Connect with us

Kodagu

ದಾಖಲೆ ರಹಿತ ಹಣ ವಶಪಡಿಸಿಕೊಂಡ ಚುನಾವಣಾ ಆಧಿಕಾರಿಗಳು

Published

on

ಮಡಿಕೇರಿ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಲಕ್ಷದ 92 ಸಾವಿರ ಹಣವನ್ನು ಕೊಡಗು ಮೈಸೂರು ಗಡಿ ಕುಶಾಲನಗರ ಚೆಕ್ ಪೊಸ್ಟ್ನಲ್ಲಿ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮೈಸೂರಿನಿAದ ಕುಶಾಲನಗರ ಕಡೆಗೆ ಬರುತ್ತಿದ್ದ ಬೈಕ್‌ನಲ್ಲಿ ಹಣ ಪತ್ತೆಯಾಗಿದ್ದು, ದಾಖಲೆ ರಹಿತ ಹಣ ಹಾಗೂ ಬೈಕ್‌ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪೆಟ್ರೋಲ್ ಬಂಕ್‌ನಿAದ ಬ್ಯಾಂಕ್‌ಗೆ ಕೊಂಡೊಯ್ತಿದ್ದ ಹಣ ಇದು ಎನ್ನಲಾಗಿದ್ದು, 50 ಸಾವಿರಕ್ಕಿಂತ ಹೆಚ್ಚು ಹಣ ಹಿನ್ನಲೆ ಅಧಿಕಾರಿಗಳು ದಾಖಲೆ ಕೇಳಿದ್ದಾರೆ. ಸ್ಥಳದಲ್ಲಿ ದಾಖಲೆ ಒದಗಿಸಲು ವಿಫಲವಾದ ಹಿನ್ನಲೆ ಪೊಲೀಸರು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Kodagu

ಮುದ್ದಂಡ ಕಪ್ ಹಾಕಿ ಉತ್ಸವ : ಫೈನಲ್ಸ್ ಗೆ ಶ್ರೇಷ್ಠ ಆಟಗಾರರ ಆಗಮನ : ಉತ್ಸವ ಸಮಿತಿಯಿಂದ ಸನ್ಮಾನ

Published

on

ಮಡಿಕೇರಿ : ಮುದ್ದಂಡ ಕಪ್ ಹಾಕಿ ಉತ್ಸವದ ಫೈನಲ್ ಪಂದ್ಯಾವಳಿ ಮತ್ತು ಸಮಾರೋಪ ಸಮಾರಂಭ ನಡೆಯುವ ಏ.೨೭ ರಂದು ಪ್ರತಿಷ್ಠಿತ ಪ್ರಶಸ್ತಿ ವಿಜೇತ, ಶ್ರೇಷ್ಠ ಆಟಗಾರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ.


೧೯೭೫ರ ವಿಶ್ವಕಪ್ ಹಾಕಿ ವಿಜೇತ, ವಿಶ್ವದಲ್ಲೇ ಅತಿ ಹೆಚ್ಚು ಪದಕ ಗಳಿಸಿರುವ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ ಕೊಡಗಿನ ಸಿಡಿಲಮರಿ ಖ್ಯಾತಿಯ ಬಿ.ಪಿ.ಗೋವಿಂದ ಅವರು ಮುದ್ದಂಡ ಹಾಕಿ ಹಬ್ಬಕ್ಕೆ ಆಗಮಿಸಲಿದ್ದಾರೆ. ೧೯೭೨ ಮ್ಯುನಿಚ್ ಒಲಂಪಿಕ್ಸ್, ೧೯೭೩ ವಿಶ್ವಕಪ್, ೧೯೭೬ ಮಾಂಟ್ರಿಲ್ ಒಲಂಪಿಕ್ಸ್ ನ ಎಲ್ಲಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪದಕ ಗಳಿಸಿದ ಖ್ಯಾತಿ ಇವರದ್ದು.
ವಿಶ್ವಕಪ್ ಹಾಕಿ ಭೂಪಟದಲ್ಲಿ ಭಾರತ ಹಾಕಿ ತಂಡದ ಹೆಸರನ್ನು ಅಜರಾಮರಗೊಳಿಸಿದ ಕೊಡಗಿನ ವೀರ, ೧೯೭೫ ವಿಶ್ವಕಪ್ ಹಾಕಿ ವಿಜೇತ ತಂಡದ ಆಟಗಾರ ಪೈಕೇರ ಕಾಳಯ್ಯ, ೧೯೮೦ ಮಾಸ್ಕೋ ಒಲಂಪಿಕ್ಸ್ ನಲ್ಲಿ ಚಿನ್ನ ಗೆದ್ದ ನಾಯಕ, ಭಾರತ ತಂಡದ ತರಬೇತುದಾರ, ವಿಶ್ವಕಪ್ ಹಾಗೂ ಒಲಂಪಿಕ್ಸ್ ನಲ್ಲಿ ಹೆಸರು ಗಳಿಸಿದ, ದಕ್ಷಿಣ ರೈಲ್ವೆ ತಂಡದ ಅದ್ಭುತ ಆಟಗಾರ ಪದ್ಮಶ್ರೀ ಪುರಸ್ಕೃತ ವಾಸುದೇವ ಭಾಸ್ಕರ್, ೧೯೮೦ ಮಾಸ್ಕೋ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತ, ೧೯೮೪ ಲಾಸ್ ಏಂಜಲೀಸ್ ಒಲಂಪಿಕ್ಸ್, ೧೯೮೮ ಸಿಯೋಲ್ ಒಲಂಪಿಕ್ಸ್ ನ ನಾಯಕ, ವಿಶ್ವಕಪ್ ಚಾಂಪಿಯನ್ಸ್ ಟ್ರೋಫಿ ಹಾಗೂ ಇನ್ನು ಹಲವು ಪಂದ್ಯಾವಳಿಗಳಲ್ಲಿ ಆಡಿದ ಕೊಡಗಿನ ಏಕೈಕ ಆಟಗಾರ ಹಾಗೂ ಅರ್ಜುನ ಪ್ರಶಸ್ತಿ ವಿಜೇತ ಎಂ.ಎಂ.ಸೋಮಯ್ಯ ಆಗಮಿಸಲಿದ್ದಾರೆ.
೧೯೬೮ ಒಲಂಪಿಕ್ಸ್ ನ ಗೋಲ್ ಕೀಪರ್ ಆಗಿ ಪ್ರತಿನಿಧಿಸಿದ ಆಟಗಾರ. ಒಲಂಪಿಕ್ಸ್, ವಿಶ್ವಕಪ್, ಚಾಂಪಿಯನ್ ಟ್ರೋಫಿ, ಏಷ್ಯನ್ ಗೇಮ್ಸ್ ಗಳಲ್ಲಿ ಟೆಕ್ನಿಕಲ್ ಅಫಿಶಿಯಲ್ ಆಗಿ ಬಹಳಷ್ಟು ವರ್ಷ ಸೇವೆ ಸಲ್ಲಿಸಿದ ಹಾಗೂ ಹಾಕಿ ಪಂದ್ಯಾವಳಿಯ ಬಗ್ಗೆ ಅಪಾರ ಅನುಭವವಿರುವ ಮುನೀರ್ ಸೇಟ್, ೧೯೯೬ ಹಾಗೂ ೨೦೦೦ ಒಲಂಪಿಕ್ಸ್ ಆಟಗಾರ. ಏಷ್ಯನ್ ಗೇಮ್ಸ್, ವಿಶ್ವಕಪ್ ಹಾಗೂ ಅರ್ಜುನ ಪ್ರಶಸ್ತಿ ವಿಜೇತ ಮಹಮ್ಮದ್ ರಿಯಾಜ್ ಅವರು ಆಗಮಿಸಲಿದ್ದಾರೆ.
ಈ ಹಾಕಿ ದಿಗ್ಗಜರನ್ನು ಅರ್ಥಪೂರ್ಣವಾಗಿ ಬರಮಾಡಿಕೊಂಡು ತೆರೆದ ಜೀಪಿನಲ್ಲಿ ಕೊಡಗಿನ ಸಾಂಪ್ರದಾಯಿಕ ದುಡಿಕೊಟ್ ಪಾಟ್ ನೊಂದಿಗೆ ಮೈದಾನದ ಸುತ್ತ ಮೆರವಣಿಗೆ ಮಾಡಲಾಗುವುದು ಎಂದು ರಶಿನ್ ಸುಬ್ಬಯ್ಯ ಮಾಹಿತಿ ನೀಡಿದರು.
ಕೊಡವ ಕೌಟುಂಬಿಕ ಹಾಕಿ ಮೂರು ಬಾರಿ ಲಿಮ್ಕಾ ದಾಖಲೆ, ಒಂದು ಬಾರಿ ಗಿನ್ನಿಸ್ ದಾಖಲೆ ನಿರ್ಮಿಸಿದೆ. ಇಂದು ಕೊಡವ ಹಾಕಿ ವಿಶ್ವ ವಿಖ್ಯಾತ ಪಡೆದಿದೆ. ಎಲ್ಲಾ ಕ್ರೀಡಾ ಪ್ರೇಮಿಗಳು ಮುದ್ದಂಡ ಹಾಕಿ ಹಬ್ಬದ ಕೊನೆಯ ದಿನದ ಅದ್ಭುತ ಕ್ಷಣವನ್ನು ವೀಕ್ಷಿಸಬೇಕು ಎಂಬುವುದು ಮುದ್ದಂಡ ಕುಟುಂಬಸ್ಥರು ಹಾಗೂ ಕೊಡವ ಹಾಕಿ ಅಕಾಡೆಮಿಯ ಬಯಕೆ ಎಂದು ಅವರು ಹೇಳಿದರು.
::: ಹಾಕಿ ಜನಕನ ಕನಸು ನನಸು :::
ಕೌಟುಂಬಿಕ ಹಾಕಿಯ ಜನಕ ಪಾಂಡಂಡ ಕುಟ್ಟಪ್ಪ ಅವರು ವಿಶ್ವಕಪ್ ವಿಜೇತರು ಹಾಗೂ ಒಲಂಪಿಕ್ ನಲ್ಲಿ ಚಿನ್ನ ಗೆದ್ದ ಕೊಡಗಿನ ಆಟಗಾರರನ್ನು ಒಂದೇ ವೇದಿಕೆಗೆ ಕರೆತರಬೇಕೆಂಬ ಕನಸು ಕಂಡಿದ್ದರು, ಅದು ಇಂದು ನನಸಾಗುತ್ತಿದೆ.
ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ, ವಿಶ್ವಕಪ್ ವಿಜೇತರಾದ ಕಾಳಯ್ಯ ಹಾಗೂ ಗೋವಿಂದ ಅವರು ವಿಶ್ವಕಪ್ ಗೆದ್ದು ೫೦ ವರ್ಷ ತುಂಬಿದ ಸಡಗರದಲ್ಲಿದ್ದಾರೆ. ಇದೇ ಪ್ರಥಮ ಬಾರಿಗೆ ಹಾಕಿ ಪ್ರೇಮಿಗಳ ಸಮ್ಮುಖದಲ್ಲಿ ಇವರನ್ನು ಗೌರವಿಸಬೇಕು ಎಂಬ ತೀರ್ಮಾನವನ್ನು ಕೊಡವ ಹಾಕಿ ಅಕಾಡೆಮಿ ಹಾಗೂ ಮುದ್ದಂಡ ಕುಟುಂಬದವರು ತೆಗೆದುಕೊಂಡಿದ್ದಾರೆ ಎಂದು ರಶಿನ್ ಸುಬ್ಬಯ್ಯ ತಿಳಿಸಿದರು.
೧೯೮೦ರ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದು ೪೫ ವರ್ಷಗಳು ತುಂಬಿದ ಸಂಭ್ರಮದಲ್ಲಿರುವ ಪದ್ಮಶ್ರೀ ಪುರಸ್ಕೃತ ವಾಸುದೇವ ಭಾಸ್ಕರನ್ ಹಾಗೂ ಕೊಡಗಿನವರಾದ ಮನೆಯಪಂಡ ಸೋಮಯ್ಯ ಅವರನ್ನು ಕೂಡ ಸನ್ಮಾನಿಸಿ ಗೌರವಿಸಲಾಗುವುದು ಎಂದರು.

Continue Reading

Kodagu

ಕೊಡಗು ಗೌಡ ಸಮಾಜಗಳ ಒಕ್ಕೂಟದ ನೂತನ ಆಡಳಿತ ಮಂಡಳಿ ರಚನೆ ಅಧ್ಯಕ್ಷರಾಗಿ ಆನಂದ್ ಕರಂದ್ಲಾಜೆ ಆಯ್ಕೆ

Published

on

ಮಡಿಕೇರಿ : ಕೊಡಗು ಗೌಡ ಸಮಾಜಗಳ ಒಕ್ಕೂಟದ ನೂತನ ಆಡಳಿತ ಮಂಡಳಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಆನಂದ್ ಕರಂದ್ಲಾಜೆ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ರಾಜೇಶ್ ತೇನನ, ಎರಡನೇ ಬಾರಿಗೆ ಕಾರ್ಯದರ್ಶಿಯಾಗಿ ಉದಯ್ ಪೇರಿಯನ, ಖಜಾಂಚಿಯಾಗಿ ನವೀನ್ ಅಂಬೆಕಲ್, ಜಂಟಿ ಕಾರ್ಯದರ್ಶಿಯಾಗಿ ಕೊಡಪಾಲು ಗಣಪತಿ, ನಿರ್ದೇಶಕರುಗಳಾಗಿ ಪೇರಿಯನ ಜಯಾನಂದ, ಚಿಲ್ಲನ ಗಣಿಪ್ರಸಾದ್, ಕೊಡಗನ ಹ?, ಕುಯ್ಯಮುಡಿ ಅಶ್ವಿನಿ ಕುಮಾರ್, ಬೇಕಲ್ ಬಿಪಿನ್, ಪುಳಕಂಡ್ರ ಸುದೀಪ್, ಕುಯ್ಯಮುಡಿ ರಂಜು ಪಾಣತ್ತಲೆ, ಜಗದೀಶ್ ಮಂದಪ್ಪ, ಕೊಂಬಾರನ ರೋ?ನ್, ಮೊಟ್ಟನ ಕರುಣ, ಪುದಿಯನೆರವನ ರೇವತಿ ರಮೇಶ್ ಹಾಗೂ ಕುಂಬುಗೌಡನ ಜಲಜ ವಿನೋದ್ ನೇಮಕಗೊಂಡಿದ್ದಾರೆ.
ಮಡಿಕೇರಿಯ ಗೌಡ ಸಮಾಜದಲ್ಲಿ ನಡೆದ ಕೊಡಗು ಗೌಡ ಸಮಾಜಗಳ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಮಾಜಿ ಅಧ್ಯಕ್ಷ ಸೂರ್ತಲೆ ಸೋಮಣ್ಣ ಅವರು ನೂತನ ಅಧ್ಯಕ್ಷ ಆನಂದ್ ಕರಂದ್ಲಾಜೆ ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ಆನಂದ್ ಕರಂದ್ಲಾಜೆ ಅವರು ಗೌಡ ಸಮಾಜಗಳ ಹಾಗೂ ಜನಾಂಗ ಬಾಂಧವರ ಪ್ರಗತಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಕೊಡಗು ಜಿಲ್ಲೆಯಲ್ಲಿರುವ ಎಲ್ಲಾ ಜನಾಂಗಗಳೊಂದಿಗೆ ಅರೆಭಾ? ಒಕ್ಕಲಿಗ ಗೌಡರು ಶಾಂತಿ ಮತ್ತು ಸಮನ್ವಯತೆಯಿಂದ ಜೀವನ ಸಾಗಿಸುತ್ತಿದ್ದಾರೆ. ಈ ಸಾಮರಸ್ಯವನ್ನು ಹೀಗೆ ಮುಂದುವರಿಸಲು ಆದ್ಯತೆ ನೀಡಲಾಗುವುದು. ಗೌಡ ಜನಾಂಗವನ್ನು ಮತ್ತಷ್ಟು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಕಾರ್ಯ ಚಟುವಟಿಕೆಗಳನ್ನು ರೂಪಿಸಿ ಒಗ್ಗಟ್ಟಿನಿಂದ ಮುನ್ನಡೆಯಲಾಗುವುದು ಎಂದರು.

Continue Reading

Kodagu

ಪೋಷಣ್ ಪಾಕ್ವಾಡ್, ಸೀಮಂತ ಕಾರ್ಯಕ್ರಮ

Published

on

ಮಡಿಕೇರಿ : ಬೆಟ್ಟಗೇರಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಾಕ್ವಾಡ್, ಸೀಮಂತ ಕಾರ್ಯಕ್ರಮ ಹಾಗೂ ಆಯುಷ್ ಕಾರ್ಯಕ್ರಮ ಶನಿವಾರ ನಡೆಯಿತು.
ಕಾರ್ಯಕ್ರಮದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರದ ಡಾಕ್ಟರ್ ಶುಭ, ಆಯುಷ್ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ, ಸ್ಥಳೀಯವಾಗಿ ಸಿಗುವ ಔಷಧಿ ಗುಣ ಇರುವ ಸೊಪ್ಪುಗಳನ್ನು ತಂದು ಅದರ ಮಹತ್ವದ ಬಗ್ಗೆ ತಿಳಿಸಿದರು. ಆರೋಗ್ಯಕರ ಜೀವನಶೈಲಿ ಬಗ್ಗೆ, ಆಹಾರ ಪದ್ಧತಿಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ಯೋಗ ಶಿಕ್ಷಕಿ ಪವಿತ್ರ ಯೋಗದ ಮಹತ್ವ ತಿಳಿಸುತ್ತಾ ಎಲ್ಲಾ ಫಲಾನುಭವಿಗಳಿಗೆ ಯೋಗಾಭ್ಯಾಸ ಮಾಡಿಸಿದರು. ಪ್ರಭಾರ ಸಾಹಿತ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಸಾವಿರ ದಿನಗಳ ಮಹತ್ವ, ಅಪೌಷ್ಟಿಕತೆ ಬರದಂತೆ ತಡೆಯುವ ಆಹಾರ ಪದ್ಧತಿ, ಪೌಷ್ಟಿಕ ಆಹಾರ ಸೇವನೆ ಬಗ್ಗೆ, ತೂಕದ ಮಹತ್ವ, ಸ್ವಚ್ಛತೆ, ಕೈ ತೊಳೆಯುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
ಇದೇ ಸಂದರ್ಭ ಆಯುಷ್ ಇಲಾಖೆಗೆ ಸಂಬಂಧಿಸಿದ ಆರೋಗ್ಯ ಪದ್ಧತಿಯನ್ನು ಒಳಗೊಂಡ ಹಿತ್ತಲೊಳಗಿರಲವ್ವ ಹತ್ತು ಮೂಲಿಕೆಗಳು ಹಾಗೂ ಆಯುಷ್ ಆರೋಗ್ಯ ಕೈಪಿಡಿಯನ್ನು ವಿತರಣೆ ಮಾಡಲಾಯಿತು. ಇದರೊಂದಿಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಯುಷ್ ಟಾನಿಕ್ ಮತ್ತು ಮಾತ್ರೆಗಳು ವಿತರಿಸಲಾಯಿತು.
ಬೆಟ್ಟಗೇರಿ ಅಂಗನವಾಡಿ ಕಾರ್ಯಕರ್ತೆ ಬಿ ಎಂ ಪುಷ್ಪಾವತಿ ಕಾರ್ಯಕ್ರಮವನ್ನು ಉತ್ತಮವಾಗಿ ಆಯೋಜಿಸುವುದರೊಂದಿಗೆ ನಿರೂಪಣೆ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಸುರಕ್ಷಾಧಿಕಾರಿ ಕೃತಿಕಾರಾಣಿ, ರತಿ, ಆಶಾ ಕಾರ್ಯಕರ್ತೆ ಜಯಚಿತ್ರ, ಆಶಾ ಕಾರ್ಯಕರ್ತೆ ಪ್ರಮೀಳಾ ಹಾಜರಿದ್ದರು.

Continue Reading

Trending

error: Content is protected !!