Mysore
ಕುಟುಂಬದ ಸದೃಢತೆಗೆ ಆರ್ಥಿಕ ಸ್ವಾವಲಂಬನೆ ಅಗತ್ಯ

ಗಾನವಿ ಫೌಂಡೇಷನ್ ಟೈಲರಿಂಗ್ ತರಬೇತಿ ಕಾರ್ಯಾಗಾರದ ಸಮಾರೋಪದಲ್ಲಿ ಅಡಿಷನಲ್ ಎಸ್ಪಿ ಡಾ.ಬಿ.ಎನ್.ನಂದಿನಿ
ಮೈಸೂರು : ಒಂದು ಕುಟುಂಬ ಸಮಾಜದಲ್ಲಿ ಸದೃಢವಾಗಿ ನಿಲ್ಲಲು ಮುಖವಾಗಿ ಆರ್ಥಿಕ ಸ್ವಾವಲಂಬನೆ ಮುಖ್ಯವಾಗಿದ್ದು, ಕುಟುಂಬಗಳು ಸದೃಢವಾದರೆ ದೇಶವೂ ಅಭಿವೃದ್ಧಿಯಾಗುತ್ತದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ.ಬಿ.ಎನ್.ನಂದಿನಿ ಹೇಳಿದರು.
ಜ್ಯೋತಿನಗರ ಪೊಲೀಸ್ ಕ್ವಾಟ್ರಸ್ ಬಳಿಯ ಪೊಲೀಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಭವನದಲ್ಲಿ ಮಂಗಳವಾರ ಸಂಜೆ ಗಾನವಿ ಫೌಂಡೇಷನ್ ಸಹಯೋಗದೊಂದಿಗೆ ಪೊಲೀಸ್ ಸಿಬ್ಬಂದಿಗಳ ಕುಟುಂಬದವರಿಗೆ ಏರ್ಪಡಿಸಿದ್ದ ಉಚಿತ ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿದ್ದರೂ ನಾವಿಂದು ಮಹಿಳೆಯರ ಆರ್ಥಿಕ ಸ್ವಾವಲಂಬನೆ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಮಹಿಳೆಗೆ ಧೈರ್ಯ, ವಿಶ್ವಾಸ, ಭರವಸೆ ತುಂಬುವ ಕೆಲಸವಾಗಬೇಕಿದೆ. ಇದರಿಂದ ಮಹಿಳೆ ಮತ್ತಷ್ಟು ಚೇತರಿಕೆ ಕಾಣಬಹುದು. ಈ ನಿಟ್ಟಿನಲ್ಲಿ ಇಂತಹ ತರಬೇತಿಗಳು ಅಗತ್ಯವಾಗಿದ್ದು, ಮಹಿಳೆಯರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಸ್ತುತ ದೇಶದಲ್ಲಿ ಸೈಬರ್ ಕ್ರೈಂ ಹೆಚ್ಚಾಗುತ್ತಿದೆ. ಮೊಬೈಲ್ಗಳಲ್ಲಿ ಬರುವ ಯಾವುದೇ ಅವಿಶ್ವಾಸನೀಯ ಆಪ್ಗಳನ್ನು ಡೌನ್ ಲೋಡ್ ಮಾಡಬಾರದು. ಅಥವಾ ಅಪರಿಚಿತ ವ್ಯಕ್ತಿಗಳಿಗೆ ತಮ್ಮ ವೈಯುಕ್ತಿಕ ವಿವರಗಳನ್ನು ನೀಡಬಾರದು. ವಿಶೇಷವಾಗಿ ನೀವು ಮನೆಗೆ ಬೀಗ ಹಾಕಿ ಎಲ್ಲೆ ಹೋದರೂ ಸ್ಟೇಟಸ್ ಹಾಕಬೇಡಿ. ನಿಮ್ಮ ಸ್ಟೇಟಸ್ ನೋಡಿಕೊಂಡು ಕಳ್ಳರು ನಿಮ್ಮ ಮನೆ ನುಗ್ಗಬಹುದು ಎಂಬ ಎಚ್ಚರಿಕೆಯನ್ನೂ ಸಹ ಅವರು ನೀಡಿದರು.
ಗಾನವಿ ಫೌಂಡೇಷನ್ ಅತ್ಯಂತ ತಾಳ್ಮೆ ಮತ್ತು ಶ್ರದ್ಧೆಯಿಂದ ಪೊಲೀಸ್ ಸಿಬ್ಬಂದಿಗಳ ಕುಟುಂಬದವರಿಗೆ ಸುಮಾರು ೧೦ ದಿನಗಳ ಕಾಲ ತರಬೇತಿ ನೀಡಿದೆ. ಇಷ್ಟೊಂದು ಕಡಿಮೆ ಅವಧಿಯಲ್ಲಿ ಮಹಿಳೆಯರು ಹೊಲಿಗೆ ಕಲಿತಿರುವುದು ಅತ್ಯಂತ ಸಂತೋಷಕರ ವಿಷಯ ಇದರ ಸಂಪೂರ್ಣ ಶ್ರೇಯಸ್ಸು ಗಾನವಿ ಫೌಂಡೇಷನ್ ಅವರ ಸಿಬ್ಬಂದಿಗಳಿಗೆ ಸಲ್ಲುತ್ತದೆ ಎಂದರು.
ಇದೇ ಸಂದರ್ಭದಲ್ಲಿ ತರಬೇತಿ ಕುರಿತು ರಾಣಿ ಕಿಶೋರ್, ಶೋಭಾ ಧನಂಜಯ್ಯ, ದೀಪಾ ಕಿರಣ್, ಆರ್.ಪಾರ್ವತಿ ಮಾತನಾಡಿ, ಸಿಬ್ಬಂದಿಗಳ ಮಕ್ಕಳಿಗೆ ಕಂಪ್ಯೂಟರ್ ಮತ್ತು ಡ್ರೈವಿಂಗ್ ತರಬೇತಿ ಕೊಡಿಸುವಂತೆ ಮನವಿ ಮಾಡಿದರು.
ಸಮಾರಂಭದಲ್ಲಿ ತರಬೇತಿ ಪಡೆದ ಸುಮಾರು ೨೪೩ ಮಹಿಳೆಯರಿಗೆ ಪ್ರಮಾಣ ಪತ್ರವನ್ನು ವೇದಿಕೆಯಲ್ಲಿದ್ದ ಗಣ್ಯರು ವಿತರಿಸಿದರು. ಗಾನವಿ ಫೌಂಡೇಷನ್ ಮುಖ್ಯಸ್ಥರಾದ ರಾಮೇಗೌಡ ಹಾಗೂ ಅಶ್ವಿನಿಯವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.
ಉಪ ಪೊಲೀಸ್ ಆಯುಕ್ತರಾದ ಎ.ಮಾರುತಿ (ಸಿಎಆರ್) ಎ.ಜಿ.ಅಶೋಕ್ ಕುಮಾರ್( ಸಿಎಆರ್), ಅಶ್ವದಳದ ಕಮಾಂಡೆಂಟ್ ಶೈಲೇಂದ್ರ, ಸಿಎಆರ್ ಆರ್ಪಿಐ ಕೆ.ಎಂ.ಮೂರ್ತಿ, ಗಾನವಿ ಫೌಂಡೇಷನ್ ಮುಖ್ಯಸ್ಥರಾದ ರಾಮೇಗೌಡ, ಅಶ್ವಿನಿ ರಾಮೇಗೌಡ ಮುಂತಾದವರು ವೇದಿಕೆಯಲ್ಲಿದ್ದರು.
ಕೋಟ್
ತರಬೇತಿಗೆ ಸೇರಿದಾಗ ನನಗೆ ಹೊಲಿಗೆ ಯಂತ್ರದ ಪೆಡಲ್ ತುಳಿಯಲು ಬರುತ್ತಿರಲಿಲ್ಲ. ೧೦ ದಿನಗಳಲ್ಲಿ ಮಕ್ಕಳ ಫ್ರಾಕ್ ಹೊಲಿಯುವಷ್ಟರ ಮಟ್ಟಿಗೆ ಪ್ರಾವೀಣ್ಯತೆ ಪಡೆದಿದ್ದೇನೆ. ಇದಕ್ಕೆ ಗಾನವಿ ಫೌಂಡೇಷನ್ ತರಬೇತುದಾರರ ತಾಳ್ಮೆ, ಕಾರ್ಯಕ್ಷಮತೆ, ದಕ್ಷತೆ ಕಾರಣವಾಗಿದೆ.ಇದನ್ನು ಮತ್ತಷ್ಟು ತರಬೇತಿ ಪಡೆದು ಟೈಲರಿಂಗ್ ನನ್ನ ವೃತ್ತಿಯಾಗಿ ಮಾಡಿಕೊಳ್ಳುವ ವಿಶ್ವಾಸ ಹೊಂದಿದ್ದೇನೆ.
ರಾಣಿ ಕಿಶೋರ್, ತರಬೇತಿ ಪಡೆದ ಮಹಿಳೆ
Mysore
ನಂಜನಗೂಡಿನಲ್ಲಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಚಿಕ್ಕ ಜಾತ್ರಾ ಮಹೋತ್ಸವ ವಿಜೃಂಭಣೆ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ
ಚಿಕ್ಕ ಜಾತ್ರೆ ಮಹೋತ್ಸವ ಮಂಗಳವಾರ ವೈಭವಯುತವಾಗಿ ನೆರವೇರಿತು.
ಬೆಳಿಗ್ಗೆ 10.45 ರಂದು ಸಲ್ಲುವ ಶುಭ ಮಕರ ಲಗ್ನದಲ್ಲಿ ದೇಗುಲದ ಪ್ರಧಾನ ಆಗಮಿಕ ಜೆ. ನಾಗ ಚಂದ್ರ ದೀಕ್ಷಿತ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕೈಂಕಯ೯ ನೆರವೇರಿಸಿ ರಥಗಳಿಗೆ ಪೂಜೆ ಸಲ್ಲಿಸಿದರು.
ಪೂಜೆ ಸಲ್ಲಿಸಿದ ಬಳಿಕ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಉತ್ಸವ ರಥಕ್ಕೆ ಚಾಲನೆ ನೀಡಿ ತೇರನ್ನು ಎಳೆದರು.
ಹೂವಿನ ಹಾರ ಅಲಂಕೃತಗೊಂಡ ರಥೋತ್ಸವ ನಂಜುಂಡೇಶ್ವರ ಸ್ವಾಮಿಯ ಹಾಗೂ ಪಾರ್ವತಿ ದೇವಿ ಸಮೇತ ಉತ್ಸವ ಮೂರ್ತಿ, ಗಣಪತಿ ಚಂಡಿಕೇಶ್ವರ, ಸೇರಿದಂತೆ ಮೂರು ರಥಗಳು ರಥ ಬೀದಿಯಲ್ಲಿ
ರಥಗಳನ್ನು ಸಾವಿರಾರು ಭಕ್ತಾದಿಗಳು ಹಗ್ಗ ಹಿಡಿದು ಜೈ ನಂಜುಂಡೇಶ್ವರ, ಜೈ ಶ್ರೀಕಂಠೇಶ್ವರ, ಜೈ ನಂಜುಂಡ, ಎಂಬ ಘೋಷಣೆಗಳನ್ನು ಕೂಗುತ್ತಾ ಎಳೆದರು.
ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ರಥಕ್ಕೆ ಹಣ್ಣು ದವನ ಎಸೆದು ಪುನೀತರಾದರು.
ರಥ ಬೀದಿಗಳಲ್ಲಿ ನಿಧಾನವಾಗಿ ಚಲಿಸಿ ಭಕ್ತಾದಿಗಳು ಭಕ್ತಿಯಿಂದ ನಮಿಸಿದರು.
ಪೋಲಿಸ್ ಇಲಾಖೆಯಿಂದ ಬಿಗಿ ಬಂದೋಬಸ್ತು ಇರುವುದರಿಂದ ರಥದಲ್ಲಿ ಯಾವುದೇ ಅಡೆ-ತಡೆಗಳಿಲ್ಲದೆ ಮೂರು ರಥಗಳು 12.50 ಗಂಟೆಗೆ ಸ್ವಸ್ಧಾನಕ್ಕೆ ಸೇರಿದವು.
ಜಾತ್ರಾಯಲ್ಲಿ: ಶಾಸಕರಾದ ದರ್ಶನ್ ಧ್ರುವನಾರಾಯಣ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್, ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಕಾರ್ಯನಿವ೯ಹಣಾಧಿಕಾರಿ ಎಂ. ಜಗದೀಶ್ ಕುಮಾರ್, ಪೌರಾಯುಕ್ತಧಿಕಾರಿ ನಂಜುಂಡಸ್ವಾಮಿ, ಡಿಎಸ್ಪಿ ಗೋವಿಂದ್ ರಾಜ್, ಇದ್ದರು.
Mysore
ಗೃಹಲಕ್ಷ್ಮಿ : 1,18,000 ರೂಪಾಯಿ ಹಣ ನಾಡದೇವತೆ ತಾಯಿ ಚಾಮುಂಡೇಶ್ವ ದೇಗುಲಕ್ಕೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್.

ಮೈಸೂರು : ರಾಜ್ಯದ ಮಹತ್ವದ ಯೋಜನೆ ಗೃಹಲಕ್ಷ್ಮಿ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಯೋಜನೆ ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆಯಾಗಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್ಗೆ ಪತ್ರ ಬರೆದಿದ್ದರು.ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಪತ್ರಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಸೂಚಿಸಿದ್ದ ಡಿ ಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದರು. ಇದೀಗ ಪ್ರತಿ ತಿಂಗಳು ಯೋಜನೆಯ ಹಣ ನಾಡದೇವತೆಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದ್ದು, ಅದರಂತೆ 59 ತಿಂಗಳ ಹಣವನ್ನು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಅರ್ಪಣೆ ಮಾಡಲಾಗಿದೆ.
ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಹಣ ಸಂದಾಯವಾಗಿದೆ.1,18,000 ರೂಪಾಯಿ ಹಣ ದೇಗುಲಕ್ಕೆ ನೀಡಿಕೆಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಹಣ ಸಂದಾಯ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯ ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್.
Mysore
ಪತ್ರಕರ್ತ ಪುನೀತ್ ಗೆ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿ

ಪಿರಿಯಾಪಟ್ಟಣ: ತಾಲೂಕಿನ ಚಪ್ಪರದಹಳ್ಳಿ ಗ್ರಾಮದ ಜನಮಿತ್ರ ವರದಿಗಾರ ಪತ್ರಕರ್ತ ಸಿ.ಜಿ ಪುನೀತ್ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ಪ್ರತಿ ವರ್ಷ ಸಾಧಕರನ್ನು ಗುರುತಿಸಿ ನೀಡಲಾಗುವ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿಗೆ ಪ್ರಸ್ತಕ ಸಾಲಿನಲ್ಲಿ ಮಾಧ್ಯಮ ಕ್ಷೇತ್ರದ ಸೇವೆಗೆ ಸಿ.ಜಿ ಪುನೀತ್ ಆಯ್ಕೆಯಾಗಿದ್ದು, ನ.29ರ ಬುಧವಾರ ಮೈಸೂರಿನ ಕಲಾಮಂದಿರದಲ್ಲಿ ನಡೆಯಲಿರುವ ಕನ್ನಡಾಂಬೆ ಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ರಾಜಶೇಖರ್ ಪ್ರಕಟಣೆಯಲ್ಲಿ ಹೇಳಿದ್ದಾರೆ.
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime2 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan2 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan6 days ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore1 month ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Crime1 month ago
ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ಗೆ ನುಗ್ಗಿ ಯುವಕನ ಮಚ್ಚಿನಿಂದ ಹಲ್ಲೆ
-
State1 month ago
ರೇಷನ್ ಕಾರ್ಡ್ ತಿದ್ದುಪಡಿಗೆ ಅವಧಿ ವಿಸ್ತರಸಿದ ಸರಕಾರ