Kodagu
ಅಳಿಯನಿಂದ ಮಾವನ ಹತ್ಯೆ

ವಿರಾಜಪೇಟೆ: ಹೊರವಲಯದ ಅಮ್ಮ್ತತ್ತಿ ಗ್ರಾಮದಲ್ಲಿ ಕಳೆದ ಇಪ್ಪತ್ತು ದಿನಗಳ ಹಿಂದೆ ನಡೆದ ಹೊಡೆದಾಟ,
ಘಟನೆ ಹಿನ್ನೆಲೆಯಲ್ಲಿ ತಲೆಯ ಭಾಗದಲ್ಲಿ ಗಂಭೀರ ಸ್ವರೂಪದ ಗಾಯವಾಗಿದ್ದ ರಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು .
ಚಿಕಿತ್ಸೆ ಫಲಕಾರಿಯಾಗದೆ ಮಾವ ಮಾದು ಮ್ರತ ಪಟ್ಟ ಘಟನೆ ವಿರಾಜಪೇಟೆ ಹೊರವಲಯದ ಅಮ್ಮತ್ತಿ ಬಳಿ ನಡೆದಿದೆ.
ಅಳಿಯ ಮಣಿ (ಅಣ್ಷಪ್ಪ)ಎಂಬವರ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿತ್ತು ..
ಹಲ್ಲೆ ಗೊಳಗಾದ ವ್ಯಕ್ತಿ ಮ್ರತ ಪಟ್ಟ ಹಿನ್ನೆಲೆಯಲ್ಲಿ, ಕೊಲೆ ಆರೋಪದ ಹಿನ್ನೆಲೆಯಲ್ಲಿ ಇಂದು ಅ ವ್ಯಕ್ತಿ ಯನ್ನು ನ್ಯಾಯಾಂಗ ಬಂಧನ ಕ್ಕೆ ನೀಡಲಾಯಿತು .
,ವಿರಾಜಪೇಟೆ ಗ್ರಾಮಾಂತರ ಠಾಣೆ ಯಲ್ಲಿ ಮೊಕದ್ದಮೆ ದಾಖಲಾಗಿದೆ,
ಮಾದು ಶವವನ್ನು ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಗೆ ಶವ ಪರೀಕ್ಷೆಗೆ ತರಲಾಗಿದೆ..
ವಿರಾಜಪೇಟೆ ಗ್ರಾಮಾಂತರ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ .
Kodagu
ಕಸ ವಿಲೇವಾರಿಗೆ ವಿರೋಧ: 4ನೇ ದಿನಕ್ಕೆ ಮುಂದುವರಿದ ಅಹೋರಾತ್ರಿ ಪ್ರತಿಭಟನೆ

ಸಿದ್ದಾಪುರ: ವೀರಾಜಪೇಟೆ ತಾಲ್ಲೂಕಿನ, ಮಾಲ್ದಾರೆ ಗ್ರಾಮ ಪಂಚಾಯಿತಿ ಚೊಟ್ಟೆಪಾಳಿ (ಕಲ್ಲಳ್ಳ) ಜಾಗದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ಕಸವಿಲೇವಾರಿ ಕೇಂದ್ರ ನಿರ್ಮಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಬಹುಜನ ಸಮಾಜ ಪಾರ್ಟಿ ನೇತ್ರತ್ವದಲ್ಲಿ ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ನಾಲ್ಕನೇ ದಿನ ಅಹೋರಾತ್ರಿ ಪ್ರತಿಭಟನೆ ಮುಂದುವರೆದಿದೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕೆಂದು ಒತ್ತಾಯಿಸಿದ್ದಾರೆ.
ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ಮಾತನಾಡಿ ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ನಡೆಯುತ್ತಿರುವ ಆಹೋರಾತ್ರಿ ಪ್ರತಿಭಟನೆ ನಾಲ್ಕನೇ ದಿನಕ್ಕೂ ಮುಂದುವರೆದಿದ್ದು ನಮ್ಮ ಮನವಿಗೆ ಮತ್ತು ಹೋರಾಟಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಆಡಳಿತ ನಡೆಸುವ ಸರ್ಕಾರ ವಿರುದ್ಧ ಇಂದಿನಿಂದ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಈ ಹೋರಾಟದಲ್ಲಿ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಏನೇ ಹೆಚ್ಚು ಕಮ್ಮಿಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆ ಹಾಗೂ ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದು ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆ ವೇಳೆ ಅಧಿಕಾರಿಗಳು ಹಾಗೂ ಆಡಳಿತದ ವ್ಯವಸ್ಥೆಯ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹಾಗೂ ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ತೆಜರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು ಪ್ರತಿಭಟನೆಗಾರರು ಮನವಿ ಪತ್ರ ಇದೆ ಸಂದರ್ಭ ನೀಡಿದರು.
ಪ್ರತಿಭಟನೆಯಲ್ಲಿ ಬ್ರಿಗೇಡ್ ಸಂಘಟನೆಯ ರಾಜ್ಯಾಧ್ಯಕ್ಷ ರೇವತಿ ರಾಜ್, ಬಹುಜನ ಭಾಗ್ಯ ವಿಧಾತಾ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷ ಚೇತನ್ ಕುಮಾರ್, ಹಾಗೂ ಸ್ಥಳೀಯ ಕಾಫಿ ಬೆಳೆಗಾರರಾದ ಬೋಪಣ್ಣ, ರಾಮಚಂದ್ರ, ವಿಷ್ಣು, ರೋಹನ್,ಸೇದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು ಹಾಜರಿದ್ದರು
Kodagu
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ

ಮಡಿಕೇರಿ : ಮಡಿಕೇರಿ ಕಾಟಕೇರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಅಡಿಗೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಡಿಕೇರಿ-ಮಂಗಳೂರು ಮುಖ್ಯರಸ್ತೆಯ ಕಾಟಕೇರಿ ಬಳಿಯ ಪ್ರಶಾಂತಿ ಹೋಂ ಸ್ಟೇ ಎದುರು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೈಕ್ ಸವಾರ ನಾಪೋಕ್ಲು ಬಳಿಯ ಕಕ್ಕಬ್ಬೆ ನಿವಾಸಿ ಬೆಟ್ಟಗೇರಿಯಲ್ಲಿ ವಾಸವಿರುವ ಶರತ್ (28) ಮೃತ ವ್ಯಕ್ತಿ.
ಮಡಿಕೇರಿ ಮಂಗಳೂರು ಮುಖ್ಯರಸ್ತೆಯಲ್ಲಿ ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Kodagu
ವಿದ್ಯಾರ್ಥಿನಿ ಗಾಯತ್ರಿಗೆ ಸನ್ಮಾನ

ಕುಶಾಲನಗರ : ಕುಶಾಲನಗರ ನಳಂದ ಇಂಟರ್ನ್ಯಾಷನಲ್ ಪಿಯು ಕಾಲೇಜಿನ ದ್ವಿತೀಯ ಪಿಯು (ವಿಜ್ಞಾನ) ವಿದ್ಯಾರ್ಥಿನಿ ಗಾಯತ್ರಿ ಕೆ 2023-24 ನೇ ಸಾಲಿನಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದಿರುತಾರೆ. ಇವರು 600 ಕ್ಕೆ 597 ಅಂಕಗಳನ್ನು ಗಳಿಸಿದ್ದು, ಈ ಸಾಧನೆಗಾಗಿ ವಿದ್ಯಾರ್ಥಿಯನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ವಸತಿ ನಿರ್ದೇಶಕ ನಾಮ್ಗಿಲ್ ಎನ್, ಶೈಕ್ಷಣಿಕ ಸಲಹೆಗಾರ ಎಫ್ ಎ ಎಸ್ ಸುರೇಂದ್ರ, ಪ್ರಾಂಶುಪಾಲ ಷಜಿ ಅಲುಂಗಲ್ ಜೋಸೆಫ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕವಿತಾ ಸತಪನ್, ಗಾಯತ್ರಿಯವರಿಗೆ ಪ್ರಶಸ್ತಿ ಯನ್ನು ನೀಡಿ ತಲಾ 2 ಲಕ್ಷ ರೂಪಾಯಿಯ ಚೆಕ್ ಅನ್ನು ಹಸ್ತಾಂತರಿಸಿ ಗಾಯತ್ರಿಯನ್ನು ಸನ್ಮಾನ ಮಾಡಿದರು.
-
Special12 hours ago
ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಮನೆ ಬಾಗಿಲಿಗೆ ಬರಲಿದೆ ಉಚಿತ ಖಾತಾ : ಸರ್ಕಾರದಿಂದ ವಿನೂತನ ವ್ಯವಸ್ಥೆ
-
State7 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Hassan8 hours ago
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ದೂರು
-
State6 hours ago
Nation First, Party next, Self last: ಯತ್ನಾಳ್ ಹೀಗೇಳಿದ್ದೇಕೆ?
-
State9 hours ago
ಪತ್ರಿಕೋದ್ಯಮ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ ಅವರಿಗೆ ಡಿ.ಲಿಟ್ ಪದವಿ
-
Kodagu5 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan5 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
Hassan5 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ