Connect with us

State

ಕಡ್ಡಾಯ ಗ್ರಾಮೀಣ ಸೇವೆ’ ವಿನಾಯ್ತಿ: ಖುಷಿಯಾದ MBBS ವಿದ್ಯಾರ್ಥಿ’ಗಳು

Published

on

ಬೆಳಗಾವಿ : ಎಂಬಿಬಿಎಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಗ್ರಾಮೀಣ ಸೇವೆ ಮಾಡುವುದರಿಂದ ವಿನಾಯ್ತಿ ನೀಡೋ ಸಂಬಂಧವಾಗಿ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿದ್ದು, ರಾಜ್ಯದ ನಾನಾ ಕಡೆಯ ವೈದ್ಯ ವಿದ್ಯಾರ್ಥಿಗಳು ಖುಷಿ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 2023ನೇ ಸಾಲಿನಲ್ಲಿ ವೈದ್ಯಕೀಯ ಕೋರ್ಸ್ ಮುಗುಸಿದವರು ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯ್ತಿ ನೀಡುವ ತಿದ್ದುಪಡಿ ಕಾಯ್ದೆಯನ್ನು ಮಂಡಿಸಿದ್ದಾರೆ.
2023ನೇ ಸಾಲಿನ ಈ ವರ್ಷದಿಂದ ತಿದ್ದುಪಡಿ ವಿಧೇಯಕ ಎರಡು ಸದನಲ್ಲಿ ಅಂಗೀಕಾರಗೊಂಡರೇ, ವೈದ್ಯಕೀಯ ವ್ಯಾಸಂಗ ಮುಗಿಸಿದಂತ ವಿದ್ಯಾರ್ಥಿಗಳು ಕಡ್ಡಾಯವಾಗಿ ಗ್ರಾಮೀಣ ಸೇವೆ ಮಾಡೋದರಿಂದ ಬಿಲ್ ವಿನಾಯ್ತಿ ನೀಡಲಿದೆ.


ಅಂದಹಾಗೇ ಈಗಾಗಲೇ ಎಂಬಿಬಿಎಸ್ ಮುಗಿಸಿದಂತ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಗೈದಿದ್ದಾರೆ. ಗೈಯ್ಯುತ್ತಿದ್ದಾರೆ. ಅವರಿಗೆ ರಾಜ್ಯ ಸರ್ಕಾರದಿಂದ ಗೌರವ ಧನ ಕೂಡ ನೀಡಲಾಗುತ್ತಿದೆ. ಇದೀಗ ಈ ಕಡ್ಡಾಯ ಗ್ರಾಮೀಣ ಸೇವೆಯಿಂದ ತಿದ್ದುಪಡಿ ಬಿಲ್ ಮಂಡನೆಯಿಂದ ವಿನಾಯ್ತಿ ದೊರೆಯಲಿದೆ. ಇದು ಸಹಜವಾಗಿ ವೈದ್ಯ ವಿದ್ಯಾರ್ಥಿಗಳನ್ನು ಖುಷಿಗೊಳಿಸಿದೆ.

Continue Reading
Click to comment

Leave a Reply

Your email address will not be published. Required fields are marked *

State

ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು: ಎಂಎಲ್‌ಸಿ ರಾಜೇಂದ್ರ ಹೊಸ ಬಾಂಬ್‌

Published

on

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಟ್ವಿಸ್ಟ್‌ ಸಿಕ್ಕಿದ್ದು, ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು ಎಂದು ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ.

ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ. ಸಚಿವರು ಕೂಡ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ನನ್ನ ಮೇಲೆ ಹನಿಟ್ರ್ಯಾಪ್‌ ಆಗಿಲ್ಲ. ದೂರವಾಣಿ ಕರೆ ಮೂಲಕ ಯತ್ನ ನಡೆಯುತ್ತಾ ಇತ್ತು ಎಂದರು.

ನವೆಂಬರ್.‌16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕಲು ಸ್ವಲ್ಪ ಜನ ಬಂದಿದ್ದರು. ಆ ವೇಳೆ ನನ್ನನ್ನು ಹತ್ಯೆ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳಿದರು.

ಈ ಬಗ್ಗೆ ನನ್ನ ಆಪ್ತರ ಮೂಲಕ ಆಡಿಯೋ ಸಿಕ್ಕಿತು. ಆಡಿಯೋದಲ್ಲಿ 5 ಲಕ್ಷ ಸುಪಾರಿ ನೀಡಿದ್ರು. ಮೂರು ಜನ ಹತ್ಯೆ ಮಾಡಲು ಪ್ರಯತ್ನಿಸಿದ್ದರು ಎಂದು ಮಾಹಿತಿ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ಸಿಐಡಿಗೆ ಹೋಗಿದೆ. ಪೊಲೀಸರು ರಾಜಣ್ಣ ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಮನೆ ಕೆಲಸದವರ ಹೇಳಿಕೆಯನ್ನು ಸಹ ಪಡೆದಿದ್ದಾರೆ. ಈ ಪ್ರಕರಣದ ನಾಯಕ ಯಾರು ಎಂದು ಗೊತ್ತಾಗುತ್ತಿಲ್ಲ. ನಾನು ಯಾರ ಹೆಸರನ್ನು ಕೂಡ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.

Continue Reading

State

ಹಾಲಿನ ದರ ಹೆಚ್ಚಳ ಬೆನ್ನಲ್ಲೇ ಮತ್ತೊಂದು ಶಾಕ್‌: ಯೂನಿಟ್‌ಗೆ 36 ಪೈಸೆ ವಿದ್ಯುತ್‌ ದರ ಹೆಚ್ಚಿಸಿದ ಸರ್ಕಾರ

Published

on

ಬೆಂಗಳೂರು: ಗುರುವಾರ ಕರ್ನಾಟಕದ ಜನತೆಗೆ ಬಿಗ್‌ ಶಾಕ್‌. ರಾಜ್ಯ ಸರ್ಕಾರ ಜನರಿಗೆ ಎರಡೆರೆಡು ಬಿಗ್‌ ಶಾಕ್‌ ಒಂದೇ ದಿನ ನೀಡಿದ್ದು, ಜನರಿಗೆ ದಿಕ್ಕೇ ತೋಚದಂತಾಗಿದೆ.

ಹಾಲಿನ ದರ ಪರಿಷ್ಕರಣೆ ಮಾಡಿ ಬೆಳಿಗ್ಗೆ ಶಾಕ್‌ ನೀಡಿದ್ದ ಸರ್ಕಾರ, ಈಗ ವಿದ್ಯುತ್‌ ದರ ಹೆಚ್ಚಿಸಿ ಮತ್ತೊಂದು ಶಾಕ್‌ ನೀಡಿದೆ.

ಇದೇ ಏ.1 ರಿಂದ ಪ್ರತಿ ಯೂನಿಟ್‌ ವಿದ್ಯುತ್‌ ಮೇಲೆ 36 ಪೈಸೆ ಹೆಚ್ಚಿಸಲಾಗುವುದು ಎಂದು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಗುರುವಾರ ಆದೇಶ ಹೊರಡಿಸಿದೆ.

ವಿದ್ಯುತ್‌ ಪ್ರಸರಣ ಹಾಗೂ ಎಸ್ಕಾಂಗಳ ಸಿಬ್ಬಂದಿಗಳ ಪಿಂಚಣಿ ಹಾಗೂ ಗ್ರ್ಯಾಚುರಿ ಪಾವತಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಏಂದು ಕೆಇಆರ್‌ಸಿ ತಿಳಿಸಿದೆ.

 

 

 

Continue Reading

State

ಸವಾಲಿನ ವಿರುದ್ದವೇ ಕೆಲಸ ಮಾಡುವ ಛಾತಿ ಬೆಳೆಸಿಕೊಳ್ಳಬೇಕು: ಡಾ.ವಿಜಯಾ

Published

on

ಬೆಂಗಳೂರು: ಸಾಧಿಸುವ ಛಲ, ವೃತ್ತಿ ಬದ್ಧತೆ ಇದ್ದರೆ ಪತ್ರಕರ್ತರಿಗೆ ವಯಸ್ಸು ಅಡ್ಡಿಯಾಗುವುದಿಲ್ಲ. ಸವಾಲಿನ ವಿರುದ್ದವೇ ಕೆಲಸ ಮಾಡುವ ವೃತ್ತಿ ಬದ್ಧತೆಯ ಛಾತಿ ರೂಢಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತೆ, ರಂಗಕರ್ಮಿ, ಸಾಹಿತಿ ಡಾ.ವಿಜಯಾ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಮಹಿಳಾ ದಿನಾಚರಣೆ ಪ್ರಯುಕ್ತ ಮತ್ತು ವಿಶ್ವ ರಂಗಭೂಮಿ ದಿನಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ ಮನೆಯಂಗಳದಲ್ಲಿ ಮನದುಂಬಿ ನಮನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಇತ್ತೀಚೆಗಿನ ದಿನಗಳಲ್ಲಿ ಪತ್ರಿಕಾ ವೃತ್ತಿಯಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗುತ್ತಿರುವುದು ನಿಜಕ್ಕೂ ಉತ್ತಮ ಬೆಳವಣಿಗೆ ಎಂದು ಹೇಳಿದರು.

ಪತ್ರಿಕೋದ್ಯಮದ ಜೊತೆಗೆ ಅನ್ಯಾಯಗಳ ವಿರುದ್ಧ ತಾನು ಸಾಕಷ್ಟು ಹೋರಾಟ ಮಾಡಿಕೊಂಡ ಕಾರಣಕ್ಕೆ ಸಮಾಜದ ವ್ಯವಸ್ಥೆಯ ಬಗ್ಗೆ ಪತ್ರಕರ್ತೆಯಾಗಿ ತನಗೆ ಸಂಪೂರ್ಣ ಅರಿವಿದೆ. ಕೆಲವು ಪತ್ರಿಕಾ ಸಂಸ್ಥೆಗಳು ಇತ್ತೀಚೆಗೆ ಕಾರ್ಪೋರೇಟ್ ವ್ಯವಸ್ಥೆಯಿಂದ ಕೂಡಿವೆ, ಅವು ಆ ಯೋಚನೆಯಿಂದ ಹೊರಬಂದು ಪತ್ರಕರ್ತರ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದ ರೀತಿಯಲ್ಲಿ ಪತ್ರಕರ್ತರನ್ನು ರೂಪಿಸಿ, ನಡೆಸಿಕೊಳ್ಳಬೇಕು ಎಂದರು.

ಐಟಿಐ ಸಂಸ್ಥೆಯಿಂದ ಸುದ್ದಿಮನೆಗೆ ಪಯಣ: ದಾವಣಗೆರೆ ಮೂಲದ ಡಾ. ವಿಜಯಾ ಅವರು ಬೆಂಗಳೂರಿನ ಐಟಿಐ ಸಂಸ್ಥೆಯಲ್ಲಿ ವೃತ್ತಿರಂಗಕ್ಕೆ ಪ್ರವೇಶಿಸಿದವರು. ಅಲ್ಲಿ ಆರಂಭವಾದ ಅವರ ಬರವಣಿಗೆಯ ಹವ್ಯಾಸವು ನಾಡಿನ ಹಿರಿಯ ಮತ್ತು ಪ್ರಶಸ್ತಿ ವಿಜೇತ ಪತ್ರಕರ್ತೆಯ ಸಾಲಿನಲ್ಲಿ ತಂದು ನಿಲ್ಲಿಸಿದೆ. ಪ್ರಜಾಮತ ಪತ್ರಿಕೆಯಲ್ಲಿ ಆರಂಭವಾದ ಅವರ ಬರಹಗಳು ಅದೇ ಸಂಸ್ಥೆಯ ಮಯೂರ, ಉದಯವಾಣಿ ಬಳಗದ ತುಷಾರ, ರೂಪತಾರ, ಮಲ್ಲಿಗೆ ಮುಂತಾದ ಪತ್ರಿಕೆಗಳ ಅಂಕಣಕಾರರನ್ನಾಗಿಸಿತು ಹಾಗೂ ಆ ಪತ್ರಿಕೆಗಳ ಸಂಪಾದಕ ಸ್ಥಾನವನ್ನೂ ದೊರಕಿಸಿಕೊಟ್ಟಿತು. ಮಲ್ಲಿಗೆ ಪತ್ರಿಕೆ ಹೆಚ್ಚಿನ ಜನಪ್ರಿಯತೆ ತಂದುಕೊಟ್ಟಿತು. ಆರಂಭದಲ್ಲಿ ಗೋಕಾಕ್ ಚಳುವಳಿಯಲ್ಲಿ ಕಾರಾಗೃಹ ವಾಸವನ್ನೂ ಅನುಭವಿಸಿರುವ ಡಾ. ವಿಜಯ ಅವರ ಆರಂಭಿಕ ಚಟುವಟಿಕೆಗಳು ಹೋರಾಟ ಮನೋಭಾವಕ್ಕೆ ಮಾತ್ರ ಸೀಮಿತವಾಗಿದ್ದರೂ, ಕ್ರಮೇಣ ರಂಗಭೂಮಿಯತ್ತ ಅವರು ಮನಸ್ಸನ್ನು ಹೊರಳಿಸಿ ಬೀದಿ ನಾಟಕ ಎಂಬ ಕಲ್ಪನೆಯನ್ನು ಹುಟ್ಟು ಹಾಕಿ, ಬಳಿಕ ಸಾವಿರಾರು ಸಿನಿಮಾ ಲೇಖನಗಳನ್ನು ಬರೆದು ಕನ್ನಡದ ಖ್ಯಾತ ಸಿನಿಮಾ ಪತ್ರಕರ್ತೆ ಎಂದೆನಿಸಿಕೊಂಡವರು. ಕೇಂದ್ರ ಸಾಹಿತ್ಯ ಅಕಾಡೆಮಿ ಸೇರಿದಂತೆ ಹತ್ತಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಅವರು, ’ವಿಜಯಮ್ಮ’ ಎಂದೇ ಪತ್ರಕರ್ತರ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ತಮಗೆ ದೊರೆತ ಪ್ರಶಸ್ತಿಗಳ ಜೊತೆ ಬಂದ ನಗದು ಬಹುಮಾನಗಳನ್ನೆಲ್ಲಾ ಮರಳಿ ನೀಡಿದವರು, ಇಲ್ಲವೇ ಸಾಮಾಜಿಕ ಸೇವಾ ಕಾರ್ಯಕ್ಕೆ ವಿನಿಯೋಗಿಸಿಕೊಂಡವರು. ಯಾರ ಹಂಗಿನಲ್ಲೂ ಇರದೆ, ಸ್ವಾಭಿಮಾನಿ ಗುಣವನ್ನು ಮೈಗೂಡಿಸಿಕೊಂಡ ಸ್ವಭಾವ ಅವರದ್ದಾಗಿದೆ.

ಅನನ್ಯವಾದ ಸೇವೆಯ ಅಮ್ಮ: ಇದೇ ಸಂದರ್ಭದಲ್ಲಿ ಡಾ. ವಿಜಯಾ ಅವರ ಸಾಧನೆಯ ಬಗ್ಗೆ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ತಮ್ಮ ಸುದೀರ್ಘ ಅವಧಿಯ ವೃತ್ತಿ ಜೀವನದ ಅವರ ಕೊಡುಗೆ ಪತ್ರಿಕಾ ರಂಗಕ್ಕೆ ನಿಜಕ್ಕೂ ಬಹುದೊಡ್ಡ ಕೊಡುಗೆ. 90ರ ದಶಕದ ಬಾಗೂರು ಚಳುವಳಿಗಾರರಿಗೂ ಅವರು ಸಹಕಾರ ನೀಡಿದ ದೂರದೃಷ್ಟಿಯ ಚಿಂತನೆಯ ಸಹಕಾರವೂ ಸ್ಮರಣೀಯ. ಅವರ ಆದರ್ಶ ಇಂದಿನ ಯುವ ಪತ್ರಕರ್ತರಿಗೆ ನಿಜಕ್ಕೂ ಮಾದರಿ ಎಂದರು. ಪತ್ರಕರ್ತೆಯಾಗಿ, ಸಂಘಟಕಿಯಾಗಿ, ಸಾಹಿತಿಯಾಗಿ, ರಂಗಕರ್ಮಿಯಾಗಿ ವಿಜಯಮ್ಮ ಅವರ ಸೇವೆ ಅನನ್ಯ ಎಂದು ಶ್ಲಾಸಿದರು.

ಅಮ್ಮನ ಭಾವ ತುಂಬಿದ ವಿಜಯಮ್ಮ: ಹಿರಿಯ ಪತ್ರಕರ್ತ ಜಿ.ಎನ್.ಮೋಹನ್ ಮಾತನಾಡಿ, ಸಮಾಜದಲ್ಲಿ ಸಾಮಾಜಿಕ ಬದ್ಧತೆ ಏನೆಂಬುದನ್ನು ತೋರಿಸಿದ ದಿಟ್ಟ ಪತ್ರಕರ್ತೆ ಡಾ. ವಿಜಯಾ ಅವರು ಎಂದು ಉದಾಹರಣೆ ಸಹಿತ ಶ್ಲಾಘಿಸಿದರು. ಒಬ್ಬೊಬ್ಬರನ್ನು ಒಂದೊಂದು ರೀತಿಯಲ್ಲಿ ಪ್ರಭಾವಿಸಿ, ಅವರಿಗೆ ನೆರವಾಗಿರುವ ಕಾರಣಕ್ಕೆ ಅವರಿಗೆ ಅಮ್ಮ ಪಟ್ಟ ದೊರೆತಿದೆ. ಸಮಾಜಕ್ಕೆ ಮೊದಲು ಬೀದಿ ನಾಟಕಗಳ ಪರಿಕಲ್ಪನೆಯನ್ನು ಬಿತ್ತಿದ್ದನ್ನು ಮರೆಯುವಂತಿಲ್ಲ. ಪ್ರತಿಯೊಂದು ಸಮಸ್ಯೆಗೂ ಸ್ಪಂದಿಸುವ ಅವರ ಮಾತೃ ಹೃದಯ ಇಡೀ ಸಮಾಜಕ್ಕೆ ಮಾದರಿ ಎಂದರು.

ಹೊಸಭಾಷ್ಯ ಬರೆದರು: ಚಲನಚಿತ್ರ ಪತ್ರಿಕೋದ್ಯಮದಲ್ಲಿ ಹೊಸ ಭಾಷ್ಯ ಬರೆದ ಹೆಗ್ಗಳಿಕೆಗೆ ಡಾ. ವಿಜಯಾ ಅವರು ಪಾತ್ರರಾಗಿದ್ದು, ಅವರ ಬರವಣಿಗೆಯ ಮಾರ್ಗದರ್ಶನ ಇಂದಿನ ಪತ್ರಕರ್ತರಿಗೂ ದೊರೆತಿದೆ ಎಂದು ಹಿರಿಯ ಪತ್ರಕರ್ತರಾದ ಬಾ.ನಾ. ಸುಬ್ರಮಣ್ಯ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಪತ್ರಕರ್ತೆಯರಿಗೆ ಆಸರೆ: ಪತ್ರಕರ್ತೆಯರ ಸಂಘದ ಮಾಲತಿ ಭಟ್ ಮಾತನಾಡಿ, ಉನ್ನತ ವ್ಯಕ್ತಿತ್ವದ ಡಾ. ವಿಜಯ ಅವರು ಪತ್ರಕರ್ತೆಯರ ಸಮಸ್ಯೆಗಳಿಗೂ ಸ್ಪಂದಿಸಿದವರು ಮತ್ತು ಪರ್ತ್ರಕರ್ತೆಯರ ಸಂಘದ ಹುಟ್ಟಿಗೂ ಕಾರಣಕರ್ತರಾದವರು ಎಂದರು.

ಡಾ. ವಿಜಯ ಅವರು ಪತ್ರಿಕಾ ವೃತ್ತಿಯ ಜೊತೆಗೆ ಹಲವಾರು ಮೌಲ್ಯಯುತ ಗ್ರಂಥಗಳ ಸಂಪಾದಕಿಯಾಗಿ ಪುಸ್ತಕ ಪ್ರಕಟಣೆಗಳ ಮೆರಗನ್ನು ಹೆಚ್ಚಿಸಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್ ಹೇಳಿದರು.

ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಕೆ. ಆರ್. ದೇವರಾಜ್, ನಗರ ಘಟಕದ ಸಮಿತಿ ಸದಸ್ಯ ಡಿ.ಎಲ್.ಹರೀಶ್, ಶಿವರಾಜ್, ಸದಸ್ಯರಾದ ಸುಂದರೇಶ್, ಶರಣ ಬಸಪ್ಪ, ಪೂರ್ಣಿಮಾ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ ಸ್ವಾಗತಿಸಿ, ಕೊನೆಯಲ್ಲಿ ರಾಜ್ಯ ಖಜಾಂಚಿ ವಾಸುದೇವ ಹೊಳ್ಳ ವಂದನಾರ್ಪಣೆ ಮಾಡಿದರು.

ಕಾರ್ಯಕ್ರಮದ ವೇಳೆ ಡಾ. ವಿಜಯಾ ಅವರ ಸಹೋದರಿ ಪುಷ್ಪಾ, ಪುತ್ರ ಗುರು, ಸೊಸೆ ಭಾರತಿ ಸೇರಿದಂತೆ ಅವರ ಹಲವಾರು ಹಿತೈಷಿಗಳು ಪಾಲ್ಗೊಂಡಿದ್ದರು.

Continue Reading

Trending

error: Content is protected !!