Connect with us

Kodagu

ನಾಪೋಕ್ಲುವಿನಲ್ಲಿ ಗುಡುಗು ಸಹಿತ ಉತ್ತಮ ಮಳೆ -ಬಿಸಿಲ ಬೇಗೆಗೆಯಿಂದ ಬಸವಳಿದಿದ್ದ ಜನರಿಗೆ ಕೃಪೆತೋರಿದ ಮಳೆರಾಯ

Published

on

ನಾಪೋಕ್ಲು : ನಾಪೋಕ್ಲು ವ್ಯಾಪ್ತಿಯಲ್ಲಿ ಏರುತ್ತಿದ್ದ ಬಿಸಿಲಿನ ತಾಪದಿಂದ ಬಸವಳಿದಿದ್ದ ಜನತೆಗೆ ಶುಕ್ರವಾರ ವರುಣ ಕೃಪೆ ತೋರುವ ಮೂಲಕ ಇಳೆಯನ್ನು ತಂಪುಗೊಳಿಸಿದ್ದಾನೆ.

ನಾಪೋಕ್ಲು ವಿಭಾಗದ ಕೆಲವು ಪ್ರದೇಶಗಳಿಗೆ ಶುಕ್ರವಾರ ಮದ್ಯಾಹ್ನ ಗುಡುಗು ಸಹಿತ ಒಂದು ಇಂಚಿಗೂ ಅಧಿಕ ಮಳೆಯಾಗಿದ್ದು ಬಿಸಿಲ ಬೇಗೆಯಲ್ಲಿ ಕಾದ ಭುವಿಗೆ ತಂಪೆರದಂತಾಗಿದೆ.

ನಾಪೋಕ್ಲು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಬೇತು,ಚೆರಿಯಪರಂಬು, ಕೊಳಕೇರಿ ಎಮ್ಮೆಮಾಡು, ನೆಲೆಜಿ, ಕುಂಜಿಲ ಕಕ್ಕಬ್ಬೆ,ಬಲ್ಲಮಾವಟಿ ಸೇರಿದಂತೆ ವಿಭಾಗದ ಹಲವು ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ.

ಕಳೆದ ಕೆಲವು ದಿನಗಳಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಿಸಿಲ ಬೇಗೆ ಹೆಚ್ಚಿದ್ದು ಬಹುತೇಕ ತೋಟಗಳಲ್ಲಿ ಕಾಫಿಗಿಡ,ಕಾಳು ಮೆಣಸು ಬಳ್ಳಿಗಳು ಬಿಸಿಲಿನ ತಾಪಕ್ಕೆ ಕುರುಟಿ ಹೋಗಿದ್ದವು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾದರೆ,ನಾಪೋಕ್ಲು ಭಾಗದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗಿತ್ತು.ಶುಕ್ರವಾರ ಸುರಿದ ಉತ್ತಮ ಮಳೆಯಿಂದ ಸ್ವಲ್ಪ ಮಟ್ಟಿಗೆ ರೈತರಲ್ಲಿ ನೆಮ್ಮದಿ ತಂದಿದೆ.

ಜಿಲ್ಲೆಯಲ್ಲಿ ಕಾಫಿ ಹಾಗೂ ಕಾಳು ಮೆಣಸಿನ ಬಳ್ಳಿಗಳಿಗೆ ಬೇಸಿಗೆ ಅವಧಿಯಲ್ಲಿ ಉತ್ತಮ ಮಳೆಯ ಅವಶ್ಯಕತೆ ಇದ್ದು, ಈ ವರ್ಷದ ಮಳೆಯಿಂದ ಬೆಳೆಗಾರರು ವಂಚಿತರಾಗಿದ್ದರು.ಶುಕ್ರವಾರ ನಾಪೋಕ್ಲು ಕೆಲವು ಭಾಗಗಳಲ್ಲಿ ಸುರಿದ ಮಳೆಯಿಂದ ಬೆಳೆಗಾರರಿಗೆ ಅಲ್ಪ ಪ್ರಮಾಣದಲ್ಲಿ ಖುಷಿ ತಂದಿದೆ.

ನಾಪೋಕ್ಲು ವಿಭಾಗದಲ್ಲಿ ಮಳೆ ಇಲ್ಲದೆ ಕೃಷಿ ಚಟುವಟಿಕೆಗಳಿಗೆ ಮತ್ತು ಕುಡಿಯುವ ನೀರಿಗೂ ಜನರು ಸಮಸ್ಯೆಗಳನ್ನು ಎದುರಿಸುವಂತ್ತಾಗಿದೆ. ಕಾವೇರಿ ನದಿ ಸೇರಿದಂತೆ ವ್ಯಾಪ್ತಿಯ ಇನ್ನಿತರ ನದಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಶುಕ್ರವಾರ ಸುರಿದ ಮಳೆ ಜನರ ಸಮಸ್ಯೆಯನ್ನು ಕೊಂಚ ಮಟ್ಟಿಗೆ ಬಗೆಹರಿಸಿದ್ದು ಮುಂದೆ ಉತ್ತಮ ಮಳೆ ಯಾಗುವ ನಿರೀಕ್ಷೆ ಮೂಡಿಸಿದೆ.

Continue Reading
Click to comment

Leave a Reply

Your email address will not be published. Required fields are marked *

Kodagu

ಕರಾಟೆ ಸ್ಪರ್ಧೆಯಲ್ಲಿ ಸಿ.ಐ.ಪಿ.ಯು.ಸಿ ವಿದ್ಯಾರ್ಥಿನಿ ಎಂ.ಎಸ್.ನಿಶಿತಾ ನೀಲಮ್ಮ ಸಾಧನೆ

Published

on

ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು. ಕಾಲೇಜಿನಲ್ಲಿ ದ್ವಿತೀಯ ಪಿ.ಯು ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಎಂ .ಎಸ್. ನಿಶಿತಾ ನೀಲಮ್ಮ, ನವೆಂಬರ್ 30, 2025 ರಂದು ಮೈಸೂರಿನ ಮಹಾರಾಜ ಕಾಲೇಜುನಲ್ಲಿ ಜರುಗಿದ ನಾಲ್ಕನೇ VSK ಓಪನ್ ಕರಾಟೆ ಚಾಂಪಿಯನ್‌ಶಿಪ್ -2025 ರಲ್ಲಿ ಭಾಗವಹಿಸಿದ್ದರು. ಇವರು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ಕುಮಿಟೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಈ ವಿದ್ಯಾರ್ಥಿನಿಯನ್ನು ಸಿ.ಐ.ಪಿ.ಯು.ಕಾಲೇಜಿನ ಪ್ರಾಂಶುಪಾಲೆ ಡಾ.ರೋಹಿಣಿ ತಿಮ್ಮಯ್ಯ ಅಭಿನಂದಿಸಿದ್ದರು. ಕುಮಾರಿ ನಿಶಿತಾ ನೀಲಮ್ಮ ಮಂಡೇಪಂಡ ನಂದ ಸುಬ್ಬಯ್ಯ ಮತ್ತು ಎಂ .ಎಸ್. ಆಶಾ ಸುಬ್ಬಯ್ಯ ಅವರ ಪುತ್ರಿಯಾಗಿದ್ದಾರೆ. ಇವರು ವಿರಾಜಪೇಟೆಯ ಮೆಬುಕಾನ್ ಗೊಜುರಿಯೋ ಸಂಸ್ಥೆಯ ಶಿಕ್ಷಕರಾದ ಸೆನ್ಸಾಯಿ ಎಂ.ಬಿ.ಚಂದ್ರನ್ ಅವರ ಮಾರ್ಗದರ್ಶನದಲ್ಲಿ ಕರಾಟೆಯನ್ನು ಅಭ್ಯಾಸ ಮಾಡುತ್ತಿದ್ದಾರೆ.

Continue Reading

Kodagu

ಕರಾಟೆ ಸ್ಪರ್ಧೆ: ಸಿ.ಐ.ಪಿ.ಯು.ಸಿ ವಿದ್ಯಾರ್ಥಿನಿ ಎಂ.ಎಸ್.ನಿಶಿತಾ ನೀಲಮ್ಮ ಸಾಧನೆ

Published

on

ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು. ಕಾಲೇಜಿನಲ್ಲಿ ದ್ವಿತೀಯ ಪಿ.ಯು ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಎಂ .ಎಸ್. ನಿಶಿತಾ ನೀಲಮ್ಮ, ನವೆಂಬರ್ 30, 2025 ರಂದು ಮೈಸೂರಿನ ಮಹಾರಾಜ ಕಾಲೇಜುನಲ್ಲಿ ಜರುಗಿದ ನಾಲ್ಕನೇ VSK ಓಪನ್ ಕರಾಟೆ ಚಾಂಪಿಯನ್‌ಶಿಪ್ -2025 ರಲ್ಲಿ ಭಾಗವಹಿಸಿದ್ದರು. ಇವರು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ಕುಮಿಟೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಈ ವಿದ್ಯಾರ್ಥಿನಿಯನ್ನು ಸಿ.ಐ.ಪಿ.ಯು.ಕಾಲೇಜಿನ ಪ್ರಾಂಶುಪಾಲೆ ಡಾ.ರೋಹಿಣಿ ತಿಮ್ಮಯ್ಯ ಅಭಿನಂದಿಸಿದ್ದರು. ಕುಮಾರಿ ನಿಶಿತಾ ನೀಲಮ್ಮ ಮಂಡೇಪಂಡ ನಂದ ಸುಬ್ಬಯ್ಯ ಮತ್ತು ಎಂ .ಎಸ್. ಆಶಾ ಸುಬ್ಬಯ್ಯ ಅವರ ಪುತ್ರಿಯಾಗಿದ್ದಾರೆ. ಇವರು ವಿರಾಜಪೇಟೆಯ ಮೆಬುಕಾನ್ ಗೊಜುರಿಯೋ ಸಂಸ್ಥೆಯ ಶಿಕ್ಷಕರಾದ ಸೆನ್ಸಾಯಿ ಎಂ.ಬಿ.ಚಂದ್ರನ್ ಅವರ ಮಾರ್ಗದರ್ಶನದಲ್ಲಿ ಕರಾಟೆಯನ್ನು ಅಭ್ಯಾಸ ಮಾಡುತ್ತಿದ್ದಾರೆ.

Continue Reading

Kodagu

ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಪಲ್ಟಿ: ತಪ್ಪಿದ ಅನಾಹುತ

Published

on

ನಾಪೋಕ್ಲು : ಚಾಲಕನ ನಿಯಂತ್ರಣ ಕಳೆದುಕೊಂಡ ಮಾರುತಿ ಕಾರೊಂದು ರಸ್ತೆ ಬದಿಯ ತೋಟದ ಚೆರಂಡಿಗೆ ಉರುಳಿಬಿದ್ದ ಘಟನೆ ನಾಪೋಕ್ಲು ಮಡಿಕೇರಿ ಮುಖ್ಯ ರಸ್ತೆಯ ಕೊಟ್ಟಮುಡಿ ಜಂಕ್ಷನ್ ಬಳಿ ಗುರುವಾರ ಸಂಜೆ ನಡೆದಿದೆ.

ಕುಶಾಲನಗರದಿಂದ ಬೆಟ್ಟಗೇರಿ, ಕೊಟ್ಟಮುಡಿ ಮಾರ್ಗವಾಗಿ ಬಲ್ಲಮಾವಟಿ ಗ್ರಾಮದ ನಿವಾಸಿ ನಿತಿನ್ ಎಂಬುವವರು ತಮ್ಮ ಮಾರುತಿ ಓಮಿನಿ ಕಾರಿನಲ್ಲಿ ಹಂದಿಯನ್ನು ಸಾಗಿಸುತ್ತಿದ್ದ ಸಂದರ್ಭ ಕೊಟ್ಟಮುಡಿ ಜಂಕ್ಷನ್ ಬಳಿಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ರಸ್ತೆ ಬದಿಯ ಜೆ ವಿ ಎಸ್ಟೇಟ್ ನ ತೋಟದ ಚೆರಂಡಿಗೆ ಉರುಳಿ ಬಿದ್ದಿದೆ.ಅಪಘಾತದಿಂದ ಕಾರಿನ ಮೆಲ್ಬಾಗ ಹಾಗೂ ಒಂದು ಬದಿಗೆ ಹಾನಿಯಾಗಿದ್ದು ಕಾರಿನ ಚಾಲಕ ನಿತಿನ್ ಹಾಗೂ ಜೊತೆಗಿದ್ದ ಇನ್ನೊಬ್ಬ ವ್ಯಕ್ತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಪಘಾತದಿಂದ ಕಾರಿನಲ್ಲಿದ್ದ ಹಂದಿಗೂ ಯಾವುದೇ ಹಾನಿಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ತೋಟದ ಚೆರಂಡಿಗೆ ಉರುಳಿ ಬಿದ್ದ ಕಾರನ್ನು ಸಾರ್ವಜನಿಕರ ಸಹಕಾರದಿಂದ ಮೇಲೆತ್ತಿ ತೆರವು ಗೊಳಿಸಲಾಯಿತು.

ವರದಿ:ಝಕರಿಯ ನಾಪೋಕ್ಲು

Continue Reading

Trending

error: Content is protected !!