Kodagu
ಮುದ್ದಂಡ ಕಪ್ ಹಾಕಿ ಹಬ್ಬ: ದಾಖಲೆಯ 370 ತಂಡಗಳ ನೋಂದಣಿ
ಮಡಿಕೇರಿ : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ’೨೫ನೇ ವರ್ಷದ ಮುದ್ದಂಡ ಕಪ್ ಹಾಕಿ ಉತ್ಸವ’ಕ್ಕೆ ಮಡಿಕೇರಿ ನಗರದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದೆ. ಪಂದ್ಯಾವಳಿಯು ಮಾ.೨೮ ರಿಂದ ಏ.೨೭ರ ವರೆಗೆ ಮೂರು ಮೈದಾನದಲ್ಲಿ ನಡೆಯಲಿದ್ದು, ಈಗಾಗಲೇ ದಾಖಲೆಯ ೩೭೦ ತಂಡಗಳು ನೋಂದಣಿ ಮಾಡಿಕೊಂಡಿವೆ.
ಒಂದು ತಿಂಗಳ ಹಾಕಿ ಪಂದ್ಯಾವಳಿ ಹಾಗೂ ಈ ಅವಧಿಯಲ್ಲಿ ನಡೆಯುವ ವಿಭಿನ್ನ ಕಾರ್ಯಕ್ರಮಗಳ ಕುರಿತು ಕೊಡವ ಹಾಕಿ ಅಕಾಡೆಮಿ ಹಾಗೂ ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಪ್ರಮುಖರು ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಅವರು ಮಾತನಾಡಿ ಕಳೆದ ಬಾರಿಯ ಕುಂಡ್ಯೋಳಂಡ ಹಾಕಿ ಹಬ್ಬದಲ್ಲಿ ೩೬೦ ತಂಡಗಳು ಪಾಲ್ಗೊಂಡಿದ್ದವು, ಈ ಬಾರಿಯ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ೧೦ ತಂಡಗಳು ಹೆಚ್ಚುವರಿಯಾಗಿದ್ದು, ೩೭೦ ತಂಡಗಳು ಹೆಸರು ನೋಂದಾಯಿಸಿಕೊಂಡಿವೆ. ನೋಂದಣಿಯ ಕೊನೆಯ ದಿನಾಂಕ ಮಾ.೧೮ ಆಗಿದ್ದು, ಮತ್ತಷ್ಟು ತಂಡಗಳು ಸೇರ್ಪಡೆಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಮಾ.೨೮ರಂದು ಉದ್ಘಾಟನೆಯ ಪ್ರದರ್ಶನ ಪಂದ್ಯವಾಗಿ ಕೊಡವ ಹಾಕಿ ಅಕಾಡೆಮಿ- ಘಿI ಹಾಗೂ ಇತ್ತೀಚೆಗೆ ರಾಷ್ಟ್ರೀಯ ಮಟ್ಟದಲ್ಲಿ ವಿಜೇತರಾದ ಕರ್ನಾಟಕ-ಘಿI ತಂಡಗಳ ನಡುವೆ ಸೆಣಸಾಟ ನಡೆಯಲಿದೆ ಎಂದರು.
ಪಂದ್ಯಾವಳಿಯ ನಿರ್ದೇಶಕರಾಗಿ ಬಡ್ಕಡ ದೀನ ಪೂವಯ್ಯ ಹಾಗೂ ಸಂಯೋಜಕರಾಗಿ ಮುದ್ದಂಡ ರಾಯ್ ತಮ್ಮಯ್ಯ ಕಾರ್ಯನಿರ್ವಹಿಸಲಿದ್ದಾರೆ. ಪಂದ್ಯಾವಳಿಯಲ್ಲಿ ಮುಖ್ಯ ವೀಕ್ಷಕ ವಿವರಣೆಗಾರರಾಗಿ ಚೆಪ್ಪುಡಿರ ಕಾರ್ಯಪ್ಪ, ಇವರಿಗೆ ಸಹಾಯಕರಾಗಿ ಮಾಳೇಟಿರ ಶ್ರೀನಿವಾಸ್ ಇರಲಿದ್ದಾರೆ. ಟೈಸ್ ಪ್ರಕ್ರಿಯೆಯನ್ನು ಕೆಚ್ಚೆಟ್ಟಿರ ಪ್ರಸನ್ನ ನಿರ್ವಹಿಸಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಕಳೆದ ಹಾಕಿ ಉತ್ಸವದಲ್ಲಿ ಗಿನ್ನಿಸ್ ದಾಖಲೆ ನಿರ್ಮಿಸಿದ ಕುಂಡ್ಯೋಳಂಡ ಒಕ್ಕದವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

::: ತರಬೇತಿ ಕಾರ್ಯಾಗಾರ :::
ಹಾಕಿ ಅಕಾಡೆಮಿಯ ಕಾರ್ಯಾಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ ಮಾತನಾಡಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ಮಾರ್ಚ್ ೧೯ ಮತ್ತು ೨೦ ರಂದು ವಿರಾಜಪೇಟೆಯ ಕಾವೇರಿ ಕಾಲೇಜ್ ನಲ್ಲಿ ಹಾಕಿ ತೀರ್ಪುಗಾರರ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಜಿಲ್ಲೆಯ ಆಸಕ್ತ ಯುವ ಸಮೂಹ ಇದರಲ್ಲಿ ಪಾಲ್ಗೊಂಡು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಮಿನಿ ಒಲಂಪಿಕ್ಸ್ ಮಾದರಿಯಲ್ಲಿ ಈ ಬಾರಿಯ ಮುದ್ದಂಡ ಕಪ್ ಹಾಕಿ ಉತ್ಸವ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಾಕಿ ಅಕಾಡೆಮಿಯ ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಮಾತನಾಡಿ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ರಾಜ್ಯಸಭಾ ಸದಸ್ಯ ಅಜೆಯ್ ಮಾಕನ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.
ಮುದ್ದಂಡ ಹಾಕಿ ಹಬ್ಬದ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ಮಾತನಾಡಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಎರಡು ಮೈದಾನ ಹಾಗೂ ಪೊಲೀಸ್ ಕವಾಯತು ಮೈದಾನದಲ್ಲಿ ಪಂದ್ಯಾವಳಿಗಳನ್ನು ಆಯೋಜಿಸಲಾಗಿದ್ದು, ಗ್ಯಾಲರಿ ನಿರ್ಮಾಣದ ಕಾರ್ಯ ಆರಂಭಗೊಂಡಿದೆ. ಹಾಕಿ ಉತ್ಸವದ ಬೆಳ್ಳಿಹಬ್ಬದ ಸಂಭ್ರಮದ ಹಿನ್ನೆಲೆ ಹಾಕಿ ಪಂದ್ಯಾವಳಿಯೊಂದಿಗೆ ವಿಭಿನ್ನ ಕಾರ್ಯಕ್ರಮಗಳು ಕೂಡ ನಡೆಯಲಿದೆ ಎಂದರು.
::: ಕ್ರೀಡಾಜ್ಯೋತಿಯ ವಿಶೇಷ :::
ಈ ಬಾರಿ ವಿಶೇ?ವಾಗಿ ಇದುವರೆಗೆ ಹಾಕಿ ಉತ್ಸವ ಆಯೋಜಿಸಿದ್ದ ಎಲ್ಲಾ ಕುಟುಂಬಗಳ ಐನ್’ಮನೆಗಳಿಗೆ ಮ್ಯಾರಥಾನ್ ಮೂಲಕ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುವುದು. ಮಾ.೨೫ರಂದು ಬೆಳಗ್ಗೆ ೮ ಗಂಟೆಗೆ ಕೊಡವ ಹಾಕಿ ಉತ್ಸವದ ಜನಕರಾದ ಕರಡ ಗ್ರಾಮದ ಪಾಂಡಂಡ ಕುಟುಂಬದ ಐನ್’ಮನೆಯಲ್ಲಿ ಆರಂಭಗೊಳ್ಳಲಿರುವ ಮುದ್ದಂಡ ಹಾಕಿ ಉತ್ಸವದ ಕ್ರೀಡಾಜ್ಯೋತಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಲಿದ್ದಾರೆ.
ನಂತರ ಪೊನ್ನಂಪೇಟೆಯ ೮ ಐನ್ ಮನೆಗಳನ್ನು ಕ್ರಮಿಸಿ, ಮಾ.೨೬ ರಿಂದ ೨೮ ರವರೆಗೆ ವಿವಿಧ ಐನ್ ಮನೆಗಳಿಗೆ ಕ್ರೀಡಾಜ್ಯೋತಿ ಸಾಗಲಿದೆ.
ಮಾ.೨೮ರಂದು ಬೆಳಿಗ್ಗೆ ೯ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ಮುಖ್ಯ ರಸ್ತೆಯ ಮೂಲಕ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನಕ್ಕೆ ಬೃಹತ್ ಮೆರವಣಿಗೆಯ ಮೂಲಕ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುವುದು. ನಾಲ್ಕು ದಿನವೂ ಪ್ರಮುಖ ಮ್ಯಾರಥಾನ್ ಓಟಗಾರರು ಕ್ರೀಡಾಜ್ಯೋತಿಯೊಂದಿಗೆ ಓಡಲಿದ್ದಾರೆ ಎಂದು ರಶಿನ್ ಸುಬ್ಬಯ್ಯ ಮಾಹಿತಿ ನೀಡಿದರು.
::: ಮಹಿಳಾ ಹಾಕಿ ಸಂಭ್ರಮ :::
ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈಗಾಗಲೇ ೩೦ ತಂಡಗಳು ನೋಂದಾಯಿಸಿಕೊಂಡಿದ್ದು, ನೋಂದಣಿಯ ಕೊನೆಯ ದಿನಾಂಕ ಏ.೧೦ ಆಗಿರುವುದರಿಂದ ಮತ್ತಷ್ಟು ತಂಡಗಳು ಸೇರ್ಪಡೆಗೊಳ್ಳಲಿವೆ. ಮೂರನೇ ಮೈದಾನದಲ್ಲಿ ಮಹಿಳಾ ಹಾಕಿ ಪಂದ್ಯಾವಳಿ ನಡೆಯಲಿದೆ ಎಂದರು.
ಸೆಮಿಫೈನಲ್ ಸಂದರ್ಭ ಭಾರತೀಯ ಮಹಿಳಾ ಹಾಕಿ ತಂಡದ ನಾಯಕಿ ಲಾಲ್ ರಿಮ್ ಸಿಯಾಮಿ ಅವರು ಆಗಮಿಸಿದ ಹಾಕಿ ಕ್ರೀಡೆಯ ಕುರಿತು ಮಾಹಿತಿ ನೀಡಲಿದ್ದಾರೆ. ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹಾಗೂ ಒಲಂಪಿಯನ್ ಮನ್ ಪ್ರೀತ್ ಸಿಂಗ್ ಕೂಡ ಪಂದ್ಯಾವಳಿಯ ಸಂದರ್ಭ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
::: ತಂದ್- ಬೆಂದ್ :::
ವಿಶೇಷವಾಗಿ ರಸಪ್ರಶ್ನೆ ಸ್ಪರ್ಧೆ ಮತ್ತು ತಂದ್- ಬೆಂದ್ (ವಧು ವರರ ಅನ್ವೇಷಣೆ) ಕಾರ್ಯಕ್ರಮವನ್ನು ಪಂದ್ಯಾವಳಿ ನಡೆಯುವ ಮೈದಾನದ ಆವರಣದಲ್ಲಿ ಆಯೋಜಿಸಲಾಗುತ್ತಿದೆ. ಏ.೨೬ ರಂದು ಸೈಕ್ಲೋಥಾನ್ ನಗರದಲ್ಲಿ ನಡೆಯಲಿದೆ. ಪ್ರೀ ಕ್ವಾರ್ಟರ್ ನಡೆಯುವ ದಿನದಿಂದ ಅಂತಿಮ ಪಂದ್ಯಾವಳಿ ದಿದವರೆಗೂ ಡಿಜೆ ಕಾರ್ಯಕ್ರಮ ಮನರಂಜಿಸಲಿದೆ. ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಮುಕ್ತ ಮಜಾ ರನ್’ ನಡೆಯಲಿದೆ. ಅಂತಿಮ ದಿನದ ಸಮಾರಂಭದ ಸಂದರ್ಭ ಆಕರ್ಷಕ ಸಿಡಿಮದ್ದುಗಳ ಪ್ರದರ್ಶನವಿರುತ್ತದೆ. ಸುಮಾರು ೨ ಸಾವಿರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ವಂದನಾ ಟ್ರಸ್ಟ್ ಸಂಸ್ಥೆ ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ತ್ಯಾಜ್ಯಗಳ ನಿರ್ವಹಣೆಯನ್ನು ಮಾಡಲಿದೆ ಎಂದರು.
ಮುದ್ದಂಡ ಒಕ್ಕದ ಕಾರ್ಯದರ್ಶಿ ಮುದ್ದಂಡ ರಾಯ್ ತಮ್ಮಯ್ಯ ಮಾತನಾಡಿ ಮುಕ್ತ ಶೂಟಿಂಗ್ ಸ್ಪರ್ಧೆಯ ವಿವರ ನೀಡಿದರು. ಏ.೨೦ ರಂದು ಮೈದಾನ ಎರಡರಲ್ಲಿ ಶೂಟಿಂಗ್ ಸ್ಪರ್ಧೆ ಮೂರು ವಿಭಾಗಗಳಲ್ಲಿ ನಡೆಯಲಿದೆ. ೫೦ ಮೀಟರ್ ನಿಗಧಿತ ಗುರಿಯ .೨ ಶೂಟಿಂಗ್ ಸ್ಪರ್ಧೆ, ೩೦ ಮೀಟರ್ ಅಂತರದ ಟುವೆಲ್ತ್ ಬೋರ್ ಬಂದೂಕಿನಿಂದ ಗುರಿ ಹಿಡಿಯುವ ಹಾಗೂ ೧೫ ಮೀಟರ್ ದೂರದ ಮೊಟ್ಟೆಗೆ ಗುಂಡಿಕ್ಕುವ ಏರ್ ರೈಫಲ್ ಶೂಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಕೂಡ ನಡೆಯಲಿದೆ ಎಂದು ತಿಳಿಸಿದರು.
ಇಲ್ಲಿಯವರೆಗೆ ಕೊಡವ ಹಾಕಿ ಉತ್ಸವವನ್ನು ಆಯೋಜಿಸಿದ ೨೪ ಕುಟುಂಬಗಳನ್ನು ಸ್ಮರಿಸುವ ಮತ್ತು ಗೌರವದಿಂದ ಕಾಣುವ ಉದ್ದೇಶದಿಂದ ಈ ಬಾರಿ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುತ್ತಿದೆ. ಈ ಕುಟುಂಬಗಳ ಐನ್ ಮನೆಗಳಿಗೆ ತೆರಳಿ ನೆಲ್ಲಕ್ಕಿ ಬೆಳಕಿನಿಂದ ಕ್ರೀಡಾಜ್ಯೋತಿಗೆ ಬೆಳಕು ಪಡೆಯಲಿದ್ದೇವೆ ಎಂದರು.
ಮುದ್ದಂಡ ಒಕ್ಕದ ಅಧ್ಯಕ್ಷ ಮುದ್ದಂಡ ಬಿ.ದೇವಯ್ಯ ಮಾತನಾಡಿ ಮಾ.೨೮ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ಫೀ.ಮಾ.ಕೆ.ಎಂ.ಕಾರ್ಯಪ್ಪ ಮೈದಾನದವರೆಗೆ ನಡೆಯುವ ಬೃಹತ್ ಮೆರವಣಿಗೆಯಲ್ಲಿ ಸರ್ವರೂ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆಗಳ ಎಲ್ಲಾ ಕೊಡವ ಸಮಾಜಗಳು ಹಾಗೂ ಕೊಡವ ಕೇರಿಗಳ ಸಹಕಾರವನ್ನು ಪಡೆಯಲಾಗಿದೆ. ಹಾಕಿ ಉತ್ಸವ ಯಾವುದೇ ಅಡ್ಡಿ ಆತಂಕವಿಲ್ಲದೆ ಯಶಸ್ವಿಯಾಗಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Kodagu
ಮಹಾತ್ಮ ಗಾಂಧಿ ನರೇಗಾ ಬಚಾವೋ ಸಂಗ್ರಮ
ಗೋಣಿಕೊಪ್ಪ: ಮಹಾತ್ಮ ಗಾಂಧಿ ನರೇಗಾ ಬಚಾವೋ ಸಂಗ್ರಮಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಐದು ಕಿಲೋಮೀಟರ್ ಕಾಲ್ನಡಿಗೆ ಜಾಥ ನಡೆಸಿದರು.
ಗೋಣಿಕೊಪ್ಪ ಉಮಾಮಹೇಶ್ವರಿ ದೇವಸ್ಥಾನದಿಂದ ಪೊನ್ನಂಪೇಟೆ ಗಾಂಧಿ ಪ್ರತಿಮೆವರೆಗೆ ಪಾದಯಾತ್ರೆ ಸಾಗಿ ಬಂದಿತ್ತು.
ಸಾವಿರಾರು ಕಾರ್ಯಕರ್ತರು ಮನರೇಗಾ ಯೋಜನೆ ಹೆಸರು ಬದಲಾವಣೆಯ ಕೇಂದ್ರ ಸರ್ಕಾರದ ನಡೆಯ ಪ್ರಶ್ನಿಸಿ, ಘೋಷಣೆಗಳು ಹಾಕಿ ವಿರೋಧಿಸಿದರು.
ಪಾದಯಾತ್ರೆಯಲ್ಲಿ ಭಾಗವಹಿಸಿದ ಕಾರ್ಯಕರ್ತರಿಗೆ ರಸ್ತೆಯ ಉದ್ದಕ್ಕೂ ಕುಡಿಯುವ ನೀರು, ಮಜ್ಜಿಗೆ, ತಂಪುಪಾನೀಯ, ಪಾಯಸ, ವಡೆ ವಿತರಿಸಲಾಯಿತು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್ ಪೊನ್ನಣ್ಣ ಅವರ ಮುಂದಾಳತ್ವದಲ್ಲಿ ಕಾಲ್ನಡಿಗೆ ಜಾಥ ಸಾಗಿ ಬಂದಿತ್ತು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೆ.ಪಿ.ಸಿ.ಸಿ ವಕ್ತಾರ ಎಂ. ಲಕ್ಷ್ಮಣ್, ರಾಜ್ಯ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಕಾರ್ಯದರ್ಶಿ, ಶಾಂತೆಯಡ ವೀಣಾ ಅಚ್ಚಯ್ಯ, ಪ್ರಮುಖರುಗಳಾದ ಆಪಟ್ಟೀರ ಟಾಟು ಮೊಣ್ಣಪ್ಪ, ಕುಲ್ಲಚಂಡ ಪ್ರಮೋದ್ ಗಣಪತಿ, ಕೊಲ್ಲೀರ ಬೋಪಣ್ಣ, ಚಂದ್ರಕಲಾ, ಮಿದೇರಿರ ನವೀನ್, ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಗಫೂರ್ ಇದ್ದರು.
ನಂತರ ಪೊನ್ನಂಪೇಟೆ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಾಥಕ್ಕೆ ಸಮಾಪ್ತಿ ಮಾಡಲಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಎ.ಎಸ್ ಪೊನ್ನಣ್ಣ, ಭಾರತ ದೇಶವನ್ನು ಪ್ರಪಂಚದಲ್ಲೇ ಗುರುತಿಸುವಂತೆ ಮಾಡಿದ ಮಹಾತ್ಮನ ಹೆಸರನ್ನ ಕಾಯ್ದೆಯಿಂದ ಕಿತ್ತೊಗೆಯುವ ಕಾರಣಕ್ಕೆ ಸ್ಪಷ್ಟತೆಯನ್ನು ಕೊಡಿ ಎಂದು ಕಾನೂನಾತ್ಮಕವಾದ ಪ್ರಶ್ನೆಗಳನ್ನು ಕೇಂದ್ರ ಸರ್ಕಾರಕ್ಕೆ ಕೇಳಿದರೆ ಯಾವುದೇ ಉತ್ತರ ನೀಡುತ್ತಿಲ್ಲ. ಇದಕ್ಕೆ ವಿರೋಧವಾಗಿ ಭಾವನಾತ್ಮಕವಾದ, ದ್ವೇಷ ಆಧಾರಿತವಾದ, ಪ್ರಜಾತಂಕಕಾರಿಯಾದ ರಾಜಕಾರಣವನ್ನ ಮಾಡುತ್ತಿದ್ದಾರೆ. ನರೇಗಾ ಕಾನೂನು ತಿದ್ದುಪಡಿಯಿಂದ ರೈತರ ಗ್ರಾಮೀಣ ಜನರ ದಲಿತರ ಕೂಲಿ ಕಾರ್ಮಿಕರ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕುವ ಪ್ರಯತ್ನ ಸಾಗುತ್ತಿದೆ ಎಂದು ದೂರಿದರು.

ಭಾರತದ ಸ್ವಾತಂತ್ರ್ಯಕ್ಕಾಗಿ 17 ವರ್ಷಗಳ ಕಾಲ ಕಾರಗೃಹ ಶಿಕ್ಷೆಯನ್ನು ಅನುಭವಿಸಿದ ಗಾಂಧೀಜಿ ಹೆಸರನ್ನು ಕೇಂದ್ರ ಸರ್ಕಾರ ಮರೆತು ಹೋಗುತ್ತಿದೆ ಎಂಬುದೇ ವಿಪರ್ಯಾಸ. ಇಂತಹ ಬೆಳವಣಿಗೆಗೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಆತಂಕಕಾರಿಯಾಗಿದೆ ಎಂದು ಹೇಳಿದರು.
ಭಾರತವನ್ನು ತಿಳಿಯಬೇಕಾದರೆ ಭಾರತದ ಗ್ರಾಮಗಳನ್ನ ನೋಡಬೇಕು ಎಂಬ ಗಾಂಧಿ ಕಲ್ಪನೆಯನ್ನು ಮುಂದಾಲೋಚನೆಯ ಮೂಲಕ 2005ರಲ್ಲಿ ಜಾರಿಗೆ ತಂದ ನರೇಗಾ ಯೋಜನೆ ಕಳೆದ 20 ವರ್ಷಗಳಿಂದ ಗ್ರಾಮೀಣ ಜನರಿಗೆ ಉದ್ಯೋಗ ಸೃಷ್ಟಿ ಮಾಡಿದೆ. ಆದರೆ ಇಂದು ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಬಹುದೊಡ್ಡ ಹೊರೆಯನ್ನು ಹಾಕಿ ಯೋಜನೆ ಅನುಷ್ಠಾನವಾಗದಂತೆ ನೋಡಿಕೊಳ್ಳುವ ಪ್ರಯತ್ನ ಸಾಗುತ್ತಿದೆ ಎಂದರು.
ಹಿಂದೆ ಕೇಂದ್ರ ಸರ್ಕಾರ ಶೇಕಡ 90ರಷ್ಟು ಮತ್ತು ರಾಜ್ಯ ಸರ್ಕಾರ 10ರಷ್ಟು ಒದಗಿಸುತ್ತಿತ್ತು. ಇದೀಗ ರಾಜ್ಯ ಸರ್ಕಾರ 40ರಷ್ಟು ಅನುದಾನ ಒದಗಿಸುವಂತೆ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದೊಂದು ಮರಣ ಶಾಸನದಂತಾಗಿದೆ ಎಂದು ಹೇಳಿದರು.

ಯಾವುದೇ ರಾಜ್ಯ ಸರ್ಕಾರದ ಜೊತೆ ಚರ್ಚೆ ಮಾಡದೆ ಏಕಾಏಕಿ ಕಾನೂನು ಜಾರಿ ಮಾಡುವ ಮೂಲಕ ಸಂವಿಧಾನ ವಿರೋಧ ಚಟುವಟಿಕೆಯನ್ನು ಕೇಂದ್ರ ಸರ್ಕಾರ ಅನುಸರಿಸಿದೆ ಇದು ಮಹಾತ್ಮನ ತತ್ವ, ಸಿದ್ಧಾಂತ ನಡೆಗಳಿಗೆ ವಿರೋಧದ ವ್ಯವಸ್ಥೆಯಾಗಿದೆ. ಈ ವಿಚಾರವನ್ನು ತೀವ್ರವಾಗಿ ಖಂಡಿಸಲಾಗುತ್ತಿದೆ ಎಂದು ಹೇಳಿದರು.
Kodagu
ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ, ಸದಸ್ಯರ ತಂಡ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ
ಮಡಿಕೇರಿ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎಚ್.ಕೃಷ್ಣ ಮತ್ತು ತಂಡದ ಸದಸ್ಯರು ನಗರದ ನ್ಯಾಯಬೆಲೆ ಅಂಗಡಿ, ಆಹಾರ ಧಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಮಧ್ಯಾಹ್ನದ ಉಪಾಹಾರ ಯೋಜನೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿರುವ ಎನ್ಆರ್ಸಿ ಘಟಕ ಹಾಗೂ ವಿದ್ಯಾರ್ಥಿ ನಿಲಯಗಳಿಗೆ ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ರಾಜ್ಯ ಆಹಾರ ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ.ದೊಡ್ಡಲಿಂಗನವರ್, ಎ.ರೋಹಿಣಿ ಪ್ರಿಯಾ, ಕೆ.ಎಸ್.ವಿಜಯಲಕ್ಷ್ಮಿ ಹಾಗೂ ಸದಸ್ಯ ಕಾರ್ಯದರ್ಶಿ ಸುಜಾತ ಡಿ ಹೊಸಮನಿ ಅವರು ಪರಿಶೀಲನಾ ಸಂದರ್ಭದಲ್ಲಿ ಇದ್ದು, ಆಹಾರ ಸುರಕ್ಷತೆ, ಪೌಷ್ಠಿಕ ಆಹಾರ ವಿತರಣೆ, ಮತ್ತಿತರ ಬಗ್ಗೆ ಮಾಹಿತಿ ಪಡೆದರು.

ಮೊದಲಿಗೆ ನಗರದ ಜನತಾ ಬಜಾರ್ ಸಂಖ್ಯೆ 59 ಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಮತ್ತು ತಂಡದ ಸದಸ್ಯರು ಆಹಾರ ದಾಸ್ತಾನುವಿನಲ್ಲಿ ವ್ಯತ್ಯಾಸ, ಜಾಗೃತಿ ನಾಮಫಲಕ ಪ್ರದರ್ಶನ ಹಾಗೂ ತೂಕ ನವೀಕರಣ ಪತ್ರ ಇಲ್ಲದಿರುವುದು ಸೇರಿದಂತೆ ಹಲವು ನ್ಯೂನತೆಗಳನ್ನು ಕಂಡುಬಂದಿರುವುದನ್ನು ಮನಗಂಡ ಆಹಾರ ಆರೋಗ್ಯದ ಅಧ್ಯಕ್ಷರಾದ ಕೃಷ್ಣ ಅವರು ಅಮಾನತು ಮಾಡುವಂತೆ ಆಹಾರ ಇಲಾಖೆ ಉಪ ನಿರ್ದೇಶಕರಿಗೆ ಸ್ಥಳದಲ್ಲಿಯೇ ಸೂಚಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಭೋದಕ ಆಸ್ಪತ್ರೆಯ ಅಡುಗೆ ಕೋಣೆಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಜಿಲ್ಲಾಸ್ಪತ್ರೆ ಎನ್ಆರ್ಸಿ ಘಟಕಕ್ಕೆ ಭೇಟಿ ನೀಡಿ ಕಡತ ನಿರ್ವಹಣೆ ಪರಿಶೀಲಿಸಿದ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಸಮರ್ಪಕ ನಿರ್ವಹಣೆ ಮಾಡದಿರುವುದಕ್ಕೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಗುಣಮಟ್ಟದ ಹಾಗೂ ಪೌಷ್ಠಿಕ ಆಹಾರ ವಿತರಿಸಬೇಕು. ಯಾವುದೇ ಕಾರಣಕ್ಕೂ ಮುಲಾಜಿಗೆ ಒಳಗಾಗಬಾರದು ಎಂದು ತಾಕೀತು ಮಾಡಿದರು.
ಸರ್ಕಾರಿ ಆಸ್ಪತ್ರೆಯನ್ನು ನಂಬಿ ಹಲವು ಬಡ ಕುಟುಂಬಗಳು ಚಿಕಿತ್ಸೆಗೆ ದಾಖಲಾಗುತ್ತಾರೆ. ಅವರಿಗೆ ಸರಿಯಾದ ಊಟೋಪಚಾರ ಮತ್ತು ವೈದ್ಯಕೀಯ ಚಿಕಿತ್ಸೆ ನೀಡುವುದು ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಆಹಾರ ಆಯೋಗದ ಅಧ್ಯಕ್ಷರು ಸ್ಪಷ್ಟ ಸೂಚನೆ ನೀಡಿದರು.

ಬಳಿಕ ದಾಸವಾಳ ಬಳಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಆಹಾರ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಅಲ್ಲಿನ ಮಕ್ಕಳ ಹಾಜರಾತಿ, ತಾಯಿ ಕಾರ್ಡು ವಿತರಣೆ, ಗರ್ಭಿಣೀಯರು ಮತ್ತು ಬಾಣಂತಿಯರಿಗೆ ಪೌಷ್ಠಿಕ ಆಹಾರ ಪೂರೈಕೆ, ಮೊಟ್ಟೆ, ಕಾರದಪುಡಿ, ಹೆಸರು ಕಾಳು, ಸಕ್ಕರೆ, ಅಕ್ಕಿ, ಗೋಧಿ ವಿತರಣೆ ಬಗ್ಗೆ ಸಂಬಂಧಪಟ್ಟವರಿಗೆ ಸಂಚಾರಿ ಮೊಬೈಲ್ ಮೂಲಕ ಕರೆ ಮಾಡಿ ಖಾತರಿಪಡಿಸಿಕೊಂಡರು.
ಮೊಟ್ಟೆ, ಹೆಸರು ಕಾಳು, ಸಕ್ಕರೆ, ಅಕ್ಕಿ, ಗೋದಿ ಮತ್ತಿತರ ಪೌಷ್ಠಿಕ ಆಹಾರ ವಿತರಿಸುತ್ತಿದ್ದಾರೆ ಎಂದು ಗರ್ಭಿಣೀಯೊಬ್ಬರು ಪ್ರತಿಕ್ರಿಯಿಸಿದರು.
ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ರಾಜ್ಯ ಆಹಾರ ಆಯೊಗದ ಅಧ್ಯಕ್ಷರು ಮತ್ತು ಸದಸ್ಯರ ತಂಡವು ಮಧ್ಯಾಹ್ನದ ಬಿಸಿಯೂಟ ಯೋಜನೆ ಸಂಬಂಧಿಸಿದಂತೆ ಮಾಹಿತಿ ಪಡೆದರು.
ಸರ್ಕಾರ ಮಧ್ಯಾಹ್ನದ ಬಿಸಿಯೂಟಕ್ಕಾಗಿ ಸಾಕಷ್ಟು ಹಣ ನೀಡುತ್ತಿದೆ. ಬಡ ಮಕ್ಕಳಿಗೆ ಸದ್ಬಳಕೆಯಾಗಬೇಕು. ಪೌಷ್ಠಿಕ ಆಹಾರದ ಜೊತೆಗೆ ವಿದ್ಯಾರ್ಜನೆಗೆ ಕಡೆಗೆ ಮಕ್ಕಳು ಗಮನ ನೀಡಬೇಕು. ಸರ್ಕಾರ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸುತ್ತಿದ್ದು, ಸರ್ಕಾರದ ಯೋಜನೆಗಳು ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ತಲುಪಬೇಕು ಎಂದು ಹೇಳಿದರು.
ನಂತರ ನಗರದ ರೈತ ಸಂಪರ್ಕ ಕೇಂದ್ರ ಹಾಗೂ ಕೀಟನಾಟಕ ಔಷಧಿ ದಾಸ್ತಾನು ಮಳಿಗೆ ವೀಕ್ಷಿಸಿದ ಅಧ್ಯಕ್ಷರು ಮತ್ತು ತಂಡದವರು ಕೀಟನಾಶಕ ಔಷಧಿ ವಿತರಣೆ ಬಗ್ಗೆ ಪರಿಶೀಲಿಸಿ, ಮಾಹಿತಿ ಪಡೆದರು.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಅನಿಲ್ ಧಾವನ್ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರಾದ ಭೀಮರಾಯ ಕಲ್ಲೂರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ.ಎ.ಜೆ.ಲೋಕೇಶ್, ಡಾ.ನಂಜುಂಡಯ್ಯ, ಡಾ.ಸೋಮಶೇಖರ್, ಡಾ.ಅಭಿನಂದನ್, ಡಾ.ಪುರುಷೋತ್ತಮ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಇತರರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.
ರಾಜ್ಯ ಆಹಾರ ಆಯೋಗದ ಸದಸ್ಯರ ತಂಡವು ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆ ಹಾಗೂ ಕುಶಾಲನಗರ ತಾಲ್ಲೂಕುಗಳಿಗೆ ಭೇಟಿ ಪರಿಶೀಲಿಸಿ, ಮಾಹಿತಿ ಪಡೆದರು.
Kodagu
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಯೋಜನೆಗೆ ವಿರೋಧ
ಗೋಣಿಕೊಪ್ಪ : ರಾಜ್ಯ ಸರ್ಕಾರ ಶೇಕಡ ೪೦ರಷ್ಟು ಭಾಗಂಶ ನೀಡಲು ಸಾಧ್ಯವಾಗದ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯನ್ನು ವಿರೋಧಿಸುತ್ತಿದೆ ಎಂದು ವಿರಾಜಪೇಟೆ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ ಆರೋಪಿಸಿದ್ದಾರೆ.
ಗೋಣಿಕೊಪ್ಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಗಾಂಧೀಜಿ ಹೆಸರನ್ನುತೆಗೆದು ರಾಮನ ಹೆಸರು ನಾಮಕರಣ ಮಾಡಲುಕೇಂದ್ರ ಸರ್ಕಾರದ ಮುಂದಾಗಿದೆ ಎಂದು ಹೇಳುತ್ತಾ ಸೌಹಾರ್ದತೆಗೆ ಧಕ್ಕೆ ತರುವ ಪ್ರಯತ್ನ ನಡೆಸುತ್ತಿದೆ.

ಈ ವಿಚಾರದ ಪರವಾಗಿ ಒಂದು ಸಮುದಾಯದವನ್ನು ಓಲೈಸಿಕೊಳ್ಳುವ ನಿಟ್ಟಿನಲ್ಲಿಕಾಂಗ್ರೆಸ್ ಪಕ್ಷ ಮುಂದಾಳತ್ವ ವಹಿಸುತ್ತಿದೆ.ಈ ನಿಟ್ಟಿನಲ್ಲಿ ಯೋಜನೆಯನ್ನು ವಿರೋಧಿಸಿ ಕಾಲ್ನಡಿಗೆ ಜಾಥ ನಡೆಸುತ್ತಿರುವುದು ಹಾಸ್ಯಸ್ಪದವಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ತೆಗೆದುಕೊಂಡಿರುವುದು ವಿರೋಧದ ನಡೆಯಾಗಿದೆ ಎಂಬುವುದು ಪ್ರಜ್ಞಾವಂತಜನರಿಗೆ ಪೂರ್ಣಅರಿವಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ವಿಬಿ-ಜಿ ರಾಮ್ಜಿ ಹೊಸ ನಾಮಕರಣದೊಂದಿಗೆತರುತ್ತಿರುವಯೋಜನೆಯುಗ್ರಾಮೀಣಜನರಿಗೆ ಬಹು ಉಪಯೋಗವಾಗಿದೆ. ಸಣ್ಣರೈತರು, ಕಾರ್ಮಿಕರು, ಬಿಪಿಎಲ್ ಪಡಿತರ ಫಲಾನುಭವಿಗಳಿಗೆ ಅನುಕೂಲಕರವಾಗಲಿದೆ. ಗ್ರಾಮಗಳು ಅಭಿವೃದ್ಧಿಯಾದರೆ ಮಾತ್ರ ಈ ದೇಶದ ಮುನ್ನಡೆ ಸಾಧ್ಯ ಎಂಬ ಚಿಂತನಾಪರಅಧ್ಯಯನ ಶೀಲತೆಗೆ ಈ ಯೋಜನೆ ಪೂರಕವಾಗಿ ಮಾರ್ಪಾಡಾಗಿದೆಎಂದು ಮಾಹಿತಿ ಒದಗಿಸಿದರು.

2027ಕ್ಕೆ ಭಾರತ ವಿಶ್ವದಲ್ಲಿಯೇ ಮೊದಲ ಸ್ಥಾನದಲ್ಲಿ ನಿಲ್ಲಬೇಕೆಂಬ ಗಮನಾರ್ಹ ವಿಚಾರವನ್ನು ಮುಂದಿಟ್ಟು ವಿಕಸಿತ ಭಾರತಕ್ಕೆ ಮುನ್ನುಡಿಯನ್ನುಯೋಜನೆಯ ಮೂಲಕ ತರುವಉದ್ದೇಶವನ್ನು ಹೊಂದಲಾಗಿದೆ.
ಈ ಪರಿಸ್ಕೃತಯೋಜನೆಯಿಂದ ನೂರು ದಿನಗಳ ಬದಲಿಗೆ 125 ದಿನಗಳ ಉದ್ಯೋಗ ಸೃಷ್ಟಿಯಾಗಲಿದೆ. ಸಣ್ಣ ಮತ್ತು ಮಧ್ಯಮರೈತರಿಗೆ ಕೃಷಿ ಚಟುವಟಿಕೆಗಳಲ್ಲಿ 60 ದಿನದ ಬಿಡುವು ತೆಗೆದುಕೊಳ್ಳಲು ಸಾಧ್ಯವಿದೆ.
ಹಿಂದಿನ ವೇತನಕ್ಕಿಂತ ಶೇಕಡವಾರು ವೇತನಏರಿಸಲಾಗಿದೆ. ಗ್ರಾಮಗಳು ಮಾಡಬೇಕಾದ ಕಾಮಗಾರಿಗಳ ಪಟ್ಟಿ, ಫಲಾನುಭವಿಗಳ ಪಟ್ಟಿ, ಸ್ಥಳೀಯ ವಾರ್ಡ್ ಸಭೆ ಮತ್ತುಗ್ರಾಮ ಸಭೆಗಳಲ್ಲಿ ಆಯ್ಕೆ ಮಾಡುವ ಮೂಲಕ ಅಂತಿಮ ನಿರ್ಣಯ ತೆಗೆದುಕೊಳ್ಳಲು ಇದರಿಂದ ಸಾಧ್ಯವಿದೆ. ಜಿಪಿಎಸ್ ತಂತ್ರಜ್ಞಾನದಿಂದಕಾಮಗಾರಿ ಲೋಪದೋಷ ಆಗದಂತೆತಡೆಹಿಡಿಯಲು ಸಾಧ್ಯವಿದೆ. ಜೊತೆಗೆ ಸಾಮಾಜಿಕ ಲೆಕ್ಕ ಪರಿಶೋಧನೆ ಮಾಡುವುದರಿಂದ ಭ್ರಷ್ಟಾಚಾರಕ್ಕೆಇಲ್ಲಿಅವಕಾಶವಿರುವುದಿಲ್ಲ.

ಈ ಎಲ್ಲಾ ನಿರ್ಣಯಗಳನ್ನು ಮತ್ತುಯೋಜನೆಯ ಫಲಾನುಫಲತೆಗಳನ್ನು ಗ್ರಾಮೀಣ ಭಾಗದಜನರಿಗೆ ಒದಗಿಸಿಕೊಡುವ ನಿಟ್ಟಿನಲ್ಲಿಕೇಂದ್ರ ಸರಕಾರಕಾರ್ಯ ಪ್ರವೃತ್ತವಾಗಿದೆ .ಆದರೆ,ಕಾಂಗ್ರೆಸ್ ಪಕ್ಷ ಇದನ್ನು ತೀವ್ರವಾಗಿ ವಿರೋಧಿಸುವ ಮೂಲಕ ಜನರ ಮನದಲ್ಲಿ ಸಂಶಯ ಮತ್ತುಗೊಂದಲದ ವಿಚಾರಗಳಿಗೆ ಸಂಬಂಧಿಸಿದಂತೆ ವರ್ತಿಸುತ್ತಿರುವುದರಲ್ಲಿ ಭ್ರಷ್ಟಚಾರಕ್ಕೆ ಪ್ರೇರಣೆ ಮತ್ತು ಲೇಪನವೇ ಕಾರಣವಾಗುತ್ತಿದೆಎಂದು ಆರೋಪಿಸಿದರು.
-
Special9 hours agoBSNL Recruitment 2026: ಬಿಎಸ್ಎನ್ಎಲ್ನಲ್ಲಿ ಭರ್ಜರಿ ನೇಮಕಾತಿ;ತಿಂಗಳಿಗೆ ₹90,000 ವರೆಗೆ ವೇತನ
-
Hassan23 hours agoಪ್ರತ್ಯೇಕ ಪ್ರಕರಣ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
-
National7 hours agoಕೆ.ಆರ್. ನಗರ ಮಹಿಳೆಯ ಅಪಹರಣ ಕೇಸ್ – ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್
-
Kodagu4 hours agoಫೆ. 7ಕ್ಕೆ ಕೆಎಸ್ಆರ್ಟಿಸಿ ನೂತನ ಬಸ್ಸು ನಿಲ್ದಾಣ ಉದ್ಘಾಟನೆ
-
Chikmagalur9 hours agoವಿವಾಹಿತ ಹಿಂದೂ ಮಹಿಳೆಯ ಜೊತೆ : ಸಿಕ್ಕಿ ಬಿದ್ದ ಕಾಂಗ್ರೆಸ್ ಮುಖಂಡ
-
Mysore5 hours agoಪಾರಂಪರಿಕ ತಾಣದಲ್ಲಿ ಧೂಮಪಾನ: ಬಿಗ್ಬಾಸ್ ಸ್ಪರ್ಧಿ ರಜತ್ ವಿರುದ್ಧ ದೂರು
-
Mysore8 hours agoಫುಟ್ಪಾತ್ ವ್ಯಾಪಾರಿಗಳಿಗೆ ನಂಜನಗೂಡು ನಗರಸಭೆ ಆಯುಕ್ತ ಎಂ. ಬಸವರಾಜು ಎಚ್ಚರಿಕೆ
-
National3 hours agoಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಎಚ್ಡಿಕೆ ಮನವಿ: ಅಶ್ವಿನಿ ವೈಷ್ಣವ್ರಿಂದ ಸಕರಾತ್ಮಕ ಪ್ರತಿಕ್ರಿಯೆ
