Chikmagalur
ಮರುಳಸಿದ್ದೇಶ್ವರರು ಹಾಗೂ ಬಸವಣ್ಣನವರು ಒಂದೇ ಕಾಲದಲ್ಲಿ ಜೀವಿಸಿದವರು

ಚಿಕ್ಕಮಗಳೂರು: ಮನುಷ್ಯನ ಹೃದಯಾಳದಿ ಭಗವಂತನು ನೆಲೆಸಿರುವನು. ಎಲ್ಲೆಲ್ಲೋ ತೆರಳಿ ಶೋಧಿಸುವ ಮೊದಲು, ಆತ್ಮದಲ್ಲಿ ಅಡಗಿರುವ ಪರಮಾತ್ಮನೊಟ್ಟಿಗೆ ಸನ್ಮಾರ್ಗದಲ್ಲಿ ಸಾಗಿದಾಗ ಬದು ಕು ಸಾತ್ವಿಕ ರೂಪು ಪಡೆದುಕೊಳ್ಳಲಿದೆ ಎಂದು ಬಸವತತ್ವ ಪೀಠದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಲಕ್ಯಾ ಹೋಬಳಿ ಸಮೀಪ ಗಾಣದಾಳು ಗ್ರಾಮದಲ್ಲಿ ಸೋಮವಾರ ವಿಶ್ವಬಂಧು ಶ್ರೀ ಮರುಳಸಿದ್ಧೇಶ್ವರ ಸ್ವಾಮಿ ನೂತನ ದೇವಾಲಯ ಪ್ರವೇಶೋತ್ಸವ, ಕುಂಭಾಭಿಷೇಕ, ಕಳಸಾರೋಹಣ ಹಾಗೂ ಧಾರ್ಮಿಕ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಸೋಮವಾರ ಅವರು ಆರ್ಶೀವಚನ ನೀಡಿದರು.
ಭಕ್ತಾಧಿಗಳು ಮತ್ತು ಗ್ರಾಮಸ್ಥರು ದೇವಾಲಯ ನಿರ್ಮಾಣ ಅಥವಾ ಜೀರ್ಣೋದ್ದಾರಕ್ಕೆ ಮುಂದಾದರೆ ಸಾಲದು, ದೈನಂದಿನ ಪೂಜಾಕೈಂಕರ್ಯಗಳಲ್ಲಿ ತಲ್ಲೀನರಾಗಬೇಕು. ಪ್ರಾರ್ಥನೆ, ಪೂಜೆಯ ಜೊತೆಗೆ ವೈಮನಸ್ಸಿನ ಕೆಡಕನ್ನು ತೊಡೆದು, ಸದ್ಗುಣಗಳನ್ನು ಮೈಗೂಡಿಸಿಕೊಂಡು ಸಾಗಿದರೆ ದೇವಾಲಯ ನಿರ್ಮಾಣಗೊಂ ಡಿದ್ದಕ್ಕೆ ಸಾರ್ಥಕವಾದಂತೆ ಎಂದು ತಿಳಿಸಿದರು.
ಶ್ರೀ ಮರುಳಸಿದ್ದೇಶ್ವರರು ಹಾಗೂ ಬಸವಣ್ಣನವರು ಒಂದೇ ಕಾಲದಲ್ಲಿ ಜೀವಿಸಿದವರು. ಶೋಷಿತರ ಧ್ವನಿ ಯಾಗಿ ಮತ್ತು ಸಂಸ್ಕೃತಿ, ಸಂಪ್ರದಾಯದ ಅಂಕುಡೊಂಕುಗಳನ್ನು ತಿದ್ದಲು ಇಡೀ ಜೀವನವನ್ನೆ ಸಮಾಜಕ್ಕಾಗಿ ಮುಡಿಪಿಟ್ಟ ಶ್ರೇಷ್ಟ ದಾರ್ಶನಿಕರು. ಯಜ್ಞಾಧಿಗಳನ್ನು ವಿರೋಧಿಸಿ ಉತ್ತಮ ಪರಂಪರೆಯನ್ನು ಸಮಾಜಕ್ಕೆ ಧಾರೆಗೈದವರು ಎಂದು ಬಣ್ಣಿಸಿದರು.
ಎದೆಗೂಡಿನಲ್ಲಿ ಪರಮಾತ್ಮನನ್ನು ಕಾಣಲು ಮಾನವ ತನ್ನ ದೃಷ್ಟಿಕೋನ ಬದಲಿಸಿ, ಶ್ರದ್ದಾರ್ಪೂಕವಾಗಿ ಒಳಗಣ್ಣಿನಿಂದ ಪ್ರಾರ್ಥಿಸಿದರೆ, ತಾನಾಗಿಯೇ ದರ್ಶನ ಭಾಗ್ಯ ಕರುಣಿಸುವನು. ತನ್ನೊಳಗಿನ ದೇವರನ್ನು ಪೂ ಜಿಸುವ ಪರಿಯನ್ನು ಅರಿತುಕೊಳ್ಳಬೇಕು. ಈ ರೀತಿಯಲ್ಲೂ ಮರುಳಸಿದ್ದರು ತನ್ನ ವ್ಯಾಪ್ತಿಯಲ್ಲಿ ಸಕಲದೈವವು ಒಂದೆಡೆ ನೆಲೆಸಿದ್ದಾನೆ ಎಂಬ ಸಿದ್ಧಾಂತ ಸಾರಿದ್ದರು ಎಂದು ಹೇಳಿದರು.
ಗ್ರಾಮಸ್ಥರು, ದಾನಿಗಳು ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ಗಾಣದಾಳು ಶ್ರೀ ಮರುಳಸಿದ್ಧೇಶ್ವರ ಸ್ವಾಮಿಯವರ ಭವ್ಯ ಮಂದಿರ ನಿರ್ಮಾಣಗೊಂಡಿರುವುದು ಶ್ಲಾಘನೀಯ. ಆ ನಿಟ್ಟಿನಲ್ಲಿ ಗ್ರಾಮಸ್ಥರು ಮಕ್ಕ ಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸುವುದಾಗಿ ಬಾಲ್ಯದಿಂದಲೇ ದೇವಾಲಯಕ್ಕೆ ಕಳುಹಿಸುವ ಪದ್ಧತಿ ರೂಢಿಸಬೇಕು ಎಂದು ಕಿವಿಮಾತು ಹೇಳಿದರು.
ಶಾಸಕ ಹೆಚ್.ಡಿ.ತಮ್ಮಯ್ಯ ಮಾತನಾಡಿ ಶ್ರೀ ಮರುಳಸಿದ್ಧರ ಕಾಲಘಟ್ಟದಲ್ಲಿ ಆರ್ಥಿಕ ಸಮಾನತೆ, ಮಹಿ ಳೆಯರಿಗೆ ಗೌರವಿಸುವುದು, ಕಾಯಕವೇ ಕೈಲಾಸ ಎಂಬುದನ್ನು ವಚನಗಳ ಮುಖಾಂತರ ಸಾರಿ ಸಮಸಮಾ ಜಕ್ಕೆ ಹೆಜ್ಜೆಯಿಟ್ಟ ಶ್ರೇಷ್ಟರ ದೇವಾಲಯವನ್ನು ಪುಟ್ಟ ಗ್ರಾಮದಲ್ಲಿ ಪ್ರತಿಷ್ಟಾಪಿಸಿರುವ ಗ್ರಾಮಸ್ಥರ ಮನಸ್ಸು ಅ ತೀವ ದೊಡ್ಡದು ಎಂದು ಹೇಳಿದರು.
ಪ್ರಸ್ತುತ ದೇವಾಲಯ ಅಭಿವೃಧ್ದಿಗೆ ಶಾಸಕರ ನಿಧಿಯಿಂದ ೧೦ ಲಕ್ಷ ಅನುದಾನ ಪೂರೈಸುವ ಜೊತೆಗೆ ವಿವಿಧ ದಾನಿಗಳು, ಗ್ರಾಮಸ್ಥರ ಸಹಕಾರದಿಂದ ಇಂದು ವಿಜೃಂಭ್ರಮಣೆಯಿಂದ ಲೋಕಾರ್ಪಣೆಗೊಂಡಿದ್ದು ಶ್ರೀ ಮರುಳಸಿದ್ಧೇಶ್ವರ ಸ್ವಾಮಿ ಒಕ್ಕಲಿನ ಕುಟುಂಬವು ಮುಕ್ತವಾಗಿ ತೆರಳಿ ಪೂಜಾವಿಧಿವಿಧಾನ ಕೈಗೊಳ್ಳಲು ಅನುವು ಮಾಡಲಾಗಿದೆ ಎಂದರು.
ಬಸವತತ್ವ ಪೀಠವು ಕೇವಲ ಚಿಕ್ಕಮಗಳೂರು ತಾಲ್ಲೂಕಿಗೆ ಸೀಮಿತವಾಗಿತ್ತು. ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ ಗದ್ದುಗೆ ವಹಿಸಿಕೊಂಡ ಬಳಿಕ ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗದಲ್ಲೂ ಪ್ರತೀತಿ ಪಡೆ ಯುತ್ತಿದೆ. ಮುಂದೆ ಚಿಕ್ಕಮಗಳೂರಿಗೆ ಆಗಮಿಸುವವರು ಶೃಂಗೇರಿ, ರಂಭಾಪುರೀ ಮಠಗಳಿಗೆ ಭೇಟಿ ನೀ ಡಿದಂತೆ, ಬಸವತತ್ವಪೀಠಕ್ಕೆ ಭೇಟಿ ನೀಡುವಂತೆ ಅಭಿವೃದ್ದಿಪಡಿಸಲು ಮುಂದಾಗುತ್ತೇವೆ ಎಂದರು.
ಉದ್ಯಮಿ ಹಾಗೂ ದಾನಿ ಬಿ.ಎನ್.ಚಿದಾನಂದ್ ಮಾತನಾಡಿ ದೇವಾಲಯ ಅಭಿವೃಧ್ದಿ ಹಣ ಕೊಡು ವಷ್ಟು ದೊಡ್ಡವರಲ್ಲ, ಕೇವಲ ಸೇವೆಯ ದೃಷ್ಟಿಯಿಂದ ಕೆಲಸ ನಿರ್ವಹಿಸಿದ್ದೇವೆ. ಭಕ್ತಾಧಿಗಳು ಪ್ರಾರ್ಥನೆ ಹಾ ಗೂ ಆಚರಣೆಗಾಗಿ ತಾವು ಸೇರಿದಂತೆ ಅನೇಕರ ದಾನದಿಂದ ಶ್ರೀ ಮರುಳಸಿದ್ದೇಶ್ವರರ ಭವ್ಯ ಮಂದಿರ ನಿ ರ್ಮಾಣಗೊಂಡು ಲೋಕಾರ್ಪಣೆಗೊಂಡಿದೆ ಎಂದು ಹೇಳಿದರು.
ಜಿ.ಪಂ. ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಮಾತನಾಡಿ ಚಂಚಲ ಮನಸ್ಸನ್ನು ನಿಗ್ರಹಿಸಲು ದೇ ವಾಲಯ ಅತ್ಯಂತ ಪುಣ್ಯಸ್ಥಳಗಳು. ಪೂರ್ವಿಕರ ಕಾಲದಲ್ಲಿ ಹಿರಿಯರು ಹಾಕಿಕೊಟ್ಟ ಸಂಪ್ರದಾಯ ಪಾಲಿಸ ಬೇಕು. ಮೊದಲು ಸ್ಥಳೀಯ ದೇವಾಲಯ ಆದ್ಯತೆ ನೀಡಿ, ತದನಂತರ ಪ್ರಸಿದ್ಧ ದೇಗುಲಗಳಿಗೆ ತೆರುವ ಪದ್ಧ ತಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರಡಿಗವಿ ಮಠದ ಶ್ರೀ ಶಿವಶಂಕರ ಶಿವಯೋಗಿ ಸ್ವಾಮೀಜಿ, ಜಿ.ಪಂ. ಮಾಜಿ ಉಪಾ ಧ್ಯಕ್ಷ ಬಿ.ಜಿ.ಸೋಮಶೇಖರ್, ಉದ್ಯಮಿಗಳಾದ ಬಿ.ಎನ್. ರಾಜಶೇಖರ್, ಬಿ.ಎನ್.ಷಡಾಕ್ಷರಿ, ಸಾಹಿತಿ ಚಟ್ನ ಹಳ್ಳಿ ಮಹೇಶ್, ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಮಹಡಿಮನೆ ಸತೀಶ್, ಶ್ರೀ ಮರುಳಸಿದ್ದೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಜಿ.ಎಂ.ರಮೇಶ್, ಉಪಾಧ್ಯಕ್ಷ ಜಿ.ರಮೇಶ್, ಗ್ರಾಮಸ್ಥರಾದ ಚಂದ್ರಶೇಖರ್, ಮಲ್ಲಿಕಾರ್ಜುನ್, ಗಿರೀಶ್, ಎಲ್.ಆರ್.ಈಶ್ವರಪ್ಪ ಉಪಸ್ಥಿತರಿದ್ದರು.
Chikmagalur
ವಿಜೃಂಭಣೆಯಿಂದ ನಡೆದ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ರಥೋತ್ಸವ

ಜಯಪುರ : ಗುಡ್ಡೆತೋಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಕ್ಷಿಣ ತಿರುಪತಿ ಎಂದೇ ಖ್ಯಾತಿಯಾಗಿರುವ ಮೇಗೂರು ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನದ ರಥೋತ್ಸವವು ಫೆಬ್ರವರಿ 15 ಶನಿವಾರ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಲಕ್ಷ್ಮೀ ನರಸಿಂಹಮೂರ್ತಿ ಭಟ್ಟರು, ನವೀನ್ ನಾಗೇಂದ್ರ ಭಟ್ಟರು, ದೇವಸ್ಥಾನದ ಧರ್ಮದರ್ಶಿಗಳಾದ ರಘುಪತಿ ಹೆಬ್ಬಾರ್, ಸಮಿತಿಯ ಅಧ್ಯಕ್ಷರಾದ ಟಿ ಪ್ರಕಾಶ್, ಕೊಪ್ಪ ತಾಲೂಕು ತಹಸೀಲ್ದಾರರಾದ ಲಿಖಿತ ಮೋಹನ್, ಶಿರಸ್ತದಾರ್ ನಾಗರಾಜ್, ರವಿನ್ಯು ಇನ್ಸ್ಪೆಕ್ಟರ್ ವಿನಯ್ ಹಾಗೂ ಸುತ್ತಮುತ್ತಲಿನ ಸಹಸ್ರರು ಭಕ್ತಾದಿಗಳು ಭಾಗಿಯಾಗಿದ್ದರು.
ವರದಿ :- ಎಂ.ಪಿ.ಪ್ರದೀಪ್ ಹೆಬ್ಬಾರ್, ಜಯಪುರ.
Chikmagalur
ಭರತ ಖಂಡದ ಚಾರಿತ್ರಿಕ ಪುರುಷ ಸಂತ ಸೇವಾಲಾಲ್

ಚಿಕ್ಕಮಗಳೂರು: ಫೆ. ೧೫: ಭರತ ಖಂಡದ ಚಾರಿತ್ರಿಕ ಪುರುಷ ಸಂತ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು ಎಂದು ನಗರ ಸಭೆ ಅಧ್ಯಕ್ಷ್ಷೆ ಸುಜಾತ ಶಿವಕುಮಾರ್ ಹೇಳಿದರು.
ಜಿಲ್ಲಾಡಳಿತದ ವತಿಯಿಂದ ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂತ ಸೇವಾಲಾಲರು ಈಗಿನ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬೆಳಗುತ್ತಿ ಹೋಬಳಿಯ ಸೂರಗೊಂಡನ ಕೊಪ್ಪ ಎಂಬಲ್ಲಿ ಜನಿಸಿದರು. ಸೇವಾಲಾಲರು ತಮ್ಮ ಲೀಲೆಗಳ ಹಾಗೂ ಪವಾಡಗಳ ಮೂಲಕ ಜನರ ಮನಸ್ಸಿನಲ್ಲಿ ಗುರುವಿನ ಸ್ಥಾನ ಪಡೆದಿದ್ದಾರೆ, ಜೀವನದುದ್ದಕ್ಕೂ ಬ್ರಹ್ಮಚಾರಿಯಾಗಿಯೇ ಉಳಿದವರು ಎಂದ ಅವರು ತಮ್ಮ ಜೀವನದ ಅನುಭವವನ್ನು ತಮ್ಮ ತತ್ವದ ಮೂಲಕ ಜನರಲ್ಲಿನ ಅಜ್ಞಾನವನ್ನು ದೂರ ಮಾಡಿದರು. ಸತ್ಯ, ಅಹಿಂಸೆ, ದಯೆ, ಕರುಣೆಗಳನ್ನು ಪಾಲಿಸುವ ಮೂಲಕ ಧರ್ಮಾತೀತರಾಗಿ ಎಂದು ಸಾರಿದ ಮಹಾಪುರುಷ ಎಂದು ಹೇಳಿದರು.
ಬೇಲೂರು ರಸ್ತೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಕೆ. ಶ್ರೀನಿವಾಸ್ ಉಪನ್ಯಾಸ ನೀಡಿ ಮಾನವ ಜನ್ಮ ಪವಿತ್ರವಾದದ್ದು, ಇದನ್ನು ಹಾಳು ಮಾಡಿಕೊಳ್ಳಬಾರದು, ವ್ಯಸನಗಳಿಂದ ದೂರವಿರಬೇಕು. ಹರಿಷಡ್ ವರ್ಗಗಳನ್ನು ಸುಟ್ಟು ಹಾಕಿ ಪ್ರಾಮಾಣಿಕರಾಗಿ ಜೀವಿಸಿ, ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿ ಎಂದು ಸಾರಿದವರು ಸಂತ ಸೇವಾ ಲಾಲ್. ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಎಲ್ಲರಿಗೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿ ದೀಪವಾಗಿ ಎಂದು ಹೇಳಿದರಲ್ಲದೆ ಸೇವಾಲಾಲರು ತಮ್ಮ ತತ್ವಗಳ ಮೂಲಕ ಲೋಕಕ್ಕೆ ಜ್ಞಾನದ ಮುಕ್ತಿ ಮಾರ್ಗ ತೋರಿಸಿದರು. ಸರ್ವರನ್ನು ಒಳಗೊಂಡ ಸಮ ಸಮಾಜದ ನಿರ್ಮಾಣ ಹಾಗೂ ಸರ್ವರಲ್ಲೂ ಸೋದರತೆಯ ಭಾವನೆಯನ್ನು ಮೂಡಿಸಲು ಪ್ರೇರೇಪಿಸಿದರು ಎಂದರು.
ಮಹಾನೀಯರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಂಡು ಮುನ್ನಡೆದಾಗ ಮಾತ್ರ ನಾವು ಇತರರಿಗೆ ಮಾದರಿಯಾಗಲು ಸಾಧ್ಯ, ತಮ್ಮ ಲೀಲೆಗಳನ್ನು ಪ್ರದರ್ಶನ ಮಾಡುತ್ತಾ, ಜನದಂಬೆಯ ಆರಾಧಕರಾಗಿ ಇಡೀ ಜೀವಮಾನದುದ್ದಕ್ಕೂ ಬ್ರಹ್ಮಚರ್ಯವನ್ನೇ ಪಾಲನೆ ಮಾಡಿದ ಸಂತ ಸೇವಾಲಾಲರು, ಇಂದಿಗೂ ಜನ ಮಾನಸದಲ್ಲಿ ಗುರುವಿನ ಸ್ಥಾನವನ್ನು ಪಡೆದಿದ್ದಾರೆ. ಜನತೆಗೆ ವ್ಯಸನ ಮುಕ್ತರಾಗಿ ಎಂದು ಬೋಧಿಸಿದ ಸೇವಾಲಾಲರು ಸತ್ಯ, ಅಹಿಂಸೆ, ತ್ಯಾಗ ಮನೋಭಾವದ ನೀತಿಮಾತು ಹೇಳಿದ್ದಾರೆ. ಲಂಬಾಣಿ ಸಮುದಾಯ ಸಾವಿರಾರು ವರ್ಷಗಳಿಂದ ನಗರ ಮತ್ತು ಗ್ರಾಮೀಣ ಜೀವನಗಳಿಂದ ದೂರವಿದ್ದು, ಅರಣ್ಯ ವಾಸಿಗಳಾಗಿ ಜೀವನ ಸಾಗಿಸುತ್ತಿದ್ದರು. ಇವರಲ್ಲಿನ ಅಜ್ಞಾನ ಅಂಧಕಾರಗಳನ್ನು ದೂರ ಮಾಡಿ ಜ್ಞಾನ ಮಾರ್ಗ ತೋರಿದ ಸೇವಾಲಾಲರನ್ನು ಬಂಜಾರರು ಮೋತಿವಾಳು ಅಥವಾ ಲಾಲ ಮೋತಿ ಎಂದು ಕರೆಯುತ್ತಿದ್ದರು. ಮುಂಬೈಯ ಸ್ಮಿತ್ ಭಾವುಚಾ ಎಂಬಲ್ಲಿ ಪೋರ್ಚುಗೀಸರ ಹಡಗು ಸಿಕ್ಕಿಹಾಕಿಕೊಂಡಾಗ ಅದನ್ನು ತಮ್ಮ ಜಾಣತನದಿಂದ ದಡ ಸೇರಿಸಿದ ಸೇವಾಲಾಲರಿಗೆ ಪೋರ್ಚುಗೀಸರು ಮುತ್ತಿನ ಹಾರವನ್ನು ಕಾಣಿಕೆಯಾಗಿ ನೀಡಿದ್ದರು. ಆದ್ದರಿಂದಲೇ ಇವರನ್ನು ಮೋತಿವಾಳೋ ಎಂದು ಕರೆಯುತ್ತಿದ್ದರು ಎಂದು ಹೇಳಿದರು
ಉಪತಹಶಿಲ್ದಾರ್ ರಾಮ್ ರಾವ್ ದೇಸಾಯಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸೇವಾಲಾಲ್ ಒಬ್ಬ ದನಕಾಯುವ ಗೋಪಾಲಕನಾಗಿ ತಮ್ಮ ಜೀವನದ ಅನುಭವವನ್ನು ತಮ್ಮ ತತ್ವದ ಮೂಲಕ ಜನರಲ್ಲಿನ ಅಜ್ಞಾನವನ್ನು ದೂರ ಮಾಡಿದರು. ಸತ್ಯ, ಅಹಿಂಸೆ, ದಯೆ, ಕರುಣೆಗಳನ್ನು ಪಾಲಿಸುವ ಮೂಲಕ ಧರ್ಮಾತೀತರಾಗಿ ಎಂದು ಸಾರಿದವರು ಎಂದು ತಿಳಿಸಿದರು.
ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಎಲ್ಲರೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿ ದೀಪವಾಗಿ ಎಂದು ಹೇಳಿದರು. ಸೇವಾ ಲಾಲರು ತಮ್ಮ ತತ್ವಗಳ ಮೂಲಕ ಲೋಕಕ್ಕೆ ಜ್ಞಾನದ ಮೂಲಕ ಮುಕ್ತಿ ಮಾರ್ಗ ತೋರಿಸಿದರು. ಸರ್ವರನ್ನು ಒಳಗೊಂಡ ಸಮ ಸಮಾಜದ ನಿರ್ಮಾಣ ಹಾಗೂ ಸರ್ವರಲ್ಲೂ ಸೋದರತೆಯ ಭಾವನೆಯನ್ನು ಮೂಡಲು ಪ್ರೇರೇಪಿಸಿದರು. ತನ್ನ ಸಮಾಜದ ಜನರ ಕಷ್ಟಕ್ಕಾಗಿ ತಮ್ಮ ಪ್ರಾಣಾರ್ಪಣೆಗೂ ಸಿದ್ದರಾಗಿದ್ದರು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್,ಎಲ್ಲರನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯೆ ಲಲಿತಾ ರವಿನಾಯ್ಕ್, ಸಂತ ನೇವಾಲಾಲ್ ಬಂಜಾರ ಅಭಿವೃದ್ಧಿ ಸಂಘದ ಅಧ್ಯಕ್ಷ ಗಂಗಾಧರ್ ನಾಯ್ಕ್, ಶ್ರೀ ರಾಮ್ ನಾಯ್ಕ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಸಮಿತಿ ಸದಸ್ಯ ಲಕ್ಷ್ಮಣ್ ಹೆಚ್,ಎಸ್,ಬಂಜಾರ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
Chikmagalur
ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ; ಕಿಟಕಿ ಗಾಜು ಪುಡಿಪುಡಿ

ಚಿಕ್ಕಮಗಳೂರು: ಕಿಡಿಗೇಡಿಗಳ ಗುಂಪು ಹಿಂದೂ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ಕಲ್ಲುತೂರಾಟ ನಡೆಸಿರುವ ಘಟನೆ ನಗರದ ವಿಜಯಪುರ ಬಡಾವಣೆಯಲ್ಲಿ ಕಳೆದ ರಾತ್ರಿ ನಡೆದಿದೆ. ಕಿಡಿಗೇಡಿಗಳ ಗುಂಪೊಂದು ತಡರಾತ್ರಿ ಮಹೇಶ್ ಎಂಬುವವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದೆ. ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ.
ಕಲ್ಲು ತೂರಾಟ ನಡೆಸಿ, ಘೋಷಣೆಗಳನ್ನು ಕೂಗಿ ಯುವಕರು ಎಸ್ಕೆಪ್ ಆಗಿದ್ದಾರೆ. ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಸವನಹಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಡಿಗೇಡಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಚಿಕ್ಕಮಗಳೂಎರು ಎಸ್ ಪಿ ವಿಕ್ರಂ ಅಮಟೆ ಆಯ್ಕೆ, ರಾತ್ರಿ ಮನೆಯೊಂದರ ಮೇಲೆ ಕಿಡಿಗೇಡುಗಳು ಕಲ್ಲು ತೂರಾಟ ನಡೆಸಿ, ಪರಾರಿಯಾಗಿದ್ದಾರೆ. ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯಗಳನ್ನು ಆಧರಿಸಿ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
-
Mysore19 hours ago
ಲೋಕಾಯುಕ್ತ ಬಲೆಗೆ ಬಿದ್ದ ಬೆಟ್ಟದಪುರ ಸಬ್ ಇನ್ಸ್ಪೆಕ್ಟರ್ ಶಿವಶಂಕರ್
-
Kodagu20 hours ago
ಸುಗ್ರಿವಾಜ್ಞೆ ಅನುಷ್ಠಾನಕ್ಕೂ ಮೊದಲು ಬಡವರ ಸಾಲಮನ್ನಾ ಮಾಡಲಿ: ಯುವ ಜೆಡಿಎಸ್ ಆಗ್ರಹ
-
Kodagu23 hours ago
ಯುವ ಕಾಂಗ್ರೆಸ್ಗೆ ನೀಡಿದ್ದ ರಾಜೀನಾಮೆ ಹಿಂಪಡೆದ ಅನೂಪ್ ಕುಮಾರ್
-
Mysore19 hours ago
ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಆಡಳಿತದಲ್ಲಿ ಬಳಕೆ ಮಾಡಬೇಕು: ಪುರುಷೋತ್ತಮ ಬಿಳಿಮಲೆ
-
Mandya20 hours ago
ಮತ್ತತ್ತಿ: ಕಾವೇರಿ ನದಿಯಲ್ಲಿ ಮುಳುಗಿ ಯುವತಿಯರು ಸಾ**ವು
-
Mandya21 hours ago
ಸಕ್ಕರೆ ಕಾರ್ಖಾನೆಗಳು ರೈತರಿಗೆ 14 ದಿನದೊಳಗಾಗಿ ಹಣ ಪಾವತಿ ಮಾಡಿ: ಡಾ.ಕುಮಾರ
-
Tech13 hours ago
ಅತ್ಯಂತ ಶಕ್ತಿಶಾಲಿ ಕ್ಯಾಮೆರಾ ಹೊಂದಿರುವ ಮಧ್ಯಮ ಬೆಲೆಯ ವಿವೋ ಕಂಪನಿಯ Vivo V50 ಹೊಸ ಫೋನ್ ಬಿಡುಗಡೆ : ಬೆಲೆ ಎಷ್ಟು?
-
Hassan17 hours ago
ಹಾಸನ ವಿಮಾನ ನಿಲ್ದಾಣದ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇವೆ: ಎಚ್ಡಿ ಕುಮಾರಸ್ವಾಮಿ