Connect with us

Chamarajanagar

ಮುಖಂಡರುಗಳ ಸಭೆ

Published

on

ವರದಿ : ಗೋವಿಂದ‌‌ ಕೆ ಗೌಡ ಹನೂರು

ಕಳೆದ 10 ವರ್ಷಗಳಿಂದ ಕೇಂದ್ರದಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಸಂಕಷ್ಟಗಳೇ ಎದುರಾಗುತ್ತಿದೆ ಪೆಟ್ರೋಲ್, ಅಡುಗೆ ಅನಿಲ ದಿನುಪಯೋಗಿ ವಸ್ತುಗಳ ಬೆಲೆ ಗಗನಕ್ಕೇರಿರುವುದನ್ನು ಮನಗಂಡು ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನಗಳ ಮೂಲಕ ಸಹಾಯಹಸ್ತ ನೀಡಿದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.

ಹನೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಅಜ್ಜೀಪುರ, ಸೂಳೇರಿಪಾಳ್ಯ, ನಾಗಣ್ಣನಗರ ಗ್ರಾಮಗಳಲ್ಲಿ ಮುಖಂಡರುಗಳ ಸಭೆ ನಡೆಸಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷ ಕಳದೆ ವಿಧಾನ ಸಭಾ ಚುನಾವಣೆ ಪೂರ್ವದಲ್ಲಿ ನೀಡಿದ್ದ 5. ಗ್ಯಾರಂಟಿಗಳನ್ನು ಅಧಿಕಾರ ಬಂದ‌ ಕೂಡಲೇ ಜಾರಿಗೆ ತಂದಿದ್ದಾರೆ, ಈ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಮುಂದಿನ ಐದು‌ ವರ್ಷಗಳ ವರೆಗೂ ಸ್ಥಗಿತಗೊಳಿಸುವುದಿಲ್ಲ ಆದರೆ ಬಿಜೆಪಿಯವರು ಲೋಕಸಭಾ ಚುನಾವಣಾ ಬಳಿಕ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುತ್ತಾರೆ ಅಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಗೆ ಬಹುಮತ ಬಂದರೆ ಖಂಡಿತವಾಗಿ ಸಂವಿಧಾನವನ್ನು ಬದಲಾವಣೆ ಮಾಡುತ್ತಾರೆ. ಪ್ರತಿಯೊಬ್ಬರಿಗೂ ತೊಂದರೆ ಉಂಟಾಗುತ್ತದೆ ಎಂದರಲ್ಲದೇ ಮೋದಿ ಸರ್ಕಾರ ದಲಿತರು, ಬಡವರು, ಶೋಷಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಯಾವುದೇ ಕಾರ್ಯಕ್ರಮವನ್ನು ರೂಪಿಸಿಲ್ಲ ಎಂದರೆ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದರೆ ಮಾನ್ಯ ರಾಹುಲ್ ಗಾಂದಿ ಅವರು ಈಗಾಗಲೇ ಪ್ರತಿ ಕುಟುಂಬದ ಒಬ್ಬ ಬಡ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ, ರೈತ ಸಾಲ ಮನ್ನ, ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ 400 ರೂ, ರೈತರಿಗೆ ಬೆಂಬಲ ಬೆಲೆ ಸೇರಿದಂತೆ 5 ಗ್ಯಾರಂಟಿಗಳನ್ನು ನೀಡಿದ್ದಾರೆ ಎಂದು ತಿಳಿಸಿದರು..

ಕೆಪಿಸಿಸಿ ಸದಸ್ಯ ಹಾಗೂ ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಬಸವರಾಜು ಮಾತನಾಡಿ ಮಾನ್ಯ ಸಿದ್ದರಾಮಯ್ಯನವರ ಸರ್ಕಾರ ಕಳೆದ 2013 ರಿಂದ 2018 ರ ವೆರೆಗೆ ಹಾಗೂ ಕಳೆದ ಒಂದು ವರ್ಷದಿಂದ ಉತ್ತಮ ಆಡಳಿತವನ್ನು ನಡೆಸುವ ಮೂಲಕ ದೀನದಲಿತರ, ಹಿಂದುಳಿದವರ, ಬಡವರ ಪರವಾಗಿ ಶ್ರಮಿಸಿದೆ ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನಗಳ ಮೂಲಕ ಜೀವನ ನಿರ್ವಹಣೆ ಮಾಡಿಕೊಂಡು ಹೋಗುತ್ತಿದ್ದಾರೆ ಆಗಾಗಿ ಈ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರತಿ ಗ್ರಾಮಗಳಲ್ಲೂ ಸುನೀಲ್ ಬೋಸ್ ಅವರಿಗೆ ಮತ ಹಾಕುವ ಮೂಲಕ ನಮ್ಮ ವಿಧಾನ ಸಭಾ ಕ್ಷೇತ್ರದಿಂದ ಅತೀ ಹೆಚ್ಷು ಮತಗಳನ್ನು ನೀಡಿ ಜಯಗೊಳಿಸಬೇಕು ಎಂದರು ‌..

ಇದೇ ಸಂದರ್ಭದಲ್ಲಿ ಹನೂರು ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಗಿರೀಶ್, ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಮುರುಡೇಶ್ವರಸ್ವಾಮಿ, ಮುಖಂಡರಾದ ನಾಗರಾಜು, ಪಳನಿಸ್ವಾಮಿ, ಮುನಿಗೌಡ, ಬಸವೇಗೌಡ, ಚೆನ್ನಮಾದೇಗೌಡ, ಕಲೀಲ್, ಮಾದೇವ, ಹಾಗೂ ಇನ್ನೀತರರು ಇದ್ದರು…

Continue Reading
Click to comment

Leave a Reply

Your email address will not be published. Required fields are marked *

Chamarajanagar

ಚಾಮರಾಜನಗರ: ಫೆ.13ರಂದು ವಿವಿಧೆಡೆ ವಿದ್ಯುತ್‌ ವ್ಯತ್ಯಯ

Published

on

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ತಾಲೂಕಿನ ಕಾಗಲವಾಡಿ ಶಾಖಾ ವ್ಯಾಪ್ತಿಯ ಚಂದಕವಾಡಿ ಉಪಕೇಂದ್ರದ ನವೋದಯ ಎನ್.ಜೆ.ವೈ ಹಾಗೂ ಹಿರಿಕೆರೆ ಎನ್.ಜೆ.ವೈ ಫೀಡರ್ ಗಳ ತುರ್ತು ಕಾಮಗಾರಿಯನ್ನು ಫೆಬ್ರವರಿ 13 ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹೆಬ್ಬಸೂರು, ಬಸಪ್ಪನಪಾಳ್ಯ, ಸರಗೂರು, ಹುರಳಿನಂಜನಪುರ, ಕಾಗಲವಾಡಿ, ಲಿಂಗರಾಜಪುರ, ಕರಿಯನಕಟ್ಟೆ, ಮಲ್ಲುಪುರ, ಹಂಚಿತಾಳಪುರ, ಕೊಕ್ಕನಹಳ್ಳಿ, ಅಯ್ಯನಪುರ, ಹಿತ್ತಲಗುಡ್ಡ, ಕೋಟಂಬಳ್ಳಿ, ಮಲ್ಲೇದೇವನಹಳ್ಳಿ ಹಾಗೂ ನಾಗವಳ್ಳಿ, ನಲ್ಲೂರು, ದೇವರಾಜಪುರ, ಕೋಟೆತಿಟ್ಟು, ಹೊಂಡರಬಾಳು, ಚಂದಕವಾಡಿ, ಅರಳೀಪುರ ಗ್ರಾಮಗಳಲ್ಲಿವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸುವಂತೆ ನಿಗಮದ ಸಂತೇಮರಹಳ್ಳಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Chamarajanagar

ಚಿಣ್ಣರ ಕರ್ನಾಟಕ ದರ್ಶನ: ವಿದ್ಯಾರ್ಥಿಗಳಿಗೆ ವೈವಿಧ್ಯತೆ ತಿಳಿಯಲು ಸಹಕಾರಿ ಎಂದ ಮಾರಯ್ಯ

Published

on

ಯಳಂದೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ವಿಶೇಷ ಯೋಜನೆಯಡಿ ತಾಲ್ಲೂಕಿನ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 75 ಮಕ್ಕಳಿಗೆ ಐದು ದಿನಗಳ ಚಿಣ್ಣರ ಕರ್ನಾಟಕ ದರ್ಶನಕ್ಕೆ ಮಂಗಳವಾರ (ಫೆ.11) ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ ಚಾಲನೆ ನೀಡಿದರು.

ದೇಶ ಸುತ್ತು ಕೋಶ ಓದು ಎಂಬಂತೆ ಪ್ರವಾಸದ ಸದುಪಯೋಗ ಪಡೆದು ವಿವಿಧ ರೀತಿಯ ಪ್ರದೇಶಗಳ ವೈವಿಧ್ಯತೆ ತಿಳಿಯಲು ಮಾಹಿತಿ ನೀಡಿದರು.

ಈ ವೇಳೆ ನೌಕರರ ಸಂಘದ ನಿರ್ದೇಶಕ ಎಂ. ರಾಜು ಮಕ್ಕಳಿಗೆ ಸಿಹಿ ನೀಡಿ ಶುಭ ಹಾರೈಸಿದರು. ಶಿಕ್ಷಕರ ಸಂಘದ ಚಂದ್ರಮ್ಮ, ಸಲೀನಾ, ಶಿಕ್ಷಣ ಸಂಯೋಜಕರಾದ ಕುಮಾರ್, ಸಿ ಆರ್ ಪಿ ಎಸ್ ರೇಚಣ್ಣ, ತೇಜಸ್ವಿನಿ, ಶಿಕ್ಷಕರಾದ ಮಹದೇವ್, ಗಿರಿನಾಯಕ್ ಶಶಿಧರ್, ನಾಗರಾಜ್, ಸುನೀಲ್ ಇತರರು ಹಾಜರಿದ್ದರು.

Continue Reading

Chamarajanagar

ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

Published

on

ಚಾಮರಾಜನಗರ: ಮಹಿಳೆಯೊಬ್ಬರು ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನಾಭರಣದ ಬ್ಯಾಗ್ ಅನ್ನು ವಾಪಸ್ ನೀಡಿ ನಗರದ ಆಟೋ ಚಾಲಕ ಸಿದ್ದರಾಜು ಪ್ರಾಮಾಣಿಕತೆ ಮೆರೆದಿದ್ದಾರೆ.

ನಗರದ ಶ್ರೀ ಭುವನೇಶ್ವರಿ ವೃತ್ತದ ಬಳಿ ಹನುಮನಪುರ ನಿವಾಸಿಯಾದ ರಶ್ಮಿ ಅವರು ಬಸ್ ಹತ್ತುವ ಅವಸರದಲ್ಲಿ ಚಿನ್ನಾಭರಣವಿದ್ದ ಬ್ಯಾಗನ್ನು ಆಟೋದಲ್ಲೇ ಮರೆತು ಹೋಗಿದ್ದು, ಬಳಿಕ ಬ್ಯಾಗ್ ಅನ್ನು ಕಳೆದುಕೊಂಡ ವಿಷಯವನ್ನು ಪಟ್ಟಣ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ.

ಅಷ್ಟರಲ್ಲೇ ನಗರದ ಆಟೋ ಚಾಲಕ ಸಿದ್ದರಾಜು ಎಂಬುವವರು ಆಟೋದಲ್ಲಿದ್ದ ಚಿನ್ನಾಭರಣದ ಬ್ಯಾಗ್ ಅನ್ನು ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ. ತದನಂತರ ಪೊಲೀಸರು ಬ್ಯಾಗ್ ಅನ್ನು ರಶ್ಮಿಗೆ ಒಪ್ಪಿಸಿದರು.

Continue Reading

Trending

error: Content is protected !!