Uncategorized
ಆರ್. ಧ್ರುವನಾರಾಯಣ್ ಸಾಹೇಬರ ಮೊದಲನೇ ವರ್ಷದ ನೆನಪಿನರ್ಥವಾಗಿ ‘ವಿಚಾರ ಸಂಕಿರಣ’

ನಂಜನಗೂಡು ಮಾ.11
ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಅಹಿಂದ ಸಮಾನ ಮನಸ್ಕರ ವೇದಿಕೆ ವತಿಯಿಂದ ಮಾಜಿ ಸಂಸದ ದಿವಂಗತ ಆರ್.ಧ್ರುವನಾರಾಯಣ್ ರವರ ಮೊದಲನೇ ವರ್ಷದ ನೆನಪಿನ ಅಂಗವಾಗಿ ಒಳ ಮೀಸಲಾತಿ ಮತ್ತು ಜಾತಿ ಗಣತಿ ವರದಿಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹೈಕೋರ್ಟ್ ನ್ಯಾಯವಾದಿಗಳಾದ ಹೆಚ್.ಮೋಹನ್ ಕುಮಾರ್ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮಾಜಿ ಸಂಸದರು ದಿ. ಆರ್. ಧ್ರುವನಾರಾಯಣ್ ಸಾಹೇಬರ ಮೊದಲನೇ ವರ್ಷದ ನೆನಪಿನರ್ಥವಾಗಿ ‘ವಿಚಾರ ಸಂಕಿರಣ’ ದಲ್ಲಿ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಪಾಲ್ಗೊಂಡು ತಂದೆಯಾವರ ದಿ. ಆರ್. ಧ್ರುವನಾರಾಯಣ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನಗಳು ಸಲ್ಲಿಸಿದರು.
ಬಳಿಕ ಪ್ರಾಧ್ಯಾಪಕ ಪ್ರೊ. ಡಿ. ಆನಂದ್ ಮಾತನಾಡಿ,
ಮೀಸಲಾತಿ ವಿರೋಧಿಸುವವರು ಮೀಸಲಾತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಆರ್ಥಿಕವಾಗಿ ಮತ್ತು ಬಡತನದಲ್ಲಿರುವವರಿಗೆ ಮೀಸಲಾತಿ ನೀಡಬೇಕು. ಜಾತಿ ಆಧಾರಿತವಾಗಿ ಮೀಸಲಾತಿ ಅನಿವಾರ್ಯ ಇದೆಯಾ ಎಂಬುದನ್ನು ತಿಳಿದುಕೊಳ್ಳಬೇಕು. ಒಳ ಮೀಸಲಾತಿಯನ್ನು ನೀಡುವ ಬಗ್ಗೆ ವೈಚಾರಿಕವಾಗಿ ಚರ್ಚೆ ನಡೆಯಬೇಕು. ಜನರಿಗೆ ಪೂರಕವಾದ ವಾತಾವರಣವನ್ನು ನಿರ್ಮಾಣ ಮಾಡಬೇಕು. ಇದರ ಸಾಧಕ ಬಾಧಕಗಳ ಬಗ್ಗೆ ವೈಜ್ಞಾನಿಕವಾಗಿ ಚರ್ಚೆ ನಡೆದಾಗ ತಿಳಿಯುತ್ತದೆ. ಮೀಸಲಾತಿಯಿಂದ ಸಂವಿಧಾನದಲ್ಲಿ ಶಕ್ತಿ ತುಂಬುತ್ತದೆಯೇ ಎಂಬುದನ್ನು ಅಧ್ಯಯನ ನಡೆಸಬೇಕು. ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ. ಮೀಸಲಾತಿಯಿಂದ ನಿಜವಾದ ನ್ಯಾಯ ಸಿಗುತ್ತದೆಯೇ ಎಂದು ನೋಡಬೇಕಾಗಿದೆ ಆರ್ಥಿಕ ಸುಧಾರಣೆ ತರುವವರಿಗೆ ಮೀಸಲಾತಿಯ ಅವಶ್ಯಕತೆ ಇದೆ. ಮೆರಿಟ್ ಹೆಸರಿನಲ್ಲಿ ಮೀಸಲಾತಿ ನೀಡುತ್ತೇವೆ ಎಂದು ವಂಚನೆ ಮಾಡುತ್ತಿದ್ದಾರೆ. ಶೇ.90 ರಷ್ಟು ಖಾಸಗಿ ಸಂಸ್ಥೆಗಳಲ್ಲಿ ಜಾತಿಯ ಕಾರಣಕ್ಕೆ ಕೈ ಬಿಟ್ಟಿರುವುದನ್ನು ಸಾಕಷ್ಟು ಗಮನಿಸಿದ್ದೇವೆ. ಜನರ ಮನಸ್ಥಿತಿ ಬದಲಾಗಬೇಕು ಎಂದು ಹೇಳಿದರು.
ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ದ್ರುವ ನಾರಾಯಣ ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂತಿ೯,ಕರ್ನಾಟಕ ಅಹಿಂದ ಸಮಾನ ಮಸ್ಕರ ವೇದಿಕೆಯ ರಾಜ್ಯ ಸಂಚಾಲಕ ಡಿ. ಈಶ್ವರ್, ಪ್ರಗತಿಪರ ಚಿಂತಕ ಹರ ಕುಮಾರ್, ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ದ್ಯಾವಪ್ಪ ನಾಯಕ, ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಯೋಗೇಶ್ ಉಪ್ಪಾರ್, ರಾಜ್ಯ ಸಂಘಟನಾ ಸಂಚಾಲಕ ಶೇಖರ್ ಕಿರಗುಂದ, ಮೈಸೂರು ಜಿಲ್ಲಾ ಸಂಚಾಲಕ ಮನೋಜ್ ರಾಮಯ್ಯ, ಜಿಲ್ಲಾ ಸಂಘಟನಾ ಸಂಚಾಲಕ ಕೃಷ್ಣ, ಸೇರಿದಂತೆ ಹಲವರು ಭಾಗವಹಿಸಿದ್ದರು.
ನಂಜನಗೂಡು ಮಹದೇವಸ್ವಾಮಿ ಪಟೇಲ್.
Uncategorized
ಕೊಡಗು ವಿದ್ಯಾಲಯದಲ್ಲಿ ಯುಕೆಜಿ ವಿದ್ಯಾಥಿ೯ಗಳಿಗೆ ಪದವಿ ಪ್ರಧಾನ

ಮಡಿಕೇರಿ : ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಶಿಸ್ತು, ಜೀವನಮೌಲ್ಯಗಳನ್ನು ಸರಿಯಾದ ರೀತಿಯಲ್ಲಿ ಕಲಿಸಿಕೊಡಬೇಕು. ಸ್ವಚ್ಛಂದ ಜೀವನದ ಬಗೆಗಿನ ಎಚ್ಚರಿಕೆಯನ್ನೂ ಇಂದಿನ ಮಕ್ಕಳಿಗೆ ತಿಳಿಹೇಳುವುದು ಅಗತ್ಯ ಎಂದು ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಕಿವಿಮಾತು ಹೇಳಿದರು.
ನಗರದ ಕೊಡಗು ವಿದ್ಯಾಲಯದಲ್ಲಿ ಆಯೋಜಿತ ಯುಕೆಜಿ ವಿದ್ಯಾಥಿ೯ಗಳಿಗೆ ಪದವಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹುಟ್ಟಿಂದನಿಂದಲೇ ಮಕ್ಕಳನ್ನು ಅತಿಯಾದ ಪ್ರೀತಿಯಿಂದ ಪೋಷಕರು ಸಲಹುತ್ತಾ ಮಕ್ಕಳು ಮಾಡಿದ್ದೆಲ್ಲವೂ ಸರಿ ಎಂದು ಭಾವಿಸುತ್ತಾರೆ. ಇದರಿಂದಾಗಿ ಸ್ವಚ್ಛಂದತೆಯನ್ನು ಹೆಚ್ಚಾಗಿಯೇ ಮಕ್ಕಳು ಬೆಳೆಸಿಕೊಂಡು ಸಮಾಜದಲ್ಲಿ ದಾರಿ ತಪ್ಪುವ ಸಾಧ್ಯತೆಯೂ ಹೆಚ್ಚಾಗಿದೆ. ಇಂಥ ಸಂದಭ೯ ಜೀವನಮೌಲ್ಯ, ಶಿಸ್ತನ್ನು ಕೂಡ ಸರಿಯಾದ ರೀತಿಯಲ್ಲಿ ಸರಿಯಾದ ವಯಸ್ಸಿನಲ್ಲಿಯೇ ಕಲಿಸುವ ಮೂಲಕ ತಮ್ಮ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಸಾಧ್ಯ ಎಂದು ಅನಂತಶಯನ ಹೇಳಿದರು.
ತಮ್ಮ ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆ, ಶಿಕ್ಷಕ ವಗ೯ದ ಬಗ್ಗೆ ಪೋಷಕರು ನಂಬಿಕೆ ಹೊಂದಿರಬೇಕು. ಶಿಕ್ಷಣ ಸಂಸ್ಥೆಗಳೇ ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಕೇಂದ್ರಗಳೆಂದು ಮರೆಯಬಾರದು ಎಂದು ಕಿವಿಮಾತು ಹೇಳಿದ ಅನಂತಶಯನ, ಕೊಡಗು ವಿದ್ಯಾಲಯವು ಆದ್ಯಾತ್ಮಿಕ ಸಾಧಕ ಸದ್ಗುರು ಜಾಕ್ ಸುಬ್ಬಯ್ಯ ಅವರಿಂದ ಸ್ಥಾಪಿಸಲ್ಪಟ್ಟ ಕಾರಣದಿಂದ ಇಂದಿಗೂ ಈ ಸಂಸ್ಥೆಯು ಸದಾ ಸಂಸ್ಕಾರಯುತ ಶಿಕ್ಷಣಕ್ಕೆ ಹೆಸರಾಗಿದೆ ಎಂದು ಶ್ಲಾಘಿಸಿದರು.
ಸಾಧಿಸುವ ಛಲವಿದ್ದಲ್ಲಿ ಯಾವುದೇ ವ್ಯಕ್ತಿಯೂ ಎಷ್ಟೇ ಎತ್ತರದ ಬೆಟ್ಟ, ಗುಡ್ಡಗಳನ್ನು ಸಲೀಸಾಗಿ ಏರಬಲ್ಲ. ಎಷ್ಟೇ ದೂರದವರೆಗೂ ಸಮುದ್ರದಲ್ಲಿ ಈಜಬಲ್ಲ,ಗಗನದಲ್ಲಿ ಹಾರಬಲ್ಲ ಸಾಮಥ್ಯ೯ ಹೊಂದಬಲ್ಲ ಎಂದು ಹೇಳಿದ ಅನಂತಶಯನ, ಛಲ ಹಾಗೂ ಕಠಿಣ ಪರಿಶ್ರಮ ಇಂಥ ಸಾಧನೆಗೆ ಅತ್ಯಗತ್ಯ ಎಂದು ಹೇಳಿದರು. ದೊಡ್ಡ ಮಟ್ಟದ ಸಾಧನೆಯ ಕನಸುಗಳನ್ನು ಕಾಣಿ ಎಂದು ಕರೆ ನೀಡಿದ ಅವರು, ಬೆಟ್ಟಗುಡ್ಡಗಳು ಅವುಗಳ ಎಚ್ಚರದಿಂದ ಮಾತ್ರವೇ ದೊಡ್ಡವು ಎನಿಸಿಕೊಂಡಿಲ್ಲ. ಬದಲಿಗೆ ಅವುಗಳು ಮಾನವನಿಗೆ ಒಡ್ಡುವ ಸವಾಲಿನಿಂದಾಗಿ ನಿಜವಾಗಿಯೂ ಅವುಗಳು ಹಿರಿಯದ್ದಾಗಿವೆ ಎಂದು ಹೇಳಿದರು.
ಎಂದಿಗೂ ಪುಟ್ಟ ಮಕ್ಕಳು ಇತರರೊಂದಿಗೆ ಜಗಳವಾಡದೇ ಗೆಳೆತನ ಕಾಪಾಡಿಕೊಳ್ಳಿ, ಗೆಳೆತನವೇ ಜೀವನದ ಬಹುದೊಡ್ಡ ಸಂಪತ್ತಾಗಿದೆ ಎಂಬುದನ್ನು ಮರೆಯದಿರಿ ಎಂದೂ ಅನಂತಶಯನ ಪುಟಾಣಿಗಳಿಗೆ ಕಿವಿಮಾತು ಹೇಳಿದರು.
ಕಾಯ೯ಕ್ರಮದಲ್ಲಿ ಪ್ರಾಂಶುಪಾಲರಾದ ಕೆ.ಎಸ್. ಸುಮಿತ್ರಾ, ವ್ಯವಸ್ಥಾಪಕರಾದ ರವಿ ಪಿ, ವೇದಿಕೆಯಲ್ಲಿದ್ದರು.
ವಿದ್ಯಾಥಿ೯ನಿ ಶಾವಿ೯ ಭರತ್ ಸ್ವಾಗತಿಸಿ, ಸ್ಟಿಫಾನಿಯಾ ಸ್ಟ್ಯಾನಿ, ಆಂಚಲ್ ಅಯ್ಯಪ್ಪ ಮತ್ತು ಶಾವಿ೯ಕ್ ಅನುಭವ ಹಂಚಿಕೊಂಡ ಕಾಯ೯ಕ್ರಮದಲ್ಲಿ ಶಿಕ್ಷಕಿ ವೀಣಾ ಎಂ.ಎಂ.ನಿರೂಪಿಸಿ, ಶಿಕ್ಷಕಿಯರಾದ ಟಿ.ಪಿ.ರಮ್ಯ ಹಾಗೂ ಬಿ.ಬಿ.ಭಾರತಿ ನಿವ೯ಹಿಸಿದರು. ಐಶಾನಿ ವಂದಿಸಿದರು. ಯುಕೆಜಿ ವಿದ್ಯಾಥಿ೯ಗಳಿಂದ ಅತ್ಯಾಕಷ೯ಕ ಸಾಂಸ್ಕೖತಿಕ ಕಾಯ೯ಕ್ರಮಗಳು ಮನಸೆಳೆದವು
Uncategorized
ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ: ಪುಂಡಾನೆ ಸೆರೆ ಹಿಡಿದ ಕ್ಯಾಪ್ಟನ್ ಪ್ರಶಾಂತ್ ಅಂಡ್ ಟೀಮ್

ಬೇಲೂರು: ಕಾಡಾನೆ ಸೆರೆ ಕಾರ್ಯಾಚರಣೆ
ಮೊದಲ ದಿನದ ಕಾರ್ಯಾಚರಣೆ ಯಶಸ್ವಿ
ಸತತ ನಾಲ್ಕು ಗಂಟೆಗಳ ನಂತರ ಕಾರ್ಯಾಚರಣೆ ಯಶಸ್ವಿ
ಬೇಲೂರು ತಾಲ್ಲೂಕಿನ, ಹಳ್ಳಿಗದ್ದೆ ಗ್ರಾಮದ ಶಾಂತಿ ಎಸ್ಟೇಟ್ನಲ್ಲಿ ಸೆರೆ ಸಿಕ್ಕ ಕಾಡಾನೆ
ಪುಂಡಾನೆಗಳನ್ನು ಗುರುತಿಸಿದ್ದ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ
ಅರವಳಿಕೆ ಚುಚ್ಚುಮದ್ದು ನೀಡಿದ ವೈದ್ಯರು
ಅರವಳಿಕೆ ಚುಚ್ಚುಮದ್ದು ನೀಡುತ್ತಿದ್ದಂತೆ ಜೊತೆಗಿದ್ದ ಕಾಡಾನೆ ಜೊತೆ ಓಡಾಡಿದ ಒಂಟಿಸಲಗ
ಒಂದು ಗಂಟೆಗೂ ಹೆಚ್ಚು ಕಾಲ ಎಲ್ಲೆಂದರಲ್ಲಿ ಓಡಾಡಿದ ಒಂಟಿಸಲಗ
ಹರಸಾಹಸಪಟ್ಟು ಎರಡು ಕಾಡಾನೆಗಳನ್ನು ಬೇರ್ಪಡಿಸಿದ ಅರಣ್ಯ ಇಲಾಖೆ ಸಿಬ್ಬಂದಿ
ನಂತರ ಕುಸಿದು ಬಿದ್ದ ಒಂಟಿಸಲಗ
ಕಾಡಾನೆಯನ್ನು ಸೆರೆ ಹಿಡಿದು ಎಳೆದು ತಂದ ಸಾಕಾನೆಗಳು
ಕ್ಯಾಪ್ಟನ್ ಪ್ರಶಾಂತ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ
Kodagu
ಗೋಣಿಕೊಪ್ಪ ಅತ್ತೂರು ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ಅಟ್ಟಗಲ್ ದೇವಿಯ ಪೊಂಗಲೋ ಉತ್ಸವ ಆಚರಣೆ.

ವರದಿ : ಸಿಂಗಿ ಸತೀಶ್
ಗೋಣಿಕೊಪ್ಪ ಅತ್ತೂರು ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ಅಟ್ಟಗಲ್ ದೇವಿಯ ಪೊಂಗಲೋ ಉತ್ಸವ ಆಚರಣೆ.
ಕೆ ಎನ್ ಎಸ್ ಎಸ್ ಮತ್ತು ಹಿಂದೂ ಮಲೆಯಾಳಿ ಸಂಘದಿಂದ ಕೇರಳದ ಪ್ರತಿಷ್ಠಿತ ದೇವಿಯಾದ ಅಟ್ಟಗಲ್ ದೇವಿಯ ಉತ್ಸವವನ್ನು ಸಂಪ್ರದಾಯಕ ಉಡುಗೆ ತೊಡುಗೆಯೊಂದಿಗೆ ಆಚರಿಸಲಾಯಿತು. ಕೊಡಗಿನ ವಿವಿಧ ಭಾಗಗಳಿಂದ ಕಾರ್ಯಕ್ರಮದಲ್ಲಿ ಸಮಾಜ ಭಾಂದವರು.
ಸುಮಾರು 40 ರಿಂದ 50 ಕುಟುಂಬಗಳು ಸೇರಿ ದೇವಿಗೆ ನೈವೇದ್ಯ ಅರ್ಪಿಸುತ್ತಾರೆ.
ಕೇರಳದ ತ್ರಿವೇಡ್ರಾಮ್ ನಲ್ಲಿ ನೆಲೆಸಿರುವ ಇತಿಹಾಸ ಪ್ರಸಿದ್ಧ ಅಟ್ಟಗಲ್ ದೇವಿಯ ಉತ್ಸವವನ್ನು ಇಂದು ಸಹಸ್ರಾರು ಮಹಿಳೆಯರು ಸೇರಿ ಪೊಂಗಲೋ ನೈವೇದ್ಯದಲ್ಲಿ ಭಾಗವಹಿಸಿ ಉತ್ಸವವನ್ನು ಆಚರಿಸುತ್ತಾರೆ.
ಈಗೆ ಕೊಡಗಿನಲ್ಲಿಯೂ ಪೊಂಗಲೋ ಹಬ್ಬ ಆಚರಣೆ ಪ್ರತೀಕವಾಗಿದೆ.
ಕಾರ್ಯಕ್ರಮದಲ್ಲಿ ಕೆ ಎನ್ ಎಸ್ ಎಸ್ ನ ಕಾರ್ಯದರ್ಶಿ ಸರಳ, ಹಿಂದೂ ಮಲೆಯಾಳಿ ಸಂಘದ ಕಾರ್ಯದರ್ಶಿ ರೀನಾ, ಕೆ ಎನ್ ಎಸ್ ಎಸ್ ಅಧ್ಯಕ್ಷ ವೇಣುಗೋಪಾಲ್ ಮೆನನ್, ಲೋಹಿತಕ್ಷನ್, ವೇಣುಗೋಪಾಲ್, ವಿನ್ಯಾ, ಲೀನಾ, ಭಾಸ್ಕರ್, ವಿಮಲಾ ಇನ್ನಿತರರು ಉಪಸ್ಥಿತರಿದ್ದರು.
-
Chamarajanagar20 hours ago
ಕಾಂಗ್ರೆಸ್ ಗೆ ಭರ್ಜರಿ ಗೆಲುವು
-
Uncategorized19 hours ago
ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ: ಪುಂಡಾನೆ ಸೆರೆ ಹಿಡಿದ ಕ್ಯಾಪ್ಟನ್ ಪ್ರಶಾಂತ್ ಅಂಡ್ ಟೀಮ್
-
Chamarajanagar21 hours ago
ಕಾರು ಅಪಘಾತ ಇಬ್ಬರು ಸ್ಥಳದಲ್ಲೇ ಮೃತ
-
Chikmagalur22 hours ago
ಹತ್ತು ಲಕ್ಷ ಮೌಲ್ಯದ 11 ಬೈಕ್ ಕದ್ದಿದ್ದ ಕಳ್ಳನ ಬಂಧನ
-
National - International12 hours ago
ಪಾಕ್ನ 90 ಮಂದಿ ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದ ಬಲೂಚ್ ಲಿಬರೇಶನ್ ಆರ್ಮಿ
-
Kodagu14 hours ago
ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಮೃ*ತ
-
Mandya17 hours ago
ಮಳವಳ್ಳಿ ವಸತಿ ಶಾಲೆಯ ದುರ್ಘಟನೆ : ಎಚ್ಡಿಕೆ ಕಳವಳ
-
Chamarajanagar15 hours ago
ತಲೆಯಲ್ಲಿ ಕೂದಲಿಲ್ಲ ಎಂದು ನಿಂದಿಸಿದ ಪತ್ನಿ: ಮನನೊಂದ ಪತಿ ಆತ್ಮ*ಹತ್ಯೆ