Connect with us

State

SBI ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಬೃಹತ್ ನೇಮಕಾತಿ : ಪದವಿ ಓದುತ್ತಿರುವವರು ಕೂಡ ಅರ್ಜಿ ಸಲ್ಲಿಸಬಹುದು

Published

on

SBI Bank Junior Associates Recruitment 2025 : ಭಾರತ ದೇಶದ ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾಗಿರುವಂತಹ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದಾರೆ .

ವಿಶೇಷತೆ ಏನೆಂದರೆ, ಸದ್ಯಕ್ಕೆ ಅಂತಿಮ ಸೆಮಿಸ್ಟರ್ನಲ್ಲಿ ಪದವಿ ಶಿಕ್ಷಣ ಓದುತ್ತಿರುವ ಅಭ್ಯರ್ಥಿಗಳು ಕೂಡ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ನೇಮಕಾತಿಯ ವಿವರ : ಭಾರತ ದೇಶಾದ್ಯಂತ ವಿವಿಧ ರಾಜ್ಯಗಳ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವಂತಹ ಒಟ್ಟು 5,180 ಹುದ್ದೆಗಳನ್ನು ಈ ನೇಮಕಾತಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಅಭ್ಯರ್ಥಿಗಳು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು?

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಮುಗಿಸಿದಂತಹ ಅಥವಾ ಅಂತಿಮ ಸೆಮಿಸ್ಟರ್ ನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ವಯೋಮಿತಿ ನೋಡುವುದಾದರೆ 20 ರಿಂದ 28 ವರ್ಷದ ಒಳಗಿನ ಅಭ್ಯರ್ಥಿಗಳಾಗಿರಬೇಕು. ನೀವು ಮೀಸಲಾತಿ ವರ್ಗಕ್ಕೆ ಸೇರಿದವರಾದರೆ ನಿಮಗೆ ಗರಿಷ್ಠ ವಯೋಮಿತಿಯಲ್ಲಿ ಸಡಲಿಕೆ ನೀಡಲಾಗುವುದು.

ಆಯ್ಕೆಯಾದವರಿಗೆ ಮಾಸಿಕ ವೇತನ ಎಷ್ಟು?

ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವು 24,050ರೂ. ಯಿಂದ 64,480ರೂ. ವರೆಗೆ ಸಿಗಲಿದೆ.

ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿದ ಅರ್ಜಿ ಶುಲ್ಕ :

• ಸಾಮಾನ್ಯ,ಹಿಂದುಳಿದ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – 750ರೂ.
• ಉಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 26, 2025

ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ – https://sbi.co.in/web/careers

Continue Reading

State

ಕಮಿಷನ್‌ಗಾಗಿ ಡೀಲ್ ಆರೋಪದ ಆಡಿಯೋ ವೈರಲ್‌: ಗುತ್ತಿಗೆದಾರ ಸಂಘದ ಗೌರವಾಧ್ಯಕ್ಷ ಬಿ.ಜಗನ್ನಾಥ್ ಅಮಾನತು

Published

on

ಬೆಂಗಳೂರು:  ರಾಜ್ಯ ಗುತ್ತಿಗೆದಾರರ ಸಂಘದಲ್ಲಿಯೇ ಕಮಿಷನ್‌ಗಾಗಿ ಡೀಲ್ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು,  ಈ ಬಗ್ಗೆ ಆಡಿಯೋ ವೈರಲ್ ಆದ ಬೆನ್ನಲ್ಲೆ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಬಿ.ಜಗನ್ನಾಥ್  ಅವರನ್ನು ಅಮಾನತು ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ರಾಜ್ಯ ಗುತ್ತಿಗೆದಾರರ ಸಂಘದ ನಿರ್ದೇಶಕ ಮಂಡಳಿ ಗೌರವಾಧ್ಯಕ್ಷ ಬಿ.ಜಗನ್ನಾಥ್ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್  ಮಾತನಾಡಿರುವ ಆಡಿಯೋ ವೈರಲ್ ಆಗಿತ್ತು.  ಟೆಂಡರ್ ಪ್ರಕ್ರಿಯೆ ಬಿಡ್ ಗಾಗಿ ಸಣ್ಣ ಗುತ್ತಿಗೆದಾರರಿಂದ 3 ಪರ್ಸೆಂಟ್ ವರೆಗೂ ಕಮಿಷನ್ ಗೆ ಬೇಡಿಕೆ ಇಡುತ್ತಿದ್ದರು ಎಂಬ ಆಂಶ ಬಯಲಾಗಿದೆ. ಈ ಹಿನ್ನೆಲೆಯಲ್ಲಿ  ಜಗನ್ನಾಥ್ ಅವರನ್ನು ಅಮಾನತು ಮಾಡಲಾಗಿದೆ ಎಂಬ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗುತ್ತಿದೆ.

Continue Reading

Politics

ವಿಬಿ ಜಿ ರಾಮ್‌ಜಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡನೆ: ಸಿಎಂ ಹೇಳಿಕೆಗೆ ಸದನದಲ್ಲಿ ಭಾರೀ ಗದ್ದಲ

Published

on

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ವಿಬಿ ಜಿ ರಾಮ್‌ಜಿ ಕಾಯ್ದೆವಿಚಾರದ ಬಗ್ಗೆ  ಆಡಳಿತ ಹಾಗೂ ವಿರೋಧ ಪಕ್ಷಗಳ ಮಧ್ಯೆ ಕಿಚ್ಚು ಹಚ್ಚಿತ್ತು. ಸಿಎಂ ಸಿದ್ದರಾಮಯ್ಯ ಅವರು ವಿಬಿ-ಜಿರಾಮ್‌ಜಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡನೆ ವೇಳೆ ವಿಪಕ್ಷ ಸದಸ್ಯರು ತೀವ್ರವಾಗಿ ಖಂಡಿಸಿದ್ದರಿಂದ ಸದನದಲ್ಲಿ ತೀವ್ರ ಗದ್ದಲ, ವಾಕ್ಸಮರಕ್ಕೆ ದಾರಿ ಮಾಡಿಕೊಟ್ಟಿದೆ.

ವಿಧಾನಸೌಧದಲ್ಲಿ ಇಂದು  ಸರ್ಕಾರದ ನಿರ್ಣಯ ಓದಿದ ಸಿಎಂ, ಈ ಸದನ ವಿಬಿ-ಜಿರಾಮ್‌ಜಿ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತದೆ. ವಿಬಿ ಜಿ ರಾಮ್‌ ಜಿ ಕಾಯ್ದೆ ರದ್ದು ಮಾಡಬೇಕು. ಮನರೇಗಾ ಕಾಯ್ದೆ ಮೂಲ ಸ್ವರೂಪದಲ್ಲಿ ಮರು ಜಾರಿ ಮಾಡಬೇಕು. ವಿಬಿ ಜಿ ರಾಮ್‌ ಜಿ ಕಾಯ್ದೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಮನರೇಗಾ ಸಂವಿಧಾನದ ಹಕ್ಕುಗಳನ್ನು ನೀಡುವ ಯೋಜನೆ. ಕೆಲಸದ ಹಕ್ಕು ಯೋಜನೆ ನೀಡುತ್ತಿದ್ದ ಯೋಜನೆ ಮನರೇಗಾ. ನರೇಗಾ ವಾಪಸ್ ಜಾರಿ, ವಿಬಿ ಜಿ ರಾಮ್‌ ಜಿ ರದ್ದಿಗೆ ಈ ನಿರ್ಣಯ ಮೂಲಕ ಈ ಸದನ ಕೇಂದ್ರಕ್ಕೆ ಆಗ್ರಹಿಸುತ್ತದೆ. ಈ ನಿರ್ಣಯವನ್ನು ಈ ಸದನ ನಿರ್ಣಯ ಅಂಗೀಕರಿಸುತ್ತದೆ ಎಂದು ಗದ್ದಲದ ಮಧ್ಯೆಯೇ ಸಿಎಂ ನಿರ್ಣಯ ಓದಿದರು.

ಇದೇ ವೇಳೆ  ಈ ಸದನ ಅಲ್ಲ, ನಿಮ್ಮ ಸರ್ಕಾರ ವಿರೋಧಿಸುತ್ತದೆ ಎಂದು ಹೇಳಿ ಎಂದು ಅಶೋಕ್‌ ಒತ್ತಾಯಿಸಿದರು. ಆಗ ಈ ಸದನ ಈ ಸದನವೆಂದು ಒತ್ತಿ ಹೇಳಿ ವಿಪಕ್ಷಗಳಿಗೆ ಸಿಎಂ ಗುದ್ದು ನೀಡಿದರು. ಇದಕ್ಕೆ ಸರ್ಕಾರ ಸರ್ಕಾರ ಈ ಸದನ ಅಲ್ಲವೆಂದು ವಿಪಕ್ಷ ಸದಸ್ಯರು ಟಾಂಗ್‌ ನೀಡಿದರು.

ವಿಪಕ್ಷಗಳಿಂದ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಮುಂದುವರೆಯಿತು. ಆರ್‌.ಬಿ. ತಿಮ್ಮಾಪೂರ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದು ಸಿಎಂ ನಿರ್ಣಯ ಮಂಡನೆಗೆ ವಿಪಕ್ಷಗಳ ಸದಸ್ಯರು ಎದ್ದು ನಿಂತು ಅಡ್ಡಿ ಪಡಿಸಿದರು. ಈ ವೇಳೆ ವಿಪಕ್ಷಗಳ ಮೇಲೆ ಸಿಎಂ ಗರಂ ಆದರು. ಅಧ್ಯಕ್ಷರೇ ಅವರನ್ನು ಕೂರಿಸಿ, ಯಾರು ನಿಮ್ಮ ಮಾತು ಕೇಳೋದಿಲ್ಲವೋ ಅವರನ್ನು ಹೊರಗೆ ಹಾಕಿ ಎಂದು ಸಿಎಂ ವಾಗ್ದಾಳಿ ನಡೆಸಿದರು.

ಸದನದಲ್ಲಿ ಗದ್ದಲ, ಕೋಲಾಹಲ, ಪರಸ್ಪರ ಆರೋಪ, ವಾಕ್ಸಮರಗಳಿಂದ ಗೊಂದಲದ ಗೂಡಾಯ್ತು. ಇದು ಲೂಟಿ ಸರ್ಕಾರವೆಂದು ಘೋಷಣೆ ವಿಪಕ್ಷ ಸದಸ್ಯರು ಘೋಷಣೆ ಕೂಗುತ್ತಲೇ ಇದ್ದರು. ವಿಪಕ್ಷಗಳ ನಡೆಗೆ ಸಿಎಂ ತೀವ್ರ ಖಂಡಿಸಿ ಮತ್ತೆ ಆಕ್ರೋಶ ವ್ಯಕ್ತಪಡಿಸಿದರು.

ಗದ್ದಲ ನಿಯಂತ್ರಣಕ್ಕೆ ಬರದ ಹಿನ್ನೆಲೆ ಸದನವನ್ನೇ ಸ್ಪೀಕರ್ ಮುಂದೂಡಬೇಕಾಯಿತು. ಭೋಜನದ ನಂತರ ಕಲಾಪ ಶುರುವಾದರೂ ಮತ್ತೆ ಸದನದಲ್ಲಿ ಗದ್ದಲ, ಜಟಾಪಟಿ ಮುಂದುವರೆಯಿತು.

Continue Reading

Politics

ಪ್ರಧಾನಿ ಮೋದಿ-ಟ್ರಂಪ್‌ ನಡುವಿನ ಒಪ್ಪಂದ ಮಹತ್ವದ ಮೈಲಿಗಲ್ಲು: ಬಸವರಾಜ ಬೊಮ್ಮಾಯಿ

Published

on

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್‌ ನಡುವೆ ನಡೆದ ಎರಡು ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವಿನ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲು  ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು,   ಈ ಮಹತ್ವದ ಸಾಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವವರ ನಾಯಕತ್ವಕ್ಕೆ ಮತ್ತು ಅವರ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಎರಡು ರಾಷ್ಟ್ರಗಳ ನಡುವಿನ ಈ ಒಪ್ಪಂದ ರೈತರು, ನವೋದ್ಯಮಿಗಳಿಗೆ, ಕೌಶಲ್ಯ ಹೊಂದಿರುವ ಕಾರ್ಮಿಕರು, ಸಣ್ಣ ಕೈಗಾರಿಕೆಗಳು ವಿಶ್ವ ಮಟ್ಟದಲ್ಲಿ ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಲು ಹೊಸ ಅವಕಾಶಗಳನ್ನು ಒದಗಿಸಲಿದೆ ಎಂದು ಹೇಳಿದ್ದಾರೆ.

ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು ವಿಶ್ವ ಮಟ್ಟದಲ್ಲಿ ಭಾರತದ ಅಭಿವೃದ್ಧಿಗೆ ಪೂರಕವಾಗಿ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಪ್ರಧಾನಿಯವರು ಯಶಸ್ವಿಯಾಗಿದ್ದಾರೆ ಎಂದು  ತಿಳಿಸಿದ್ದಾರೆ.

Continue Reading

Trending

error: Content is protected !!