Mandya
ಮಹಿಳೆಯರ ಲೈಂಗಿಕ ಪ್ರಕರಣದ ಬಗ್ಗೆ ಪ್ರಧಾನಿ ಮೌನ – ಆಕ್ರೋಶ
ಮಂಡ್ಯ : ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಮೈತ್ರಿ ಅಭ್ಯರ್ಥಿ, ಸಂಸದ ಪ್ರಜ್ವಲ್ ರೇವಣ್ಣ ಬಹುದೊಡ್ಡ ಲೈಂಗಿಕ ಹಗರಣ ನಡೆಸಿರುವುದು ಬೆಳಕಿಗೆ ಬಂದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತುಟಿ ಬಿಚ್ಚದೆ ಮೌನ ವಹಿಸಿ ಮಹಿಳಾ ವಿರೋಧಿ ವಿರೋಧಿ ವರ್ತನೆ ತೋರಿಸುತ್ತಿದ್ದಾರೆ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಯ ಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ದೇಶದ ಬಹುದೊಡ್ಡ ಲೈಂಗಿಕ ಹಗರಣದ ಬಗ್ಗೆ ತುಟಿ ಬಿಚ್ಚದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮೌನಿಯಾಗಿರುವ ಬಿಜೆಪಿ ಪಕ್ಷದ ನಾಯಕರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಪರಮಾಪ್ತ ಪಕ್ಷವಾಗಿರುವ ಜಾತ್ಯಾತೀತ ಜನತಾದಳದ ಸಂಸದ ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆಸಿ ನೀಚ ಕೃತ್ಯಗಳನ್ನು ಚಿತ್ರೀಕರಣ ಮಾಡಿ ಕೊಂಡಿದ್ದು, ಈ ಬಗ್ಗೆ ನೊಂದ ಮಹಿಳೆಯರು ದೂರು ನೀಡಿದ್ದು ಭಾರತ ದೇಶದಲ್ಲಿ ನಡೆದಿರುವ ಅತಿ ದೊಡ್ಡ ಲೈಂಗಿಕ ಹಗರಣ ಇದಾಗಿದೆ. ಇದರಲ್ಲಿ ಭಾಗಿಯಾಗಿದ್ದ ಎಚ್.ಡಿ.ರೇವಣ್ಣ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂದಿಯಾಗಿದ್ದು, ಇಷ್ಟೆಲ್ಲ ರಾದ್ಧಾಂತ ನಡೆಯುತ್ತಿದ್ದರೂ ಬಿಜೆಪಿ ಪಕ್ಷದ ರಾಷ್ಟ್ರೀಯ, ರಾಜ್ಯ ಹಾಗೂ ಸ್ಥಳೀಯ ನಾಯಕರು ಮಾತ್ರ ಮೌನಕ್ಕೆ ಶರಣಾಗಿದ್ದಾರೆ. ಕೋಮು ದ್ವೇಷ ಹರಡುವ ಉದ್ದೇಶದಿಂದ ಹುಬ್ಬಳ್ಳಿಯ ನೇಹಾ ಪ್ರೇಮ ವೈಪಲ್ಯ ಕೊಲೆ ಪ್ರಕರಣವನ್ನು ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಕೆಲಸಕ್ಕೆ ಮುಂದಾದವರು ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕುರಿತು ಒಂದೇ ಒಂದು ಹೋರಾಟ ಮಾಡುತ್ತಿಲ್ಲ ಏಕೆ..?, ಪ್ರಕರಣದಲ್ಲಿ ನೊಂದಿರುವ ಸಾವಿರಾರು ಮಹಿಳೆಯರು ಹಿಂದೂಗಳಲ್ಲವೇ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
ಆರೋಪಿ ಮುಸ್ಲಿಂ ಆಗಿದ್ದರೆ ಮಾತ್ರ ಆಕ್ರೋಶವೆ…? ಪಶ್ಚಿಮ ಬಂಗಾಳದ ಸಂದೇಶ್ ವಾಲಿ ಪ್ರಕರಣದಲ್ಲಿ ಆರೋಪಿ ಮುಸ್ಲಿಂ ಆಗಿದ್ದ ಕಾರಣಕ್ಕೆ ಮೋದಿ ಸಂತ್ರಸ್ತ ಮಹಿಳೆಯರನ್ನು ಖುದ್ದು ಭೇಟಿ ಮಾಡಿದ್ದರು. ರಾಷ್ಟ್ರೀಯ ಮಹಿಳಾ ಆಯೋಗ ತುರ್ತಾಗಿ ಕ್ರಮ ಕೈಗೊಂಡಿತ್ತು. ಆದರೆ ಪ್ರಜ್ವಲ್ ರೇಬಣ್ಣ ಪ್ರಕರಣದಲ್ಲಿ ಇದ್ಯಾವುದೂ ಇಲ್ಲ. ರಾಷ್ಟ್ರೀಯ ಮಹಿಳಾ ಆಯೋಗದಿಂದ ನೋಟಿಸ್ ಸಹ ಜಾರಿಯಾಗಿಲ್ಲ. ಇದು ಎಂತಹ ಭೇದಭಾವ ಮನಸ್ಥಿತಿ. ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ನೀಚ ಕೃತ್ಯವನ್ನು ಖಂಡಿಸದ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ನಡೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಅಮಾಯಕ ಮುಗ್ಧ ಮಹಿಳೆಯರ ಮೇಲೆ ಅಧಿಕಾರ ದುರ್ಬಳಕೆ ಮಾಡಿಕೊಂಡು ದೌರ್ಜನ್ಯ ಎಸಗಿರುವ ಸಂಸದ ಪ್ರಜ್ವಲ್ ರೇವಣ್ಣ ಹೀನ ಕೃತ್ಯ ಅಮಾನವೀಯ ಹಾಗೂ ವಿಕೃತಕಾಮಿ ಮನಸ್ಥಿತಿಯನ್ನು ಪ್ರದರ್ಶಿಸುವ ಕೃತ್ಯವಾಗಿದೆ, ಇಂತಹ ನೀಚ ಮನಸ್ಥಿತಿಯ ವ್ಯಕ್ತಿ ರಾಜಕಾರಣದಲ್ಲಿ ಮಾತ್ರವಲ್ಲ, ಸಮಾಜದಲ್ಲಿ ಇರಲು ಸಹ ನಾಲಾಯಕ್ ಆಗಿದ್ದು, ಇಂತಹ ವ್ಯಕ್ತಿಯನ್ನು ದೇಶ ತೊರೆಯಲು ಸಹಕರಿಸಿದವರು ಯಾರು ಎಂಬ ಬಗ್ಗೆ ತನಿಖೆಯಾಗಬೇಕು. ಪ್ರಜ್ವಲ್ ಹಾಗೂ ಎಚ್ ಡಿ ರೇವಣ್ಣ ಪ್ರಭಾವಿಗಳಾಗಿರುವುದರಿಂದ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು, ರಾಜಕೀಯ ಪ್ರಾಬಲ್ಯ ಬಳಸಿಕೊಂಡು ಸಾಕ್ಷಿಗಳ ಮೇಲೆ ಒತ್ತಡ ಹೇರುವ ಮೂಲಕ ಪ್ರಕರಣ ಮುಚ್ಚಿಹಾಕುವ ಸಾಧ್ಯತೆ ಹೆಚ್ಚಾಗಿರುವುದರಿಂದ ಆಳುವ ಸರ್ಕಾರ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಆದಷ್ಟು ಶೀಘ್ರವಾಗಿ ತನಿಖೆಯನ್ನು ಪೂರ್ಣಗೊಳಿಸಿ ನೀಚ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಸಾದತ್ ಆಲಿ, ಮುಕ್ತಾರ್ ಅಹಮದ್, ಮೋಹರ್, ನೂರುಲ್ಲಾ ಶರೀಫ್, ಸಿದ್ದರಾಜು, ನಿಖಿದ್ ಬಾನು ಸೇರಿದಂತೆ ಇತರರು ಭಾಗವಹಿಸಿದ್ದರು.
Mandya
*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ ರೂಪ*
*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ
ರೂಪ*
ಶ್ರೀರಂಗಪಟ್ಟಣ : ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆಯನ್ನ ಆಚರಿಸಲಾಗುತ್ತಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಎಂ.ಡಿ ರೂಪ ಹೇಳಿದರು.
ಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ, ತಾಲೂಕು ಆಡಳಿತ ಹಾಗೂ ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ನಡೆದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ೨೦೧೧ ರಿಂದ ಪ್ರತಿ ವರ್ಷ ಜ. ೨೫ ರಂದು ದೇಶಾದ್ಯಂತ ರಾಷ್ಟೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಹೊಸ ಮತದಾರರನ್ನು ಸೆಳೆಯುವ, ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.
ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್. ಮಹದೇವಪ್ಪ ಮಾತನಾಡಿ, ಭಾರತದ ಚುನಾವಣಾ ಆಯೋಗದ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಭಾರತದಲ್ಲಿ ಶಾಸಕಾಂಗದ ಎಲ್ಲಾ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. “ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯ ತಿಳುವಳಿಕೆ ನೀಡಲು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಕಾಲೇಜು ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನ್ಯಾಯಾಧೀಶರಾದ ಹರೀಶ್ಕುಮಾರ್, ಹನುಮಂತ ರಾಯಪ್ಪ, ತಹಸೀಲ್ದಾರ್ ಪರಶುರಾಮ್ ಸತ್ತಿಗೆರಿ, ಬಿಇಒ ಮಹೇಶ್, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ನೌಕರರು, ಕಾಲೇಜು ವಿದ್ಯಾರ್ಥಿಗಳು ಇದ್ದರು.
Mandya
ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ
ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು
Mandya
ಜ.29 ರಂದು ನಬಾರ್ಡ್ ನೀತಿ ವಿರೋಧಿಸಿ ಪ್ರತಿಭಟನೆ
ಮಂಡ್ಯ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜನವರಿ ೨೯ರ ಬೆಳಿಗ್ಗೆ ೧೧ಗಂಟೆಗೆ ಬೆಂಗೂರಿನ ರಿಸರ್ವ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಕಾರ ಕಳೆದ ಮೂರು ವರ್ಷದಿಂದ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಿಲೇ ಬಂದಿದ್ದು, ಕಳೆದ ವರ್ಷ ರಾಜ್ಯಕ್ಕೆ ೫೬೦೦ ಕೋಟಿ ನೀಡಲಾಗಿದ್ದ ಸಾಲ ಪ್ರಸಕ್ತ ವರ್ಷಕ್ಕೆ ೨೩೪೦ಕ್ಕೆ ಇಳಿಸಿದೆ ಎಂದು ಆರೋಪಿಸಿದರು.
ರಾಜ್ಯಕ್ಕೆ ನೀಡುವ ಸಾಲದ ಮೊತ್ತವನ್ನು ಶೇ.೫೮ರಷ್ಟು ತಗ್ಗಿಸುವ ಮೂಲಕ ರಾಜ್ಯದ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿದೆ. ರೈತರು ಹೆಚ್ಚು ಬಡ್ಡಿ ತೆತ್ತು ವಾಣಿಜ್ಯ ಬ್ಯಾಂಕುಗಳ ಮೊರೆ ಹೋಗಿ, ಖಾಸಗಿ ಸಾಲದ ಸುಳಿಗೆ ಸಿಲುಕೊಂಡು ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ಇದರಿಂದ ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ಅವರ ಕಿರುಕುಳದಿಂದ ಗ್ರಾಮೀನ ಪ್ರದೇಶದ ಮಹಿಳೆಯರು ಹಾಗೂ ಇತರೆ ದುಡಿಯುವ ವರ್ಗ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿಯೂ ಮಹಿಳೆ ಆತ್ಮಹತ್ಯೆಗೆ ಶರಣಾದ ಪ್ರಕರಣ ನಡೆದಿದ್ದು, ಇದಕ್ಕೆ ಕೇಂದ್ರ ಸರ್ಕಾರದ ನಡೆಯೇ ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ರೈತರು, ಸ್ವ ಸಹಾಯ ಸಂಘಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ಭಾಗವಹಿಸುವಂತೆ ಕರೆ ನೀಡಿದರು.
ಗೋಷ್ಠಿಯಲ್ಲಿ ಬೋರಾಪುರ ಶಂಕರೇಗೌಡ, ಲಿಂಗಪ್ಪಾಜಿ, ಅಣ್ಣಯ್ಯ, ವಿ.ಸಿ.ಉಮೇಶ್, ವಿಜಿಕುಮಾರ್, ಮಂಜು ಇತರರಿದ್ದರು.
-
Mysore17 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Kodagu18 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Mysore15 hours ago
ಲೋಕಾಯುಕ್ತ ಸರ್ಕಾರದ ಕೈಗೊಂಬೆ: ಸಿಎಂ ಕ್ಲೀನ್ ಚೀಟ್ಗೆ ಹಳ್ಳಿಹಕ್ಕಿ ಪ್ರತಿಕ್ರಿಯೆ
-
Kodagu16 hours ago
ಕಡಂಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಿಡ್ಡಿಂಗ್ ಪ್ರಕ್ರಿಯೆ
-
Kodagu18 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Kodagu14 hours ago
ಬೆಂಗಳೂರು ಒಕ್ಕಲಿಗ ಸಂಘದ ಸಹಯೋಗದೊಂದಿಗೆ ಪ್ರತಿಭಟನೆ ಸಿದ್ದತೆ
-
Hassan12 hours ago
ಈ ಸಲದ ಗಣರಾಜ್ಯೋತ್ಸವ ಸನ್ಮಾನಕ್ಕೆ ಅಪರೂಪದ ವೈದ್ಯ ಡಾ.ನಿತಿನ್ ಆಯ್ಕೆ
-
Mysore13 hours ago
ಸುತ್ತೂರು ಜಾತ್ರಾ ಮಹೋತ್ಸದಂದು ಹಸೆಮಣೆ ಏರಲಿದ್ದಾರೆ 155 ಜೋಡಿಗಳು