Hassan
ಹೆಚ್.ಡಿ. ದೇವೇಗೌಡ್ರ ಮೊಮ್ಮಗ ಪ್ರಜ್ವಲ್ ಸೋಲಿಸಿ, ಪುಟ್ಟಸ್ವಾಮಿ ಮೊಮ್ಮಗ ಶ್ರೇಯಸ್ ಪಟೇಲ್ ಗೆಲ್ಲಿಸಲು ಜಿಲ್ಲಾ ಮಂತ್ರಿ ಕೆ.ಎನ್. ರಾಜಣ್ಣ ಕರೆ

ಹಾಸನ: ಮುಂದೆ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಹೆಚ್.ಡಿ. ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣನನ್ನು ಸೋಲಿಸಿ ಜಿ. ಪುಟ್ಟಸ್ವಾಮಿ ಮೊಮ್ಮಗನಾದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ನನ್ನು ಗೆಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಕರೆ ನೀಡಿದರು.
ನಗರದ ಕರಾವಳಿ ಹೋಟೆಲ್ ಸಭಾಂಗಣದಲ್ಲಿ ಶುಕ್ರವಾರದಂದು ಕರೆಯಲಾಗಿದ್ದ ದಲಿತ ಮುಖಂಡರ ಸಭೆಯನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ದಲಿತ ಸಮುದಾಯ ಮನಸ್ಸು ಮಾಡಿದರೇ ಒಂದು ಬದಲಾವಣೆ ತರಬಹುದು. ಶಿವಲಿಂಗೇಗೌಡರ ಕ್ಷೇತ್ರದಲ್ಲಿ ಇಪ್ಪತ್ತು ಸಾವಿರ ಒಕ್ಕಲಿಗರು ಇರಬಹುದು. ದಲಿತರು ಮನಸ್ಸು ಮಾಡಿದರೇ ಏನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ನಾನು ಮತ್ತು ಶಿವಲಿಂಗೇಗೌಡರೆ ಉದಾಹರಣೆ. ಪುಟ್ಟಸ್ವಾಮಿ ಎಂದರೇ ದೇವರಂತಹ ಮನಷ್ಯ ಎನ್ನುತ್ತಾರೆ. ಅಂತಹ ಕುಟುಂಬದಿಂದ ಸರಳವಾಗಿ ಕುಟುಂಬದವರು ಚುನಾವಣೆಗೆ ಬಂದಿರುವುದು ನಮ್ಮ ಸೌಭಾಗ್ಯ ಕಾಂಗ್ರೆಸ್ ನಿಂದ ಐದು ಗ್ಯಾರಂಟಿ ನೀಡಲಾಗಿದ್ದು, ಬಡ ಕುಟುಂಬಗಳಿಗೆ ಅನುಕೂಲವಾಗಿದೆ. ಹಾಸನಾಂಬೆ ದರ್ಶನಕ್ಕೆ ಇಡೀ ಇತಿಹಾಸದಲ್ಲಿ ಇಷ್ಟೊಂದು ಜನ ಬಂದೆ ಇಲ್ಲ. ಆದರೇ ಕಾಂಗ್ರೆಸ್ ಸರಕಾರ ಬಂದ ಮೇಲೆ ಇಷ್ಟೊಂದು ಜನ ಸೇರಿದ್ದಾರೆ. ಅನ್ನ ಭಾಗ್ಯ ಯೋಜನೆ, ಗೃಹ ಲಕ್ಷ್ಮಿ, ಸೇರಿದಂತೆ ಹತ್ತು ಹಲವಾರು ಯೋಜನೆ ಜಾರಿ ಮಾಡಿ ಜನರ ಆಶಿರ್ವಾದ ಸಿಕ್ಕಿದೆ. ನಾನು ದೇವೇಗೌಡರ ಬಗ್ಗೆ ಟೀಕೆ ಮಾಡುವುದಿಲ್ಲ ಎಂದರು. ದಲಿತ ಸಮಾಜವಾಗಲಿ ಯಾರೆ ಆಗಲಿ ಕೆಳವರ್ಗ ಮತ್ತು ಮೇಲ್ವರ್ಗ ಎಂದು ಯಾರು ಮಾತನಾಡಬೇಡಿ. ಮಾತನಾಡಿದರೇ ನನಗೆ ಕೋಪ ಬರುತ್ತದೆ ಎಂದು ಸಭೆಯಲ್ಲಿ ಮಾತನಾಡಿದ ದಲಿತ ಮುಖಂಡರ ಬಗ್ಗೆ ಬೇಸರವ್ಯಕ್ತಪಡಿಸಿದರು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಟ್ಟು ಸಮಾಜದಲ್ಲಿ ಉನ್ನತ ಮಟ್ಟಕ್ಜೆ ಹೋಗಲು ಅವಕಾಶ ನೀಡಿ. ಈ ಬಾರಿ ದಲಿತರೆಲ್ಲಾ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲ್ಲಿಸಬೇಕು. ದೇವೇಗೌಡ ಮೊಮ್ಮಗನನ್ನು ಸೋಲಿಸಿ ಪುಟ್ಟಸ್ವಾಮಿ ಗೌಡರ ಮೊಮ್ಮಗನನ್ನು ಗೆಲ್ಲಿಸಿ ರಾಜ್ಯದಲ್ಲಿ ಇಪ್ಪತೆಂಟು ಕ್ಷೇತ್ರ ಗೆಲ್ಲಿಸಬೇಕೆಂದು ಹೇಳಿದರು.
ಎಲ್ಲಾರೂ ಉತ್ಸಹದಲ್ಲಿ ಕಾಂಗ್ರೆಸ್ ಬೆಂಬಲಿಸುತ್ತಿದ್ದು, ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು ಎನ್ನುವ ಉದ್ದೇಶ ಹೊಂದಿದ್ದಾರೆ. ಇವತ್ತು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧೀ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೆಯಾದಂತಹ ಬಳವಣಿಗೆಯನ್ನು ಹೊಂದುತ್ತಿದೆ. ೧೦ ವರ್ಷದ ಬಿಜೆಪಿ ಆಡಳಿತವು ಕೇವಲ ಸುಳ್ಳು ಹೇಳಿಕೊಂಡು ಕಾಲದೂಡಿದೆ. ಪ್ರತಿ ಖಾತೆಗೆ ೧೫ ಲಕ್ಷ ರೂ ಹಣ ಹಾಕುವುದಾಗಿ ಹೇಳಿ ಬಿಡಿಕಾಸು ಹಾಕಲಿಲ್ಲ. ೨ ಕೋಟಿ ಉದ್ಯೋಗ ಕೊಡುವುದಾಗಿ ಹೇಳಿ ಯಾವ ಭರವಸೆ ಈಡೇರಿಸದೇ ಬರಿ ಸುಳ್ಳು ಹೇಳಿಕೊಂಡು ಬಂದಿದೆ ಎಂದು ದೂರಿದರು. ರಾಜ್ಯದಿಂದ ೪ ಲಕ್ಷಕ್ಕೂ ಹೆಚ್ಚು ಹಣವನ್ನು ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ಹಣ ಹೋಗುತ್ತದೆ ಆದರೇ ನಮಗೆ ಕೊಡುವುದು ಕೇವಲ ೧ ಸಾವಿರ ಕೋಟಿ ಮಾತ್ರ. ಕೇಂದ್ರದಿಂದ ನಮಗೆ ಆದ ಅನ್ಯಾಯ ತಿಳಿದಿದೆ. ದೇವೇಗೌಡರನ್ನು ನಾನು ಟೀಕೆ ಮಾಡುವುದಿಲ್ಲ ಎಂದು ಹೇಳುತ್ತಲೆ ಟಾಂಗ್ ಕೊಟ್ಟರು.
ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಅವರು ಮಾತನಾಡಿ, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸಿ ಹಾಸನ ರಾಜಕಾರಣದಲ್ಲಿ ಇತಿಹಾಸ ಬರೆಯಬೇಕು. ಅತೀ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸಲು ಮುಂದಾಗಬೇಕು ಎಂದರು.
ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಮಾತನಾಡಿ, ನಿಮ್ಮ ಮನೆ ಮಗನಾಗಿ ನಿಮ್ಮೆಲ್ಲರ ಜೊತೆ ಇರುವೆನು. ಜೆಡಿಎಸ್ ಪಕ್ಷದಲ್ಲಿ ಪ್ರಧಾನಿಯಾಗಿ, ಮುಖ್ಯಮಂತ್ರಿಯಾಗಿ ಹಾಗೂ ಜಿಲ್ಲಾ ಪಂಚಾಯಿತಿ ವರೆಗೂ ಜಿಲ್ಲೆಯ ಜನರು ಅವಕಾಶ ನೀಡಿದ್ದು, ಈ ಬಾರಿ ನಂಗೆ ಅವಕಾಶ ಕೊಡುವುದರ ಮೂಲಕ ಸೇವೆ ಮಾಡುವ ಅವಕಾಶ ಕೊಡಬೇಕು ಎಂದು ಮನವಿ ಮಾಡಿದರು.
ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಸೋಮಶೇಖರ್ ಮಾತನಾಡಿ, ಹಿಂದೆ ದೇವೇಗೌಡರನ್ನು ಪುಟ್ಟಸ್ವಾಮಿ ಅವರು ಸೋಲಿಸಿದರು. ಈಗ ಅದೆ ಕುಟುಂಬದ ಶ್ರೇಯಸ್ಸು ಪಟೇಲ್ ಅವರು ಪ್ರಜ್ವಲ್ ರೇವಣ್ಣರನ್ನು ಸೋಲಿಸಲಿದ್ದಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು. ಕುಟುಂಬ ರಾಜಕಾರಣವು ಈ ಚುನಾವಣೆಯಲ್ಲಿ ಬದಲಾವಣೆ ಆಗಲಿದೆ. ದೌರ್ಜನ್ಯ ದಬ್ಬಾಳಿಕೆಯನ್ನು ಇಂದು ಜಿಲ್ಲೆಯಲ್ಲಿ ಕಾಣುತ್ತಿದ್ದೇವೆ. ಕೊನೆಗಣಿಸಲು ಶ್ರೇಯಸ್ ಪಟೇಲ್ ಅಂತಹ ನಾಯಕರು ನಮಗೆ ಬೇಕು. ಜಿಲ್ಲೆಯ ಜನರ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ದಲಿತ ಮುಖಂಡರಾದ ಹೆಚ್.ಕೆ. ಸಂದೇಶ್, ಮಾದಿಗ ದಂಡೋರದ ಮುಖಂಡರಾದ ವಿಜಯ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ, ಹೆಚ್.ಕೆ. ಮಹೇಶ್, ಮುರುಳಿಧರ್, ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ, ವಾಲ್ಮಿಕಿ ಸಮಾಜದ ಜಿ.ಓ. ಮಹಾಂತಪ್ಪ, ದಲಿತ ಸಂಘರ್ಷ ಸಮಿತಿ ಮುಖಂಡರಾದ ರಾಜಶೇಖರ್ ಇತರರು ಉಪಸ್ಥಿತರಿದ್ದರು.
Hassan
ಮೇಲ್ಸೇತುವೆ ಮುಂದಿನ ಮಾರ್ಚ್ಗೆ ಪೂರ್ಣ: ಸಂಸದ ಶ್ರೇಯಸ್ ಪಟೇಲ್

ಹಾಸನ: ನಗರದ ಹೊಸ ಬಸ್ ನಿಲ್ದಾಣದ ಎದುರಿನ ರೈಲ್ವೆ ಮೇಲ್ಸೇತುವೆ 2ನೇ ಹಂತದ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, 2026ರ ಫೆಬ್ರವರಿ ಇಲ್ಲವೇ ಮಾರ್ಚ್ ವೇಳೆಗೆ ಮುಗಿಸಲಾಗುವುದು ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.
ಶನಿವಾರದಂದು ನಗರದ ಎನ್.ಆರ್. ವೃತ್ತದಿಂದ ಹೊಸ ಬಸ್ ನಿಲ್ದಾಣದವರೆಗೂ ನಿಮಾಣ ಹಂತದಲ್ಲಿರುವ ಮೇಲ್ಸೇತುವೆ ಮೇಲೆ ತೆರಳಿ ಎಲ್ಲೆಲ್ಲಿ ಕಾಮಗಾರಿ ಆಗಬೇಕು ಎಂಬುವರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಹಲವು ಕಾರಣಗಳಿಂದಾಗಿ ಕೆಲ ವರ್ಷಗಳಿಂದ ಕಾಮಗಾರಿ ನಿಂತಿತ್ತು. ಇದೀಗ ತಮ್ಮ ತಮ್ಮ ಪಾಲಿನ ಅನುದಾನ ನೀಡಲು ಸಮ್ಮತಿಸಿವೆ. ಹೀಗಾಗಿ ಈಗಾಗಲೇ ಶುರುವಾಗಿರುವ ಕಾಮಗಾರಿಯನ್ನು ಕಾಲಮಿತಿಯಲ್ಲಿ ಮುಗಿಸುವಂತೆ ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚಿಸಿ, ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬ ಆಗಬಾರದು ಎಂದು ಸೂಚನೆ ನೀಡಲಾಗಿದೆ ಎಂದರು. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ವರ್ಷದ ಮಾರ್ಚ್ ವೇಳೆಗೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದರು.
ಈ ಯೋಜನೆಯ ಒಟ್ಟು ಅಂದಾಜು ವೆಚ್ಚ ೮೩.೭೨ ಕೋಟಿ. ಇದರಲ್ಲಿ ರಾಜ್ಯದ ಪಾಲು ೪೯.೫೪ ಕೋಟಿ ನೀಡಬೇಕಿದೆ. ಈಗ ೨೧.೮೧ ಕೋಟಿ ರೂ. ನೀಡುವುದಾಗಿ ಸರ್ಕಾರ ಹೇಳಿದ್ದು, ಹೆಚ್ಎಂಆರ್ಡಿಸಿ ಅಡಿ ೧೫ ಕೋಟಿ ನೀಡಲಾಗಿದೆ. ಅನುದಾನಕ್ಕೆ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಮೇಲ್ಸೇತುವೆ ಮೇಲಿನ ಕಬ್ಬಿಣದ ಬೃಹತ್ ಕಮಾನು ನಿರ್ಮಾಣ ಹೈದ್ರಾಬಾದ್ನಲ್ಲಿ ಆಗಲಿದೆ, ಅದಕ್ಕಾಗಿ ೮ ತಿಂಗಳು ಸಮಯಾವಕಾಶ ಬೇಕಿದೆ. ಅಲ್ಲೀವರೆಗೂ ಸಿವಿಲ್ ವರ್ಕ್ ಸೇರಿ ಉಳಿದ ಕಾಮಗಾರಿ ನಡೆಯಲಿವೆ ಎಂದರು. ಉಸುಮಾರು ಈ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಕೇಂದ್ರ ಸಹ ತನ್ನ ಪಾಲಿನ ಅನುದಾನ ನೀಡಲು ಒಪ್ಪಿದೆ. ಹೀಗಾಗಿ ಮೇಲ್ಸೇತುವೆ ಕಾಮಗಾರಿ ಇನ್ನು ಮಂದೆ ಯಾವುದೇ ಅಡೆ-ತಡೆ ಇಲ್ಲದೆ ಮುನ್ನಡೆಯಲಿದೆ ಎಂದರು. ಎರಡೂ ಬದಿಯ ನಾಲ್ಕು ಪಥದ ಮೇಲ್ಸೇತುವೆ ನಿರ್ಮಾಣ ಆದರೆ ವಾಹನ ಸಮಸ್ಯೆ ನಿವಾರಣೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Hassan
ಯಾವ ಸಮಾಜವನ್ನು ಒಡೆದಾಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿಲ್ಲ: ಸಂಸದ ಶ್ರೇಯಸ್ ಪಟೇಲ್

ಹಾಸನ : ನಮ್ಮದು ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಡುವ ಪಕ್ಷ ಹಾಗಾಗಿ ಇದರ ಬಗ್ಗೆ ಜವಾಬ್ದಾರಿಯುತ ತೀರ್ಮಾನವನ್ನು ಸರ್ಕಾರದ ಮುಖ್ಯಮಂತ್ರಿಗಳು ತೆಗೆದುಕೊಳ್ಳುತ್ತಾರೆ ಎಂದು ಭಾವಿಸಿದ್ದೇವೆ. ಎಲ್ಲಾ ಸಮಾಜವನ್ನು ಸಮವಾಗಿ ನೋಡಿ ಜಾತಿಗಣತಿಯಲ್ಲಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಜಾತಿಗಣತಿ ವರದಿ ಗೊಂದಲ ವಿಚಾರ ಹಾಸನದಲ್ಲಿ ಸಂಸದ ಶ್ರೇಯಸ್ಪಟೇಲ್ ಹೇಳಿಕೆ ನೀಡಿದರು.
ಮೊನ್ನೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಪರಾಮರ್ಶಿಸಿ ತೀರ್ಮಾನ ತೆಗೆದುಕೊಳ್ಳುಬೇಕೆಂದು ಒತ್ತಾಯಿಸಿದ್ದಾರೆ. ಸಚಿವರ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ತೆಗೆದುಕೊಂಡಿದ್ದಾರೆ. ಯಾವುದೇ ಸಮಾಜಕ್ಕೆ ಅನ್ಯಾಯವಾಗುವ ಕೆಲಸವನ್ನು ನಮ್ಮ ಪಕ್ಷ ಮಾಡಲ್ಲ. ಯಾವ ಸಮಾಜವನ್ನು ಒಡೆದಾಡಿಸುವ ಕೆಲಸವನ್ನು ನಮ್ಮ ಸಮಾಜ ಮಾಡಿಲ್ಲ, ಮಾಡುವುದಿಲ್ಲ. ಜನಸ್ನೇಹಿಯಾಗಿ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ. 2015 ರಲ್ಲಿ ಜಾತಿಗಣತಿ ನಡೆದಿತ್ತು, ಎಲ್ಲರ ಬೇಡಿಕೆ ಇತ್ತು ಜಾತಿಗಣತಿಗಾಗಿ ಕೋಟ್ಯಾಂತರ ರೂ ವೆಚ್ಚ ಮಾಡಿದ್ದಾರೆ. ಈಗೀನ ವರದಿಯ ನೈಜತೆಯನ್ನು, ಸತ್ಯಾಸತ್ಯತೆಯನ್ನು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರದಿಯನ್ನು ಇನ್ನೂ ಮಂಡಿಸಿಲ್ಲ, ವರದಿ ಹೊರಗೆ ಬಂದ ಮೇಲೆ ಗೊತ್ತಾಗುತ್ತೆ. ಇನ್ನೂ ಯಾರಿಗೂ ವರದಿಯಲ್ಲಿದೆ ಎಂದು ಗೊತ್ತಿಲ್ಲ.
ಬಿಜೆಪಿ ಸರ್ಕಾರ ಕೆಡವಲು ಯತ್ನಿಸುತ್ತಿದೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರ ಯಾವಾಗಲೂ ಆ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವುದೇ ವಿರೋಧ ಪಕ್ಷಗಳ ಗುರಿ ಎಲ್ಲರಿಗೂ ಅಧಿಕಾರದ ಆಸೆ ಇರುತ್ತೆ ನಮಗೂ ಆಸೆ ಇದೆ, ಆದರೆ ಸಿದ್ಧಾಂತ ಇದೆ, ಜನಸೇವೆ ಮಾಡಲು ನಾವು ಬಂದಿದ್ದೇವೆ. ಅಧಿಕಾರದ ದುರಾಸೆಗೋಸ್ಕರ ಈ ಕೆಲಸ ಮಾಡಬಹುದು.ನಾವು ಎಚ್ಚರಿಕೆಯಿಂದ ಇರಬೇಕು. ನಮ್ಮಲ್ಲಿ ಒಗ್ಗಟ್ಟಿದೆ, ಒಗ್ಗಟ್ಟು ಎಂದರೆ ಕಾಂಗ್ರೆಸ್ ಪಕ್ಷ ಎಂದು ಹೇಳಿದರು.
ಸಿಇಟಿ ಪರೀಕ್ಷೆಗೆ ಹೋಗುವ ವೇಳೆ ಜನಿವಾರ ತೆಗೆಸಿದ ವಿಚಾರವಾಗಿ ಮಾತನಾಡಿ, ಅದನ್ನು ನಾನು ಖಂಡಿತವಾಗಿ ವಿರೋಧಿಸುತ್ತೇನೆ, ಆ ತರ ಮಾಡಬಾರದು. ನಾನು ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಒಬ್ಬ ಸಾರ್ವಜನಿಕನಾಗಿ ಹೇಳುತ್ತಿದ್ದೇನೆ. ಅವರವರ ಆಚರಣೆಗಳು, ಅವರವರ ವೈಯುಕ್ತಿಕ. ಜನಿವಾರ ತೆಗೆದು ಹೋಗಿ ಎನ್ನುವುದು ಅಪರಾಧ. ನಾನಂತು ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು.
Hassan
ಆಟೋ ಹತ್ತಿಸುವ ನೆಪದಲ್ಲಿ ಮಾಂಗಲ್ಯ ಸರ ಕಿತ್ತು ಪರಾರಿ

ಹಾಸನ: ಆಟೋ ಹತ್ತಿಸುವ ನೆಪದಲ್ಲಿ ವೃದ್ಧೆಯ ಗಮನ ಬೇರೆಡೆ ಸೆಳೆದು ಚಿನ್ನದ ಮಾಂಗಲ್ಯ ಸರ ಸುಲಿಗೆ ಮಾಡಿಕೊಂಡು ಅಪರಿಚಿತ ಪರಾರಿಯಾಗಿರುವ ಘಟನೆ
ಸಾಲಗಾಮೆ ಹೋಬಳಿ ಸುಂಕದಕೊಪ್ಪಲು ಗ್ರಾಮದ ಲಕ್ಷ್ಮಮ್ಮ ಎಂಬುವರು ಸಾಲಗಾಮೆ ಗೇಟ್ನಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದು, ಏ.೧೮ ರಂದು ಊರಿನಿಂದ ಬಸ್ಸಿನಲ್ಲಿ ಹಾಸನಕ್ಕೆ ಹೋಗಿದ್ದರು.
ಅಲ್ಲಿಂದ ಹೂವಿನಹಳ್ಳಿ ಕಾವಲು ಹೊಸೂರಿಗೆ ಬಸ್ಸಿನಲ್ಲಿ ಬಂದು ಇಳಿದು ಸರ್ಕಾರಿ ಆಸ್ಪತ್ರೆಗೆ ಹೋದರು. ಆದರೆ ಗುಡ್ಫ್ರೈಡೆ ನಿಮಿತ್ತ ರಜೆ ಇದ್ದುದರಿಂದ ವಾಪಸ್ ಊರಿಗೆ ಹೋಗಲೆಂದು ಮಧ್ಯಾಹ್ನ ೧ ಗಂಟೆ ಸಮಯದಲ್ಲಿ ಆಸ್ಪತ್ರೆ ಮುಂದೆ ರಸ್ತೆಯ ಬದಿಯಲ್ಲಿ ನಿಂತಿದ್ದರು.
ಅಲ್ಲಿಗೆ ಬಂದ ಸುಮಾರು ೩೦-೩೫ ವರ್ಷ ವಯಸ್ಸಿನ ವ್ಯಕ್ತಿ, ಅಜ್ಜಿ ನಿಂತಿದ್ದಲ್ಲಿಗೆ ಬಂದು ಯಾವೂರವ್ವ ಎಂದು ಕೇಳಿ, ನನ್ನ ಬೈಕಿಗೆ ಬನ್ನಿ ಕರೆದುಕೊಂಡು ಹೋಗುತ್ತೇನೆಂದು ಹೇಳಿದ್ದಾನೆ.
ಮಗಳ ಊರಾದ ಅರೇಕಲ್ ಹೊಸಳ್ಳಿ ಗ್ರಾಮದ ಮನೆಗೆ ಹೋಗುತ್ತೇನೆಂದು ಹೇಳಿದಾಗ ಆಟೋದಲ್ಲಿ ಹೋಗಿ ಎಂದು ಅಜ್ಜಿಯ ಕೈ ಹಿಡಿದು ರಸ್ತೆ ದಾಟಿಸಿದ ಆಸಾಮಿ, ರಸ್ತೆಯಲ್ಲಿ ಹೋಗುತ್ತಿದ್ದ ಆಟೋವನ್ನು ಅಡ್ಡಹಾಕಿ ನಿಲ್ಲಿಸಿ, ಅಜ್ಜಿ ಆಟೋದ ಒಳಕ್ಕೆ ಕಾಲಿಟ್ಟು ಹತ್ತುವಾಗ ಅವರ ಕೊರಳಿನಲ್ಲಿದ್ದ ಸುಮಾರು ೪೦ ಗ್ರಾಂ. ತೂಕದ ಚಿನ್ನದ ಮಾಂಗಲ್ಯ ಸರವನ್ನು ಅಪರಿಚಿತ ಕಿತ್ತುಕೊಂಡು ಪರಾರಿಯಾಗಿದ್ದಾನೆ.
ಮಾಂಗಲ್ಯ ಸರದ ಅಂದಾಜು ಬೆಲೆ ೩ ಲಕ್ಷ ಎನ್ನಲಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Chamarajanagar22 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore19 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Hassan23 hours ago
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ
-
Kodagu19 hours ago
ಹುಲಿ ದಾಳಿಗೆ ಕರು ಬಲಿ
-
Kodagu22 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Chikmagalur24 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.
-
Hassan24 hours ago
ಜನಿವಾರ, ಕಾಶೀ ದಾರ ತೆಗೆಸಿರುವುದು ಖಂಡನೀಯ
-
Mysore21 hours ago
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ