Connect with us

Mysore

ದಸರಾ ಗೊಂಬೆ ಕೂರಿಸುವ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿದ ತಾರಾದಂಪತಿ ವಸಿಷ್ಟ ಸಿಂಹ, ಹರಿಪ್ರಿಯ

Published

on

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ರ ಅಂಗವಾಗಿ ಕೆ.ಎಂ.ಪ್ರವೀಣ್ ಕುಮಾರ್ ಚಾರಿಟಬಲ್ ಟ್ರಸ್ಟ್ ಹಾಗೂ ಸ್ಪಿರಿಟ್ ಇವೆಂಟ್ಸ್ ವತಿಯಿಂದ ಮನೆ ಮನೆಗಳಲ್ಲಿ ದಸರಾ ಗೊಂಬೆ ಕೂರಿಸುವ ಸ್ಪರ್ಧೆಯ ಪ್ರಚಾರ ಸಾಮಗ್ರಿಯನ್ನು ತಾರಾದಂಪತಿ ವಸಿಷ್ಟ ಸಿಂಹ ಮತ್ತು ಹರಿಪ್ರಿಯಾ ಬಿಡುಗಡೆಗೊಳಿಸಿದರು.

ನಗರದ ಮಾನಸಗಂಗೋತ್ರಿಯ ಅತಿಥಿ ಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೋಸ್ಟರ್ ಬಿಡುಗಡೆಗೊಳಿಸಿ ಸ್ಪರ್ಧೆಗೆ ಶುಭ ಹಾರೈಸಿದರು.

ಬಳಿಕ ನಟ ವಸಿಷ್ಟ ಸಿಂಹ ಮಾತನಾಡಿ, ನವರಾತ್ರಿಯು ಮೈಸೂರು ಪರಂಪರೆಯಲ್ಲಿ ಅತ್ಯಂತ ಪವಿತ್ರವಾದದ್ದು ದಸರಾ ಗೊಂಬೆ ಪ್ರದರ್ಶನಕ್ಕೆ ಅತ್ಯಂತ ಮಹತ್ವವಿದೆ .ಪಟ್ಟದ ಗೊಂಬೆಗಳನ್ನು ಲಕ್ಷ್ಮಿನಾರಾಯಣ ಸ್ವರೂಪದಲ್ಲಿ ಪೂಜಿಸಿ ಪುರಾಣ ಪುಣ್ಯಕಥೆಗಳನ್ನು ಗೊಂಬೆಗಳ ಮೂಲಕ ರೂಪಕವಾಗಿ ಪ್ರಚುರಪಡಿಸಿ ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದೇ ಇದರ ಮೂಲ ಉದ್ದೇಶ. ಮೈಸೂರಿನ ಮನೆಮನೆಗಳಲ್ಲಿ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಎಂದರು.

ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ನಮ್ಮ ಸಂಸ್ಕಾರ ಸಂಸ್ಕೃತಿ ಹಾಗೂ ನಮ್ಮ ಮೈಸೂರಿನ ಹಿರಿಮೆ ಹೆಚ್ಚಿಸುತ್ತದೆ ಎಂದು ಶುಭ ಹಾರೈಸಿದರು.

ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಮಾತನಾಡಿ, ದಸರಾ ಗೊಂಬೆ ಸ್ಪರ್ಧೆಯಲ್ಲಿ 200 ರೂ ಪ್ರವೇಶ ಇದ್ದು,
ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡಂತೆ ಗೊಂಬೆಗಳನ್ನು ಕೂರಿಸಿ ದವರಿಗೆ ಮೊದಲನೇ ಬಹುಮಾನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲೇ 2000 ರೂ. ಎರಡನೇ ಬಹುಮಾನ 1000 ರೂ. ಮೂರನೇ 500ರೂ.ನಗದು
ಪಾರಿತೋಷಕ ಹಾಗೂ ಪ್ರಮಾಣಪತ್ರನೀಡಲಾಗುವುದು , ಹಾಗೂ 10 ಸ್ಪರ್ಧಿ ವಿಜೇತರಿಗೆ ಬಹುಮಾನ ಸಹಾಯ ಇರಲಿದೆ. ಸ್ಪರ್ಧೆಯಲ್ಲಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು. ಅ.25ರೊಳಗೆ 9880752727 ಸಂಖ್ಯೆಗೆ ವಾಟ್ಸ್ ಆ್ಯಪ್ ಮೂಲಕ ಗೊಂಬೆ ಜೋಡಣೆ ಮಾಡಿರುವ ಚಿತ್ರ ಹಾಗೂ 3ನಿಮಿಷದ ವೀಡಿಯೊವನ್ನು ಕಲಿಸಿಕೊಡಬೇಕು ಆನಂತರ ನುರಿತ ತೀರ್ಪುಗಾರರು ಅವರ ನಿವಾಸಕ್ಕೆ ತೆರಳಿ ವೀಕ್ಷಿಸಿ ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡ ಅದ್ಭುತವಾಗಿ ಗೊಂಬೆ ಜೋಡಣೆ ಮಾಡಿದಂತಹ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ

ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಅಜಯ್ ಶಾಸ್ತ್ರಿ, ಕಾರ್ತಿಕ್, ದರ್ಶನ್, ಮುರುಳಿ, ವರುಣಮಹದೇವ್, ಮಂಜು, ಹಾಗೂ ಇನ್ನಿತರರು ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mysore

ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಜಿಯೋ ಪ್ಯಾಕ್ ಕಾಖಾ೯ನೆಯಲ್ಲಿ ತಲೆಗೆ ಮೆಷಿನ್ ಹೊಡೆದು ಯುವ ಕಾರ್ಮಿಕ ಸಾವು

Published

on

ತಲೆಗೆ ಮೆಷಿನ್ ಹೊಡೆದು ಯುವ ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕೃಷಿ ಜಿಯೋ ಪ್ಯಾಕ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ನಡೆದಿದೆ.
24 ವರ್ಷದ ಆಶೀಸ್ ಸುಖದಾಸ್ ಪಾಟ್ಲೆ ಮೃತ ಯುವ ಕಾರ್ಮಿಕನಾಗಿದ್ದಾನೆ.
ಮಹಾರಾಷ್ಟ್ರ ಮೂಲದ ಯುವಕನಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.


ಇಂದು ಮೆಷಿನ್ ಗೆ ದಾರವನ್ನು ಹಾಕುತ್ತಿದ್ದ ವೇಳೆ ಕಾರ್ಮಿಕನ ತಲೆ ಮೆಷಿನ್ ಗೆ ತಾಕಿದೆ. ತಲೆಗೆ ಮೆಷಿನ್ ಹೊಡೆದ ಪರಿಣಾಮ ತಲೆಗೆ ತೀವ್ರವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಕಾರ್ಮಿಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Mysore

ನಂಜನಗೂಡು ಹೆದ್ದಾರಿ ರಸ್ತೆ ಮಲ್ಲನ ಮೂಲೆ ಮಠ ಬಳಿ ಬೈಕ್ ಗೆ ಲಾರಿ ಡಿಕ್ಕಿ – ಬೈಕ್ ಸವಾರ ಸಾವು

Published

on

ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು-ಮೈಸೂರು ರಸ್ತೆಯ ತಾಲ್ಲೂಕಿನ ಮಲ್ಲನ ಮೂಲೆ ಮಠದ ಬಳಿ ನಡೆದಿದೆ.
ನಂಜನಗೂಡಿನ ಚಾಮಲಾಪುರದ ಹುಂಡಿ ಬಡಾವಣೆಯ ನಿವಾಸಿ 61 ವರ್ಷದ ಶಂಕರ್ ಮೃತ ದುರ್ಧೈವಿಯಾಗಿದ್ದಾನೆ. ಬೈಕ್ ನಲ್ಲಿ ಹೋಗುತ್ತಿದ್ದಾಗ ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಇಂದಿನಿಂದ ಬಂದ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕೆಳಗಡೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಗಾಯಗೊಂಡ ವ್ಯಕ್ತಿಯನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜು ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಜಯಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Mysore

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವಲಯ ಮಟ್ಟದ ಸಾಧನ ಸಮಾವೇಶ

Published

on

ಸಾಲಿಗ್ರಾಮ  ತಾಲೂಕಿನ ಕರ್ಪೂರವಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಸಾಲಿಗ್ರಾಮ ವಲಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಸಾಲಿಗ್ರಾಮ ವಲಯ ಮಟ್ಟದ ಸಾಧನ ಸಮಾವೇಶವನ್ನು ನಡೆಸಲಾಯಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕರ್ಪೂರವಳ್ಳಿಯ ಜಂಗಮ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿರವರು ವಹಿಸಿ ಸಮಾವೇಶಕ್ಕೆ ಚಾಲನೆ ನೀಡಿದರು.

ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟಿನ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಕೆ.ಮದುಚಂದ್ರ ಯೋಜನೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ  ತಾಲೂಕಿನ ಕರ್ತಾಳು ಗ್ರಾಮದ ಹಾಲಿನ ಡೇರಿ ಕಟ್ಟಡ ನಿರ್ಮಾಣಕ್ಕೆ ಒಂದುವರೆ ಲಕ್ಷ ರೂ ಮಂಜೂರಾತಿ ಆದೇಶ ಪತ್ರ, ಕರ್ಪೂರವಳ್ಳಿ ಜಂಗಮ ಮಠದ ಶಾಲೆಗೆ 10 ಬೆಂಚು ಡೆಸ್ಕ್ ಗಳ ಮಂಜೂರಾತಿ ಪತ್ರ, ಕರ್ಪೂರವಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರಿಗೆ ಮಾಶಾಸನ ಮಂಜುರಾತಿ ಪತ್ರ, ಜನ ಮಂಗಳ  ಕಾರ್ಯಕ್ರಮದಲ್ಲಿ ಸಣ್ಣಮ್ಮ ಎಂಬುವರಿಗೆ ವಾಟರ್ ಬೆಡ್ ಮಂಜುರಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಸ್ವಾಮಿ, ಪಿಡಿಓ ಕುಳ್ಳೇಗೌಡ, ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ಬಿ.ಶೇಖರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ವಲಯ ಮೇಲ್ವಿಚಾರಕ  ಧರಣಪ್ಪಗೌಡ, ಕರ್ಪೂರವಳ್ಳಿ  ಸೇವಾ ಪ್ರತಿನಿಧಿ ಉಮೇಶ್, ಸೇವಾ ಪ್ರತಿನಿಧಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು ಸೇರಿದಂತೆ ಹಲವರು ಸಾಧನ ಸಮಾವೇಶದಲ್ಲಿ ಪಾಲ್ಗೊಂಡಿದ್ದರು

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ   

Continue Reading

Trending