Connect with us

Hassan

ಕುಡಿದ‌ ಮತ್ತಿನಲ್ಲಿ ಮಾವನನ್ನು ಕೊಂದ ಅಳಿಯ

Published

on

ಹಾಸನ : ಕುಡಿದ‌ ಮತ್ತಿನಲ್ಲಿ ಮಾವನನ್ನು ಕೊಂದ ಅಳಿಯ

ತಮ್ಮಯ್ಯ (58) ಕೊಲೆಯಾದ ವ್ಯಕ್ತಿ

ಬಲ್ಲೇನಹಳ್ಳಿ ಗ್ರಾಮದ ಜಗದೀಶ್ (40) ಕೊಲೆ ಮಾಡಿದ ಆರೋಪಿ

ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ರಾಮೇನಹಳ್ಳಿ ಗ್ರಾಮದಲ್ಲಿ ಘಟನೆ

ಕುರಿ, ದನಕರುಗಳನ್ನು ಮೇಯಲು ಬಿಟ್ಟು ಕಟ್ಟೆ ಮೇಲೆ ಮಲಗಿದ್ದ ತಮ್ಮಯ್ಯ

ಈ ವೇಳೆ ಕಂಠಪೂರ್ತಿ ಕುಡಿದು ಬಂದು ಸ್ಕ್ರೂ ಡ್ರೈವರ್‌ನಿಂದ ಚುಚ್ಚಿ ಕೊಂದಿರುವ ಜಗದೀಶ್

ತಮ್ಮಯ್ಯ ಮೃತಪಟ್ಟ ನಂತರ ಬೇಲೂರು ಆಸ್ಪತ್ರೆಗೆ ಆಸ್ಪತ್ರೆಗೆ ಕರೆ ತಂದು ನಾಟಕವಾಗಿದ್ದ ಪಾಪಿ ಅಳಿಯ

ಎದೆನೋವು ಕಾಣಿಸಿಕೊಂಡಿದೆ ಎಂದು ಆಸ್ಪತ್ರೆಯ ಸಿಬ್ಬಂದಿ ಬಳಿ ಹೇಳಿದ್ದ ಜಗದೀಶ್

ತಮ್ಮಯ್ಯ ಅವರನ್ನು ತಪಾಸಣೆ ಮಾಡಿದಾಗ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವುದು ಬೆಳಕಿಗೆ

ಈ ವೇಳೆ ತಪ್ಪಿಸಿಕೊಳ್ಳಲು‌ ಯತ್ನಿಸಿದ ಜಗದೀಶ್

ಜಗದೀಶ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಕುಡಿತದ ದಾಸನಾಗಿದ್ದ ಆರೋಪಿ ಜಗದೀಶ್

ಕೊಲೆ ನಿಖರ ಕಾರಣ ತಿಳಿದು ಬಂದಿಲ್ಲ

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Continue Reading
Click to comment

Leave a Reply

Your email address will not be published. Required fields are marked *

Hassan

ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾ*ವು

Published

on

ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾವು

ಶಿವಪ್ರಸಾದ್ (32) ಸಾವನ್ನಪ್ಪಿದ ವ್ಯಕ್ತಿ

ಹಾಸನ ಜಿಲ್ಲೆ, ಚನ್ನರಾಯಪಟ್ಟಣದ, ರಾಮೇಶ್ವರ ಬಡಾವಣೆ‌ ಬಳಿ ಘಟನೆ

ದಿಡಗ ಗ್ರಾಮ ಪಂಚಾಯ್ತಿಯಲ್ಲಿ ಅಸಿಸ್ಟೆಂಟ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್

ಅತಿಯಾಗಿ ಮದ್ಯ ಸೇವಿಸುತ್ತಿದ್ದ ಶಿವಪ್ರಸಾದ್

ನಿನ್ನೆ ತಡರಾತ್ರಿ ಮದ್ಯಸೇವಿಸಿ ತಮ್ಮ KA-13-M-7321 ರೆನಾಲ್ಟೊ ಕಾರಿನೊಳಗೆ ಮಲಗಿದ್ದ ಶಿವಪ್ರಸಾದ್

ಕಾರಿನಲ್ಲೇ ಸಾವನ್ನಪ್ಪಿರುವ ಶಿವಪ್ರಸಾದ್

ಕಾರಿನೊಳಗೆ ಇದ್ದ ಕಾರಿನ ಕೀ

ಕಾರು ನಿಂತಿರುವುದನ್ನು ನಿಂತಲ್ಲೆ ನಿಂತಿರುವುದನ್ನು ನೋಡಿದ ಸ್ಥಳೀಯರು

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು

ಮ್ಯಾಕಾನಿಕ್ ಕರೆಸಿ ಕಾರಿನ ಡೋರ್‌ಲಾಕ್ ತೆಗೆದು ಪರಿಶೀಲಿಸಿದ ಪೊಲೀಸರು

 

ಕಾರಿನೊಳಗೆ ಸಾವನ್ನಪ್ಪಿದ್ದ ಶಿವಪ್ರಸಾದ್

ಶಿವಪ್ರಸಾದ್ ಆಲೂರು ತಾಲ್ಲೂಕಿನ, ಸಿದ್ದಾಪುರ ಗ್ರಾಮದವನು

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Continue Reading

Hassan

ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ

Published

on

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಬಗರ್‌ಹುಕುಂಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಯಾವ ರೈತರಿಗೂ ಅನ್ಯಾಯ ಆಗದಂತೆ, ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಮುಂದಿನ ಸಭೆಯಲ್ಲಿ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು, ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿದ್ದು, ನಿಯಮಾನುಸಾರ ಅರ್ಜಿ ಸಲ್ಲಿಸಿ ಅನುಭವದಲ್ಲಿರುವ ರೈತರ ಜಮೀನುಗಳ ಬಳಿ ತೆರಳಿ ತಹಶೀಲ್ದಾ‌ರ್ ಹಾಗೂ ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಮೀನಿಗೆ ಸಂಬಂಧಿಸಿದಂತೆ ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆದಾಡಿಸಬಾರದು. ಮಧ್ಯವರ್ತಿಗಳಿಗೆ ಅವಕಾಶ ನೀಡದೇ ಫಲಾನುಭವಿ ರೈತರಿಗೆ ಅನುಕೂಲ ಮಾಡಿಕೊಡಲು ಅಧಿಕಾರಿಗಳು ಮುಂದಾಗಬೇಕು. ಯಾವುದೇ ಸಮಸ್ಯೆ ಇದ್ದಲ್ಲಿ ಗಮನಕ್ಕೆ ತರಬೇಕು. ಅನ್ಯಾಯ ಆಗದಂತೆ ಪಾರದರ್ಶಕವಾಗಿ ಪರಿಶೀಲಿಸಿ, ನಿಯಮಾನುಸಾರ ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಹಶೀಲ್ ಮಲ್ಲಿಕಾರ್ಜುನ್ ಮಾತನಾಡಿ, ಎರಡು ವರ್ಷಗಳ ನಂತರ ಬಗರ್ ಹುಕುಂ ಸಮಿತಿ ಸಭೆ ನಡೆದಿದ್ದು, 26 ಫಲಾನುಭವಿಗಳ ಪೈಕಿ, ಗುರುವಾರ ನಡೆದ ಸಭೆಯಲ್ಲಿ ಎರಡು ಅರ್ಜಿಗಳನ್ನು ಅನುಮೋದಿಸಲಾಯಿತು. ಉಳಿದ 24 ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲಿಸಿ ಮುಂದಿನ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಉಪ ತಹಶೀಲ್ದಾ‌ರ್ ಎಂ.ಎ.ಅಂಕೆಗೌಡ, ಭೂಮಿ ಸಂಯೋಜಕ ಪ್ರದೀಪ್, ಹೋಬಳಿಗಳ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಹಾಗು ಸಿಬ್ಬಂದಿಗಳು ಹಾಜರಿದ್ದರು.

ಪೋಟೋ ಕ್ಯಾಪ್ಶನ್: ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಶಾಸಕ ಸಿಮೆಂಟ್ ಮಂಜು ಭಾಗವಹಿಸಿ ಮಾತನಾಡಿದರು.

Continue Reading

Hassan

ಜನಿವಾರ, ಕಾಶೀ ದಾರ ತೆಗೆಸಿರುವುದು ಖಂಡನೀಯ

Published

on

ಹಾಸನ: ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಹಾಗೂ ಕೈಗೆ ಹಾಕಿದ್ದ ಕಾಶೀ ದಾರವನ್ನು ತೆಗೆದು ಹಾಕಲು ಹೇಳಿದ ಘಟನೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಕಾರ್ಯಕರ್ತ ಹಾಗೂ ಬ್ರಾಹ್ಮಣ ಸಂಘದ ಸದಸ್ಯ ವೇಣುಗೋಪಾಲ್ ಬೇಸರವ್ಯಕ್ತಪಡಿಸಿದ್ದಾರೆ.

ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಅವರ ಅವರ ಧರ್ಮದ ಆಚರಣೆಗಳನ್ನು, ಇನ್ನೊಬ್ಬರಿಗೆ ತೊಂದರೆ ಆಗದಂತೆ, ಪಾಲಿಸುವ ಅವಕಾಶ ನೀಡಿದೆ. ಹೀಗಿರುವಾಗ ಸಾಮಾನ್ಯ ನಾಗರೀಕನ ಹಕ್ಕನ್ನು ಮೋಟಕುಗೊಳಿಸುವ ಪ್ರಯತ್ನವನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಅಲ್ಪಸಂಖ್ಯಾತರನ್ನು ಒಲೈಸುವ ನೆಪದಲ್ಲಿ ಬ್ರಾಹ್ಮಣ ಸಮಾಜದ ಧಾರ್ಮಿಕ ಆಚರಣೆಗಳನ್ನು ತಡೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

Continue Reading

Trending

error: Content is protected !!