Mysore
ಪುರಸಭೆ ವಂಚನೆ ಪ್ರಕರಣ: ಸಿಐಡಿ ತನಿಖೆಯಾಗಬೇಕೆಂದು ಆಗ್ರಹಿಸಿದ ಡಾ. ಎ. ಎಸ್.ಚಂದ್ರಶೇಖರ್
ತಿ.ನರಸೀಪುರ: ಇತ್ತೀಚಿಗೆ ಪುರಸಭೆಯಲ್ಲಿ ನಡೆದಿರುವ ಬಹುಕೋಟಿಗಳ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಿ ದಸಂಸ ಸಂಚಾಲಕ ಡಾ.ಆಲಗೂಡು ಎಸ್.ಚಂದ್ರಶೇಖರ್ ಅಗ್ರಹಿಸಿದರು.
ಪಟ್ಟಣದ ಮಿನಿವಿಧಾನದ ಮುಂದೆ ದಲಿತ ಸಂಘರ್ಷ ಸಮಿತಿ (ಭೀಮವಾದ) ವತಿಯಿಂದ ಹಮ್ಮಿಕೊಂಡಿದ್ದ ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪುರಸಭೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಬಗ್ಗೆ ಸಿಐಡಿ ತನಿಖೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವಕಾಶ ಕಲ್ಪಿಸಿಕೊಡಬೇಕು. ಆರೋಪಿ ಟಿ. ಎಂ. ನಂಜುಂಡಸ್ವಾಮಿ ಮಾಡಿಸಿರುವ ಎಲ್ಲ ಖಾತೆಗಳನ್ನು ರದ್ದುಪಡಿಸಬೇಕು.ಅಲ್ಲದೆ ನಂಜುಂಡಸ್ವಾಮಿ ಮತ್ತು ಆತನ ಸಂಬಂಧಿಕರ ಹೆಸರಿನಲ್ಲಿರುವ ಅಕ್ರಮ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಪಾರದರ್ಶಕ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದರು.

ತಿ.ನರಸೀಪುರ ಪುರಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಸ್ತುವಾರಿ ಸಚಿವ ಮಹದೇವಪ್ಪ ಇಬ್ಬರೂ ಪ್ರತಿನಿಧಿಸುವ ಕ್ಷೇತ್ರವಾಗಿರುವುದರಿಂದ ಇಷ್ಟೊಂದು ದೊಡ್ಡಮಟ್ಟದ ವಂಚನೆ ಪ್ರಕರಣ ನಡೆದಿರುವುದರಿಂದ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಹದೇವಪ್ಪ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು. ಇಲ್ಲವಾದಲ್ಲಿ ಇವರ ಕೃಪಾಕಟಾಕ್ಷದಿಂದಲೇ ವಂಚನೆ ಪ್ರಕರಣ ನಡೆದಿರಬಹುದು ಎಂಬ ತಪ್ಪು ಕಲ್ಪನೆ ಜನರಲ್ಲಿ ಮೂಡಬಹುದು ಎಂದರು.
40 ಕೋಟಿ ರೂ.ಗಳ ತೆರಿಗೆ ವಂಚನೆ ಆಗಿರುವ ಬಗ್ಗೆ ಸ್ವತಃ ಪುರಸಭೆ ಮುಖ್ಯಾಧಿಕಾರಿ ಬಿ.ಕೆ. ವಸಂತಕುಮಾರಿ ಖಾಸಗಿಯೊಬ್ಬರ ಜತೆ ಮಾತನಾಡಿರುವ ಸಂಭಾಷಣೆ ಹಲವು ಕಡೆ ಹರಿದಾಡುತ್ತಿದ್ದು, ಆಡಿಯೋ ಸತ್ಯಾಸತ್ಯತೆಯನ್ನು ಪರಾಮರ್ಶಿಸಲು ಉನ್ನತಮಟ್ಟದ ತನಿಖೆ ಅವಶ್ಯಕತೆ ಇರುತ್ತದೆ. ಹಾಗಾಗಿ ವಂಚನೆ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರ ಮಾಡಬೇಕು ಎಂದು ಒತ್ತಾಯಿಸಿದರು.

ಧರಣಿಯಲ್ಲಿ ತಾಲೂಕು ಸಂಚಾಲಕ ಕೆಂಪಯ್ಯನಹುಂಡಿ ರಾಜು, ಮನೋಜ್ ಕುಮಾರ್, ಕೊಳತ್ತೂರು ಪ್ರಭಾಕರ್, ಜಿಲ್ಲಾ ಮುಖಂಡ ಕನ್ನಾಯಕನಹಳ್ಳಿ ಮರಿಸ್ವಾಮಿ, ಗೋವಿಂದರಾಜು, ರಾಜಪ್ಪ, ಕುಮಾರ್, ಶಿವಕುಮಾರ್, ಗವಿಸಿದ್ದಯ್ಯ, ಪ್ರಸನ್ನ, ಪರಶುರಾಮ್, ಜಯಣ್ಣ, ರೈತ ಮುಖಂಡರಾದ ಕಳ್ಳಿಪುರ ಮಹದೇವಸ್ವಾಮಿ, ಬನ್ನೂರು ರಾಮಕೃಷ್ಣ, ತಲಕಾಡು ಚೆಲುವರಾಜು, ಅತ್ತಳ್ಳಿ ಶಿವನಂಜು, ಮೂಗೂರು ಶಾಂತ ನಾಗರಾಜು ಇತರರು ಪಾಲ್ಗೊಂಡಿದ್ದರು.
ಅಧಿಕಾರಿಗಳನ್ನೂ ತನಿಖೆ ನಡೆಸಲಿ
ದೊಡ್ಡ ಮಟ್ಟದ ವಂಚನೆ ಪ್ರಕರಣವನ್ನು ಏಕ ವ್ಯಕ್ತಿಯು ನಡೆಸಲು ಸಾಧ್ಯವಿಲ್ಲ. ಹಗರಣದಲ್ಲಿ ಪುರಸಭೆಯ ಅಧಿಕಾರಿಗಳು ಶಾಮೀಲಾಗಿರುವ ಸಾಧ್ಯತೆಯಿದ್ದು, ಪುರಸಭೆಯ ಮುಖ್ಯಾ ಧಿಕಾರಿ, ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ಮತ್ತು ಸಂಬಂಧಿತ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು ಎಂದು ಡಾ. ಆಲಗೂಡು ಎಸ್.ಚಂದ್ರಶೇಖರ್ ಒತ್ತಾಯಿಸಿದರು.
Mysore
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸೇವಾ ಮನೋಭಾವ,ಇಂದಿನ ಸಮಾಜಕ್ಕೂ ಆದರ್ಶ: ಯದುವೀರ್
Mysore
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ| ಜಿಲ್ಲೆಯಲ್ಲಿ ಶೇ.96 ಮ್ಯಾಪಿಂಗ್ ಪೂರ್ಣ: ಜಿ.ಲಕ್ಷ್ಮೀಕಾಂತ್ ರೆಡ್ಡಿ
ಮೈಸೂರು: ಜಿಲ್ಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಶೇ.96ರಷ್ಟು ಮ್ಯಾಪಿಂಗ್ ಪೂರ್ಣಗೊಂಡಿರುವ ಹಂತದಲ್ಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿ ಅವರು ಮಾತನಾಡಿದರು. ಪ್ರಕ್ರಿಯೆಯ ವೇಳಾಪಟ್ಟಿಯಂತೆ ಜೂನ್ 20 ರಿಂದ 29 ರವರೆಗೆ ಸಿದ್ಧತೆ, ತರಬೇತಿ ಮತ್ತು ಮುದ್ರಣ ಕಾರ್ಯ ನಡೆಯಲಿದೆ. ಜೂನ್ 30 ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆಮನೆಗೆ ಭೇಟಿ ನೀಡಿ ಎನ್ಯೂಮರೇಷನ್ ಫಾರಂ ವಿತರಣೆ ಮತ್ತು ಸಂಗ್ರಹ ಕಾರ್ಯ ನಡೆಸಲಿದ್ದಾರೆ.

ಜುಲೈ 29 ರಂದು ಮತಗಟ್ಟೆಗಳ ರೇಷನಲೈಸೇಶನ್ ಪ್ರಕ್ರಿಯೆ ನಡೆಯಲಿದ್ದು, ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಆಗಸ್ಟ್ 5 ರಿಂದ ಸೆಪ್ಟೆಂಬರ್ 4 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ಇರಲಿದೆ. ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ.
ಅರ್ಹ ಮತದಾರರು ನಿಖರ ಮಾಹಿತಿ ನೀಡಿ ಫಾರಂ ಭರ್ತಿ ಮಾಡಬೇಕು. ತಪ್ಪು ಮಾಹಿತಿ ನೀಡುವುದು ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. BLOಗಳು ಕನಿಷ್ಠ ಮೂರು ಬಾರಿ ಮನೆಗಳಿಗೆ ಭೇಟಿ ನೀಡಲಿದ್ದಾರೆ ಹಾಗೂ ರಾಜಕೀಯ ಪಕ್ಷಗಳ ಸಹಕಾರ ಅಗತ್ಯವೆಂದು ಅವರು ಮನವಿ ಮಾಡಿದ್ದಾರೆ.

2002ರ ಮತದಾರರ ಪಟ್ಟಿಯನ್ನು ಆಧಾರವಾಗಿ ತೆಗೆದುಕೊಂಡು 2025ರ ಪಟ್ಟಿಯೊಂದಿಗೆ ಹೋಲಿಕೆ ಹಾಗೂ ಮ್ಯಾಪಿಂಗ್ ಕಾರ್ಯ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
Mysore
ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಪುಷ್ಪಾರ್ಚನೆ ಹಾಗೂ ಅನ್ನಸಂತರ್ಪಣೆ
-
Special20 hours agoಮಹಿಳೆಯರಿಗೆ 35 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿ: ಅರ್ಜಿ ಆಹ್ವಾನ!!
-
Kodagu17 hours agoಗೋಣಿಕೊಪ್ಪದಲ್ಲಿ ಜೂ.5 ರಿಂದ ಮಾವು ಮೇಳ
-
Mandya10 hours agoಮಂಡ್ಯ ಜಿಲ್ಲೆಯ ಮೊದಲ ಅಕ್ಕ ಕೆಫೆ ಉದ್ಗಾಟನೆಗೆ ಸಜ್ಜು: ಜಿ.ಪಂ. ಸಿಇಓ ಕೆ.ಆರ್. ನಂದಿನಿ
-
Kodagu17 hours agoವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಾಳಲೆಯಲ್ಲಿ ರಕ್ತದಾನ ಶಿಬಿರ
-
Politics8 hours agoಕರ್ನಾಟಕದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸರ್ಕಾರದ ಅಧಿಕೃತ ಆದೇಶ
-
Hassan14 hours agoಹೃದಯ ಆರೈಕೆಗೆ ಜನಪ್ರಿಯ ಆಸ್ಪತ್ರೆಯ ನೂತನ ಕಾರ್ಡಿಯಾಕ್ ಕೇರ್ ಘಟಕ ಉದ್ಘಾಟನೆ
-
Mandya15 hours agoಯುವಜನರಿಗೆ ನಾಲ್ವಡಿ ಕೃಷ್ಣರಾಜ ಒಡೆಯರವರ ಆದರ್ಶಗಳು ಸದಾ ಸ್ಫೂರ್ತಿಯಾಗಿವೆ : ಬಿ. ಸಿ. ಶಿವಾನಂದಮೂರ್ತಿ
-
Chamarajanagar13 hours agoಹಸುವನ್ನು ಕರೆತರಲು ಹೋದ ಮಹಿಳೆ ಕುಸಿದು ಬಿದ್ದು ಸಾವು


