Hassan
ಹಾಲುವಾಗಿಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸ್ವರೂಪ್ ಪ್ರಕಾಶ್ ಗುದ್ದಲಿ ಪೂಜೆ
ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಾಲುವಾಗಿಲು ಗ್ರಾಮದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಸ್ವರೂಪ ಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಿದರು.

ಗ್ರಾಮದಲ್ಲಿ 20 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕರು ಬಳಿಕ ಅದೇ ಗ್ರಾಮದಲ್ಲಿ 5 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಅಲ್ಲಿನ ಪ್ರವಾಸಿ ತಾಣವಾದ ಹಾಲುವಾಗಿಲು ಕಟ್ಟೆಗೆ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಹಾಲುವಾಗಿಲು ಗ್ರಾಮದಲ್ಲಿ ಸುಮಾರು 20 ಲಕ್ಷ ವೆಚ್ಚದ ಶಾಸಕರ ಅನುದಾನದಲ್ಲಿ ನಿರ್ಮಾಣ ವಾಗುತ್ತಿರುವ ತೆರಿನಮನೆ ವೀಕ್ಷಿಸಿ ಗುಣಮಟ್ಟದ ಕಾಮಗಾರಿ ಮೂಲಕ ಅತೀ ಶೀಘ್ರವಾಗಿ ಮುಗಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಶಾಸಕರನ್ನು ಅಭೂತಪೂರ್ವಕವಾಗಿ ಬರಮಾಡಿಕೊಂಡು ಅವರನ್ನು ಸನ್ಮಾನಿಸಿ ಗೌರವಿಸಿದರು
Hassan
ಹಾಸನ ಬಸ್ ನಿಲ್ದಾಣದಲ್ಲಿ ಬಸ್ ಚಾಲಕರ ನಡುವೆ ವಾಗ್ವಾದ; ಬಳಿಕ ಹೆದ್ದಾರಿಯಲ್ಲಿ ಮತ್ತೆ ಜಗಳ
Hassan
ಮರ ಕಡಿಯುವ ವೇಳೆ ಮರ ಬಿದ್ದು ವ್ಯಕ್ತಿ ಸಾ*ವು
ವರದಿ: ಸತೀಶ್ ಚಿಕ್ಕಕಣಗಾಲು
ಆಲೂರು: ಮರ ಕಡಿಯುವ ಕೆಲಸ ಮಾಡುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ದಾಟೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮೃತರನ್ನು ದಾಟೂರು ಗ್ರಾಮದ ನಿವಾಸಿ ನಾಗಪ್ಪ (42) ಎಂದು ಗುರುತಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಮರ ಕಡಿಯುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ನಾಗಪ್ಪ ಅವರು, ಹೊಸಕೋಟೆಯ ಗುರುಪಾದಪ್ಪ ಅವರ ಕಾಫಿ ತೋಟದಲ್ಲಿ ಮರಕಟ್ಟು ಮಾಡುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.

ಮರ ಕಡಿಯುವ ವೇಳೆ ಮರ ನಾಗಪ್ಪ ಅವರ ತಲೆಯ ಮೇಲೆ ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಆಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಆಲೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಪ್ರಕರಣವನ್ನು ಆಲೂರು ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
Hassan
ಹಿರಿಯ ಪತ್ರಕರ್ತ ಜಯಕುಮಾರ್ ನಿಧನ
-
State22 hours agoತೆಂಗು ಬೆಳೆಗಾರರಿಗೆ ಸಿಹಿಸುದ್ದಿ: ಹೊಸ ತೋಟ ಸ್ಥಾಪನೆಗೆ ₹56 ಸಾವಿರ ಸಹಾಯಧನ!!
-
National19 hours agoನೀಟ್ ವಿವಾದ: ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವಜಾ, ನರೇಶ್ ಗಂಗ್ವಾರ್ ನೇಮಕ
-
Chikmagalur19 hours agoಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000 ನಕಲಿ ಹಣ ವಶ!
-
National15 hours agoನೀಟ್ ಪ್ರಕರಣ: ಎರಡು ಬೇಡಿಕೆ ಒಪ್ಪಿದ ಕೇಂದ್ರ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸಿಜೆಪಿ ಪಟ್ಟು
-
Kodagu11 hours agoನಾಪೋಕ್ಲು ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆ ನೂತನ ಪದಾಧಿಕಾರಿಗಳ ಆಯ್ಕೆ -ಅಧ್ಯಕ್ಷರಾಗಿ ಅನೀಫ್ ನೇಮಕ
-
Kodagu11 hours ago₹24 ಲಕ್ಷ ವೆಚ್ಚದ 3 ಕಾಂಕ್ರೀಟ್ ರಸ್ತೆಗಳ ಲೋಕಾರ್ಪಣೆಗೊಳಿಸಿದ ಎ.ಎಸ್.ಪೊನ್ನಣ್ಣ
-
Mysore21 hours ago“ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ”: ಶಾಸಕ ಗಣಿಗ ರವಿಕುಮಾರ್ ಸ್ಪಷ್ಟನೆ
-
Chamarajanagar13 hours agoಹೊಂಗನೂರಿನಲ್ಲಿ ಶಾಲಾ–ಕಾಲೇಜು ವಿದ್ಯಾರ್ಥಿಗಳ ಪರದಾಟ: ಸಮಯಕ್ಕೆ ಬಸ್ ಇಲ್ಲದೆ ನಿತ್ಯ ಸಂಕಷ್ಟ
