Kodagu
ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸಮ್ಮೇಳನ

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ಮಾ. ೨೫ ಮತ್ತು ೨೬ ರಂದು ಜೀವವೈವಿಧ್ಯತೆಯ ಸಂರಕ್ಷಣೆ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ಹವಾಮಾನ ಬದಲಾವಣೆಯ ತಗ್ಗಿಸುವಿಕೆ ಕುರಿತು ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ಜಿ.ಎಂ.ದೇವಗಿರಿ ತಿಳಿಸಿದರು.
ಸಮ್ಮೇಳನದಲ್ಲಿ ದೇಶದ ವಿವಿಧ ವಿಶ್ವವಿದ್ಯಾಲಯಗಳು ವೈಜ್ಞಾನಿಕ ಸಂಸ್ಥೆಗಳು ಮತ್ತು ಜೀವವೈವಿಧ್ಯತೆಯ ಕುರಿತು ಸಂಶೋಧನೆ, ಶಿಕ್ಷಣದಲ್ಲಿ ತೊಡಗಿಕೊಂಡಿರುವ ವಿಜ್ಞಾನಿಗಳು ಭಾಗವಹಿಸಲಿದ್ದಾರೆ. ಜೀವವೈವಿಧ್ಯತೆ ಪ್ರಸ್ತುತ ಸ್ಥಿತಿ, ಅಪಾಯಗಳು ಹಾಗೂ ಸಂರಕ್ಷಣೆ, ಜೈವಿಕ ಪರಿಶೋಧನೆ ಮತು ಜೈವಿಕ ಸಂಪನ್ಮೂಲಗಳ ಸುಸ್ತಿರ ಬಳಕೆ, ಹವಾಮಾನ ಬದಲಾವಣೆ ಪ್ರಸ್ತುತ ಸ್ಥಿತಿ ವತ್ತು ಭವಿಷ್ಯದ ಸವಾಲುಗಳು, ಹವಾಮಾನ ಬದಲಾವಣೆ ಎದುರಿಸಲು ಪರ್ಯಾಯ ಶಕ್ತಿ ಮೂಲಗಳು ಕುರಿತು ಪ್ರಬಂಧ ಮಂಡನೆ, ವಿಚಾರ ವಿನಿಮಯ ನಡೆಯಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮ್ಮೇಳನದಲ್ಲಿ ಒಟ್ಟು ೧೦೦ಕ್ಕೂ ಅಧಿಕ ವಿಜ್ಞಾನಿಗಳು ಪಾಲ್ಗೊಂಡು, ವಿವಿಧ ವಿಷಯಗಳ ಒಟ್ಟು ೧೨೩ ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಪಾರಿಸರಿಕ ವಿಷಯದಲ್ಲಿ ನುರಿತ ೧೦ ತಜ್ಞರು ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಉಪನ್ಯಾಸ ನೀಡಲಿದ್ದಾರೆ. ಮಾ.೨೫ರಂದು ಬೆಳಗ್ಗೆ ೯.೩೦ ಗಂಟೆಗೆ ನಡೆಯುವ ಸಮ್ಮೇಳನವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದ ಕುಲಪತಿ ಡಾ.ಆರ್.ಸಿ.ಜಗದೀಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ಸದಸ್ಯ ಕಾರ್ಯದರ್ಶಿ ಎನ್.ಎಸ್.ಲಿಂಗರಾಜ್ ಭಾಗವಹಿಸಲಿದ್ದಾರೆ. ಸಮ್ಮೇಳನದ ಪ್ರಬಂಧ ಸಾರಾಂಶದ ಪುಸ್ತಕವನ್ನು ಕರ್ನಾಟಕ ರಾಜ್ಯ ವಿಜ್ಞಾನ ವತ್ತು ತಂತ್ರಜ್ಞಾನ ಪರಿಷತ್ ಕಾರ್ಯದರ್ಶಿ ಡಾ.ಯು.ಟಿ.ವಿಜಯ್ ಬಿಡುಗಡೆಗೊಳಿಸಲಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು ಬಿ.ಬಿ.ಎಂ.ಪಿ. ಉಪಅರಣ್ಯ ಸಂರಕ್ಷಣಾಧಿಕಾರಿ ಬಿ.ಎಲ್.ಜಿ.ಸ್ವಾಮಿ, ಪ್ರಮುಖರಾದ ಡಾ.ಬಿ.ಹೇಮಳಾ ನಾಯಕ್, ಡಾ.ಕೆ.ಸಿ.ಶಶಿಧರ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ವಿವವರಿಸಿದರು.
ಸಮ್ಮೇಳನದ ಸಮಾರೋಪ ಸಮಾರಂಭ ಮಾ.೨೬ರಂದು ಸಂಜೆ ೪.೩೦ ಗಂಟೆಗೆ ನಡೆಯಲಿದ್ದು, ನೂತನವಾಗಿ ಸ್ಥಾಪಿತವಾಗಿರುವ ಮಂಡ್ಯ ಕೃಷಿ ವಿಶ್ವವಿದ್ಯಾಲಯದ ವಿಷೇಶಾಧಿಕಾರಿ ಡಾ.ಕೆ.ಎಮ್.ಹರಿಣಿಕುಮಾರ್, ಉಪಅರಣ್ಯ ಸಂರಕ್ಷಣಾಧಿಕಾರಿ ಎಚ್.ಸಿ.ಬಾಲಚಂದ್ರ, ಟಾಟಾ ಕಾಫಿ ಲಿಮಿಟೆಡ್ ಪಾಲಿಬೆಟ್ಟ ಜನರಲ್ ಮ್ಯಾನೇಜರ್ ಬಿ.ಜಿ.ಪೊನ್ನಪ್ಪ, ವಿಶ್ವವಿದ್ಯಾಲಯದ ಅಧಿಕಾರಿ ಡಾ.ಡಿ.ಸುರೇಶ್, ಪ್ರಮುಖರಾದ ಡಾ.ವಿ.ಶ್ರೀನಿವಾಸ್, ಡಾ.ಡಿ.ತಿಪ್ಪೇಶ್, ಡಾ.ಬಿ.ಸಿ.ಧನಂಜಯ ಇತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅರಣ್ಯ ಮಹಾವಿದ್ಯಾಲಯದ ಪ್ರೋ.ಡಾ.ಬಿ.ಎನ್.ಸತೀಶ್, ಆರ್.ಎನ್.ಕೆಂಚಾರೆಡ್ಡಿ ಉಪಸ್ಥಿತರಿದ್ದರು.
Kodagu
ಹುಲಿ ದಾಳಿಗೆ ಕರು ಬಲಿ

ಸಿದ್ದಾಪುರ :-
ಹುಲಿ ದಾಳಿಗೆ ಒಂದುವರೆ ವರ್ಷದ ಕರು ಬಲಿಯಾಗಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚೆನ್ನಯ್ಯನ ಕೋಟೆ ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ.
ಗ್ರಾಮದ ಸಿ. ಟಿ. ಪೊನ್ನಪ್ಪ ಎಂಬುವರ ಮೇಯಲು ಬಿಟ್ಟ ಕರು ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ.ಕಳೆದ ತಿಂಗಳ ಅಂತರದಲ್ಲಿ ಮಾಲ್ದಾರೆ,ಚೆನ್ನಯ್ಯನ ಕೋಟೆ , ಗ್ರಾಮ ವ್ಯಾಪ್ತಿಯಲ್ಲಿ ಐದು ಹಸುಗಳು ಹುಲಿ ದಾಳಿಗೆ ಬಲಿಯಾಗಿವೆ ಇದರಿಂದ ಸ್ಥಳೀಯರು ಜೀವಭಯದಲ್ಲಿ ಸಂಚಾರ ಮಾಡುವಂತಾಗಿದೆ.
ಹುಲಿಯನ್ನು ಶೀಘ್ರ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ
ಈ ಭಾಗದಲ್ಲಿ ಹುಲಿಯ ಚಲನವಲನ ಪರಿಶೀಲಿಸಲು ಕ್ಯಾಮರಾ ಅಳವಡಿಸಲಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಶನಿವಾರವೂ ಕಾರ್ಯಾಚರಣೆ ನಡೆಯಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರೆ
ಕಾರ್ಯಾಚರಣೆಯಲ್ಲಿ ಆರ್,ಎಫ್,ಒ, ಗಂಗಾಧರ್, ನೇತೃತ್ವದಲ್ಲಿ ಡಿಆರ್ಎಫ್ಒ ಶಶಿ,
ರಾಜೇಶ್, ವಾಚರ್ ಸುನೀಲ್,
ಆರ್ಆರ್ಟಿ ತಂಡದ ಶಂಕರ್,ಮುತ್ತ, ರಂಜಿತ್, ಭರತ್, ರೋಷನ್, ಪ್ರದೀಪ್, ಇದ್ದರು
Kodagu
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ

ಶ್ರೀಮಂಗಲ : ದಕ್ಷಿಣ ಕೊಡಗಿನ ಅರಣ್ಯದಂಚಿನ ಗ್ರಾಮಗಳಲ್ಲಿ ಜಾನುವರುಗಳನ್ನು ಬಲಿ ಪಡೆಯುತ್ತಿರುವ ಹಾಗೂ ಜನರಿಗೂ ಆತಂಕ ಸೃಷ್ಟಿಸಿರುವ ಹುಲಿಯನ್ನು ಸೆರೆ ಹಿಡಿಯಲು ಶನಿವಾರದಿಂದ ಬಿರುನಾಣಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆರಾಲು ಗ್ರಾಮದಲ್ಲಿ ಆರಂಭವಾಗಲಿದೆ.
ದಕ್ಷಿಣ ಕೊಡಗಿನ ಅರಣ್ಯ ದಂಚಿನ ಗ್ರಾಮಗಳು ಹಾಗೂ ನೆರೆಯ ಗ್ರಾಮಗಳಲ್ಲಿ ಹುಲಿ ನಿರಂತರವಾಗಿ ಜಾನುವಾರುಗಳನ್ನು ಕಬಳಿಸುತ್ತಿದ್ದೂ, ಮಾನವನ ಮೇಲೆಯು ಹುಲಿ ದಾಳಿ ಮಾಡುವ ಆತಂಕದ ಛಾಯೆ ಜನರಲ್ಲಿ ಮೂಡಿಸಿದೆ.
ಈಗಾಗಲೇ ಶ್ರೀಮಂಗಲ, ಟಿ. ಶೆಟ್ಟಿಗೇರಿ, ಈಸ್ಟ್ ಮತ್ತು ವೆಸ್ಟ್ ನೆಮ್ಮಲೆ,ಕುರ್ಚಿ, ಬೀರುಗ, ಬಾಡಗರಕೇರಿ,ಪರಕಟಕೇರಿ, ತೆರಾಲು ಗ್ರಾಮಗಲ್ಲಿ ಹುಲಿಯ ಉಪಟಳ ಹೆಚ್ಚಾಗಿದೆ. ಆದ್ದರಿಂದ ದುಬಾರೆ ಸಾಕಾನೆ ಶಿಬಿರದಿಂದ ಎರಡು ಸಾಕಾನೆಗಳನ್ನು ಕಾರ್ಯಚರಣೆಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಗಳ ಕಾನೂನು ಸಲಹಾಗಾರರು ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ರಾಜ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಅವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯ ಗಂಭೀರತೆ ಮನವರಿಕೆ ಮಾಡಿದ ಬೆನ್ನಲ್ಲೇ ಹುಲಿ ಕಾರ್ಯಾಚರಣೆಗೆ ಅನುಮತಿ ನೀಡಲಾಗಿದ್ದು ಕಾರ್ಯಾಚರಣೆಯಲ್ಲಿ ಶಾರ್ಪ್ ಶೂಟರ್ ಗಳು, ಅರವಳಿಕೆ ತಜ್ಞರು ಹಾಗೂ ಪಶುವೈದ್ಯಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳಕ್ಕೆ ಆಗಮಿಸಿ ಕಾರ್ಯಚರಣೆ ಸಿದ್ಧತೆ ಪರಿಶೀಲಿಸಿದ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರು ಮಾಹಿತಿ ನೀಡಿದರು.
ಸ್ಥಳಕ್ಕೆ ಈಗಾಗಲೇ ದುಬಾರೆ ಸಾಕಾನೆ ಶಿಬಿರದಿಂದ ಶ್ರೀರಾಮ ಹಾಗೂ ಗೋಪಿ ಎಂಬ ಎರಡು ಸಾಕಾನೆಗಳನ್ನು ಕಾರ್ಯಾಚರಣೆಗೆ ಕರೆತರಲಾಗಿದೆ. ಅಗತ್ಯವಾದರೆ ಕಾರ್ಯಾಚರಣೆಗೆ ಹೆಚ್ಚಿನ ಸಾಕಾನೆಗಳನ್ನು ಬಳಸಿಕೊಳ್ಳಲಾಗುವುದು ಎಂದು ಹೇಳಿದರು.
ಶನಿವಾರದಿಂದ ಆರಂಭವಾಗುವ ಕಾರ್ಯಚರಣೆಯಲ್ಲಿ ಅರಣ್ಯ ಇಲಾಖೆಯ ಕ್ಷಿಪ್ರ ಕಾರ್ಯಚರಣೆ ತಂಡ (ಆರ್. ಆರ್. ಎಫ್) ಕಾಡಾನೆ ಕಾರ್ಯಚರಣೆ ತಂಡ (ಇ. ಎಲ್. ಎಫ್) ಹಾಗೂ ಈ ವ್ಯಾಪ್ತಿಯ ವಿವಿಧ ಅರಣ್ಯ ಇಲಾಖೆಯ ವಿಭಾಗದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಹುಲಿ ಗೆಜ್ಜೆ ಗುರುತು ಪತ್ತೆ ಹಚ್ಚಿ ನಡೆಯಲಿರುವ ಕಾರ್ಯಚರಣೆಯಲ್ಲಿ, ಹುಲಿಯ ಇರುವಿಕೆ ಪತ್ತೆಹಚ್ಚಿ ಕಾರ್ಯಚರಣೆ ನಡೆಸಲಾಗುವುದು, ತಾಜಾ ಹೆಜ್ಜೆ ಗುರುತು, ಹುಲಿ ತೆರಲಿರುವ ಜಾಡು ಹಿಡಿದು ಕಾರ್ಯಚಾರಣೆ ಆರಂಭವಾಗಲಿದೆ. ಈ ಹಿಂದೆ ಶ್ರೀಮಂಗಲ ವ್ಯಾಪ್ತಿಯ ನೆಮ್ಮಲೆ, ಬಾಳೆಲೆ ವ್ಯಾಪ್ತಿಯ ದೇವನೂರಿನಲ್ಲಿ ಹುಲಿ ಸೆರೆ ಕಾರ್ಯಚರಣೆಯಲ್ಲಿ ಹುಲಿ ಕಾರ್ಯಚರಣೆ ತಂಡಕ್ಕೆ ಹುಲಿ ಪ್ರತ್ಯೇಕ್ಷವಾಗದ ಹಿನ್ನಲೆ ಹುಲಿಗೆ ಕಾರ್ಯಚರಣೆಯಿಂದ ಅದರ ಇರುವಿಕೆಗೆ ತೊಂದರೆಯಾಗಿ ಹುಲಿಯು ಅರಣ್ಯಕ್ಕೆ ವಾಪಸು ತೆರಳಿತ್ತು. ಈ ಬಾರಿ ಕಾರ್ಯಚರಣೆಯಲ್ಲಿ ಹುಲಿ ಪ್ರತ್ಯೇಕ್ಷವಾದಲ್ಲಿ ಹುಲಿಯನ್ನು ಅರವಳಿಕೆ ನೀಡಿ ಸೆರೆ ಹಿಡಿದು ಅದನ್ನು ಪುನರ್ವಸತಿ ಕೇಂದ್ರಕ್ಕೆ ರವಾನಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಕೇತ್ ಪೂವಯ್ಯ ತಿಳಿಸಿದರು.
ಈ ಸಂದರ್ಭ ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಟಿ. ಶೆಟ್ಟಿಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ತೀತಿರ ಪ್ರಭು, ಅರಣ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು, ಮಾವುತರು ಕಾವಾಡಿಗರು ಹಾಜರಿದ್ದರಿರು.
Kodagu
ಜನಪರ ಪ್ರೀಮಿಯರ್ ಲೀಗ್-3 ಕ್ರಿಕೆಟ್ ಗೆ ಆಟಗಾರರ ಆಯ್ಕೆ

ಸಿದ್ದಾಪುರ : ಮಾಲ್ದಾರೆ ಜನಪರ ಕ್ರೀಡಾ ಮತ್ತು ಕಲಾ ಯುವಜನ ಸಂಘ ಇವರ ಆಶ್ರಯದಲ್ಲಿ ಜನಪರ ಪ್ರೀಮಿಯರ್ ಲೀಗ್-3 ಕ್ರಿಕೆಟ್ ಪಂದ್ಯಾವಳಿಗೆ 10 ಫ್ರಾಂಚೈಸಿಗಳಿಗೆ 100 ಕ್ಕೂ ಹೆಚ್ಚು ಆಟಗಾರರನ್ನು ಆಯ್ಕೆ ಮಾಡುವ ಹರಾಜು ಪ್ರಕ್ರಿಯೆ ಸಿದ್ದಾಪುರದ ಚರ್ಚೆ ಹಾಲ್ ಸಭಾಂಗಣದಲ್ಲಿ ನಡೆಯಿತು.
ಮಾಲ್ದಾರೆ, ಚೆನ್ನಯ್ಯನ ಕೋಟೆ, ಪಾಲಿಬೆಟ್ಟ, ಗ್ರಾಮದ 100ಕ್ಕೂ ಹೆಚ್ಚು ಕ್ರಿಕೆಟಿಗರು ಹರಾಜಿನಲ್ಲಿ ಭಾಗವಹಿಸಿದ್ದರು, ಪ್ರತಿ ಫ್ರಾಂಚೈಸಿ ತಮ್ಮ ಬಿಡ್ ಹಣದ ಆಧಾರದ ಮೇಲೆ 10 ರಿಂದ 11 ಆಟಗಾರರನ್ನು ಆಯ್ಕೆ ಮಾಡಿದೆ.
ಜನಪರ ಸಂಘದ ಅಧ್ಯಕ್ಷ ಭಾವ ಮಾಲ್ದಾರೆ ಮಾತನಾಡಿ ಮೇ 19,20,ರಂದು ಲೀಗ್ ಮಾದರಿಯ ಪಂದ್ಯಾಟ ಎರಡು ದಿನ ನಡೆಯಲಿದ್ದು ಎಲ್ಲಾ ಪಂದ್ಯಗಳು ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿವೆ ಹಾಗೂ ಕೊನೆಯ ದಿನ ಸಾಧಕರಿಗೆ ಸನ್ಮಾನ, ಹಲವಾರು ಕಾರ್ಯಕ್ರಮದ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು
ಈ ಸಂದರ್ಭ ವಿರಾಜಪೇಟೆ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ರಜಿತ್ ಕುಮಾರ್ ,ಸಾಮಾಜಿಕ ಕಾರ್ಯಕರ್ತ ಮುಸ್ತಫಾ,
ಸಾಗರ್ ಸಂಘದ ಅಧ್ಯಕ್ಷ ರದೀಶ್, ಪ್ರಮುಖರಾದ ರವೀಂದ್ರ ಭಾವೆ, ಹಮೀದ್,ಜನಪರ ಸಂಘದ ಕಾರ್ಯದರ್ಶಿ ವಿನಿಲ್, ಮಾಜಿ ಅಧ್ಯಕ್ಷ ಅಂಟೋನಿ, ಮಂಜು, ಮುಂತಾದವರು ಹಾಜರಿದ್ದರು.
-
Mandya21 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Kodagu17 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar21 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Chamarajanagar21 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu14 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar12 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur15 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Chikmagalur14 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.