Connect with us

Cultural

ಕ್ರೀಡೆ ಸ್ಪೂರ್ತಿದಾಯಕ ಕ್ಷೇತ್ರ : ಸಚಿವ ಡಾ.ಹೆಚ್.ಸಿ.ಮಹದೇವಪ್ಪ

Published

on

ಮೈಸೂರು,ಅ.21:- ಪ್ರಪಂಚದಲ್ಲಿ ಕ್ರೀಡೆಯು ಮಹತ್ವದ ಸ್ಥಾನ ಪಡೆದಿದ್ದು, ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ ಕ್ಷೇತ್ರವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಸರಾ ಕ್ರೀಡಾ ಉಪಸಮಿತಿ ವತಿಯಿಂದ ಶನಿವಾರ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಡ ಮತ್ತು ಸಿಎಂ ಕಪ್-2023 ಕ್ರೀಡೆಯ ವಿಜೇತರಿಗೆ ಬಹುಮಾನ ವಿತರಿಸಿ ಸಚಿವರು ಮಾತನಾಡಿದರು.

ಕ್ರೀಡೆಯು ಮನುಷ್ಯನ ಭಾವನೆಗಳನ್ನು ಕ್ಷಣಾರ್ಧದಲ್ಲಿ ಬದಲಿಸುವ ಶಕ್ತಿ ಹೊಂದಿದೆ. ಬಹುಮುಖ್ಯವಾಗಿ ಕ್ರೀಡೆಗೆ ಕಠಿಣವಾದ ಪರಿಶ್ರಮ ಅಗತ್ಯ. ಅದಕ್ಕೆ ಉತ್ತೇಜನ ಮತ್ತು ಪ್ರೋತ್ಸಾಹ ಹಾಗೂ ಅಗತ್ಯ ಸವಲತ್ತುಗಳನ್ನು ನೀಡಿದಾಗ ಉತ್ತಮ ಕ್ರೀಡಾಪಟುಗಳು ರೂಪುಗೊಳ್ಳುತ್ತಾರೆ. ಈ ಎಲ್ಲಾ ಸೌಕರ್ಯವನ್ನು ಸರ್ಕಾರ ಒದಗಿಸಿಕೊಡಲಿದೆ ಎಂದು ಭರವಸೆ ನೀಡಿದರು.

ಮೈಸೂರು ದಸರಾ ಮಹೋತ್ಸವಲ್ಲಿ ಪ್ರಮುಖವಾಗಿ ಕಳೆಗಟ್ಟುವ ವೇದಿಕೆ ದಸರಾ ಕ್ರೀಡಾಕೂಟವಾಗಿದೆ. ಈ ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಸರ್ಕಾರ ಅಭಿನಂದಿಸುತ್ತದೆ. ಈ ಎಲ್ಲರೂ ಕೂಡ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಸೌಹರ್ದತೆ, ಅಖಂಡತೆ ಮತ್ತು ಬಹುತ್ವವನ್ನು ರಕ್ಷಣೆ ಮಾಡುವುದು ನಿಮ್ಮ ಜವಬ್ದಾರಿ ಎಂದು ತಿಳಿಸಿದರು.

ದಸರಾ ಕ್ರೀಡಾಕೂಟದಲ್ಲಿ ಹತ್ತು ಸಾವಿರ ಕ್ರೀಡಾಪಟುಗಳು ಭಾಗವಹಿಸಿ, ಕ್ರೀಡಾಂಗದಲ್ಲಿ ಅತ್ಯುತ್ತಮವಾದ ಪ್ರದರ್ಶನ ನೀಡಿದ್ದಾರೆ. ಸೋಲು, ಗೆಲುವಿನ ಲೆಕ್ಕಚಾರ ಹಾಕದೆ ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಮುಖ್ಯ. ಕ್ರೀಡೆಯಲ್ಲಿ ಸಾಧನೆ ಮಾಡಿದಂತಹ ಸಾಧಕರ ಗುರಿ ನಿಮ್ಮದಾಗಬೇಕು. ಸೋಲೇ ಗೆಲುವಿನ ಸೋಪಾನ ಎಂದು ಭಾವಿಸಿ ಮರಳಿ ಪ್ರಯತ್ನ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಭಾರತದ ಭೂಪಟದಲ್ಲಿ ಅಚ್ಚಳಿಯದೆ ಮೈಸೂರು ಸಾಂಸ್ಕೃತಿಕ ನಗರದ ಎಂಬ ಹೆಗ್ಗಳಿಕೆ ಉಳಿಯಬೇಕಾದರೆ ನಾಲ್ವಡಿ ಕೃಷ್ಣರಾಜ ಒಡೆಯರ ಮುತ್ಸದ್ಧಿತನ, ಸೂಕ್ಷ್ಮತೆ, ದೂರದೃಷ್ಟಿ ಮುಖ್ಯಕಾರಣ. ಅವರು ಬೆಂಬಲಿಸದ ಯಾವುದೇ ಕ್ಷೇತ್ರ ಉಳಿದಿಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ, ಶಾಸಕ ತನ್ವೀರ್ ಸೇಠ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು, ಒಲಂಪಿಕ್ ಸಂಸ್ಥೆಯ ಕಾರ್ಯದರ್ಶಿ ಆನಂತ್ ರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಎನ್.ಶಶಿಕುಮಾರ್, ಉಪಸಮಿತಿ ಅಧ್ಯಕ್ಷ ಶಿವಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Cultural

ಸತತ ಮೂರನೇ ಬಾರಿ ಯುವ ಸಂಭ್ರಮದಿಂದ ಯುವ ದಸರಕ್ಕೆ ಆಯ್ಕೆ ಆದ ಗ್ರೀನ್ ಕಿಡ್ಸ್ ಡ್ಯಾನ್ಸ್ ಸ್ಕೂಲ್ ತಂಡದ ನೃತ್ಯ ಸಂಯೋಜನೆಯ ತಂಡ.

Published

on

ಮೈಸೂರಿನಲ್ಲಿ ನಡೆದ ಯುವ ಸಂಭ್ರಮದಲ್ಲಿ ರಾಜ್ಯದ 400ಕ್ಕೂ ಹೆಚ್ಚು ಕಾಲೇಜುಗಳು ನೃತ್ಯ ಪ್ರದರ್ಶನ ನೀಡಿದ್ದು ಅದರಲ್ಲಿ ಉತ್ತಮ ಪ್ರದರ್ಶನ ನೀಡಿದ 30 ಕಾಲೇಜಿನ ತಂಡಗಳನ್ನು ಯುವ ದಸರಾ ಕ್ಕೆ ಆಯ್ಕೆ ಮಾಡಲಾಗಿತ್ತು.
ಇದರಲ್ಲಿ ಪಿರಿಯಾಪಟ್ಟಣದ ಒಂದು ಪ್ರಥಮ ದರ್ಜೆ ಕಾಲೇಜ್ ಆಯ್ಕೆಯಾಗಿದೆ.

ಸತತ ಮೂರನೇ ಬಾರಿ ಯುವ ದಸರಾ ಕ್ಕೇ ಪಿರಿಯಾಪಟ್ಟಣದ ಹೆಸರಾಂತ ಗ್ರೀನ್ ಕಿಡ್ಸ್ ಡಾನ್ಸ್ ಸ್ಕೂಲ್ ನೃತ್ಯ ಸಂಯೋಜನೆಯಲ್ಲಿ ಪಟ್ಟಣದ ಪ್ರಥಮ ದರ್ಜೆ ಕಾಲೇಜು ತಂಡ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ ಎಂದು ನೃತ್ಯ ಸಂಯೋಜಕ ಅಂಬಾರಿ ಪರಮೇಶ್ ಸಂತಸ ವ್ಯಕ್ತಪಡಿಸಿದ್ದಾರೆ.

ಆಯ್ಕೆಯಾಗಿರುವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

Continue Reading

Cultural

ರಂಜಿಸಲಿದೆ ಡೊಳ್ಳು ಕುಣಿತ, ಪೂಜಾ ಕುಣಿತ, ವಸ್ತು ಪ್ರದರ್ಶನ

Published

on

ಅ. 19 ಜಾನಪದ ದಸರಾ ವೈವಿಧ್ಯಕ್ಕೆ ಪೂರ್ಣ ತಯಾರಿ

ಜನಮಿತ್ರ ಮಡಿಕೇರಿ : ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕವು ಅದ್ಧೂರಿಯ ಜಾನಪದ ದಸರಾ ಮೆರವಣಿಗೆ ಮತ್ತು ಕಾರ್ಯಕ್ರಮವನ್ನು ರೂಪಿಸಿದ್ದು, ಮಡಿಕೇರಿ ನಗರ ದಸರಾ ಸಮಿತಿಯ ಸಹಕಾರದೊಂದಿಗೆ ಅ. 19 ರಂದು ವಿಶೇಷ ಕಾರ್ಯಕ್ರಮ ರೂಪಿಸಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ. ಅನಂತಶಯನ ತಿಳಿಸಿದ್ದಾರೆ.
ಅಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ರಸ್ತೆಯ ವಿಶ್ರಾಂತಿ ಗೃಹ ಆವರಣದಿಂದ ವರ್ಣರಂಜಿತ ಮೆರವಣಿಗೆ ಆರಂಭಗೊಳ್ಳಲಿದೆ. ರಾಮನಗರದ ಪ್ರತಿಷ್ಠಿತ ಡೊಳ್ಳುಕುಣಿತ, ಪೂಜಾ ಕುಣಿತ, ವೀರಗಾಸೆ, ತಮಟೆ, ಕೊಡಗಿನ ಮುತ್ತಪ್ಪ ಚಂಡೆ ವಾದ್ಯ ಇತ್ಯಾದಿ ಕಲಾ ತಂಡಗಳು ಭಾಗವಹಿಸಲಿವೆ.
ಶಾಸಕ ಡಾ. ಮಂತರ್‌ಗೌಡ, ಎಂ.ಎಲ್.ಸಿ. ಸುಜಾ ಕುಶಾಲಪ್ಪ, ದಸರಾ ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯ, ಕಾರ್ಯಾಧ್ಯಕ್ಷ ಪ್ರಕಾಶ್‌ಆಚಾರ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಜಿ ಅರುಣ್ ಶೆಟ್ಟಿ, ಜಿಲ್ಲಾಧಿಕಾರಿ ವೆಂಕಟ್‌ರಾಜ ಹಾಗೂ ಇತರರು ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಜಾನಪದ ದಸರಾ ಸಂಚಾಲಕ ಅನಿಲ್ ಎಚ್.ಟಿ. ತಿಳಿಸಿದ್ದಾರೆ.
ಈ ಸಂದರ್ಭ ಜಾನಪದ ಪರಿಷತ್ ನಡೆಸಿದ ವಿವಿಧ ಸ್ಪರ್ಧೆಗಳ ಬಹುಮಾನಗಳನ್ನೂ ವಿತರಿಸಲಾಗುವುದು.
ಪರಿಷತ್ ಏರ್ಪಡಿಸಿದ್ದ ಕೊಡಗಿನ ಕಲೆ, ಸಂಸ್ಕೃತಿ ಆಧಾರಿತ ಜಾನಪದ ಕಥೆ ಹೇಳುವ ಆನ್‌ಲೈನ್ ಸ್ಪರ್ಧೆಯಲ್ಲಿ ಕವಯತ್ರಿ ಭಾಗೀರಥಿ ಹುಲಿತಾಳ ಪ್ರಥಮ ಬಹುಮಾನ ಗಳಿಸಿದ್ದಾರೆ. ಸೋಮವಾರಪೇಟೆಯ ಬರಹಗಾರ್ತಿ ಶರ್ಮಿಳಾ ರಮೇಶ್ ದ್ವಿತೀಯ ಹಾಗೂ ಕಾನ್ವೆಂಟ್ ವಿದ್ಯಾರ್ಥಿನಿ ಅನಗ ತೃತೀಯ ಬಹುಮಾನ ಗಳಿಸಿದ್ದಾರೆ.
ಮೆರವಣಿಗೆ ಆಹ್ವಾನ: ಜಿಲ್ಲೆಯ ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳು, ಸ್ವಸÀಹಾಯ ಸಂಘಗಳ ಸದಸ್ಯರುಗಳು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸುವಂತೆ ಜಾನಪದ ಪರಿಷತ್ ಮನವಿ ಮಾಡಿದೆ.
ಬೊಂಬೆ ಮನೆಗೆ ಬಹುಮಾನ: ದಸರಾ ಪ್ರಯುಕ್ತ ಹಲವು ಮನೆಗಳಲ್ಲಿ ಬೊಂಬೆ ಪ್ರದರ್ಶನ ನಡೆಸುವ ಪದ್ಧತಿ ಇದ್ದು, ಈ ಸಾಲಿನಿಂದ ಉತ್ತಮ ಪ್ರದರ್ಶನ ಏರ್ಪಡಿಸುವವರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲು ಜಿಲ್ಲಾ ಜಾನಪದ ಪರಿಷತ್ ತೀರ್ಮಾನಿಸಿದೆ.
ಸಭಾ ಕಾರ್ಯಕ್ರಮದ ಬಳಿಕ ಜಿಲ್ಲೆಯ ಎಲ್ಲೆಡೆಯಿರುವ ಜಾನಪದ ಪರಿಷತ್ ಘಟಕಗಳ ವತಿಯಿಂದ ವೈವಿಧ್ಯ ಮಯ, ಜಾನಪದ ನೃತ್ಯ, ಸಂಗೀತ, ಹಾಡು ಕಾರ್ಯಕ್ರಮಗಳು ಜರುಗಲಿವೆ. ಬಳಿಕ ಸಂಜೆ ಆರು ಗಂಟೆಗೆ ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲೂ ಕಾರ್ಯಕ್ರಮಗಳು ನಡೆಯಲಿವೆ ಎಂದು ಬಿ.ಜಿ. ಅನಂತಶಯನ ತಿಳಿಸಿದ್ದಾರೆ.

Continue Reading

Cultural

ಅ.16 ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು

Published

on

ಮೊದಲ ದಿನ ಅಂತರರಾಷ್ಟ್ರೀಯ ಖ್ಯಾತಿಯ ಡ್ರಮ್ ದೇವ ಅವರಿಂದ ಇಂದು ವಾದ್ಯಸಂಗೀತ

ಜನಮಿತ್ರ ಮಡಿಕೇರಿ : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಇಂದಿನಿAದ (ಅ.16) ಪ್ರಾರಂಭವಾಗಲಿದೆ. ಆರಂಭಿಕ ದಿನವೇ ಸಂಗೀತ, ನೃತ್ಯ, ವಾದ್ಯಗಳ ಸಂಗಮದ ವೈವಿಧ್ಯತೆಗಳು ಮೂಡಿಬರಲಿದೆ.

ಸಂಜೆ 7 ಗಂಟೆಯಿAದ ನಗರದ ಗಾಂಧಿ ಮೈದಾನದಲ್ಲಿನ ಕಲಾಸಂಭ್ರಮ ವೇದಿಕೆಯಲ್ಲಿ ಪ್ರಥಮ ದಿನದ ಆಕರ್ಷಣೆಯಾಗಿ ಅಂತರರಾಷ್ಟ್ರೀಯ ಖ್ಯಾತಿಯ ಬೆಂಗಳೂರಿನ ಕಲಾವಿದ ಡ್ರಮ್ ದೇವಾ ಅವರ ತಂಡದಿAದ ವಾದ್ಯ ಮತ್ತು ಸಂಗೀತ ಕಾರ್ಯಕ್ರಮ ಇರುತ್ತದೆ. ವಿವಿಧ ಭಾಷೆಗಳ 600 ಕ್ಕೂ ಅಧಿಕ ಸಿನಿಮಾಗಳಲ್ಲಿ ವಾದ್ಯಸಂಗೀತಕಾರನಾಗಿ ಕಾರ್ಯನಿರ್ವಹಿಸಿರುವ ಡ್ರಮ್ ದೇವ ವಿದೇಶಗಳಲ್ಲಿಯೂ ಕಾರ್ಯಕ್ರಮ ನೀಡಿದ್ದಾರೆ. ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಮೊದಲ ದಿನ ದೇವಾ ಅವರೊಂದಿಗೆ ಎದೆ ತುಂಬಿ ಹಾಡಿದೆನು ಖ್ಯಾತಿಯ ಗಾಯಕ ಪುರುಷೋತ್ತಮ, ಸರಿಗಮಪ ಖ್ಯಾತಿಯ ಹಂಸಿನಿ, ದಿವ್ಯಾ ಯಾದವ್, ಮನುಯಾದವ್ ಸೇರಿದಂತೆ ಅನೇಕ ಗಾಯಕರು, ಖ್ಯಾತ ವಾದ್ಯ ಸಂಗೀತಕಾರರಿAದ ಕಾರ್ಯಕ್ರಮ ಆಯೋಜಿತವಾಗಿದೆ.

ವೀರಾಜಪೇಟೆಯ ನಾಟ್ಯಾಂಜಲಿ ನೃತ್ಯ ಸಂಸ್ಥೆಯಿAದ ನೃತ್ಯ ವೈವಿಧ್ಯ, ಮಡಿಕೇರಿಯ ಕಲಾಕಾವ್ಯ ನಾಟ್ಯಶಾಲಾ ವಿದ್ಯಾರ್ಥಿಗಳಿಂದ ನೃತ್ಯವೈವಿಧ್ಯ, ಮದೆನಾಡಿನ ಶ್ರೀ ಆದಿಚುಂಚನಗಿರಿ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಂದ ಶಿವಚರಿತಾಮೃತಂ ನೃತ್ಯ ರೂಪಕ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಮೊದಲ ದಿನದ ಆಕರ್ಷಣೆಯಾಗಿದೆ. ಇದರೊಂದಿಗೆ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳು ಮೊದಲ ದಿನ ಆಯೋಜಿತವಾಗಿದೆ ಎಂದು ದಸರಾ ನೃತ್ಯ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಜೆ 6 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜ್ ಕಲಾಸಂಭ್ರಮ ವೇದಿಕೆಯಲ್ಲಿ ದಸರಾ ನೃತ್ಯ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಮಡಿಕೇರಿ ದಸರಾ ಸಮಿತಿ ಅಧ್ಯಕ್ಷೆ, ನಗರ ದಸರಾ ಸಮಿತಿ ಅಧ್ಯಕ್ಷೆ ಅನಿತಾಪೂವಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂಥರ್ ಗೌಡ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ , ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾಕುಶಾಲಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.

ಇದೇ ಸಂದರ್ಭ ಮಡಿಕೇರಿ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆ ಬಳಿ ಖ್ಯಾತ ಮರಳು ಕಲಾವಿದೆ ಎಂ.ಎನ್. ಗೌರಿ ರಚಿಸಿರುವ ವನದೈವ ಮರಳು ಕಲಾಕೃತಿ ಮತ್ತು ಮಡಿಕೇರಿ ದಸರಾ ಫೋಟೋ ಪಾಯಿಂಟ್‌ನ್ನೂ ಗಣ್ಯರು ಉದ್ಘಾಟಿಸಲಿದ್ದಾರೆ.

Continue Reading

Trending