Connect with us

Uncategorized

ಆರ್. ಧ್ರುವನಾರಾಯಣ್ ಸಾಹೇಬರ ಮೊದಲನೇ ವರ್ಷದ ನೆನಪಿನರ್ಥವಾಗಿ ‘ವಿಚಾರ ಸಂಕಿರಣ’

Published

on

ನಂಜನಗೂಡು ಮಾ.11

ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಅಹಿಂದ ಸಮಾನ ಮನಸ್ಕರ ವೇದಿಕೆ ವತಿಯಿಂದ ಮಾಜಿ ಸಂಸದ ದಿವಂಗತ ಆರ್.ಧ್ರುವನಾರಾಯಣ್ ರವರ ಮೊದಲನೇ ವರ್ಷದ ನೆನಪಿನ ಅಂಗವಾಗಿ ಒಳ ಮೀಸಲಾತಿ ಮತ್ತು ಜಾತಿ ಗಣತಿ ವರದಿಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹೈಕೋರ್ಟ್ ನ್ಯಾಯವಾದಿಗಳಾದ ಹೆಚ್.ಮೋಹನ್ ಕುಮಾರ್ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮಾಜಿ ಸಂಸದರು ದಿ. ಆರ್. ಧ್ರುವನಾರಾಯಣ್ ಸಾಹೇಬರ ಮೊದಲನೇ ವರ್ಷದ ನೆನಪಿನರ್ಥವಾಗಿ ‘ವಿಚಾರ ಸಂಕಿರಣ’ ದಲ್ಲಿ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಪಾಲ್ಗೊಂಡು ತಂದೆಯಾವರ ದಿ. ಆರ್. ಧ್ರುವನಾರಾಯಣ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನಗಳು ಸಲ್ಲಿಸಿದರು.

ಬಳಿಕ ಪ್ರಾಧ್ಯಾಪಕ ಪ್ರೊ. ಡಿ. ಆನಂದ್ ಮಾತನಾಡಿ,
ಮೀಸಲಾತಿ ವಿರೋಧಿಸುವವರು ಮೀಸಲಾತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಆರ್ಥಿಕವಾಗಿ ಮತ್ತು ಬಡತನದಲ್ಲಿರುವವರಿಗೆ ಮೀಸಲಾತಿ ನೀಡಬೇಕು. ಜಾತಿ ಆಧಾರಿತವಾಗಿ ಮೀಸಲಾತಿ ಅನಿವಾರ್ಯ ಇದೆಯಾ ಎಂಬುದನ್ನು ತಿಳಿದುಕೊಳ್ಳಬೇಕು. ಒಳ ಮೀಸಲಾತಿಯನ್ನು ನೀಡುವ ಬಗ್ಗೆ ವೈಚಾರಿಕವಾಗಿ ಚರ್ಚೆ ನಡೆಯಬೇಕು. ಜನರಿಗೆ ಪೂರಕವಾದ ವಾತಾವರಣವನ್ನು ನಿರ್ಮಾಣ ಮಾಡಬೇಕು. ಇದರ ಸಾಧಕ ಬಾಧಕಗಳ ಬಗ್ಗೆ ವೈಜ್ಞಾನಿಕವಾಗಿ ಚರ್ಚೆ ನಡೆದಾಗ ತಿಳಿಯುತ್ತದೆ. ಮೀಸಲಾತಿಯಿಂದ ಸಂವಿಧಾನದಲ್ಲಿ ಶಕ್ತಿ ತುಂಬುತ್ತದೆಯೇ ಎಂಬುದನ್ನು ಅಧ್ಯಯನ ನಡೆಸಬೇಕು. ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ. ಮೀಸಲಾತಿಯಿಂದ ನಿಜವಾದ ನ್ಯಾಯ ಸಿಗುತ್ತದೆಯೇ ಎಂದು ನೋಡಬೇಕಾಗಿದೆ ಆರ್ಥಿಕ ಸುಧಾರಣೆ ತರುವವರಿಗೆ ಮೀಸಲಾತಿಯ ಅವಶ್ಯಕತೆ ಇದೆ. ಮೆರಿಟ್ ಹೆಸರಿನಲ್ಲಿ ಮೀಸಲಾತಿ ನೀಡುತ್ತೇವೆ ಎಂದು ವಂಚನೆ ಮಾಡುತ್ತಿದ್ದಾರೆ. ಶೇ.90 ರಷ್ಟು ಖಾಸಗಿ ಸಂಸ್ಥೆಗಳಲ್ಲಿ ಜಾತಿಯ ಕಾರಣಕ್ಕೆ ಕೈ ಬಿಟ್ಟಿರುವುದನ್ನು ಸಾಕಷ್ಟು ಗಮನಿಸಿದ್ದೇವೆ. ಜನರ ಮನಸ್ಥಿತಿ ಬದಲಾಗಬೇಕು ಎಂದು ಹೇಳಿದರು.

ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ದ್ರುವ ನಾರಾಯಣ ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂತಿ೯,ಕರ್ನಾಟಕ ಅಹಿಂದ ಸಮಾನ ಮಸ್ಕರ ವೇದಿಕೆಯ ರಾಜ್ಯ ಸಂಚಾಲಕ ಡಿ. ಈಶ್ವರ್, ಪ್ರಗತಿಪರ ಚಿಂತಕ ಹರ ಕುಮಾರ್, ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ದ್ಯಾವಪ್ಪ ನಾಯಕ, ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಯೋಗೇಶ್ ಉಪ್ಪಾರ್, ರಾಜ್ಯ ಸಂಘಟನಾ ಸಂಚಾಲಕ ಶೇಖರ್ ಕಿರಗುಂದ, ಮೈಸೂರು ಜಿಲ್ಲಾ ಸಂಚಾಲಕ ಮನೋಜ್ ರಾಮಯ್ಯ, ಜಿಲ್ಲಾ ಸಂಘಟನಾ ಸಂಚಾಲಕ ಕೃಷ್ಣ, ಸೇರಿದಂತೆ ಹಲವರು ಭಾಗವಹಿಸಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.

Continue Reading
Click to comment

Leave a Reply

Your email address will not be published. Required fields are marked *

Hassan

ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಾಫಿ ಕಳ್ಳತನ

Published

on

50 ಕೆಜಿ ಕಾಫಿಗೆ ಬರೋಬ್ಬರಿ 30000 ದರ ಹೆಚ್ಚಳ ಹಿನ್ನೆಲೆ,

ಮಲೆನಾಡಿನಲ್ಲಿ ಹೆಚ್ಚಾಗುತ್ತಿದ್ದಾರೆ ಕಾಫಿ ಕಳ್ಳರು,

*ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಗಿಡದಲ್ಲಿದ್ದ ಕಾಫಿಯನ್ನು ಕಳ್ಳತನ ಮಾಡುತ್ತಾರೆ ಖದೀಮರು*

ವಾಹನದಲ್ಲಿ ಬರ್ತಾರೆ ಸಿಕ್ಕಸಿಕ್ಕ ಕಡೆ ಕಾಫಿ ದೋಚಿ ಹೊರಡುವ ಕಳ್ಳರು,

ಸುದೀಪ್ ಹಾಗೂ ಮಧು ಎಂಬುವರ ಕಾಫಿ ತೋಟದಲ್ಲಿ ಗಿಡದಲ್ಲಿದ್ದ ಕಾಫಿಯನ್ನೇ ಕಳ್ಳತನ ಮಾಡಿದ ಚಾಲಾಕಿ ಕಳ್ಳರು,

ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಳ್ಳತನ ಮಾಡಿರೋ ಕಾಫಿ ಕಳ್ಳರು,

ಬೇಲೂರು ತಾಲೂಕು, ಚಿನ್ನೇನಹಳ್ಳಿ ಗ್ರಾಮದಲ್ಲಿ ಘಟನೆ,

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿನ್ನೇನಹಳ್ಳಿ ಗ್ರಾಮ,

ಒಂದು ಎಕರೆ ಎರಡು ಎಕರೆ ಇರೋ ತೋಟವನ್ನೇ ಟಾರ್ಗೆಟ್ ಮಾಡಿರುವ ಕಾಫಿ ಕಳ್ಳರು,

ಗಿಡದಲ್ಲಿದ್ದ ಕಾಫಿಯನ್ನು ಬಿಡುತ್ತಿಲ್ಲ ಕದೀಮರು

Continue Reading

Kodagu

ಉಡೋತ್ ಮೊಟ್ಟೆ : ಡಿ.6 & 7  ರಂದು ಕೊರಗಜ್ಜ ದೈವದ ನೇಮೋತ್ಸವ

Published

on

ಮಡಿಕೇರಿ : ಉಡೋತ್‌ಮೊಟ್ಟೆಯ ಶ್ರೀ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ಡಿ.6ಮತ್ತು 7 ರಂದು ಐದನೇ ವರ್ಷದ ನೇಮೋತ್ಸವ ನಡೆಯಲಿದೆ.

ಡಿ.6ರಂದು ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6 ಗಂಟೆಗೆ ದೈವದ ಭಂಡಾರ ಇಳಿಯುವುದು. ರಾತ್ರಿ 9 ಗಂಟೆಯಿಂದ ಡಿ.7ರ ಮಧ್ಯಾಹ್ನದ ವರೆಗೆ ಪರಿವಾರ ಸತ್ಯ ದೈವಗಳಾದ ಶ್ರೀ ಧರ್ಮದೈವ, ಪಂಜುರ್ಲಿ, ಶ್ರೀ ಸತ್ಯ ದೈವ ಕಲ್ಲುರ್ಟಿ, ಶ್ರೀ ಮಂತ್ರವಾದಿ ಗುಳಿಗ ಹಾಗೂ ಶ್ರೀ ಸಾರ್ಲಪಟ್ಟದ ಸ್ವಾಮಿ ಕೊರಗಜ್ಜ ದೈವದ ನೇಮ ಜರುಗಲಿದೆ.

ಎರಡು ದಿನವೂ ಅನ್ನದಾನ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೈವಸ್ಥಾನದ ಪ್ರಮುಖರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9900931278 , 9591304757೯೫೯೧೩೦೪೭೫೭, ೯೪೮೩೩೯೯೦೭೭ ಸಂಪರ್ಕಿಸಬಹುದಾಗಿದೆ.

Continue Reading

Uncategorized

ತರಳಬಾಳು ಸಮಾಗಮ, ಶಿಕ್ಷಣ ಕೇಂದ್ರದಿಂದ ರಾಜ್ಯೋತ್ಸವ, ದತ್ತಿ ಉಪನ್ಯಾಸ

Published

on

ಮೈಸೂರು: ನಗರದ ಟಿ.ಕೆ. ಬಡಾವಣೆಯ ತರಳಬಾಳು ಶಿಕ್ಷಣ ಕೇಂದ್ರದಲ್ಲಿ ತರಳಬಾಳು ಸಮಾಗಮ ವತಿಯಿಂದ ಭಾನುವಾರ ಕನ್ನಡ ರಾಜ್ಯೋತ್ಸವ ಹಾಗೂ ಎಚ್‌.ಎಸ್‌. ರುದ್ರಪ್ಪ, ರೇವಮ್ಮ ಹಾಗೂ ಆರ್‌.ಬಿ. ಚನ್ನಬಸಪ್ಪ, ಎನ್‌. ಸುವರ್ಣ ಮತ್ತು ಎಚ್‌. ಗುರುಸಿದ್ದಪ್ಪ, ಕಲ್ಲಮ್ಮ ಹಾಗೂ ಎಂ. ಸಿದ್ದಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್‌ ಉದ್ಘಾಟಿಸಿದರು. ಜೆಎಸ್ಎಸ್‌ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಎಲ್‌. ತಿಪ್ಪೇಸ್ವಾಮಿ ಉಪನ್ಯಾಸ ನೀಡಿದರು.


ತರಳಬಾಳು ಸಮಾಗಮ ಅಧ್ಯಕ್ಷ ಡಿ.ಎನ್‌. ಲೋಕಪ್ಪ ಅಧ್ಯಕ್ಷತೆ ವಹಿಸಿದ್ದರು. ತರಳಬಾಳು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್. ಮಹದೇವಸ್ವಾಮಿ, ಡಾ.ಎಚ್.ಎಸ್. ರುದ್ರೇಶ್‌ ಇದ್ದರು. ತರಳಬಾಳು ಸಮಾಗಮದ ಕಾರ್ಯದರ್ಶಿ ಶಿವಕುಮಾರ್‌ ಹಂಜಿ ಸ್ವಾಗತಿಸಿದರು. ದಾಕ್ಷಾಯಿಣಿ ಕಾರ್ಯಕ್ರಮ ನಿರೂಪಿಸಿದರು.

ಕನ್ನಡದಲ್ಲಿ ಅಧಿಕ ಅಂಕಗಳನ್ನು ಪಡೆದ ಪಿಯುಸಿಯ ಮೌರ್ಯ ಲೋಕೇಶ್‌, ಸಿ.ಎಸ್‌. ನಿಶ್ಚಲ್‌, ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಎಂ. ಧನುಷ್‌ ಹಾಗೂ ಜಿ. ನಮಿತಾ ಅವರಿಗೆ ಪುರಸ್ಕಾರ ನೀಡಲಾಯಿತು. ಆರು ಮತ್ತು ಹತ್ತನೇ ತರಗತಿ ವಿದ್ಯಾರ್ಥಿಗಳು ನೃತ್ಯ, ಸಾನ್ವಿ ಹಾಗೂ ಕವನ ಅವರು ಕನ್ನಡ ಭಾವಗೀತೆ ಹಾಡಿದರು.

Continue Reading

Trending

error: Content is protected !!