Hassan
ಬಿಜೆಪಿ ಶಾಸಕರ ಅಮಾನತು ಖಂಡಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ಹಾಸನ: ವಿಧಾನಸಭೆಯಿಂದ ಬಿಜೆಪಿಯ ೧೮ ಶಾಸಕರ ಅಮಾನತು ಹಾಗೂ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಅನುದಾನ ದುರ್ಬಳಕೆ ಖಂಡಿಸಿ ಗುರುವಾರ ಕಾಂಗ್ರೆಸ್ ವಿರುದ್ಧ ಜಿಲ್ಲಾ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಿ ಅಮಾನತು ವಾಪಸ್ ಪಡೆಯುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು.
ನಗರದ ಆರ್.ಸಿ. ರಸ್ತೆ ಬಳಿ ಇರುವ ಬಿಜೆಪಿ ಕಛೇರಿ ಬಳಿಯಿಂದ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಶಾಸಕ ಹಾಗೂ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು ಮಾತನಾಡಿ, ವಿಧಾನ ಸಭೆಯಲ್ಲಿ ಸಣ್ಣ ಕಾರಣಕ್ಕೆ ೧೮ ಜನ ಶಾಸಕರನ್ನು ರಾಜಕೀಯ ದುರುದ್ದೇಶದಿಂದ ೬ ತಿಂಗಳ ಕಾಲ ಅವರನ್ನು ಅಮಾನತು ಮಾಡಿ ಸ್ಪೀಕರ್ ಆದೇಶ ಹೊರಡಿಸಿರುವುದು ಖಂಡನೀಯ, ಇದೊಂದು ರಾಜಕೀಯ ಪಿತೂರಿಯಾಗಿದೆ ಕೂಡಲೇ ಅಮಾನತು ಆದೇಶವನ್ನು ಹಿಂಪಡೆದು ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಸ್ಪೀಕರ್ ಮುಂದಾಗಬೇಕು ಎಂದರು.
ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ, ಧರ್ಮದ ಮೇಲೆ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರಕಾರ ಸಂವಿಧಾನದ ನೀತಿ ವಿರೋಧಿಸಿ ಗುತ್ತಿಗೆಯಲ್ಲಿ ಮುಸಲ್ಮಾನರಿಗೆ ಶೇ.೪ ರಷ್ಟು ಮೀಸಲಾತಿ ನೀಡಲು ಮುಂದಾಗಿದೆ ಅಲ್ಲದೆ, ಪ.ಜಾತಿ, ಪ.ಪಂಗಡಕ್ಕೆ ಮೀಸಲಿಟ್ಟಿದ್ದ ೨೯ ಸಾವಿರ ಕೋಟಿ ಹಣವನ್ನು ದುರ್ಬಳಕೆ ಮಾಡಿ ದಲಿತರಿಗೆ ಸೇರಬೇಕಿದ್ದ ಪಾಲನ್ನು ಇತರ ಕಾರ್ಯಕ್ರಮಗಳಿಗೆ ಬಳಸಿಕೊಂಡಿದೆ, ಜೊತೆಗೆ ರಾಜ್ಯದಲ್ಲಿ ಯಾವುದೇ ಹೊಸ ಕಾರ್ಯಕ್ರಮಗಳು ಹಾಗೂ ಹೊಸ ಯೋಜನಗಳು ಜಾರಿಗೆ ಬರುತ್ತಿಲ್ಲ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಅಧಿವೇಶನದಲ್ಲಿ ಸಚಿವ ಕೆ. ಎನ್ ರಾಜಣ್ಣ ತಮ್ಮದೇ ಸರ್ಕಾರದ ವಿರುದ್ಧ ಹನಿಟ್ರಾಪ್ ಆರೋಪ ಮಾಡಿದ್ದು ಸರ್ಕಾರ ಯಾರು ಎಂಬುದನ್ನು ಪತ್ತೆ ಹಚ್ಚಿ ಅವರನ್ನು ವಜಾ ಮಾಡುವ ಕೆಲಸ ಮಾಡಬೇಕಿದೆ. ಕೇವಲ ಭ್ರಷ್ಟಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರದ ಕಿರುಕುಳದಿಂದ ಹಲವು ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಕಂಡು ಬರುತ್ತಿವೆ. ಕೂಡಲೇ ಸರ್ಕಾರ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಡಿಸಿಎಂ ದಿಕೆ ಶಿವಕುಮಾರ್ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಹುಡಾ ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ ಮಾತನಾಡಿ, ದಲಿತರ ಹಣವನ್ನು ಗ್ಯಾರಂಟಿ ಯೋಜನೆಗೆ ಉಪಯೋಗಿಸಿಕೊಂಡು ಈ ಜನಾಂಗಕ್ಕೆ ಮೋಸ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಅಟಾಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ಧಿ ಸಹ ಸಂಚಾಲಕ ಪಣೀಶ್, ಬಿಜೆಪಿ ಸಂಘಟನಾ ಪರ್ವ ಜಿಲ್ಲಾ ಸಂಚಾಲಕ ರಾಜಕುಮಾರ್, ನಾರಾಯಣಗೌಡ, ಎಸ್.ಡಿ. ಚಂದ್ರು, ಚನ್ನಕೇಶವ, ಶೋಭನ್ ಬಾಬು, ಶೇಷಮ್ಮ, ಕುಮಾರ್, ರಘು, ಕೆ.ಕೆ. ಪ್ರಸಾದ್ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.
Hassan
ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ಎಟಿಆರ್ ರಾಜಿನಾಮೆ: ಪತ್ರ ವೈರಲ್

ಹಾಸನ: ರಾಜಕೀಯ ದಿಂದ ದೂರ ಸರಿದ್ರಾ ಹಿರಿಯ ರಾಜಕಾರಣಿ ಎಟಿ ರಾಮಸ್ವಾಮಿ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾದ ಪತ್ರ ವೈರಲ್ ಆಗಿದೆ.
ಏಪ್ರಿಲ್ 15 ರಂದೇ ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರಗೆ ಬರೆದಿರೊ ಪತ್ರ ಎಂದು ಹೇಳಲಾಗುತ್ತಿರುವ ಈ ಪತ್ರದಲ್ಲಿಪರಿಸರ ಉಳಿವಿಗಾಗಿ ತೊಡಗಿಸಿಕೊಳ್ಳೋದಾಗಿ ಉಲ್ಲೇಖಿಸಿ ರಾಜಿನಾಮೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಹವಾಮಾನ ವೈಪರಿತ್ಯದಿಂದ ನೆರೆ ಬರ, ಭೂ ಕಂಪ ಸೃಷ್ಟಿ ಆಗುತ್ತಿದೆ. ಕುಡಿಯುವ ನೀರು, ಉಸಿರಾಡುವ ಗಾಳಿ, ಸೇವಿಸುವ ಅಹಾರ ವಿಷಪೂರಿತವಾಗಿದೆ. ಬೆಟ್ಟಗುಡ್ಡ ಅರಣ್ಯ ನಾಶದಿಂದ ನದಿ ತೊರೆ ಗಳು ಬತ್ತಿ ಹೋಗಿವೆ. ಈ ಹೊತ್ತಿನಲ್ಲಿ ರಾಜಕಾರಣ ಕ್ಕಿಂತ ಪರಿಸರ ದ ಉಳಿವು ಮುಖ್ಯವಾಗಿದೆ. ನಾನು ಪರಿಸರದ ಸಂರಕ್ಷಣೆಯಲ್ಲಿ ನನ್ನ ಸಂಪೂರ್ಣ ಸಮಯ ತೊಡಗಿಸಿಕೊಳ್ಳಬೇಕೆಂದಿದ್ದೇನೆ ಎಂದು ಉಲ್ಲೇಖಿಸಲಾಗಿದೆ.
ಈಗಾಗಲೆ ಪರಿಸರಕ್ಕಾಗಿ ನಾವು ಸಂಘಟನೆಯಲ್ಲಿ ರಾಜ್ಯಾದ್ಯಕ್ಷ ಹುದ್ದೆ ಅಲಂಕರಿಸಿರೊ ಎಟಿ ರಾಮಸ್ವಾಮಿ. ರಾಜ್ಯಮಟ್ಟದ ಹಲವು ಸಾಹಿತಿ ಚಿಂತಕರುಣ ಸ್ವಾಮಿಜಿಗಳು ಹೋರಾಟಗಾರ ರ ನೇತೃತ್ವದಲ್ಲಿ ಉದಯಿಸಿರೊ ಸಂಘಟನೆ ರಾಜಕೀಯದಲ್ಲಿ ಸಕ್ರಿಯರಾಗಿರೋರಿಗೆ ಸಂಘಟನೆಯಲ್ಲಿ ಅವಕಾಶ ಇಲ್ಲದ ಹಿನ್ನೆಲೆ ಸಕ್ರಿಯ ರಾಜಕಾರಣದಿಂದ ದೂರ ಸರಿದು ಪರಿಸರ ಸಂರಕ್ಷಣೆ ಯಲ್ಲಿ ತೊಡಗಿಕೊಳ್ಳಲು ತೀರ್ಮಾನ ಮಾಡಿರೊ ಬಗ್ಗೆ ಮಾಹಿತಿ ಇದ್ದು, ಹಾಗಾಗಿಯೇ ಬಿಜೆಪಿ ಪಕ್ಷ ತೊರೆದಿದ್ದಾರೆ ಎಂದು ಹೇಳಲಾಗುತ್ತಿದೆ.
ನಾಲ್ಕು ಬಾರಿ ಶಾಸಕರಾಗಿ ವಿಧಾನಸಬೆಗೆ ಆಯ್ಕೆಯಾಗಿದ್ದ ಎಟಿಆರ್, ಕಳೆದ ವಿಧಾನಸಭೆ ಚುನಾವಣೆ ಹಾಲಿ ಶಾಸಕರಾಗಿದ್ದರೂ ಟಿಕೇಟ್ ನೀಡದ ಜೆಡಿಎಸ್. ಇದರಿಂದ ಮನನೊಂದು ಬಿಜೆಪಿ ಸೇರಿದ್ದ ಎಟಿ ಆರ್, ಕಾಂಗ್ರೆಸ್ ನಿಂದ ಎರಡುಬಾರಿ ಜೆಡಿಎಸ್ ನಿಂದ ಎರಡುಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಎಟಿ ರಾಮಸ್ವಾಮಿ. ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದದಿಂದ ಆಯ್ಕೆಯಾಗಿದ್ದ ಎಟಿಆರ್, 2023 ರಿಂದಲೂ ರಾಜಕೀಯ ದಿಂದ ಅಂತರ ಕಾಯ್ದುಕೊಂಡಿದ್ದರು.
Hassan
ಮೇಲ್ಸೇತುವೆ ಮುಂದಿನ ಮಾರ್ಚ್ಗೆ ಪೂರ್ಣ: ಸಂಸದ ಶ್ರೇಯಸ್ ಪಟೇಲ್

ಹಾಸನ: ನಗರದ ಹೊಸ ಬಸ್ ನಿಲ್ದಾಣದ ಎದುರಿನ ರೈಲ್ವೆ ಮೇಲ್ಸೇತುವೆ 2ನೇ ಹಂತದ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, 2026ರ ಫೆಬ್ರವರಿ ಇಲ್ಲವೇ ಮಾರ್ಚ್ ವೇಳೆಗೆ ಮುಗಿಸಲಾಗುವುದು ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.
ಶನಿವಾರದಂದು ನಗರದ ಎನ್.ಆರ್. ವೃತ್ತದಿಂದ ಹೊಸ ಬಸ್ ನಿಲ್ದಾಣದವರೆಗೂ ನಿಮಾಣ ಹಂತದಲ್ಲಿರುವ ಮೇಲ್ಸೇತುವೆ ಮೇಲೆ ತೆರಳಿ ಎಲ್ಲೆಲ್ಲಿ ಕಾಮಗಾರಿ ಆಗಬೇಕು ಎಂಬುವರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಹಲವು ಕಾರಣಗಳಿಂದಾಗಿ ಕೆಲ ವರ್ಷಗಳಿಂದ ಕಾಮಗಾರಿ ನಿಂತಿತ್ತು. ಇದೀಗ ತಮ್ಮ ತಮ್ಮ ಪಾಲಿನ ಅನುದಾನ ನೀಡಲು ಸಮ್ಮತಿಸಿವೆ. ಹೀಗಾಗಿ ಈಗಾಗಲೇ ಶುರುವಾಗಿರುವ ಕಾಮಗಾರಿಯನ್ನು ಕಾಲಮಿತಿಯಲ್ಲಿ ಮುಗಿಸುವಂತೆ ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚಿಸಿ, ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬ ಆಗಬಾರದು ಎಂದು ಸೂಚನೆ ನೀಡಲಾಗಿದೆ ಎಂದರು. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ವರ್ಷದ ಮಾರ್ಚ್ ವೇಳೆಗೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದರು.
ಈ ಯೋಜನೆಯ ಒಟ್ಟು ಅಂದಾಜು ವೆಚ್ಚ ೮೩.೭೨ ಕೋಟಿ. ಇದರಲ್ಲಿ ರಾಜ್ಯದ ಪಾಲು ೪೯.೫೪ ಕೋಟಿ ನೀಡಬೇಕಿದೆ. ಈಗ ೨೧.೮೧ ಕೋಟಿ ರೂ. ನೀಡುವುದಾಗಿ ಸರ್ಕಾರ ಹೇಳಿದ್ದು, ಹೆಚ್ಎಂಆರ್ಡಿಸಿ ಅಡಿ ೧೫ ಕೋಟಿ ನೀಡಲಾಗಿದೆ. ಅನುದಾನಕ್ಕೆ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಮೇಲ್ಸೇತುವೆ ಮೇಲಿನ ಕಬ್ಬಿಣದ ಬೃಹತ್ ಕಮಾನು ನಿರ್ಮಾಣ ಹೈದ್ರಾಬಾದ್ನಲ್ಲಿ ಆಗಲಿದೆ, ಅದಕ್ಕಾಗಿ ೮ ತಿಂಗಳು ಸಮಯಾವಕಾಶ ಬೇಕಿದೆ. ಅಲ್ಲೀವರೆಗೂ ಸಿವಿಲ್ ವರ್ಕ್ ಸೇರಿ ಉಳಿದ ಕಾಮಗಾರಿ ನಡೆಯಲಿವೆ ಎಂದರು. ಉಸುಮಾರು ಈ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಕೇಂದ್ರ ಸಹ ತನ್ನ ಪಾಲಿನ ಅನುದಾನ ನೀಡಲು ಒಪ್ಪಿದೆ. ಹೀಗಾಗಿ ಮೇಲ್ಸೇತುವೆ ಕಾಮಗಾರಿ ಇನ್ನು ಮಂದೆ ಯಾವುದೇ ಅಡೆ-ತಡೆ ಇಲ್ಲದೆ ಮುನ್ನಡೆಯಲಿದೆ ಎಂದರು. ಎರಡೂ ಬದಿಯ ನಾಲ್ಕು ಪಥದ ಮೇಲ್ಸೇತುವೆ ನಿರ್ಮಾಣ ಆದರೆ ವಾಹನ ಸಮಸ್ಯೆ ನಿವಾರಣೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Hassan
ಯಾವ ಸಮಾಜವನ್ನು ಒಡೆದಾಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿಲ್ಲ: ಸಂಸದ ಶ್ರೇಯಸ್ ಪಟೇಲ್

ಹಾಸನ : ನಮ್ಮದು ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಡುವ ಪಕ್ಷ ಹಾಗಾಗಿ ಇದರ ಬಗ್ಗೆ ಜವಾಬ್ದಾರಿಯುತ ತೀರ್ಮಾನವನ್ನು ಸರ್ಕಾರದ ಮುಖ್ಯಮಂತ್ರಿಗಳು ತೆಗೆದುಕೊಳ್ಳುತ್ತಾರೆ ಎಂದು ಭಾವಿಸಿದ್ದೇವೆ. ಎಲ್ಲಾ ಸಮಾಜವನ್ನು ಸಮವಾಗಿ ನೋಡಿ ಜಾತಿಗಣತಿಯಲ್ಲಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಜಾತಿಗಣತಿ ವರದಿ ಗೊಂದಲ ವಿಚಾರ ಹಾಸನದಲ್ಲಿ ಸಂಸದ ಶ್ರೇಯಸ್ಪಟೇಲ್ ಹೇಳಿಕೆ ನೀಡಿದರು.
ಮೊನ್ನೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಪರಾಮರ್ಶಿಸಿ ತೀರ್ಮಾನ ತೆಗೆದುಕೊಳ್ಳುಬೇಕೆಂದು ಒತ್ತಾಯಿಸಿದ್ದಾರೆ. ಸಚಿವರ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ತೆಗೆದುಕೊಂಡಿದ್ದಾರೆ. ಯಾವುದೇ ಸಮಾಜಕ್ಕೆ ಅನ್ಯಾಯವಾಗುವ ಕೆಲಸವನ್ನು ನಮ್ಮ ಪಕ್ಷ ಮಾಡಲ್ಲ. ಯಾವ ಸಮಾಜವನ್ನು ಒಡೆದಾಡಿಸುವ ಕೆಲಸವನ್ನು ನಮ್ಮ ಸಮಾಜ ಮಾಡಿಲ್ಲ, ಮಾಡುವುದಿಲ್ಲ. ಜನಸ್ನೇಹಿಯಾಗಿ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ. 2015 ರಲ್ಲಿ ಜಾತಿಗಣತಿ ನಡೆದಿತ್ತು, ಎಲ್ಲರ ಬೇಡಿಕೆ ಇತ್ತು ಜಾತಿಗಣತಿಗಾಗಿ ಕೋಟ್ಯಾಂತರ ರೂ ವೆಚ್ಚ ಮಾಡಿದ್ದಾರೆ. ಈಗೀನ ವರದಿಯ ನೈಜತೆಯನ್ನು, ಸತ್ಯಾಸತ್ಯತೆಯನ್ನು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರದಿಯನ್ನು ಇನ್ನೂ ಮಂಡಿಸಿಲ್ಲ, ವರದಿ ಹೊರಗೆ ಬಂದ ಮೇಲೆ ಗೊತ್ತಾಗುತ್ತೆ. ಇನ್ನೂ ಯಾರಿಗೂ ವರದಿಯಲ್ಲಿದೆ ಎಂದು ಗೊತ್ತಿಲ್ಲ.
ಬಿಜೆಪಿ ಸರ್ಕಾರ ಕೆಡವಲು ಯತ್ನಿಸುತ್ತಿದೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರ ಯಾವಾಗಲೂ ಆ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವುದೇ ವಿರೋಧ ಪಕ್ಷಗಳ ಗುರಿ ಎಲ್ಲರಿಗೂ ಅಧಿಕಾರದ ಆಸೆ ಇರುತ್ತೆ ನಮಗೂ ಆಸೆ ಇದೆ, ಆದರೆ ಸಿದ್ಧಾಂತ ಇದೆ, ಜನಸೇವೆ ಮಾಡಲು ನಾವು ಬಂದಿದ್ದೇವೆ. ಅಧಿಕಾರದ ದುರಾಸೆಗೋಸ್ಕರ ಈ ಕೆಲಸ ಮಾಡಬಹುದು.ನಾವು ಎಚ್ಚರಿಕೆಯಿಂದ ಇರಬೇಕು. ನಮ್ಮಲ್ಲಿ ಒಗ್ಗಟ್ಟಿದೆ, ಒಗ್ಗಟ್ಟು ಎಂದರೆ ಕಾಂಗ್ರೆಸ್ ಪಕ್ಷ ಎಂದು ಹೇಳಿದರು.
ಸಿಇಟಿ ಪರೀಕ್ಷೆಗೆ ಹೋಗುವ ವೇಳೆ ಜನಿವಾರ ತೆಗೆಸಿದ ವಿಚಾರವಾಗಿ ಮಾತನಾಡಿ, ಅದನ್ನು ನಾನು ಖಂಡಿತವಾಗಿ ವಿರೋಧಿಸುತ್ತೇನೆ, ಆ ತರ ಮಾಡಬಾರದು. ನಾನು ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಒಬ್ಬ ಸಾರ್ವಜನಿಕನಾಗಿ ಹೇಳುತ್ತಿದ್ದೇನೆ. ಅವರವರ ಆಚರಣೆಗಳು, ಅವರವರ ವೈಯುಕ್ತಿಕ. ಜನಿವಾರ ತೆಗೆದು ಹೋಗಿ ಎನ್ನುವುದು ಅಪರಾಧ. ನಾನಂತು ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು.
-
Chamarajanagar22 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore20 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Hassan24 hours ago
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ
-
Kodagu20 hours ago
ಹುಲಿ ದಾಳಿಗೆ ಕರು ಬಲಿ
-
Kodagu23 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Mysore21 hours ago
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ
-
Hassan6 hours ago
ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾ*ವು
-
Kodagu6 hours ago
ಎ.ಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿ – ಬೆಂಗಳೂರು ಕೊಡವ ಸಮಾಜ ಸಿಎಂಗೆ ಮನವಿ