Connect with us

Chamarajanagar

ಫಲಾನುಭವಿಗಳಿಗೆ ವಿವಿಧ ಯೋಜನೆಯ ದಾಖಲೆಗಳ ವಿತರಿಸಿ ಶಾಸಕ ಮಂಜುನಾಥ್

Published

on

ಹನೂರು : ಹಲವಾರು ವರ್ಷಗಳಿಂದ ಬಗೆಹರಿಯದ ಸಮಸ್ಯೆಗಳನ್ನು ವಿಶೇಷವಾಗಿ ರಾಜ್ಯದ ಜನಕ್ಕೆ, ಅರ್ಹ ಫಲಾನುಭವಿಗಳಿಗೆ ಸರ್ಕಾರ ಹಾಗೂ ಕಂದಾಯ ಇಲಾಖೆ ಡಿಜಿಟಲ್ ಮೂಲಕ ದಾಖಲೆ ನೀಡಲಾಗುತ್ತಾ ಬರಲಾಗುತ್ತಿದೆ ಎಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು.

ಹನೂರು ತಾಲೂಕಿನ ಲೊಕ್ಕನಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಂದಾಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಂದಾಯ/ಪಿಂಚಣಿ ಅದಾಲತ್ ಹಾಗೂ ಕಂದಾಯ ಇಲಾಖೆಯ ವಿವಿಧ ಯೋಜನೆಯ ದಾಖಲೆಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ರೈತರಿಗೆ ಹಾಗೂ ಸ್ಟಳೀಯ ನಿವಾಸಿಗಳಿಗೆ ಆಧಾರವಾಗವಂತೆ ಮನೆ, ಜಮೀನು ಹಕ್ಕು ಪತ್ರ ಸೇರಿದಂತೆ ಯೋಜನೆಯ ಆದೇಶಗಳನ್ನು ವಿತರಣೆ ಮಾಡಲಾಗುತ್ತಿದೆ. ಜಮೀನು ಪೋಡಿಗೆ ರೈತರು ಅಲೆದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಸಂಬಂಧ ಕಂದಾಯ ಇಲಾಖೆ ದಿಟ್ಟ ನಿರ್ಧಾರ ಕೈಗೊಂಡು ಅರ್ಹರಿಗೆ ಹಕ್ಕು ದಕ್ಕಿಸುವ ಕೆಲಸ ಮಾಡಲಾಗುತ್ತಿದೆ. ಈ ಕಾರ್ಯವನ್ನು ಕಂದಾಯ ಇಲಾಖೆ ಮನೆ ಬಾಗಿಲಿಗೆ ಯೋಜನೆಯನ್ನು ಒದಗಿಸುವ ಕಾರ್ಯ ಮಾಡುತ್ತಿರುವುದು ಸ್ವಾಗತರ್ಹ ಎಂದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಚೈತ್ರಾ, ಕೊಳ್ಳೇಗಾಲ ಉಪ ತಹಸೀಲ್ದಾರ್ ರವಿ, ಸರ್ವೇ ಅಧೀಕ್ಷಕ ಕುಮಾರಸ್ವಾಮಿ, ಲೊಕ್ಕನಹಳ್ಳಿ ರಾಜಸ್ವ ನಿರೀಕ್ಷಕ ಮಹಾದೇವಸ್ವಾಮಿ, ಕಂದಾಯ ಆಡಳಿತ ಅಧಿಕಾರಿಗಳಾದ ಮಾರುತಿ, ವಿದ್ಯಾಶ್ರೀ, ಶಿವಕುಮಾರ್, ನಂಜುಂಡ, ವಿಷಯ ನಿರ್ವಾಹಕರಾದ ಮಹೇಶ್ವರಿ ಸಿಬ್ಬಂದಿಗಳಾದ ನಿಂಗರಾಜು, ಕೃಷ್ಣ ಮೂರ್ತಿ, ಸಿದ್ದರಾಜು, ಶಿವಚಂದ್ರ, ಇನ್ನಿತರರು ಇದ್ದರು.

Continue Reading

Chamarajanagar

ಚಿರತೆ ದಾಳಿಗೆ ಕರು ಬಲಿ

Published

on

ಚಾಮರಾಜನಗರ: ತಾಲೂಕಿನ ಕಿಲಗೆರೆ ಗ್ರಾಮದಲ್ಲಿ ಚಿರತೆ ದಾಳಿಯಿಂದ ಕರುವೊಂದು ಮೃತಪಟ್ಟಿದೆ.
ಗ್ರಾಮದ ಎಸ್.ಎನ್.ಮಧು ಎಂಬುವವರಿಗೆ ಸೇರಿದ ಕರು ಚಿರತೆ ದಾಳಿಯಿಂದ ಮೃತಪಟ್ಟಿರುವುದು.

ರೈತ ಮಧು ತಮ್ಮ ಜಮೀನಿನಲ್ಲಿ ಮೇಯಲು ಬಿಟ್ಟಿದ್ದಾಗ ಏಕಾಏಕಿ ದಾಳಿ ನಡೆಸಿರುವ ಚಿರತೆ ಕರು ಕೊಂದು ತಿಂದು ಹಾಕಿದೆ.


ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಿಆರ್‌ಟಿ ಸಾಮಾಜಿಕ‌ ಅರಣ್ಯ ವಲಯ ಅಧಿಕಾರಿಗಳು ಪರಿಶೀಲನೆ ನಡೆಸಿ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

ಚಿರತೆ ಸೆರೆಗೆ ಆಗ್ರಹ: ಗ್ರಾಮದ ಹೊರವಲಯದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ರೈತರು ಜಾನುವಾರುಗಳನ್ನು ಮೇಯಿಸಲು, ಜಮೀನಿಗೆ ತೆರಳಲು ಆತಂಕ ಪಡುವಂತಾಗಿದೆ. ಆದ್ದರಿಂದ ಅಧಿಕಾರಿಗಳು ಬೋನ್ ಇರಿಸಿ ಚಿರತೆಯನ್ನು ಸೆರೆ ಹಿಡಿಯಬೇಕೆಂದು ಆಗ್ರಹಿಸಿದ್ದಾರೆ.

Continue Reading

Chamarajanagar

ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

Published

on

ಚಾಮರಾಜನಗರ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಣೆ ಮಾಡಿ ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ಬಾಣಹಳ್ಳಿ ಗ್ರಾಮದ ಗೇಟ್ ಬಳಿ ನಡೆದಿದೆ.

ಟಿ.ನರಸೀಪುರ ತಾಲೂಕಿನ ಬೈರಾಪುರ ಗ್ರಾಮದ ಮೊಹಮ್ಮದ್ ಸಾದಿಕ್(25) ಬಂಧಿತ ಆರೋಪಿ. ಈತ ಟಾಟಾ ಏಸ್ ವಾಹನದಲ್ಲಿ ಅಕ್ರಮವಾಗಿ ಮೂರು ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಖಚಿತ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿದ ಪೊಲೀಸರು ವಾಹನ ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Chamarajanagar

ಶಾಸಕರು, ಸಂಸದರ ನಿರ್ಲಕ್ಷ್ಯ ಖಂಡಿಸಿ ಬಿಎಸ್‌ಪಿ ಪ್ರತಿಭಟನೆಗೆ ಕರೆ

Published

on

ವರದಿ : ಸುನೀಲ್ ಪ್ರಶಾಂತ್

ಕೊಳ್ಳೇಗಾಲ: ಪಟ್ಟಣದ ಐಬಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಎಸ್‌ಪಿ ನೂತನ ಪದಾಧಿಕಾರಿಗಳು, ಶಾಸಕರು ಹಾಗೂ ಸಂಸದರ ನಿರ್ಲಕ್ಷ್ಯ ಮತ್ತು ನಗರಸಭೆಯ ದುರಾಡಳಿತವನ್ನು ಖಂಡಿಸಿ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಈ ಪ್ರತಿಭಟನೆಗೆ ಕನ್ನಡ ಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಹಾಗೂ ಮಹಿಳಾ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಸುಮಾರು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ನಗರಸಭೆಯ 31 ವಾರ್ಡ್‌ಗಳಲ್ಲಿನ ಎಲ್ಲಾ ಮೂಲಭೂತ ಸಮಸ್ಯೆಗಳನ್ನೊಳಗೊಂಡಂತೆ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದ್ದು, ಎಲ್ಲಾ ವಾರ್ಡ್‌ಗಳ ನಾಗರಿಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

Continue Reading

Trending

error: Content is protected !!