Uncategorized
ನಾಗೇಶ್ ಆತ್ಮಹತ್ಯೆ ಪ್ರಕರಣ: ಪೊಲೀಸ್ ಪೇದೆ ಸಿದ್ದೇಶ್ ಅರೆಸ್ಟ್
ಚಿಕ್ಕಮಗಳೂರು: ಆಗಸ್ಟ್. 13 ರಂದು ನಡೆದ ಸಂಸೆ ಯುವಕ ನಾಗೇಶ್ ಆತ್ಮಹತ್ಯೆಗೆ ಘಟನೆಗೆ ಸಂಬಂಧಿಸಿದಂತೆ ಕುದುರೆಮುಖ ಪೊಲೀಸ್ ಠಾಣೆಯ ಪೇದೆ ಸಿದ್ದೇಶ್ ನನ್ನು ಅರೆಸ್ಟ್ ಮಾಡಲಾಗಿದೆ.

ಕುದುರೆಮುಖ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಕುದುರೆಮುಖ ಪೊಲೀಸ್ ಠಾಣೆಯ ಪೇದೆ ಸಿದ್ದೇಶ್ ನನ್ನು ಚಿಕ್ಕಮಗಳೂರು ಎಸ್ ಪಿ ರವರು ನೇಮಿಸಿದ್ದ ವಿಶೇಷ ತಂಡ ಗೋವಾದಲ್ಲಿ ಅರೆಸ್ಟ್ ಮಾಡಿದೆ ಎನ್ನಲಾಗಿದೆ.
Uncategorized
ನಿಮ್ಮ ಚೇಲಾಗಳಿಗೆ ಹೆದರಲ್ಲ’: ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಖಡಕ್ ಎಚ್ಚರಿಕೆ
Uncategorized
ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನೆ
ವಿರಾಜಪೇಟೆ : ವಿರಾಜಪೇಟೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನ ಸಮಾರಂಭವು ಕಾಲೇಜಿನಲ್ಲಿ ನಡೆಯಿತು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಕ್ಯಾಪ್ಟನ್ ಬಾಚುರ ಸಿ. ಸೊಮ್ಮಣ್ಣ ದೀಪ ಬೆಳಗಿಸುವುದ ಮೂಲಕ ಉದ್ಘಾಟಿಸಿದರು.
ನಂತರ ಅವರು ವಿದ್ಯಾರ್ಥಿಗಳು ಸಮಾಜ ಸೇವೆಯ ಮನೋಭಾವವನ್ನು ಬೆಳೆಸುತ್ತದೆ. ನಾಯಕತ್ವದ ಗುಣಗಳನ್ನು ವೃದ್ಧಿಸುತ್ತದೆ. ಶಿಸ್ತು, ಸಮಯಪಾಲನೆ ಮತ್ತು ಜವಾಬ್ದಾರಿಯನ್ನು ಕಲಿಸುತ್ತದೆ. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ, ಸಮಯ ಪರಿಪಾಲನೆಯನ್ನು ರೂಢಿಸಿಕೊಂಡು ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು, ಸಾಮಾಜಿಕ ಜಾಲತಾಣ, ಕಾನೂನುಬಾಹಿರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಬಲಿಯಾಗದೆ ಉತ್ತಮ ಜೀವನವನ್ನು ನಡೆಸಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನ ಹೇಳಿದರು .

ದೇಶ ನಮಗೆ ಎಲ್ಲವನ್ನೂ ನೀಡಿದೆ. ಆದ್ದರಿಂದ ದೇಶಕ್ಕೆ ಸೇವೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ದೇಶ ಸೇವೆ ಎಂದರೆ ಕೇವಲ ಸೈನ್ಯಕ್ಕೆ ಸೇರುವುದು ಮಾತ್ರವಲ್ಲ; ಕಾನೂನು ಪಾಲಿಸುವುದು,ಸಮಾಜದ ಒಳಿತಿಗಾಗಿ ದುಡಿಯುವುದು, ಹಾಗೂ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುವುದೂ ದೇಶ ಸೇವೆಯೇ. ಯುವಜನರು ದೇಶಪ್ರೇಮ, ಶಿಸ್ತು ಮತ್ತು ಸೇವಾ ಮನೋಭಾವ ವನ್ನು ಮೈಗೂಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ನುಡಿದರು.
ಸಮಾರೋಪ ಸಮಾರಂಭದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ.ಕೆ ಪದ್ಮ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವವನ್ನು ನೀಡಬೇಕು. ಸಮಾಜದ ಹಿತಕ್ಕಾಗಿ ನಿಸ್ವಾರ್ಥವಾಗಿ ಸೇವೆ ಮಾಡುವ ಕಾರ್ಯ ಮಾಡಬೇಕು. ಸಮಾಜದ ಹಿತವನ್ನು ಸ್ವಹಿತಕ್ಕಿಂತ ಮೇಲುಗೈಯಲ್ಲಿ ಇಡುವ ಮನೋಭಾವವನ್ನು ಬೆಳೆಸುತ್ತದೆಂದು ಹೇಳಿದರು.

ಕುಮಾರಿ ವೀಕ್ಷಿತಾ ಮತ್ತು ತಂಡ ಪ್ರಾರ್ಥಿಸಿದರು. ಉದ್ಘಾಟನಾ ಸಮಾರಂಭದಲ್ಲಿ ನೆರದಿದ್ದ ಸರ್ವರನ್ನು ಆಂಗ್ಲ ಉಪನ್ಯಾಸಕಿ ಎಂ.ಪಿ. ಡೈನ ಸೋಮಯ್ಯ ಸ್ವಾಗತಿಸಿ, ರಾಷ್ಟೀಯ ಸೇವಾ ಯೋಜನ ಘಟಕದ ಕಾರ್ಯಕ್ರಮಾಧಿಕಾರಿ ಅನುಪಮ ತಿಮ್ಮಯ್ಯ ಸರ್ವರನ್ನು ವಂದಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿಗಳಾದ ಕುಮಾರಿ ವೀಣಾ ಮತ್ತು ಕುಮಾರಿ ರಕ್ಷಿತಾ ನೆರವೇರಿಸಿದರು.
ಸ್ವಯಂ ಸೇವಕರಿಂದ ರಾಷ್ಟ್ರೀಯ ಸೇವಾ ಯೋಜನೆಯ ಗೀತೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಗುರಿ ಮತ್ತು ಉದ್ದೇಶಗಳನ್ನು ತಿಳಿಸಿಕೊಟ್ಟರು.

ಉದ್ಘಾಟನಾ ಸಮಾರಂಭದಲ್ಲಿ ಅನುಪಮ ಕಿಶೋರ್ ವಕೀಲರು, ವಿರಾಜಪೇಟೆ , ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಕೆ. ಪಿ. ಗಾಯತ್ರಿ, ಕೆ. ಪಿ ಬೋಪಣ್ ಶ್ರೀಮತಿ ಪಮಿತಾ, ಉಪನ್ಯಾಸಕ ವೃಂದದವರು, ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Uncategorized
ಸಿದ್ದಾಪುರದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನ ಆಚರಣೆ
ಸಿದ್ದಾಪುರ: ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧದ ಅಂತರಾಷ್ಟ್ರೀಯ ದಿನದ ಅಂಗವಾಗಿ ಸಿದ್ದಾಪುರದಲ್ಲಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಸಿದ್ದಾಪುರ ಪೊಲೀಸ್ ಠಾಣೆ, ಇಕ್ರಾ ಪಬ್ಲಿಕ್ ಶಾಲೆ ಹಾಗೂ ಸಂತ ಅನ್ನಮ್ಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ “ನಶಾ ಮುಕ್ತ ಭಾರತ” ಘೋಷವಾಕ್ಯದಡಿ ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು.

ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದ ಜಾಗೃತಿ ಅಭಿಯಾನದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿ, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯ, ಸಾಮಾಜಿಕ ಮತ್ತು ಕಾನೂನು ಸಂಬಂಧಿತ ಸಮಸ್ಯೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುವ ಮೂಲಕ ಮಾದಕ ವಸ್ತುಗಳ ವಿರುದ್ಧ ಹೋರಾಡುವ ಸಂದೇಶ ಸಾರಿದರು.
ಈ ಸಂದರ್ಭದಲ್ಲಿ ಯುವಜನರು ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳು ಕರೆ ನೀಡಿದರು. ಸಮಾಜದ ಪ್ರತಿಯೊಬ್ಬರೂ ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟಲು ಕೈಜೋಡಿಸುವ ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು, ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು
-
Hassan15 hours agoಅರಸೀಕೆರೆ ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ತೆರವು ಕಾರ್ಯ ಬೇಡ: ಶಾಸಕ ಕೆ.ಎಂ. ಶಿವಲಿಂಗೇಗೌಡ
-
Kodagu9 hours agoಕಾವೇರಿ ತವರಲ್ಲಿ ಜಾನಕಮ್ಮ ನೆನಪು
-
State11 hours agoಗಾನ ನಿಲ್ಲಿಸಿದ ಕೋಗಿಲೆ:
-
State13 hours agoಅಪರಾಧ ತನಿಖಾ ವ್ಯವಸ್ಥೆಗೆ ಆಧುನಿಕತೆಯ ಸ್ಪರ್ಶ – 32 ಮೊಬೈಲ್ ಫೊರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಗಳಿಗೆ ಚಾಲನೆ
-
Chikmagalur3 hours agoಸಂತ ಸಿಸಿಲಿಯಾ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ
-
Chamarajanagar3 hours agoಎಸ್. ಜಾನಕಿ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ
-
State15 hours agoಬಿಎಸ್ಎನ್ಎಲ್ನಿಂದ ಸ್ಯಾಟಲೈಟ್ ಫೋನ್ ಸೇವೆ ಆರಂಭ: ಬೆಲೆ, ವೈಶಿಷ್ಟ್ಯಗಳು, ಯಾರು ಖರೀದಿಸಬಹುದು?
-
Chikmagalur12 hours agoಐಸಿಎಸ್ಇ ವಲಯ ಮಟ್ಟದ ಕ್ರೀಡಾಕೂಟ: ನಜರೆತ್ ಶಾಲೆಗೆ ಮೂರು ವಿಭಾಗಗಳಲ್ಲಿ ದ್ವಿತೀಯ ಸ್ಥಾನ

