Connect with us

Mysore

ಮೂಡಾದಲ್ಲಿ 1 ಸಾವಿರ ಕೋಟಿ ರೂ. ಅವ್ಯವಹಾರ : ತನಿಖೆ ನಡೆಸುವಂತೆ ಎಸ್ಡಿಪಿಐ ಜಿಲ್ಲಾಧ್ಯಕ್ಷ ರಫತ್ ಖಾನ್ ಒತ್ತಾಯ

Published

on

ಮೈಸೂರು : ಮೂಡಾದಲ್ಲಿ ನಡೆದಿದೆ ಎನ್ನಲಾದ ಒಂದು ಸಾವಿರ ಕೋಟಿ ರೂ. ಅವ್ಯವಹಾರದ ಬಗ್ಗೆ ಕೂಡಲೇ ತನಿಖೆ ನಡೆಸಿ ಹಣ ವಸೂಲಿ ಮಾಡಿ ತಪ್ಪಿತಸ್ಥರನ್ನು ಶಿಕ್ಷಿಸಬೇಕೆಂದು ಎಸ್ಡಿಪಿಐ ಜಿಲ್ಲಾ ಅಧ್ಯಕ್ಷ ರಫತ್ ಖಾನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭೂ ಮಾಲಿಕರಿಗೆ ಪರಿಹಾರವಾಗಿ ಕಾನೂನು ಬಾಹಿರವಾಗಿ ನಿವೇಶನಗಳನ್ನು ಹಂಚಿಕೆ ಮಾಡಿಕೊಡಲಾಗಿದೆ. ಈ ಬಗ್ಗೆ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಕೆ.ಲತಾ ಅವರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ನಿರ್ದೇಶಿಸಿದ್ದು, ಬೃಂದಾವನ ಬಡಾವಣೆಯ ನಿವಾಸಿ ನಿವೃತ್ತ ನಗರ ಯೋಜನೆ ಸಹಾಯಕ ನಿರ್ದೇಶಕ ಹಾಗೂ ಮೂಡ ನೌಕರರ ಸಂಘದ ಮಾಜಿ ಅಧ್ಯಕ್ಷ ಪಿ.ಎಸ್.ನಟರಾಜ್ ಸಲ್ಲಿಸಿರುವ ದೂರಿನ ಅನ್ವಯ ಈ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಲವು ಪ್ರಕರಣಗಳಲ್ಲಿ ಮಾಲೀಕರಿಗೆ ಪರಿಹಾರ ನೀಡಿಲ್ಲವೆಂದು,
ಬದಲಿಯಾಗಿ ಅಭಿವೃದ್ಧಿ ಹೊಂದಿದ ಜಾಗದಲ್ಲಿ ಬೆಲೆ ಬಾಳುವ ಆಸ್ತಿಗಳನ್ನು 50:50 ಅನುಪಾತದಲ್ಲಿ ಕಾನೂನು ಬಾಹಿರವಾಗಿ ಹಂಚಿಕೆ ಮಾಡಲಾಗಿದೆ. ಅದರಿಂದ
ಪ್ರಾಧಿಕಾರಕ್ಕೆ ಹಾಗೂ ಸರ್ಕಾರಕ್ಕೆ 1ಸಾವಿರ ಕೋಟಿಗೂ ಹೆಚ್ಚು ಆರ್ಥಿಕ ನಷ್ಟ ಉಂಟು ಮಾಡಲಾಗಿದೆ. ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್, ಯಶಸ್ವಿನಿ ಸೋಮಶೇಖರ್, ಹಿಂದಿನ ಆಯುಕ್ತ ಡಿ.ಬಿ. ನಟೇಶ್, ಈಗಿನ ಆಯುಕ್ತ ಜಿ.ಟಿ. ದಿನೇಶ್ ಕುಮಾರ್,
ವಿಶೇಷ ಭೂಸ್ವಾಧೀನಾಧಿಕಾರಿಗಳಾದ ಹರ್ಷವರ್ಧನ್, ವಿಷ್ಣುವರ್ಧನ್ ರೆಡ್ಡಿ ಮತ್ತು ಸಂಬಂಧಿಸಿದ ವಿಶೇಷ
ತಹಶೀಲ್ದಾರರು, ನೌಕರರು ಅಕ್ರಮ ಲಾಭ, ಬೇನಾಮಿ ಆಸ್ತಿ ಮಾಡಿಕೊಂಡಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ನಟರಾಜ್ ಕೋರಿದ್ದಾರೆ. ಅದನ್ನು ಆಧರಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ
ನೀಡಲಾಗಿದೆ ಎಂದು ರಫತ್ಖಾನ್ ತಿಳಿಸಿದರು.
ಈ ಪ್ರಕರಣದ ಬಗ್ಗೆ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಶಿಕ್ಷೆ ನೀಡುವುದರ ಜತೆಗೆ ನಷ್ಟವನ್ನು ವಸೂಲಿ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.

Mysore

ಫೆಬ್ರವರಿ 10 ರಿಂದ 12 ರವರೆಗೆ ತಿ.ನರಸೀಪುರ ಕುಂಭಮೇಳ

Published

on

ಮೈಸೂರು: ಫೆಬ್ರವರಿ 10 ರಿಂದ 12 ರವರೆಗೆ ಟಿ ನರಸೀಪುರದ ತ್ರಿವೇಣಿ ಸಂಗಮದ ಬಳಿ ಕುಂಭಮೇಳ 2025 ನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು

ಇಂದು ಕುಂಭ ಮೇಳ -2025 ರ ಆಚರಣೆಯ ಸಂಬಂಧ ಜಲದರ್ಶಿನಿ ಅಥಿತಿ ಗೃಹದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಫೆಬ್ರವರಿ 10 ರಿಂದ 12 ಈವರೆಗೆ ಟಿ ನರಸೀಪುರದಲ್ಲಿ ಕುಂಭಮೇಳ ನಡೆಯುತ್ತದೆ. ಪ್ರಥಮ ಬಾರಿಗೆ 1989 ರಲ್ಲಿ ಪ್ರಾರಂಭವಾಯಿತು. ಇದು 3 ವರ್ಷಗಳಿಗೆ ಒಮ್ಮೆ ನಡೆಯುವ ಮೇಳ. ಕುಂಭಮೇಳದಲ್ಲಿ ಸ್ವಚ್ಚತೆ ಕಾಪಾಡಬೇಕು. ಪ್ಲಾಸ್ಟಿಕ್ ಮುಕ್ತ ಪ್ರದೇಶ ಎಂದು ಘೋಷಣೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ಸಾಂಸ್ಕೃತಿಕ ಹಾಗೂ ಜನಪದ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು. ಕೆ.ಎಸ್.ಆರ್.ಟಿ. ಸಿ ವತಿಯಿಂದ ವಿವಿಧ ಭಾಗಗಳಿಂದ ಹೆಚ್ಚಿನ ಬಸ್ ಗಳ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಅವರು ಮಾತನಾಡಿ 3 ದಿನವೂ ವಿವಿಧ ಕಾರ್ಯಕ್ರಮಗಳು ಜರುಗುತ್ತವೆ. ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಕಾವೇರಿ ಆರತಿಯನ್ನು ಫೆಬ್ರವರಿ 11 ರಂದು ಮಾಡಲಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ದೇಶೀಯ ಸಂಸ್ಕೃತಿಯನ್ನು ಬಿಂಬಿಸುವಂತೆ ಮಾಡಬೇಕು. ಸ್ನಾನ ಘಟ್ಟಗಳಲ್ಲಿ ಸ್ವಚ್ಚತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಿಗದಿತ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಉಚಿತ ಅನ್ನದಾನ ಮಾಡುವ ಕಡೆ ಸ್ವಚ್ಚತೆ ಕಾಪಾಡಬೇಕು ಎಂದು ಸೂಚನೆ ನೀಡಿದರು.

ಫೈರ್ ಸೆಪ್ಟಿ ಕೈಗೊಳ್ಳಬೇಕು. ಕುಟೀರಗಳ ಬಳಿ ಭದ್ರತೆ ವ್ಯವಸ್ಥೆ ಕೈಗೊಳ್ಳಬೇಕು. ರಸ್ತೆಗಳು ಉತ್ತವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದರು

ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು 1989 ರಿಂದ ಕುಂಭಮೇಳ ಆಚರಣೆ ಪ್ರಾರಂಭವಾಯಿತು. ಪ್ರತಿ 3 ವರ್ಷಕ್ಕೆ ಒಮ್ಮೆ ನಡೆಯುತ್ತದೆ. 2019 ರಲ್ಲಿ ನಡೆಯಿತು. ಕೋವಿಡ್ ಇದ್ದುದರಿಂದ 2021 ರಲ್ಲಿ ಕುಂಭಮೇಳ ನಡೆಯಲಿಲ್ಲ. ನದಿಯಲ್ಲಿ ಸ್ಥಾನ ಮಾಡಲು 5 ಕಡೆ ಜಾಗ ಗುರುತಿಸಲಾಗಿದೆ. 1 ಯಾಗ ಶಾಲೆ ನಿರ್ಮಾಣ ಮಾಡಲಾಗುವುದು. 6 ಕುಟೀರಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mysore

ಚುಂಚನಕಟ್ಟೆ ಕಾವೇರಿ ನದಿಯಲ್ಲಿ ಶ್ರೀ ರಾಮ ದೇವರ ತೆಪ್ಪೋತ್ಸವ

Published

on

ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ

ಸಾಲಿಗ್ರಾಮ :- ಕಿವಿತುಂಬೆಲ್ಲಾ ಪಟಾಕಿ ಸದ್ದು. . . ಇದರ ನಡುವೆ ದೇವಾಲಯದಿಂದ ಉತ್ಸವ ಮೂರ್ತಿಯನ್ನು ಹೊತ್ತು ತಂದ ಭಕ್ತಾದಿಗಳು . . . ಅಲಂಕೃತಗೊಂಡಿದ್ದ ಮಂಟಪದಲ್ಲಿ ಪ್ರತಿಷ್ಠಾಪನೆಗೊಂಡ ಸೀತಾ ರಾಮ ಲಕ್ಷ್ಮಣ. . . ನದಿಯಲ್ಲಿ ಮೂರು ಸುತ್ತು ಸುತ್ತಿದ ಉತ್ಸವ ಮೂರ್ತಿಗಳು . . . ದೇವಲೋಕವೇ ಧರೆಗೆ ಬಂದ ಅನುಭವ . . . ಈ ಇಂತಹ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾದ ಸಾವಿರಾರು ಮಂದಿ. . .
ಇದು ಸಾಲಿಗ್ರಾಮ  ತಾಲ್ಲೂಕಿನ ಚುಂಚನಕಟ್ಟೆಯ ಕಾವೇರಿ ನದಿಯಲ್ಲಿ ಶುಕ್ರವಾರ ರಾತ್ರಿ ನಡೆದ ಪುರಾಣ ಪ್ರಸಿದ್ದವಾಗಿರುವ ಶ್ರೀ ರಾಮದೇವರ ತೆಪ್ಪೋತ್ಸವದಲ್ಲಿ ಕಂಡು ಬಂದ ದೃಶ್ಯಗಳು.
ರಾತ್ರಿ 7.45 ರ ನಂತರ  ಇಲ್ಲಿನ ಶ್ರೀ ರಾಮದೇವರ ದೇವಾಲಯದಿಂದ ಶ್ರೀ ರಾಮ, ಲಕ್ಷಣ, ಸೀತಾಮಾತೆ ದೇವರುಗಳ ಉತ್ಸವ ಮೂರ್ತಿಗಳನ್ನು ಪಟಾಕಿ ಸಿಡಿಸುವ ಮೂಲಕ ಅದ್ದೂರಿ ಮೆರವಣಿಗೆ ಮೂಲಕ ಕಾವೇರಿ ನದಿಯ ದಡದಲ್ಲಿ ದೇವಾಲಯದ ಸಮೀಪವಿರುವ ಆಂಜನೇಯ ಗುಡಿಯ ಬಳಿ ವರ್ಣರಂಜಿತ ವಿದ್ಯುತ್ ಲೈಟ್‌ಗಳು ಮತ್ತು ಹೂವಿನ ಅಲಂಕಾರಗಳಿಂದ  ಶೃಂಗಾರಗೊoಡಿದ್ದ ತೆಪ್ಪದಲ್ಲಿ ಪ್ರತಿಷ್ಠಾಪಿಸಲಾಯಿತು.


ಅನಂತರ ತೆಪ್ಪದಲ್ಲಿ ದೇವರ ಉತ್ಸವ ಮೂರ್ತಿಗಳನ್ನು ರಾತ್ರಿ 8.15ರ ಸಮಯದಲ್ಲಿ ಕಾವೇರಿ ನದಿಯ ಮಧ್ಯ ಭಾಗಕ್ಕೆ ತೆಗೆದುಕೊಂಡು ಹೋಗಿ 3 ಭಾರಿ ತಿರುಗಿಸುತ್ತಿದ್ದಂತೆಯೇ ತೆಪ್ಪದಲ್ಲಿದ್ದ ಅರ್ಚಕ ವಾಸುದೇವನ್ ಉತ್ಸವ ಮೂರ್ತಿಗಳಿಗೆ ಮಂಗಳಾರತಿಯನ್ನು ಮಾಡಿದಾಗ ನೆರೆದಿದ್ದ ಸಾವಿರಾರು ಭಕ್ತಾಧಿಗಳು ಶ್ರೀ ರಾಮನಿಗೆ ಜೈಕಾರ, ಶ್ರೀರಮಣನ ಗೋವಿಂದಾ ಗೋ..ವಿಂದಾ ಎಂಬ ಘೋಷಣೆಗಳನ್ನು ಮೊಳಗಿಸಿದಾಗ ದೇವಲೋಕವೇ ಧರೆಗೆ ಬಂದಂತೆ ಭಾಸವಾಯಿತು.
ಕಾವೇರಿ ನದಿಯಲ್ಲಿ ಸುತ್ತಿ ಬಂದ ಶ್ರೀರಾಮ, ಲಕ್ಷಣ, ಸೀತಾ ದೇವರುಗಳ ಉತ್ಸವ ಮೂರ್ತಿಗಳನ್ನು ಭಕ್ತಾಧಿಗಳು ಚಪ್ಪಾಳೆ ತಟ್ಟುವ ಮೂಲಕ ಸ್ವಾಗತಿಸಿ ಪೂಜಾ ಕೈಂಕರ್ಯಗಳನ್ನು ಕೈಗೊಂಡು ತಮ್ಮ ಇಷ್ಟಾರ್ಥವನ್ನು ಈಡೇರುವಂತೆ ಪ್ರಾರ್ಥಿಸಿಕೊಂಡರು.
ಆನಂತರ ಉತ್ಸವ ಮೂರ್ತಿಗಳನ್ನು ಮತ್ತೆ ದೇವಾಲಯಕ್ಕೆ ಒತ್ತು ತರಲಾಯಿತು. ಈ ಬಾರಿಯ  ತೆಪ್ಪೋತ್ಸವಕ್ಕೆ ಗುಂಡ್ಲುಪೇಟೆ ಆನಂದ್‌ಕುಮಾರ್ ಎಂಬುವವರು ಭಾರಿ ಪಟಾಕಿಗಳನ್ನು ಸಿಡಿಸುವ ಮೂಲಕ ತೆಪ್ಪೋತ್ಸವಕ್ಕೆ ಕಳೆತಂದರು.
ಕಾರ್ಯಕ್ರಮದಲ್ಲಿ ಸಾಲಿಗ್ರಾಮ ತಸೀಲ್ದಾರ್ ನರಗುಂದ, ಉಪತಹಸೀಲ್ದಾರ್ ಕೆ.ಜೆ.ಶರತ್ , ಗ್ರಾಮ ಲೆಕ್ಕಿಗರಾದ ಮೇಘ, ಮೌನೇಶ್,ಕಾವೇರಿ,ಪ್ರಿಯಾ,
ದೇವಾಲಯದ ಇಓ ಕೆ.ರಘು, ಪಾರುಪತ್ತೆದಾರ್ ಯತೀರಾಜ್, ಸೇರಿದಂತೆ 3 ಸಾವಿರ ಭಕ್ತಾಧಿಗಳು ಹಾಜರಿದ್ದರು.

Continue Reading

Mysore

ಇಂದು ಬೆಳ್ಳಂಬೆಳಗ್ಗೆ ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆದ ಕ್ಷೇತ್ರದ ಶಾಸಕರು ,ನಟ ಡಾಲಿ ಧನಂಜಯ

Published

on

 

ವರದಿ : ಮಹದೇವಸ್ವಾಮಿ ಪಟೇಲ್

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಕ್ಷೇತ್ರದ ಯುವ ಶಾಸಕ ದರ್ಶನ್ ಧ್ರುವನಾರಾಯಣ್, ಹಾಗೂ ಕನ್ನಡ ಚಿತ್ರರಂಗದ ನಾಯಕ ನಟ ಡಾಲಿ ಧನಂಜಯ ಅವರು, ಭೇಟಿ ನೀಡಿ ದೇವರ ದರ್ಶನ ಪಡೆದರು.

ಇಂದು ಭಾನುವಾರ ಬೆಳ್ಳಂಬೆಳಗ್ಗೆ ದೇವಾಲಯಕ್ಕೆ ಆಗಮಿಸಿದ ಶಾಸಕರಿಗೆ ಮತ್ತು ಕನ್ನಡ ಚಿತ್ರರಂಗದ ನಾಯಕ ನಟ ಡಾಲಿ ಧನಂಜಯ ಅವರಿಗೆ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತವನ್ನು ಕೋರಿದರು.

ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ಸುಬ್ರಮಣ್ಯ ದೇವರ ದರ್ಶನ ಪಡೆದು, ದೇವರ ಕೃಪೆಗೆ ಪಾತ್ರನಾಗಿ ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥಿಸಿದರು.

ಈ ವೇಳೆ ನಗರಸಭೆ ಅಧ್ಯಕ್ಷ ಶ್ರೀಕಂಠ ಸ್ವಾಮಿ, ದೇವಸ್ಥಾನ ಕಾರ್ಯನಿರ್ವಾಹಕಧಿಕಾರಿ ಜಗದೀಶ್, ಕಾಂಗ್ರೆಸ್ ಪಕ್ಷದ ನಗರಾಧ್ಯಕ್ಷ ಶಂಕರ್, ಕಾಂಗ್ರೆಸ್ ಪಕ್ಷದ ಯೂತ್ ಅಧ್ಯಕ್ಷ ದೇಬೂರು ಅಶೋಕ್, ಸೇರಿದಂತೆ ಹಲವಾರು ಭಾಗವಹಿಸಿದ್ದರು.

Continue Reading

Trending

error: Content is protected !!