Hassan
ಕುಡಿದ ಮತ್ತಿನಲ್ಲಿ ಮಾವನನ್ನು ಕೊಂದ ಅಳಿಯ

ಹಾಸನ : ಕುಡಿದ ಮತ್ತಿನಲ್ಲಿ ಮಾವನನ್ನು ಕೊಂದ ಅಳಿಯ
ತಮ್ಮಯ್ಯ (58) ಕೊಲೆಯಾದ ವ್ಯಕ್ತಿ
ಬಲ್ಲೇನಹಳ್ಳಿ ಗ್ರಾಮದ ಜಗದೀಶ್ (40) ಕೊಲೆ ಮಾಡಿದ ಆರೋಪಿ
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ರಾಮೇನಹಳ್ಳಿ ಗ್ರಾಮದಲ್ಲಿ ಘಟನೆ
ಕುರಿ, ದನಕರುಗಳನ್ನು ಮೇಯಲು ಬಿಟ್ಟು ಕಟ್ಟೆ ಮೇಲೆ ಮಲಗಿದ್ದ ತಮ್ಮಯ್ಯ
ಈ ವೇಳೆ ಕಂಠಪೂರ್ತಿ ಕುಡಿದು ಬಂದು ಸ್ಕ್ರೂ ಡ್ರೈವರ್ನಿಂದ ಚುಚ್ಚಿ ಕೊಂದಿರುವ ಜಗದೀಶ್
ತಮ್ಮಯ್ಯ ಮೃತಪಟ್ಟ ನಂತರ ಬೇಲೂರು ಆಸ್ಪತ್ರೆಗೆ ಆಸ್ಪತ್ರೆಗೆ ಕರೆ ತಂದು ನಾಟಕವಾಗಿದ್ದ ಪಾಪಿ ಅಳಿಯ
ಎದೆನೋವು ಕಾಣಿಸಿಕೊಂಡಿದೆ ಎಂದು ಆಸ್ಪತ್ರೆಯ ಸಿಬ್ಬಂದಿ ಬಳಿ ಹೇಳಿದ್ದ ಜಗದೀಶ್
ತಮ್ಮಯ್ಯ ಅವರನ್ನು ತಪಾಸಣೆ ಮಾಡಿದಾಗ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವುದು ಬೆಳಕಿಗೆ
ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಜಗದೀಶ್
ಜಗದೀಶ್ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು
ಕುಡಿತದ ದಾಸನಾಗಿದ್ದ ಆರೋಪಿ ಜಗದೀಶ್
ಕೊಲೆ ನಿಖರ ಕಾರಣ ತಿಳಿದು ಬಂದಿಲ್ಲ
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Hassan
ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾ*ವು

ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾವು
ಶಿವಪ್ರಸಾದ್ (32) ಸಾವನ್ನಪ್ಪಿದ ವ್ಯಕ್ತಿ
ಹಾಸನ ಜಿಲ್ಲೆ, ಚನ್ನರಾಯಪಟ್ಟಣದ, ರಾಮೇಶ್ವರ ಬಡಾವಣೆ ಬಳಿ ಘಟನೆ
ದಿಡಗ ಗ್ರಾಮ ಪಂಚಾಯ್ತಿಯಲ್ಲಿ ಅಸಿಸ್ಟೆಂಟ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್
ಅತಿಯಾಗಿ ಮದ್ಯ ಸೇವಿಸುತ್ತಿದ್ದ ಶಿವಪ್ರಸಾದ್
ನಿನ್ನೆ ತಡರಾತ್ರಿ ಮದ್ಯಸೇವಿಸಿ ತಮ್ಮ KA-13-M-7321 ರೆನಾಲ್ಟೊ ಕಾರಿನೊಳಗೆ ಮಲಗಿದ್ದ ಶಿವಪ್ರಸಾದ್
ಕಾರಿನಲ್ಲೇ ಸಾವನ್ನಪ್ಪಿರುವ ಶಿವಪ್ರಸಾದ್
ಕಾರಿನೊಳಗೆ ಇದ್ದ ಕಾರಿನ ಕೀ
ಕಾರು ನಿಂತಿರುವುದನ್ನು ನಿಂತಲ್ಲೆ ನಿಂತಿರುವುದನ್ನು ನೋಡಿದ ಸ್ಥಳೀಯರು
ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು
ಮ್ಯಾಕಾನಿಕ್ ಕರೆಸಿ ಕಾರಿನ ಡೋರ್ಲಾಕ್ ತೆಗೆದು ಪರಿಶೀಲಿಸಿದ ಪೊಲೀಸರು
ಕಾರಿನೊಳಗೆ ಸಾವನ್ನಪ್ಪಿದ್ದ ಶಿವಪ್ರಸಾದ್
ಶಿವಪ್ರಸಾದ್ ಆಲೂರು ತಾಲ್ಲೂಕಿನ, ಸಿದ್ದಾಪುರ ಗ್ರಾಮದವನು
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Hassan
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಬಗರ್ಹುಕುಂಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಯಾವ ರೈತರಿಗೂ ಅನ್ಯಾಯ ಆಗದಂತೆ, ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಮುಂದಿನ ಸಭೆಯಲ್ಲಿ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು, ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿದ್ದು, ನಿಯಮಾನುಸಾರ ಅರ್ಜಿ ಸಲ್ಲಿಸಿ ಅನುಭವದಲ್ಲಿರುವ ರೈತರ ಜಮೀನುಗಳ ಬಳಿ ತೆರಳಿ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಮೀನಿಗೆ ಸಂಬಂಧಿಸಿದಂತೆ ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆದಾಡಿಸಬಾರದು. ಮಧ್ಯವರ್ತಿಗಳಿಗೆ ಅವಕಾಶ ನೀಡದೇ ಫಲಾನುಭವಿ ರೈತರಿಗೆ ಅನುಕೂಲ ಮಾಡಿಕೊಡಲು ಅಧಿಕಾರಿಗಳು ಮುಂದಾಗಬೇಕು. ಯಾವುದೇ ಸಮಸ್ಯೆ ಇದ್ದಲ್ಲಿ ಗಮನಕ್ಕೆ ತರಬೇಕು. ಅನ್ಯಾಯ ಆಗದಂತೆ ಪಾರದರ್ಶಕವಾಗಿ ಪರಿಶೀಲಿಸಿ, ನಿಯಮಾನುಸಾರ ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತಹಶೀಲ್ ಮಲ್ಲಿಕಾರ್ಜುನ್ ಮಾತನಾಡಿ, ಎರಡು ವರ್ಷಗಳ ನಂತರ ಬಗರ್ ಹುಕುಂ ಸಮಿತಿ ಸಭೆ ನಡೆದಿದ್ದು, 26 ಫಲಾನುಭವಿಗಳ ಪೈಕಿ, ಗುರುವಾರ ನಡೆದ ಸಭೆಯಲ್ಲಿ ಎರಡು ಅರ್ಜಿಗಳನ್ನು ಅನುಮೋದಿಸಲಾಯಿತು. ಉಳಿದ 24 ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲಿಸಿ ಮುಂದಿನ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಉಪ ತಹಶೀಲ್ದಾರ್ ಎಂ.ಎ.ಅಂಕೆಗೌಡ, ಭೂಮಿ ಸಂಯೋಜಕ ಪ್ರದೀಪ್, ಹೋಬಳಿಗಳ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಹಾಗು ಸಿಬ್ಬಂದಿಗಳು ಹಾಜರಿದ್ದರು.
ಪೋಟೋ ಕ್ಯಾಪ್ಶನ್: ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಶಾಸಕ ಸಿಮೆಂಟ್ ಮಂಜು ಭಾಗವಹಿಸಿ ಮಾತನಾಡಿದರು.
Hassan
ಜನಿವಾರ, ಕಾಶೀ ದಾರ ತೆಗೆಸಿರುವುದು ಖಂಡನೀಯ

ಹಾಸನ: ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಹಾಗೂ ಕೈಗೆ ಹಾಕಿದ್ದ ಕಾಶೀ ದಾರವನ್ನು ತೆಗೆದು ಹಾಕಲು ಹೇಳಿದ ಘಟನೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಕಾರ್ಯಕರ್ತ ಹಾಗೂ ಬ್ರಾಹ್ಮಣ ಸಂಘದ ಸದಸ್ಯ ವೇಣುಗೋಪಾಲ್ ಬೇಸರವ್ಯಕ್ತಪಡಿಸಿದ್ದಾರೆ.
ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಅವರ ಅವರ ಧರ್ಮದ ಆಚರಣೆಗಳನ್ನು, ಇನ್ನೊಬ್ಬರಿಗೆ ತೊಂದರೆ ಆಗದಂತೆ, ಪಾಲಿಸುವ ಅವಕಾಶ ನೀಡಿದೆ. ಹೀಗಿರುವಾಗ ಸಾಮಾನ್ಯ ನಾಗರೀಕನ ಹಕ್ಕನ್ನು ಮೋಟಕುಗೊಳಿಸುವ ಪ್ರಯತ್ನವನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಅಲ್ಪಸಂಖ್ಯಾತರನ್ನು ಒಲೈಸುವ ನೆಪದಲ್ಲಿ ಬ್ರಾಹ್ಮಣ ಸಮಾಜದ ಧಾರ್ಮಿಕ ಆಚರಣೆಗಳನ್ನು ತಡೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
-
Chamarajanagar21 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore18 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Kodagu23 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Hassan22 hours ago
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ
-
Kodagu18 hours ago
ಹುಲಿ ದಾಳಿಗೆ ಕರು ಬಲಿ
-
Chikmagalur24 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Kodagu21 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Chikmagalur23 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.