೆ. ಈ ಹಿನ್ನೆಲೆ ಸರಿಯಾದ ವೆಂಟಿಲೇಶನ್ ವ್ಯವಸ್ಥೆ ಇಲ್ಲದಿದ್ದದ್ದೇ ದುರಂತಕ್ಕೆ ಕಾರಣ ಎಂದು ಹೋಂ ಸ್ಟೇ ಮಾಲೀಕ ಸುಧಾಕರ್ ವಿರುದ್ಧ ಎಫ್‌ಐಆರ್‌ ಅನ್ನು ದಾಖಲು ಮಾಡಲಾಗಿದೆ.

ಹೋಂ ಸ್ಟೇ ಮಾಲೀಕರ ನಿರ್ಲಕ್ಷ್ಯವೇ ಯುವತಿಯ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡ ಆಲ್ದೂರು ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

Continue Reading

Chikmagalur

ಸೇವಾ ನ್ಯೂನತೆ ಎಸಗಿದ ಇನ್ಶೂರೆನ್ಸ್ ಕಂಪನಿ: ಪಾಲಿಸಿದಾರರಿಂದ ಶುಲ್ಕ ವಿಧಿಸದೆ ಕಂತು ಸ್ವೀಕರಿಸುವಂತೆ ಆದೇಶಿಸಿದ ಕೋರ್ಟ್‌

Published

on

ಚಿಕ್ಕಮಗಳೂರು: ವಿಮಾ ಕಂತು ಪಾವತಿಯನ್ನು ಸ್ವೀಕರಿಸದೆ ಸೇವಾ ನ್ಯೂನತೆ ಎಸಗಿದ ಆರೋಪದಲ್ಲಿ ಇನ್ಶೂರೆನ್ಸ್ ಕಂಪನಿಯ ವಿರುದ್ಧ ತೀರ್ಪು ನೀಡಿರುವ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಬಡ್ಡಿ ಹಾಗೂ ವಿಳಂಬ ಶುಲ್ಕ ವಿಧಿಸದೆ ಪಾಲಿಸಿದಾರರಿಂದ ಕಂತುಗಳನ್ನು ಸ್ವೀಕರಿಸಿ ವಿಮೆಯನ್ನು ಚಾಲ್ತಿಗೊಳಿಸುವಂತೆ ಆದೇಶ ನೀಡಿದೆ.

ಚಿಕ್ಕಮಗಳೂರು ಕೂದುವಳ್ಳಿಯ ಹೆಚ್.ಎಲ್.ಸುದೀಪ್ ಎಂಬುವವರು ಕೆನರಾ ಬ್ಯಾಂಕ್ ಗವನಹಳ್ಳಿ ಶಾಖೆಯ ಗ್ರಾಹಕರಾಗಿದ್ದು, ಬ್ಯಾಂಕ್‌ನಿಂದ ಸಾಲ ಪಡೆಯುವ ಸಂದರ್ಭದಲ್ಲಿ ಕೆನರಾ ಹೆಚ್‌ಎಸ್‌ಬಿಸಿ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಜೀವ ವಿಮಾ ಕಂಪನಿಯಿಂದ ವಿಮೆ ಮಾಡಿಸಿದ್ದರು.

ಕೋವಿಡ್ ಕಾರಣದಿಂದಾಗಿ 2021 ಹಾಗೂ 2022ರ ಕಂತುಗಳನ್ನು ಪಾವತಿಸಿರಲಿಲ್ಲ. ಈ ಬಗ್ಗೆ ವಿಮಾ ಕಂಪನಿಯವರು ನೋಟಿಸು ಜಾರಿಗೊಳಿಸಿದ್ದರಿಂದ ಸುದೀಪ್ ಅವರು ವಿಮಾ ಕಂತನ್ನು ಪಾವತಿಸಿದ್ದರು. ಆದರೆ ಈ ಮೊತ್ತವು ಮರಳಿ ಸುದೀಪ್ ಅವರ ಖಾತೆಗೆ ಜಮೆಯಾಗಿತ್ತು. ಅನಂತರದಲ್ಲಿ ವಿಮಾ ಕಂತನ್ನು ಸ್ವೀಕರಿಸಿ ವಿಮೆಯನ್ನು ನವೀಕರಿಸಿಕೊಡಬೇಕೆಂದು ಕೋರಿದ್ದರೂ ವಿಮಾ ಕಂಪನಿ ಸ್ಪಂದಿಸದೆ ಸೇವಾ ನ್ಯೂನತೆ ಎಸಗಿತ್ತೆನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಸುದೀಪ್ ಖಾತೆ ಹೊಂದಿರುವ ಬ್ಯಾಂಕ್ ಹಾಗೂ ಕೆನರಾ ಹೆಚ್‌ಎಸ್‌ಬಿಸಿ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಜೀವ ವಿಮಾ ಕಂಪನಿಯ ನವದೆಹಲಿ ಹಾಗೂ ಹರಿಯಾಣದ ಗುರುಗ್ರಾಮ್ ಕಚೇರಿಯ ವಿರುದ್ಧ ಆಯೋಗಕ್ಕೆ ದೂರು ಸಲ್ಲಿಸಲಾಗಿತ್ತು.

ಈ ಬಗ್ಗೆ ವಿಚಾರಣೆ ನಡೆಸಿದ ಆಯೋಗವು ವಿಮಾ ಕಂಪನಿಯು ವಿಮೆಯ ಬಾಕಿ ಕಂತುಗಳನ್ನು ಬಡ್ಡಿ ಹಾಗೂ ವಿಳಂಬ ಶುಲ್ಕವನ್ನು ವಿಧಿಸದೆ ಸ್ವೀಕರಿಸಿ ವಿಮೆಯನ್ನು ಚಾಲ್ತಿಗೊಳಿಸುವಂತೆ ಸೂಚಿಸಿದೆ. ತಪ್ಪಿದಲ್ಲಿ ದೂರುದಾರರು ಪಾವತಿಸಿರುವ ಮೊತ್ತಕ್ಕೆ ವಾರ್ಷಿಕ ಶೇ.9ರ ಬಡ್ಡಿ ಹಾಗೂ ಅಸಲು ಮೊತ್ತವನ್ನು, ಅಲ್ಲದೆ 10 ಸಾವಿರ ರೂ.ಗಳನ್ನು ಪರಿಹಾರವಾಗಿ ಮತ್ತು 5 ಸಾವಿರ ರೂ.ಗಳನ್ನು ಖರ್ಚು-ವೆಚ್ಚವಾಗಿ ನೀಡುವಂತೆ ಆದೇಶ ನೀಡಿದೆ.

ಈ ತೀರ್ಪನ್ನು 45 ದಿನಗಳ ಒಳಗೆ ಪಾಲಿಸಬೇಕು. ಇಲ್ಲದಿದ್ದಲ್ಲಿ ಮೊತ್ತವನ್ನು ಪಾವತಿಸುವವರೆಗೆ ವಾರ್ಷಿಕ ಶೇ.6ರ ಬಡ್ಡಿಯನ್ನು ನೀಡುವಂತೆ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಕೆನರಾ ಬ್ಯಾಂಕ್ ಗವನಹಳ್ಳಿ ಶಾಖೆಯ ವಿರುದ್ಧದ ಅರ್ಜಿಯನ್ನು ವಜಾಗೊಳಿಸಲಾಗಿದೆ.


ಆಯೋಗದ ಅಧ್ಯಕ್ಷರಾದ ಎನ್.ಆರ್.ಚೆನ್ನಕೇಶವ, ಸದಸ್ಯರಾದ ಈ.ಪ್ರೇಮಾ ಮತ್ತು ಡಾ.ಮಂಜುನಾಥ ಎಂ,ಬಮ್ಮನಕಟ್ಟಿ ಅವರು ಈ ತೀರ್ಪನ್ನು ಪ್ರಕಟಿಸಿದ್ದು, ಗ್ರಾಹಕರ ಹಿತರಕ್ಷಣೆ ಮಾಡಲಾಗಿದೆ. ಪ್ರಕರಣದಲ್ಲಿ ಅರ್ಜಿದಾರರ ಪರವಾಗಿ ವಕೀಲರಾದ ಹೆಚ್.ಎನ್.ಮಹೇಶ್ ಅವರು ವಾದ ಮಂಡಿಸಿದ್ದರು.

Continue Reading

Chikmagalur

ಕಾರ್ಮಿಕನನ್ನು ಬಲಿ ಪಡೆದ ನರಹಂತಕ ಕಾಡಾನೆ

Published

on

ಚಿಕ್ಕಮಗಳೂರು: ಕಾಫಿನಾಡು ಎಂದೇ ಪ್ರಸಿದ್ಧಿ ಪಡೆದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾರ್ಮಿಕನನ್ನು ಬಲಿ ಪಡೆದ ನರಹಂತಕ ಕಾಡಾನೆಯನ್ನು ಸೆರೆಹಿಡಿಯಲು ಭಾರೀ ಕಾರ್ಯಾಚರಣೆ ಆರಂಭವಾಗಿದೆ.

ಸಕ್ರೆಬೈಲು ಆನೆ ಶಿಬಿರ ನಿಂದ 5 ಸಾಕಾನೆಗಳ ವಿಶೇಷ ತಂಡವನ್ನು ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮಕ್ಕೆ ಕರೆತರಲಾಗಿದೆ.

ಸ್ಥಳದಲ್ಲಿ 3 ಕಾಡಾನೆಗಳು ಸಂಚರಿಸುತ್ತಿದ್ದು, ಅವುಗಳಲ್ಲಿ ಮಾನವ ಜೀವ ಹಾನಿ ಮಾಡಿದ ಒಂದು ಕಾಡಾನೆಯನ್ನು ಮಾತ್ರ ಸೆರೆಹಿಡಿಯಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಉಳಿದ 2 ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಅವುಗಳ ಚಲನ-ವಲನವನ್ನು ನಿಗಾ ವಹಿಸುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾರ್ಯಾಚರಣೆ ಹಲವು ದಿನಗಳವರೆಗೆ ಮುಂದುವರಿಯುವ ಸಾಧ್ಯತೆ ಇದೆ.

ಫೆ.16ರಂದು ಕಾಡಾನೆ ದಾಳಿಗೆ ಯಲ್ಲಪ್ಪ ಎಂಬ ಕಾರ್ಮಿಕರು ಮೃತಪಟ್ಟ ಘಟನೆ ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ಹುಟ್ಟಿಸಿತ್ತು. ಘಟನೆ ಬಳಿಕ ರೊಚ್ಚಿಗೆದ್ದ ಗ್ರಾಮಸ್ಥರು ಬಾಳೆಹೊನ್ನೂರು ಅರಣ್ಯ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಕ್ಷಣ ಕಾಡಾನೆಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿದ್ದರು.

ಪ್ರಸ್ತುತ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಭದ್ರತೆಯೊಂದಿಗೆ ಕಾರ್ಯಾಚರಣೆ ನಡೆಸುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ.

Continue Reading

Trending

error: Content is protected !!