Chikmagalur
ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ವೇಳೆ ಮಣ್ಣಿನಡಿ ಸಿಲುಕಿ ಓರ್ವ ಕಾರ್ಮಿಕ ಸಾವು

ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ವೇಳೆ ಮಣ್ಣಿನಡಿ ಸಿಲುಕಿ ಓರ್ವ ಕಾರ್ಮಿಕ ಸಾವು
ಚಿಕ್ಕಮಗಳೂರು : ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಜೆಸಿಬಿಯಿಂದ ಮಣ್ಣು ತೆಗೆಯುವ ವೇಳೆ ನಾಲ್ವರು ಕಾರ್ಮಿಕರ ಮೇಲೆ ಮಣ್ಣು ಕುಸಿದು, ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ತನಿಕೋಡು ಚೆಕ್ ಪೋಸ್ಟ್ ಬಳಿ ನಡೆದಿದೆ.
ನೆಮ್ಮಾರು ಸಮೀಪದ ತನಿಕೋಡು ಚೆಕ್ ಪೋಸ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವೇಳೆ ಈ ಅವಘಡ ಸಂಭವಿಸಿದೆ. ರಸ್ತೆಯ ತಡೆಗೋಡೆ ಸಮೀಪಬೇ ನಾಲ್ವರು ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಜೆಸಿಬಿಯಿಂದ ಮಣ್ಣು ತೆಗೆದ ತಕ್ಷಣ ಎಕಾಏಕಿ ಮಣ್ಣು ಕುಸಿದಿದೆ. ತಕ್ಷಣವೇ ಇಬ್ಬರು ಕಾರ್ಮಿಕರನ್ನು ರಕ್ಷಣೆ ಮಾಡಿದ್ದು, ಸ್ವಲ್ವ ಸಮಯದ ವೇಳೆ ಮತ್ತೊಬ್ಬ ಕಾರ್ಮಿಕನ ರಕ್ಷಣೆ ಮಾಡಲಾಗಿದೆ. ಆದರೆ, ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಸತತ ಒಂದು ಗಂಟೆ ಕಾಲ ಮೂರು ಜೆಸಿಬಿ ಮೂಲಕ ಕಾರ್ಯಾಚರಣೆ ಮಾಡಲಾಗಿತ್ತು.
ಒಂದೂವರೆ ಗಂಟೆ ಕಾಲ ಮಣ್ಣಿನಡಿಯಲ್ಲಿ ಸಿಲುಕಿದ ಕಾರಣ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಾಜ್ ಕಮಲ್ ಗುತ್ತಿಗೆ ಕಂಪೆನಿಗೆ ಸೇರಿದ ಜೆಸಿಬಿ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ, ಆಂಬುಲೆನ್ಸ್ ಹಾಗೂ ಶೃಂಗೇರಿ ಪೊಲೀಸರು ಭೇಟಿ ನೀಡಿ, ಕಾರ್ಮಿಕರ ರಕ್ಷಣಾ ಕಾರ್ಯ ನಡೆಸಿದ್ದಾರೆ.ಘಟನೆ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chikmagalur
ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಸರ್ಕಾರಿ ಬಸ್ ಡ್ರೈವರ್ ಆತ್ಮ*ಹತ್ಯೆಗೆ ಶರಣು

ಚಿಕ್ಕಮಗಳೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಬಸ್ ಚಾಲಕನೋರ್ವ ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿರುವ ಘಟನೆ ಕಡೂರು ಡಿಪೋದಲ್ಲಿ ನಡೆದಿದೆ.
ಚಂದ್ರು, ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕೆ.ಎಸ್.ಆರ್.ಟಿ.ಸಿ. ಚಾಲಕ. ರಜೆ ವಿಚಾರವಾಗಿ ಮೇಲಾಧಿಕಾರಿ ಪುಟ್ಟಸ್ವಾಮಿ ನೀಡುತ್ತಿರುವ ನೀಡುತ್ತಿರುವ ಕಿರುಕುಳಕ್ಕೆ ಬೇಸತ್ತು ಕಡೂರು ಡಿಪೋದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಚಂದ್ರು ನನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಾಲಕ ಬರೆದಿಟ್ಟ ಡೆತ್ ನೋಟಲ್ಲಿ ‘ಹುಷಾರಿಲ್ಲದೆ ಕೆಲಸಕ್ಕೆ ಬಾರದಿದ್ದಕ್ಕೆ ಹಾಜರಾತಿಯಲ್ಲಿ ಗೈರು ಹಾಕಿದ್ದಾರೆ, ನನ್ನ ಖಾತೆಯಲ್ಲಿ ಸಾಕಷ್ಟು ರಜೆ ಇದೆ, ಆದರೂ ಗೈರು ಹಾಕಿದ್ದಾರೆ, ಹಣ ಕೊಟ್ಟರೆ ಎಷ್ಟು ದಿನ ಬೇಕಾದ್ರು ರಜೆ ನೀಡುತ್ತಾರೆ. ಪುಟ್ಟಸ್ವಾಮಿಯಿಂದ ನೌಕರರ ಮೇಲಾಗುತ್ತಿರು ದೌರ್ಜನ್ಯ ಸರಿಪಡಿಸುವಂತೆ ಮನವಿ ಮಾಡಿದ್ದಾನೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ
Chikmagalur
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.

ಚಿಕ್ಕಮಗಳೂರು : ಮೂಡಿಗೆರೆ ಪಟ್ಟಣದ ಬಾಪು ನಗರದಲ್ಲಿ ಅಪ್ರಾಪ್ತ ಬಾಲಕನೋರ್ವ ಸ್ಕೂಟಿ ಚಾಲನೆ ಮಾಡುತ್ತಿದ್ದಾಗ ಮೂಡಿಗೆರೆ ಪೊಲೀಸರು ದ್ವಿಚಕ್ರ KA18 EC2707 ಸಂಖ್ಯೆಯ ಸ್ಕೂಟಿಯನ್ನು ವಶಕ್ಕೆ ಪಡೆದು ದಂಡ ವಿಧಿಸಿದರು.
ಬಾಲಕನ ಪೋಷಕರಾದ ಮೊಹಮ್ಮದ್ ಸಿರಾಜ್ ಮೇಲೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿ ಮೂಡಿಗೆರೆ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರು ತೀರ್ಪು ನೀಡಿತು.
Chikmagalur
ಜನಿವಾರ ತೆಗೆಸಿರುವುದು ಖಂಡನೀಯ

ಜಯಪುರ : ಎರಡು ದಿನಗಳ ಹಿಂದೆ ರಾಜ್ಯದಾದ್ಯಂತ ನಡೆದ ವೃತ್ತಿಪರ ಕೋರ್ಸ್ ಗಳ ಸಿ ಇ ಟಿ ಪರೀಕ್ಷೆಯ ದಿನದಂದು ಪರೀಕ್ಷಾ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿದ್ದಲ್ಲದೆ ತೆಗೆಯಲು ಒಪ್ಪದ ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷೆಯಲ್ಲಿ ಕುಳಿತುಕೊಳ್ಳಲು ಅವಕಾಶವನ್ನೇ ನೀಡದ ಘಟನೆ ನಡೆದಿರುತ್ತದೆ. ಕೆಲವು ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿ ಹಾಕಿದ ಕೃತ್ಯವೂ ನಡೆದಿರುತ್ತದೆ. ಇಂತಹ ಅಮಾನವೀಯ ಕೃತ್ಯವನ್ನು ನಮ್ಮ ಸಮಾಜ ವಿರೋಧಿಸುತ್ತದೆ ಎಂದು ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಮಹಾಸಭಾ (ರಿ.)ದ ಕೇಂದ್ರೀಯ ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯರಂಗ ಕೋಟೆತೋಟ ಪತ್ರಿಕೆಗೆ ತಿಳಿಸಿದರು.
ನಮ್ಮ ದೇಶದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯ ಇರುತ್ತದೆ, ಬ್ರಾಹ್ಮಣ್ಯದ ಸಂಕೇತವಾಗಿರುವ ಜನಿವಾರವನ್ನು ಉಪನಯನದ ಸಂದರ್ಭದಲ್ಲಿ ಧರಿಸಿದ ನಂತರ ಸಾಯುವವರೆಗೂ ಇಟ್ಟುಕೊಳ್ಳಬೇಕಾಗುತ್ತದೆ. ಬೇರೆ ಬೇರೆ ಕಾರಣಗಳಿಗೆ ಮಧ್ಯದಲ್ಲಿ ಬದಲಾಯಿಸಬಹುದು ಅಷ್ಟೇ, ಜನಿವಾರವನ್ನು ತೆಗೆಸಿರುವ ಈ ಕೃತ್ಯ ಅತ್ಯಂತ ಹೀನಾಯ ಮತ್ತು ಬ್ರಾಹ್ಮಣರ ಮೇಲೆ ನಡೆದಿರುವ ದೌರ್ಜನ್ಯ ಎಂದೇ ಪರಿಗಣಿಸಬೇಕಾಗುತ್ತದೆ.
ಸರಕಾರ ಮತ್ತು ಸಂಬಂಧಪಟ್ಟ ಇಲಾಖೆ ಈ ಕೂಡಲೇ ಇಂತಹ ದೌರ್ಜನ್ಯವನ್ನು ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವುದಲ್ಲದೆ ಶಿಕ್ಷಣ ಇಲಾಖೆಯು ಬ್ರಾಹ್ಮಣ ಸಮಾಜದ ಕ್ಷಮಾಪಣೆಯನ್ನು ಕೇಳಬೇಕಾಗಿ ಆಗ್ರಹಿಸುತ್ತೇವೆ. ಇಂತಹ ಕೃತ್ಯ ಮುಂದೆ ಯಾವತ್ತೂ ನಡೆಯದಂತೆ ಬಂದೋಬಸ್ತ್ ಮಾಡಬೇಕಾಗಿ ಕೇಳಿಕೊಳ್ಳುತ್ತೇವೆ ಎಂದು ತಿಳಿಸಿದರು.
ವರದಿ :-ಎಂ.ಪಿ.ಪ್ರದೀಪ್ ಹೆಬ್ಬಾರ್, ಜಯಪುರ.
-
Chamarajanagar21 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore19 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Hassan23 hours ago
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ
-
Kodagu24 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Kodagu19 hours ago
ಹುಲಿ ದಾಳಿಗೆ ಕರು ಬಲಿ
-
Kodagu22 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Chikmagalur23 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.
-
Chikmagalur24 hours ago
ಜನಿವಾರ ತೆಗೆಸಿರುವುದು ಖಂಡನೀಯ