Connect with us

Mandya

ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಮೂಲಭೂತ ವ್ಯವಸ್ಥೆ ಕಲ್ಪಿಸಿ – ಡಿಸಿ

Published

on

ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಏಪ್ರಿಲ್ 26 ರಂದು‌ ಮತದಾನ ನಡೆಯಲಿದೆ.

ಏಪ್ರಿಲ್ 25 ರಂದು ರಾತ್ರಿ ಪಿ.ಆರ್‌ಒ, ಎ‌.ಪಿಆರ್.ಒ ಹಾಗೂ ಮತಗಟ್ಟೆ ಅಧಿಕಾರಿಗಳು ಮತದಾನ ಕೇಂದ್ರಕ್ಕೆ ಆಗಮಿಸಲಿದ್ದಾರೆ. ಅವರಿಗೆ ಮೂಲಭೂತ ವ್ಯವಸ್ಥೆಗಳನ್ನು ವ್ಯವಸ್ಥಿತವಾಗಿ ಕಲ್ಪಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಧಿಕಾರಿಗಳಿಗೆ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದರು. ಕುಡಿಯುವ ನೀರು, ಶೌಚಾಲಯ, ಶೌಚಾಲಯದಲ್ಲಿ ನೀರಿನ ವ್ಯವಸ್ಥೆ, ವಿದ್ಯುತ್ ದೀಪಗಳು ಹಾಗೂ ಇನ್ನಿತರೆ ವ್ಯವಸ್ಥೆಗಳನ್ನು ಪರಿಶೀಲಿಸುವಂತೆ ತಿಳಿಸಿದರು.

ಬಿಸಿಲಿನ ತಾಪ ಹೆಚ್ಚಿದ್ದು, ಒ.ಆರ್.ಎಸ್, ಸೇರಿದಂತೆ ವಿವಿಧ ಅವಶ್ಯಕ ಔಷಧಿಗಳುಳ್ಳ ಮೆಡಿಕಲ್ ಕಿಟ್ ಗಳನ್ನು ಆರೋಗ್ಯ ಇಲಾಖೆ ವತಿಯಿಂದ ಒದಗಿಸಲಾಗುವುದು. ಕ್ಲಸ್ಟರ್ ಮತಗಟ್ಟೆ ಇರುವ ಕಡೆ ಸಮುದಾಯ ಆರೋಗ್ಯಾಧಿಕಾರಿ ಹಾಗೂ ಉಳಿದ ಕಡೆ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸುವಂತೆ ತಿಳಿಸಿದರು.

ನೆರಳಿನ ವ್ಯವಸ್ಥೆ ಮತಗಟ್ಟೆಗಳಲ್ಲಿ ಮತ ಚಲಾಯಿಸಲು ಆಗಮಿಸುವ ಮತದಾರರಿಗೆ ಹೆಚ್ಚು ಜನ ಸರದಿ ಸಾಲಿನಲ್ಲಿ ಕಾಯುವವರಿಗೆ ನೆರಳಿನ ವ್ಯವಸ್ಥೆಯಾಗಬೇಕು. ಶಾಲೆಗಳಲ್ಲಿ ಕೊಠಡಿ ಇರುವ ಕಡೆ ಕುಳಿತುಕೊಳ್ಳಲು ಬೆಂಚ್ ವ್ಯವಸ್ಥೆ ಮಾಡಿ. ಕೊಠಡಿ ಇಲ್ಲದ ಸ್ಥಳಗಳಲ್ಲಿ ಶಾಮಿಯಾನದ ವ್ಯವಸ್ಥೆ ಮಾಡಿ ಎಂದರು.

ಪ್ರತಿ ಮತಗಟ್ಟೆಯಲ್ಲಿ ವಿಕಲಚೇತನರಿಗೆ ಅನುಕೂಲ ಕಲ್ಪಿಸಲು ವೀಲ್ ಚೇರ್ ವ್ಯವಸ್ಥೆ, ವಿಕಲಚೇತನರು ತಮ್ಮ ಮನೆಯಿಂದ ಮತಗಟ್ಟೆಗೆ ಆಗಮಿಸಲು ವಾಹನದ ವ್ಯವಸ್ಥೆ ಬೇಕಿದ್ದಲ್ಲಿ ಮೂರು ದಿನ ಮುಂಚಿತವಾಗಿ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಬೇಕು. ವಿಕಲಚೇತನರಿಗೆ ಕಲ್ಪಿಸಿರುವ ವ್ಯವಸ್ಥೆಗಳ ಬಗ್ಗೆ ಸಕ್ಷಮ್ ಆ್ಯಪ್ ನಲ್ಲಿ ತಿಳಿದುಕೊಳ್ಳಬಹುದು ಎಂದರು.

ಮತಗಟ್ಟೆ ಅಧಿಕಾರಿಗಳಿಗೆ ಮತಗಟ್ಟೆಯಲ್ಲಿ ಊಟ ಉಪಹಾರದ ವ್ಯವಸ್ಥೆ ನಿಗದಿಪಡಿಸಿರುವ ಸಮಯಕ್ಕೆ ಆಗಬೇಕು. ಅವರುಗಳು ಆಹಾರ ಸೇವಿಸಲು ಹೊರಗೆ ಹೋಗಲು ಅವಕಾಶವಿರುವುದಿಲ್ಲ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಗ್ರಾಮ ಪಂಚಾಯತಿ ಅಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆಯವರು ಸಮನ್ವಯವಾಗಿ ಕಾರ್ಯನಿರ್ವಹಿಸಲು ಯೋಜನೆ ರೂಪಿಸಿ ಮತಗಟ್ಟೆಗಳಲ್ಲಿ ಯಾವುದೇ ಲೋಪ ಉಂಟಾಗದಂತೆ ನೋಡಿಕೊಳ್ಳಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಾಬು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರ ಮಣಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಕಡು ಬಡವರಿಗೂ ಗ್ಯಾರಂಟಿಗಳು ತಲುಪಿದಾಗ ಮಾತ್ರ ಯೋಜನೆಗಳು ಯಶಸ್ವಿಯಾದಂತೆ: ಚಿಕ್ಕಲಿಂಗಯ್ಯ

Published

on

ಮಂಡ್ಯ : ಸರ್ಕಾರದ ಕನಸಿನ ಕೂಸಾದ ಗ್ಯಾರಂಟಿ ಯೋಜನೆಗಳು ರಾಜ್ಯದ ಕಡು ಬಡವರ ಮನೆಯನ್ನು ತಲುಪಿದಾಗ ಮಾತ್ರ ಯೋಜನೆ ಯಶಸ್ವಿಯಾದಂತೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಚಿಕ್ಕಲಿಂಗಯ್ಯ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಅರ್ಹ ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸಲು ಪ್ರಾಧಿಕಾರವು ಸಹ ಶ್ರಮವಹಿಸಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಗ್ಯಾರಂಟಿ ಯೋಜನೆಯ ಪ್ರಮುಖ ಯೋಜನೆ ಗೃಹಲಕ್ಷಿ ಯೋಜನೆ, ಈ ಯೋಜನೆಯಿಂದ ರಾಜ್ಯದ ಅನೇಕ ಕುಟುಂಬಗಳು ಸಬಲವಾಗಿವೆ, ಜಿಲ್ಲೆಯಲ್ಲಿ ಶೇ 100 ರಷ್ಟು ಅರ್ಹ ಮಹಿಳೆಯರಿಗೆ ಯೋಜನೆಗಳನ್ನು ತಲುಪಿಸುವುದು ಅತಿ ಮುಖ್ಯ, ಈಗಾಗಲೇ ಡಿಸೆಂಬರ್ ಮಾಹೆಯವರೆಗೂ ಗೃಹ ಲಕ್ಷ್ಮಿ ಯೋಜನೆಯಡಿ ಅನುದಾನ ಮಂಜೂರು ಮಾಡಲಾಗಿದೆ ಹಾಗೂ ಡಿ ಬಿ ಟಿ ಯ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದರು.

ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರೊಂದಿಗೆ ಚರ್ಚಿಸಿ ಕಾಲ ಕಾಲಕ್ಕೆ ಗೃಹಲಕ್ಷಿ ಹಣವನ್ನು ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಹಾಗೂ ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗದಂತೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಅನ್ನ ಭಾಗ್ಯ ಯೋಜನೆಯಡಿ 7 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿದ್ದೂ ಡಿಸೆಂಬರ್ ಮಾಹೆಯವರೆಗೆ ಒಟ್ಟು ರೂ. 402 ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ, ಡಿಸೆಂಬರ್ ಮಾಹೆಗೆ ಸಂಬಂಧಿಸಿದಂತೆ ರೂ. 23.06 ಕೋಟಿ ಹಣವನ್ನು ಪಡಿತರ ಚೀಟಿಯ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ, ಸರ್ಕಾರದ ನಿರ್ದೇಶನದಂತೆ ಫೆಬ್ರವರಿ ಮಾಹೆಯಿಂದ ಹಣದ ಬದಲು 15 ಕೆ.ಜಿ ಅಕ್ಕಿಯನ್ನೇ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲೆಡೆ ಈಗಾಗಲೇ ಫೆಬ್ರವರಿ ಮಾಹೆಯ ಹೆಚ್ಚುವರಿ ಅಕ್ಕಿಯನ್ನು ವಿತರಿಸಲಾಗುತ್ತಿದೆ, ಪ್ರತಿ ಎರಡು ವರ್ಷಕ್ಕೊಮ್ಮೆ ತೂಕ ಮೌಲ್ಯ ಮಾಪನ ನಡೆಸಲಾಗುವುದು, ತೂಕದಲ್ಲಿ ವ್ಯತ್ಯಾಸ ಕಂಡು ಬಂದ ಅಂಗಡಿಯ ಮಾಲೀಕನ ಮೇಲೆ ಕ್ರಮ ಜರುಗಿಸಲಾಗುವುದು, ಜಿಲ್ಲೆಯಲ್ಲಿ ಅನೇಕ ಕಡೆ ನ್ಯಾಯಬೆಲೆ ಅಂಗಡಿ ಮಾಲೀಕರು ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ, ಅಧಿಕಾರಿಗಳು ಈಗಾಗಲೇ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ಹಣ ವಸೂಲಿ ಮಾಡದಂತೆ ಸೂಚನೆ ನೀಡಿದ್ದಾರೆ, ಅದನ್ನು ಮೀರಿ ಹಣ ವಸೂಲಿ ಮಾಡಿದರೆ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶಾಲಾ ಕಾಲೇಜು ಮಕ್ಕಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಮಕ್ಕಳಿಗೆ ತೊಂದರೆಯಾಗದಂತೆ ಬಸ್ ವ್ಯವಸ್ಥೆ ಕಲ್ಪಿಸಿ,
ಶಕ್ತಿ ಯೋಜನೆಯಡಿ ಫೆಬ್ರವರಿ ಮಾಹೆಯಲ್ಲಿ ಪ್ರತಿದಿನದ ಸರಾಸರಿಯಂತೆ 29 ಸಾವಿರಕ್ಕೂ ಹೆಚ್ಚು ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರ ವಿತರಿಸಲಾಗಿದೆ, ಫೆಬ್ರವರಿ ಮಾಹೆಯಲ್ಲಿ 59.13 ಲಕ್ಷಕ್ಕೂ ಹೆಚ್ಚು ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಶಕ್ತಿ ಯೋಜನೆಯಡಿ ನೀಡಲಾಗಿದೆ ಎಂದು ತಿಳಿಸಿದರು.

ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 5 ಲಕ್ಷದ 49 ಸಾವಿರಕ್ಕೂ ಹೆಚ್ಚಿನ ಫಲಾನುಭವಿಗಳು ಇದ್ದು, ಈವರೆಗೂ ಜಿಲ್ಲೆಗೆ 314 ಕೋಟಿ ಅನುದಾನ ನೀಡಲಾಗಿದೆ, ಜಿಲ್ಲೆಯಲ್ಲಿ ಶೇ 97 ರಷ್ಟು ಪ್ರಮಾಣದಲ್ಲಿ ಗೃಹ ಜ್ಯೋತಿ ಅನ್ನು ಎಲ್ಲಾ ಮನೆಗಳಿಗೂ ತಲುಪಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯ 7 ತಾಲ್ಲೂಕಿನ ಎಲ್ಲಾ ಪದವಿ ಹಾಗೂ ಡಿಪ್ಲೋಮೋ ಕಾಲೇಜುಗಳಲ್ಲಿ ಯುವ ನಿಧಿ ಯೋಜನೆಯ ಕುರಿತು ಜಾಗೃತಿ ಮೂಡಿಸಲಾಗಿದೆ, 4702 ಅರ್ಹ ಫಲಾನುಭವಿಗಳು ಪ್ರಸ್ತುತ ಜಿಲ್ಲೆಯಲ್ಲಿದ್ದು ಎಲ್ಲರಿಗೂ ಡಿ.ಬಿ.ಟಿ ಯ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ, ಯುವನಿಧಿ ಯೋಜನೆಯಡಿ 7 ಕೋಟಿ 12 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಧನುಷ್, ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷ ಪ್ರಶಾಂತ್ ಬಾಬು ಕೆ.ಸಿ. ಗ್ಯಾರಂಟಿ ಯೋಜನೆಯ ಪ್ರಾಧಿಕಾರದ ಸದಸ್ಯರಾದ ವೀಣಾ ಶಂಕರ್, ರುದ್ರಪ್ಪ, ಮಹೇಶ್, ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣ ಕುಮಾರ್, ಕೆ.ಎಸ್. ಆರ್. ಟಿ.ಸಿ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಕೆ.ಆರ್.ಪೇಟೆ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಜಾನಪದ ಜಾತ್ರೆ ಹಾಗೂ ಆಹಾರ ಮೇಳ

Published

on

ಕೆ.ಆರ್.ಪೇಟೆ : ಇಲ್ಲಿನ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಜಾನಪದ ಜಾತ್ರೆ ಹಾಗೂ ಗ್ರಾಮೀಣ ಸೊಗಡಿನ ಆಹಾರ ಮೇಳವು ಯಶಸ್ವಿಯಾಗಿ ನಡೆಯಿತು.

ಶಾಸಕ ಹೆಚ್.ಟಿ.ಮಂಜು ಎತ್ತಿನ ಗಾಡಿಯನ್ನು ಓಡಿಸುವ ಮೂಲಕ‌ ಜಾನಪಸ ಜಾತ್ರೆಗೆ ಚಾಲನೆ ನೀಡಿ, ವಿದ್ಯಾರ್ಥಿನಿಯರೊಂದಿಗೆ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರು.

ಬಳಿಕ ಮಾತನಾಡಿದ ಅವರು, ನಮ್ಮ ಪೂರ್ವಜರು ಬೇಸಾಯ ಮಾಡುವಾಗ ಮಾಡುತ್ತಿದ್ದ ನೃತ್ಯಗಳು, ಜಾನಪದ ಹಾಡುಗಳು ಇಂದಿಗೂ ಜನಪದರ ಬಾಯಿಂದ ಬಾಯಿಗೆ ಹರಿದಾಡುತ್ತಿವೆ. ಸುಗ್ಗಿ ಯ ಸಂಭ್ರಮದಲ್ಲಿ ಹಾಡುವ ಹಾಡುಗಳು ಇಂದಿಗೂ ನಮ್ಮ ಬದುಕಿನ ಜೀವ ಸೆಲೆಯಾಗಿವೆ. ಮೌಡ್ಯವಿಲ್ಲದ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಲು, ಪಾಶ್ಚಾತ್ಯ ಸಂಸ್ಕೃತಿಗೆ ಆಕರ್ಷಿ ತವಾಗುತ್ತಿರುವ ಇಂದಿನ ದಿನಮಾನದಲ್ಲಿ ಮರಳಿ ಜಾನಪದ ಸಂಸ್ಕೃತಿಗೆ ಕರೆತರಲು ಇಂತಹ ಗ್ರಾಮೀಣ ಸೊಗಡಿನ ಕಾರ್ಯಕ್ರಮಗಳು ಸಹಾಯವಾಗಲಿವೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಸುಮಾರಾಣಿ ಮಾತನಾಡಿ, ಹೆಣ್ಣು ಮಕ್ಕಳು ರಾಷ್ಟ್ರದ ಶಕ್ತಿಯಾಗಿದ್ದಾರೆ. ಜಾನಪದದ ಮೂಲ ಬೇರೆ ಹೆಣ್ಣಾ ಗಿರುವುದರಿಂದ ಹೆಣ್ಣಿಗೂ ಜಾನಪದಕ್ಕೂ ಅವಿನಾಭಾವ ಸಂಬಂಧವಿದೆ. ಹೆಣ್ಣು ಮಕ್ಕಳು ಆಯಾ ಸಂದರ್ಭಕ್ಕೆ ಅನುಗುಣವಾಗಿ ಹಾಡುವ ಹಾಡುಗಳು ಹಾಗೂ ನೃತ್ಯಗಳು ಜಾನಪದ ಕ್ಷೇತ್ರದ ಶಕ್ತಿಯನ್ನು ಇಮ್ಮಡಿಗೊಳಿಸಿವೆ ಎಂದು ಹೇಳಿದರು.

 

ಮಹಿಳಾ ಸರ್ಕಾರಿ ವಿದ್ಯಾಲಯದ ಪ್ರಾಂಶುಪಾಲರಾದ ಡಾ.ಕೆ.ಬಿ. ಪ್ರತಿಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನಲ್ಲಿ ಇಂದು ವಿಶೇಷವಾಗಿ ಜಾನಪದ ಜಾತ್ರೆ ಹಾಗೂ ಗ್ರಾಮೀಣ ಸೊಗಡಿನ ಆಹಾರ ಮೇಳವನ್ನು ಆಯೋಜಿಸಲಾಗಿದೆ. ನಮ್ಮ ಸಂಸ್ಕೃತಿಯ ಪ್ರತಿಬಿಂಬವಾದ ಜಾನಪದಕ್ಕೆ ಶಕ್ತಿ ತುಂಬುವ ರೀತಿಯಲ್ಲಿ ಇಂದು ವಿದ್ಯಾರ್ಥಿನಿಯರು ರೇಷ್ಮೆ ಸೀರೆಯನ್ನು ಉಟ್ಟು ಮದುಮಗಳ ರೀತಿಯಲ್ಲಿ ಅಲಂಕಾರ ಮಾಡಿಕೊಂಡು ಬಂದಿದ್ದಾರೆ. ದನಕರುಗಳು ಹಾಗೂ ಪ್ರಕೃತಿಯೇ ಜನಪದದ ಜೀವಾಳವಾಗಿದೆ. ಮೋಸ, ವಂಚನೆಯ ಬಗ್ಗೆ ತಿಳಿಯದ, ಪ್ರಕೃತಿಯನ್ನೇ ದೇವರೆಂದು ಆರಾಧಿಸುವ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಕ್ಕಿನಲ್ಲಿ ಯುವ ಸಮುದಾಯವನ್ನು ಜಾಗೃತಿಗೊಳಿಸಿ ಮುನ್ನಡೆಸಲು ಇಂತಹ ಕಾರ್ಯಕ್ರಮಗಳು ವರದಾನವಾಗಿವೆ ಎಂದು ಹೇಳಿದರು.

ಪುರಸಭೆ ಸದಸ್ಯ ಗಿರೀಶ್, ಶಾಮಿಯಾನ ತಿಮ್ಮೇಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಬಲದೇವ್ ಸೇರಿದಂತೆ ಕಾಲೇಜಿನ ಅಧ್ಯಾಪಕ ವರ್ಗ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ಚೇತನ್ ಕುಮಾರ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Continue Reading

Mandya

ಹಾಸನ ಕೃಷಿ ವಿವಿಯನ್ನು ಬೆಂಗಳೂರಿನಲ್ಲೇ ಉಳಿಸಬೇಕೆಂಬುದು ಸರಿಯಲ್ಲ: ಪ್ರೊ. ಜಯಪ್ರಕಾಶ್‌ ಗೌಡ

Published

on

ಮಂಡ್ಯ: ಮಂಡ್ಯದ ಕೃಷಿ ವಿಶ್ವವಿದ್ಯಾಲಯವು ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ಹಾಸನ ಜಿಲ್ಲೆಗಳನ್ನೊಳಗೊಂಡಂತಿದ್ದು, ಹಾಸನದ ರಾಜಕಾರಣಿಗಳು ಹಾಸನ ಕೃಷಿ ಕಾಲೇಜು ಮಾನ್ಯತೆಯನ್ನು ಬೆಂಗಳೂರಿನ ಕೃಷಿ ವಿವಿಯಲ್ಲೇ ಉಳಿಸಬೇಕೆಂದು ಪಟ್ಟು ಹಿಡಿದಿರುವುದು ಸರಿಯಲ್ಲ ಎಂದು ಕರ್ನಾಟಕ ಸಂಘದ ಅಧ್ಯಕ್ಷ, ಹಿರಿಯ ಸಾಹಿತ್ಯ ಚಿಂತಕ ಪ್ರೊ.ಜಯಪ್ರಕಾಶ್‌ಗೌಡ ಕಿಡಿ ಕಾರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಮಂಡ್ಯ ವಿ.ಸಿ ಫಾರಂನಲ್ಲಿ ಕೃಷಿ ವಿವಿ ಸ್ಥಾಪನೆ ಮಾಡಿರುವುದು ಅಭಿನಂದನಾರ್ಹ, ಹಾಸನದ ರಾಜಕಾರಣಿಗಳು ಬೆಂಗಳೂರು ವಿವಿಯಲ್ಲೆ ಕೃಷಿ ಕಾಲೇಜು ಮಾನ್ಯತೆ ಮುಂದುವರೆಸಲು ಶಾಸನ ಸಭೆಯಲ್ಲಿ ಪ್ರತಿಪಾದಿಸಿ, ರಾಜ್ಯಪಾಲರಿಗೆ ಮನವಿ ನೀಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಬೆಂಗಳೂರಿನಲ್ಲಿ ಕೃಷಿ ವಿವಿ ಸ್ಥಾಪನೆಗೂ ಮುನ್ನವೇ ಕೋಲ್ಮನ್ ಅವರು ವಿ.ಸಿ.ಫಾರಂ ಅನ್ನು ಸಂಶೋಧನಾ ಕೇಂದ್ರವನ್ನಾಗಿ ರೂಪಿಸಿ ಆಗಲೇ ೬೦೦ ಎಕರೆ ಭೂ ಪ್ರದೇಶ ನೀಡಿದ ಮೈಸೂರು ಅರಸರನ್ನು ಮರೆಯುವಂತಿಲ್ಲ. ಮಂಡ್ಯದ ವಿ.ಸಿ ಫಾರಂನಲ್ಲಿ ನಡೆದಿರವ ಸಂಶೋಧನೆಗೆ ವಿಶ್ವಮಾನ್ಯತೆ ದೊರೆತಿದ್ದು, ಜಾಗತಿಕ ಪೆಟೆಂಟ್ ಕೂಲ ಅಭಿಸಿದೆ ಎಂದು ಹೇಳಿದರು.

ಇಂತಾದರೂ ಹಾಸನ ಕೃಷಿ ಕಾಲೇಜನ್ನು ಮಂಡ್ಯ ಕೃಷಿ ವಿವಿ ವ್ಯಾಪ್ತಿಗೆ ತರದೇ ಹಾಸನ ಜಿಲ್ಲೆಯನ್ನು ಮಂಡ್ಯ ಕೃಷಿ ವಿವಿಯ ಹೊರಗುಳಿಯುವಂತೆ ಮಾಡಲು ಹೆಚ್.ಡಿ.ರೇವಣ್ಣ ನೇತೃತ್ವದಲ್ಲಿಯೇ ಮನವಿ ಸಲ್ಲಿಸಲು ಮುಂದಾಗಿರುವುದು ಅಘಾತವನ್ನುಂಟು ಮಾಡಿದೆ ಎಂದರು.

ಹೆಚ್.ಡಿ.ದೇವೇಗೌಡರು, ಮಂಡ್ಯದಿಂದ ಗೆದ್ದು ಕೇಂದ್ರ ಮಂತ್ರಿಯಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದ ಬಗ್ಗೆ ಅತ್ಯಂತ ಪ್ರಶಂಸನೀಯವಾಗಿ ಮಾತುಗಳನ್ನಾಡಿದ್ದಾರೆ. ಹಾಸನ ಮತ್ತು ಮಂಡ್ಯ ತಮ್ಮೆರಡು ಕಣ್ಣುಗಳೆಂದು, ರಾಜಕೀಯ ಪುನರ್‌ಜನ್ಮ ನೀಡಿದ್ದು ಮಂಡ್ಯ ಜಿಲ್ಲೆ ಅಂತಲೂ ಹಾಡಿ ಹೊಗಳಿದ್ದಾರೆ. ಹೀಗಿರುವಾಗಿ ಹಾಸನ ಕೃಷಿ ಕಾಲೇಜು ಮಂಡ್ಯ ಕ್ಕೆ ಬರವುದನ್ನು ತಡೆವುದು ಮಂಡ್ಯಕ್ಕೆ ಮಾಡುವ ಅಪಚಾರ ಎಂದರು.

ರಾಜಕೀಯವಾಗಿ ಮಂಡ್ಯ ಜಿಲ್ಲೆ ದೇವೇಗೌಡರ ಕುಟುಂಬ ಪೋಷಿಸುತ್ತಿದ್ದು, ಈ ಸಂಬಂಧ ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಅವರ ನಿಲುವನ್ನು ಪ್ರಶ್ನಿಸಬೇಕಿದೆ. ಶೀಘ್ರವಾಗಿ ಈ ಸಂಬಂಧ ಮಾತನಾಡಿ, ಹಾಸನದ ರಾಜಕಾರಣಿಗಳ ರಾಜಕಾರಣಿಗಳ ಬಾಯಿ ಮುಚ್ಚಿಸಿ, ನಿಲುವು ಘೋಷಿಸುವಂತೆ ಒತ್ತಾಯಿಸಿದರು.

ಮಂಡ್ಯ ವಿಶ್ವವಿದ್ಯಾಲಯ ಮೈಸೂರು ವಿಶ್ವವಿದ್ಯಾಲಯಕ್ಕೆ ವಿಲೀನಗೊಳಿಸುವ ಸರ್ಕಾರದ ಪ್ರಶ್ತಾವನೆಗೆ ವಿರುದ್ಧವಾಗಿ ಶಾಸಕ ರವಿಕುಮಾರ್‌ಗೌಡ ಬದ್ದತೆ ಹಾಗೂ ಒಲವು ಪ್ರಶಂಸನೀಯ, ಅದನ್ನು ಉಳಿಸಿ ಬೆಳೆಸುವ ಅಗತ್ಯ ಎಲ್ಲರ ಮೇಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಎರಡೂ ವಿವಿಗಳನ್ನು ಉಳಿಸಿ ಬೆಳೆಸಲು ತೊಡಗಿಕೊಳ್ಳುವಂತೆ ಆಗ್ರಹಿಸಿದರು.

ಗೋಷ್ಠಿಯಲ್ಲಿ ಕೆ.ಆರ್.ಪೇಟೆ ಕಸಾಪ ಮಾಜಿ ಅಧ್ಯಕ್ಷ ಸೋಮಶೇಖರ್ ಇದ್ದರು.

Continue Reading

Trending

error: Content is protected !!