Connect with us

Mandya

ನಾಲೆಗಳಿಗೆ ನೀರು ಹರಿಸಲು ರೈತ ಸಂಘ(ಮೂಲ ಸಂಘಟನೆ) ಆಗ್ರಹ

Published

on

ಮಂಡ್ಯ: ಜನಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಕೆಆರ್‌ಎಸ್‌ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ಸರ್ಕಾರ ಕ್ರಮ ವಹಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ(ಮೂಲ ಸಂಘಟನೆ) ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್ ಆಗ್ರಹಿಸಿದರು.

ಮುಂಗಾರು ಮಳೆಯ ಕೊರತೆ, ತಮಿಳುನಾಡಿಗೆ ಕಾವೇರಿ ನೀರಿನ ನಿರಂತರ ಹರಿಯುವಿಕೆ, ನಾಲೆಗಳ ಅಸಮರ್ಪಕ ನಿರ್ವಹಣೆಯಿಂದ ಭೀಕರ ಬರದ ಛಾಯೆಯ ಪರಿಸ್ಥಿತಿಯಲ್ಲಿ ರೈತರ ಸಂಕಷ್ಟವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಒತ್ತಾಯಿಸಿದರು.

ಸ್ತುತ ಬೆಳೆದು ನಿಂತಿರುವ ಬೆಳೆ ಮತ್ತು ಜನ ಜಾನುವಾರುಗಳ ಉಪಯೋಗಕ್ಕಾಗಿ ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಲಭ್ಯವಿರುವ ನೀರನ್ನು ನಾಲೆಗಳಿಗೆ ಹರಿಸಲು ಕ್ರಮವಹಿಸಬೇಕು. ಬೆಳೆದು ನಿಂತಿರುವ ಕಬ್ಬು ನೀರಿನ ಸರಬರಾಜಿಲ್ಲದೆ ಒಣಗುತ್ತಿದ್ದು, ಸದರಿ ಕಬ್ಬಿಗೆ ಸರ್ಕಾರ ಎಕರೆಗೆ ₹1 ಲಕ್ಷ ಬರ ಪರಿಹಾರ ನೀಡಬೇಕು ಎಂದು ಆಗ್ರಹ ಪಡಿಸಿದರು.

ಜಿಲ್ಲಾದ್ಯಂತ ಸಾವಿರಾರು ಎಕರೆ ಭೂಮಿ ನೀರಿನ ಅಭಾವದಿಂದ ಫಸಲು ಮಾಡದ ಕಾರಣ ರೈತ ಸಂಕಷ್ಟದಲ್ಲಿದ್ದು, ಪ್ರತಿ ಎಕರೆಗೆ ₹25 ಸಾವಿರ, ತೆಂಗು, ಅಡಿಕೆ ಹಾಗೂ ಇತರೆ ತೋಟಗಾರಿಕೆ ಬೆಳೆಗಳು ನೀರಿನ ಅಭಾವದಿಂದ ಒಣಗುತ್ತಿದ್ದು, ಜೀವಿತಾವಧಿ ಲೆಕ್ಕದಲ್ಲಿ ಒಂದು ಮರಕ್ಕೆ ₹25 ಸಾವಿರ ಪರಿಹಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ರೈತರ ಕೃಷಿ ಪಂಪ್‌ಸೆಟ್‌ಗಳ ಅಕ್ರಮ-ಸಕ್ರಮ ಯೋಜನೆ ಮರುಜಾರಿ ಮಾಡಬೇಕು. ರೈತರ ಜಮೀನುಗಳಿಗೆ ಟ್ರಾನ್ಸ್‌ಫಾರ್ಮರ್‌ಗಳನ್ನು ಶೀಘ್ರ ಅಳವಡಿಸಿ ಬೆಳೆಗಳನ್ನು ಉಳಿಸಬೇಕು. ಪ್ರತಿದಿನ ನಿರಂತರವಾಗಿ ಗುಣಮಟ್ಟದ ವಿದ್ಯುತ್‌ನ್ನು ಹಗಲು 8 ಗಂಟೆ ವಿತರಣೆ ಮಾಡಬೇಕು. ಕೆರೆ, ಕಟ್ಟೆ, ಕಾಲುವೆಗಳಲ್ಲಿರುವ ಹೂಳು ತೆಗೆದು, ಮಳೆಗಾಲದಲ್ಲಿ ನೀರು ಶೇಖರಣೆಯಾಗಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಮಂಜೇಶ್‌ಗೌಡ, ಮುಖಂಡರಾದ ಸೊ.ಸಿ.ಪ್ರಕಾಶ್, ಕೆ.ನಾಗೇಂದ್ರಸ್ವಾಮಿ, ಕೆ.ರಾಮಲಿಂಗೇಗೌಡ, ಎಲ್.ಸುರೇಶ್, ಬೋರಲಿಂಗೇಗೌಡ, ಬಸವರಾಜು ಇದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

Published

on

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.

ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.

ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.

Continue Reading

Mandya

ಕರೀಘಟ್ಟ ದೇವರ ಕಾಡು‌ ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

Published

on

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು‌ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.

ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ‌ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.

Continue Reading

Mandya

ಫೈನಾನ್ಸ್‌ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್‌.ಅಶೋಕ್‌

Published

on

ಮಂಡ್ಯ: ಮೈಕ್ರೋ ಫೈನಾನ್ಸ್‌ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್‌ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್‌ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್‌ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್‌ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್‌, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್‌ ನೀಡಿದರು.

Continue Reading

Trending

error: Content is protected !!