Manglore
ಮುಸ್ಲಿಂ ಯುವಕನ ಕಂಬಕ್ಕೆ ಕಟ್ಟಿ ಥಳಿತ ಪ್ರಕರಣ: 19 ಮಂದಿ ಆರೋಪಿಗಳು ಖುಲಾಸೆ
ಮಂಗಳೂರು: ಹಿಂದೂ ಯುವತಿಯೊಂದಿಗಿದ್ದ ಎಂದು ಮುಸ್ಲಿಂ ಯುವಕನನ್ನು ಕಾರಿನಿಂದೆಳೆದು ಹಲ್ಲೆಗೈದು ಅರೆ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ವಿಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 19ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಅತ್ತಾವರದ ಈಝೀ ಡೇ ಮಳಿಗೆಯಲ್ಲಿ ಕೆಲಸಕ್ಕಿದ್ದ ಯುವತಿಯೊಂದಿಗೆ ಮಳಿಗೆಯ ವ್ಯವಸ್ಥಾಪಕ ಶಾಕೀರ್ ಎಂಬಾತ ಕಾರಿನಲ್ಲಿ ಹೋಗುತ್ತಿದ್ದ. ಈತನ ಕಾರನ್ನು ಅತ್ತಾವರ ನಂದಿಗುಡ್ಡೆ ಬಳಿ ಅಡ್ಡಗಟ್ಟಿದ್ದ ಹಿಂದೂ ಇಸಂಘಟನೆಗಳಿಗೆ ಸೇರಿದ ಕಾರ್ಯಕರ್ತರು ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದಾನೆಂದು ಆರೋಪಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. 2015ರ ಆಗಸ್ಟ್ 28ರಂದು ಘಟನೆ ನಡೆದಿತ್ತು.
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ಸಹೋದ್ಯೋಗಿ ಯುವತಿ 2ಸಾವಿರ ಹಣ ಬೇಕೆಂದು ಕೇಳಿದ್ದಕ್ಕೆ ಶಾಕೀರ್ ಅತ್ತಾವರ ಕೆಎಂಸಿ ಆಸ್ಪತ್ರೆಯ ಬಳಿ ತೆರಳಿ ಹಣ ಕೊಡುತ್ತಿದ್ದ. ಈ ವೇಳೆ ನಾಲ್ಕು ಬೈಕ್ಗಳಲ್ಲಿ ಬಂದ ಯುವಕರ ತಂಡ ಕಾರಿಗೆ ಅಡ್ಡಲಾಗಿ ಬೈಕ್ ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ಆತನನ್ನು ಕಾರಿನಿಂದ ಎಳೆದು ಹಾಕಿ 10ರಿಂದ 12 ಮಂದಿ ಆರೋಪಿಗಳು ಸೇರಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದರು. ಬಳಿಕ ಆತನ ಬಳಿಯಿದ್ದ ಎಟಿಎಂ ಕಾರ್ಡ್, ಎರಡು ಸಾವಿರ ನಗದು, ಮೊಬೈಲ್ ಕಿತ್ತುಕೊಂಡು ಹೋಗಿರುವುದಾಗಿ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸರು 19ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ 78 ದಾಖಲೆ, 33 ಸಾಕ್ಷಿಗಳನ್ನು ಹಾಜರುಪಡಿಸಿದರೂ ಪೊಲೀಸರಿಗೆ ಆರೋಪ ಸಾಬೀತು ಪಡಿಸಲು ಸಾಧ್ಯವಾಗದೇ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ 19 ಜನ ಆರೋಪಿಗಳನ್ನು ಖುಲಾಸೆಗೊಳಿಸಿ ಮಾ.15ರಂದು ತೀರ್ಪು ನೀಡಿದ್ದಾರೆ. ಆರೋಪಿಗಳ ಪರವಾಗಿ ವಕೀಲರಾದ ಬಿ.ಅರುಣ ಬಂಗೇರ, ಮೋಹನರಾಜ್ ಕೆ.ಆರ್, ಆಶಾ ನಾಯ್ಕ ಸುನೀಲ್ ಮತ್ತು ರಿಹಾನ ಪರ್ವೀನ್ ವಾದಿಸಿದ್ದರು.
Manglore
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಡಿಸಿಎಂ ಡಿಕೆಶಿ ಆಪ್ತ ಇನಾಯತ್ ಅಲಿಗೆ ದೆಹಲಿ ಪೊಲೀಸ್ರಿಂದ ನೋಟಿಸ್
ಮಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್ ಜಾರಿ ಮಾಡಲಾಗಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಇ.ಡಿ ನೀಡಿರುವ ದೂರಿನ ಮೇರೆಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್ಐಆರ್ ದಾಖಲಿಸಿತ್ತು. ಅ.3ರಂದು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿತ್ತು. ಅದೇ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ಗೂ ನೋಟಿಸ್ ಜಾರಿಯಾಗಿತ್ತು. ಸದ್ಯ ಡಿಕೆಶಿ ಆಪ್ತ ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಒಂದು ವಾರದಲ್ಲಿ ಹಾಜರಾಗುವಂತೆ ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ನೊಟೀಸ್ ನೀಡಿ ತೆರಳಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ ಸಂಸ್ಥೆಯಿಂದ ಕಳೆದ ಹಲವು ವರ್ಷಗಳಿಂದ ಇನಾಯತ್ ಅಲಿಯ ತನಿಖೆಯಾಗಿತ್ತು. ಅದರ ಮುಂದುವರಿದ ಭಾಗವಾಗಿ ಇದೀಗ ದೆಹಲಿ ಪೊಲೀಸರಿಂದ ನೋಟಿಸ್ ಜಾರಿಯಾಗಿದೆ. ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ಇನಾಯತ್ ಅಲಿ ಕೂಡಾ ಆರ್ಥಿಕ ಸಹಾಯ ಒದಗಿಸಿದ್ದರು ಎಂಬ ಮಾಹಿತಿ ಇದೆ.
ವೈಯಕ್ತಿಕ ಹಿನ್ನೆಲೆ, ಕಾಂಗ್ರೆಸ್ ಪಕ್ಷದೊಂದಿಗಿನ ಸಂಬಂಧ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ನೀಡಿದ ದೇಣಿಗೆ ಪ್ರಮಾಣ, ಯಾವ ರೀತಿಯಲ್ಲಿ ದೇಣಿಗೆ ನೀಡಲಾಗಿದೆ ಎಂಬುದರ ಮಾಹಿತಿ, ಈ ಹಣ ಯಾವುದಕ್ಕೆ ಬಳಕೆಯಾಗಿದೆ ಎಂಬುದು ಗೊತ್ತಿದೆಯೇ ಎಂಬ ವಿವರಗಳನ್ನು ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಅಲ್ಲದೇ ಈ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ಮತ್ತು ಸಹೋದರ ಡಿ.ಕೆ.ಸುರೇಶ್ಗೂ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ.
Manglore
1 5ವರ್ಷ ಹಡಿಲು ಬಿದ್ದ 10ಎಕರೆ ಭೂಮಿಯಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ
ಮಂಗಳೂರು: ಹಡಿಲು ಬಿದ್ದ 10 ಎಕರೆ ಗದ್ದೆಯಲ್ಲಿ ನೇಜಿ ನಾಟಿ ನಡೆಸುವ ಕಾರ್ಯಕ್ರಮ ಸಜೀಪ ಮೂಡ ಗ್ರಾಮದ ಕಾಂತಾಡಿಯಲ್ಲಿ ನಡೆಯಿತು.
ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಲೊರೋಟೋ ಹಿಲ್ಸ್ ಸ್ಥಾಪಕಾಧ್ಯಕ್ಷ, ಪ್ರಗತಿಪರ ಕೃಷಿಕ ಅವಿಲ್ ಮಿನೇಜಸ್ ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ, ಪ್ರಗತಿಪರ ಕೃಷಿಕ ದಿವಂಗತ ಬಿ.ಸದಾನಂದ ಪೂಂಜ ಇವರ ಪುತ್ರ ಗ್ರಾ. ಪಂ. ಮಾಜಿ ಅಧ್ಯಕ್ಷ ಶೋಭಿತ್ ಪೂಂಜ ನೇತೃತ್ವದಲ್ಲಿ, ಮತ್ತು ಸಜೀಪ ದಸರಾ 2026 ಶತಮಾನೋತ್ಸವ ಸಮಿತಿ ಇದರ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು.

ಬೆಲೆ ಏರಿಕೆ ನಡುವೆಯೂ ವಿವಿಧ ರೋಗ ಭಾದೆ ಯಿಂದ ಕಳೆಗುಂದುತ್ತಿರುವ ಅಡಿಕೆ ಬೆಳೆಗೆ ಪರ್ಯಾಯವಾಗಿ ಮರೆಯಾಗುತ್ತಿರುವ ಭತ್ತ ಬೇಸಾಯದತ್ತ ಇವರು ಚಿತ್ತ ಹರಿಸಿದ್ದು, ನೇಜಿ ನಾಟಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ಹಿ.ಪ್ರಾ. ಶಾಲೆ ವಿದ್ಯಾರ್ಥಿಗಳು ಕೂಡಾ ಭಾಗವಹಿಸಿದ್ದರು. ಸಜೀಪ ಮಾಗಣೆಯ ತಂತ್ರಿಗಳಾದ ಎಂ. ಸುಬ್ರಹ್ಮಣ್ಯ ಭಟ್ ಹಾಗೂ ಸುಭಾಷ್ ಯುವಕ ಮಂಡಲ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಸಂಕೇಶ ಹಾಗೂ ಪ್ರಗತಿಪರ ಕೃಷಿಕ ಅವಿಲ್ ಮಿನೇಜಸ್ ಮತ್ತು ಶ್ರೀದೇವಿ ಪ್ರಸಾದ್ ಪೂಂಜ ಚಾಲನೆ ನೀಡಿದರು. ಸಜೀಪಮೂಡ ಶಾಲೆಯ ಮಕ್ಕಳೂ ಕೂಡ ಈ ಸಂದರ ಕಾರ್ಯಕ್ರಮದಲ್ಲಿ ಗದ್ದೆಗಿಳಿದು ನೇಜಿ ನಾಟಿ ಕಾರ್ಯಕ್ರಮದಲ್ಲಿ ಜೊತೆಯಾಗಿದ್ದಾರೆ.
Manglore
ಎಂಡಿಎಂಎ ಮಾರಾಟ ಮಾಡುತ್ತಿದ್ದ ನಾಲ್ವರು ಅರೆಸ್ಟ್- 50ಲಕ್ಷ ಮೌಲ್ಯದ ಮಾದಕದ್ರವ್ಯ ವಶಕ್ಕೆ: ಸುಧೀರ್ ಕುಮಾರ್ ರೆಡ್ಡಿ
ಮಂಗಳೂರು: ನಗರದ್ಯಾಂತ ಸಾರ್ವಜನಿಕ ಸ್ಥಳಗಳಲ್ಲಿ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು 50ಲಕ್ಷ ರೂ. ಮೌಲ್ಯದ ಸುಮಾರು 517.76ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಇಂದು ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೈಂದೂರು ತಾಲೂಕಿನ ಕುಂದಾಪುರ ನಾವುಂದ ಗ್ರಾಮದ ಮೊಹಮ್ಮದ್ ಶಿಯಾಬ್, ಉಳ್ಳಾಲ ತಾಲೂಕಿನ ಗ್ರಾಮದ ಮೊಹಮ್ಮದ್ ನೌಷದ್, ಮಂಗಳೂರು ಕಸಬಾ ಬೆಂಗ್ರೆಯ ಇಮ್ರಾನ್, ಬಂಟ್ವಾಳ ತಾಲೂಕಿನ ಬ್ರಹ್ಮರ ಕೊಟ್ಲುವಿನ ನಿಸಾರ್ ಅಹಮ್ಮದ್ ಬಂಧಿತ ಆರೋಪಿಗಳು.

ಮಂಗಳೂರು ಸಿ.ಸಿ.ಬಿ. ಘಟಕದ ಎ.ಸಿ.ಪಿ. ಮನೋಜ್ ಕುಮಾರ್ ನಾಯ್ಕ್ ನೇತೃತ್ವದ ಸಿ.ಸಿ.ಬಿ. ತಂಡ ಖಚಿತ ಮಾಹಿತಿಯ ಮೇರೆಗೆ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಠಾಣಾ ವ್ಯಾಪ್ತಿಯ ಸುಂದರಾಮ್ ಶೆಟ್ಟಿ ಕನ್ವಿನ್ಷನ್ ಹಾಲ್ ಬಳಿ ದಾಳಿ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ ಮಾದಕದ್ರವ್ಯವನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಸುಮಾರು 50ಲಕ್ಷ ಮೌಲ್ಯದ ಸುಮಾರು 517.76 ಗ್ರಾಂ ಎಂ.ಡಿ.ಎಂ.ಎ., ಕೃತ್ಯಕ್ಕೆ ಬಳಸಿದ 10 ಲಕ್ಷ ಮೌಲ್ಯದ ಕಾರು ಹಾಗೂ 5 ಮೊಬೈಲ್ ಪೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಮಾದಕವಸ್ತುವನ್ನು ಬೆಂಗಳೂರಿನಲ್ಲಿ ನೈಜೀರಿಯಾ ದೇಶದ ಪ್ರಜೆಯಿಂದ ಖರೀದಿಸಿದ್ದಾರೆ ಎಂದು ಆರೋಪಿಗಳು ತನಿಖೆ ವೇಳೆ ಬಾಯಿಬಿಟ್ಟಿದ್ದಾರೆ. ಆರೋಪಿತರ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:124/2025 ಕಲಂ:22(ಸಿ) , 21(C) ಎನ್.ಡಿ.ಪಿ.ಎಸ್. ಕಾಯ್ದೆ ಜೊತೆಗೆ 3(5) ಬಿ.ಎನ್.ಎಸ್. ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
-
Mysore7 hours agoಉದ್ಯಮಿ ಅಪಹರಿಸಿ ಕೋಟಿ ರೂ.ಗಳಿಗೆ ಡಿಮ್ಯಾಂಡ್: ನಾಲ್ವರ ಬಂಧನ
-
Mysore10 hours agoಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ
-
Special5 hours agoಮಹಿಳೆಯರಿಗೆ ದೊಡ್ಡ ಅವಕಾಶ! ಅಂಗನವಾಡಿಯ 571 ಹುದ್ದೆಗಳಿಗೆ ಅರ್ಜಿ ಅಹ್ವಾನ.
-
Hassan9 hours agoHKS PUC ಕಾಲೇಜಿನಲ್ಲಿ ಜರುಗಿದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ಸಮಾರೋಪ ಸಮಾರಂಭ
-
Chikmagalur10 hours agoಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿ: ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರು
-
Chikmagalur10 hours agoಗ್ರಾ.ಪಂ.ಸದಸ್ಯ ಗಣೇಶ್ ಕೊಲೆ ಪ್ರಕರಣ: ಐವರ ಬಂಧನ, ಮೂವರಿಗಾಗಿ ತೀವ್ರ ಶೋಧ
-
State11 hours agoನಾಳೆಯಿಂದ ಚಳಿಗಾಲದ ಅಧಿವೇಶನ: ಸುವರ್ಣಸೌಧದಲ್ಲಿ ಸುತ್ತ ಹೈ ಆಲರ್ಟ್ 6,000 ಪೊಲೀಸ್ ಭದ್ರತೆ
-
Mysore15 hours agoಕೊಲ್ಕತ್ತಾದ ಮೈಸೂರು ಉದ್ಯಾನಕ್ಕೆ 10ನೇ ಚಾಮರಾಜ ಒಡೆಯರ್ ನಾಮಫಲಕ ಅಳವಡಿಸಲು ಪತ್ರ
