Connect with us

Kodagu

ನಕ್ಸಲ್ ಚಟುವಟಿಕೆ ಆತಂಕ – ಕೊಡಗಿನಲ್ಲಿ ಹೈ ಅಲರ್ಟ್

Published

on

ಮಡಿಕೇರಿ: ಕೇರಳದ ವಯನಾಡಿನಲ್ಲಿ ಕಳೆದ ಒಂದು ತಿಂಗಳಿನಿಂದ ನಕ್ಸಲ್‌ ಚಟುವಟಿಕೆ ಮತ್ತೆ ಚುರುಕುಗೊಂಡಿದ್ದು, ಇದರ ಪ್ರಭಾವ ಕರ್ನಾಟಕದ ಮೇಲೂ ಬೀಳುವ ಅಪಾಯ ಕಾಣಿಸಿಕೊಂಡಿದೆ.
ಕೊಡಗು- ಕೇರಳ ಗಡಿಯಲ್ಲಿ ಸೋಮವಾರ ನಕ್ಸಲರು ಹಾಗೂ ಕೇರಳ ನಕ್ಸಲ್ ಕಾರ್ಯಪಡೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆ ವೇಳೆ ಓರ್ವ ನಕ್ಸಲ್ ಗಾಯಗೊಂಡಿರುವುದಾಗಿ ತಿಳಿದು ಬಂದಿದ್ದು, ಈತ ಚಿಕಿತ್ಸೆಗಾಗಿ ಅಥವಾ ರಕ್ಷಣೆಗಾಗಿ ಕೊಡಗು ಜಿಲ್ಲೆಯನ್ನು ಪ್ರವೇಶಿಸುವ ಸಾಧ್ಯತೆಗಳಿರುವುದರಿಂದ ಜಿಲ್ಲಾ ಪೊಲೀಸರು ಹೈಅಲರ್ಟ್ ಘೋಷಿಸಿದ್ದಾರೆ.
ಕೊಡಗಿನ 4- 5 ಕಿ.ಮೀ ದೂರದಲ್ಲಷ್ಟೇ ಗುಂಡಿನ ಚಕಮಕಿ ನಡೆದಿದ್ದು, ನಕ್ಸಲರು ಕೇರಳ ಅರಣ್ಯ ಪ್ರದೇಶದಿಂದ ಕೊಡಗನ್ನು ಪ್ರವೇಶಿಸುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದ್ದರಿಂದ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚುವರಿಯಾಗಿ ಜಿಲ್ಲಾ ಸಶಸ್ತ್ರ ಪೊಲೀಸರನ್ನು ನಿಯೋಜಿಸಲಾಗಿದ್ದು, ಎಲ್ಲಾ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಗಡಿ ಭಾಗದ ಆಸ್ಪತ್ರೆ, ಮೆಡಿಕಲ್ ಶಾಪ್ ಮತ್ತು ಹೋಂಸ್ಟೇ ಗಳಿಗೂ ಎಚ್ಚರದಿಂದ ಇರುವಂತೆ ತಿಳಿಸಲಾಗಿದೆ. ಅಲ್ಲದೆ ಪೊಲೀಸರನ್ನು ನಿಯೋಜಿಸಿ ನಿಗಾ ಇರಿಸಲಾಗಿದೆ.
ಕೇರಳ ಪೊಲೀಸರ ಕಾರ್ಯಾಚರಣೆಗೆ ಹೆದರಿ ಈ ನಕ್ಸಲರು ಕರ್ನಾಟಕ ಪ್ರವೇಶ ಮಾಡುವ ಅಪಾಯ ಇರುವುದರಿಂದ ಕೇರಳ-ಕರ್ನಾಟಕ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕೊಡಗು ಭಾಗದಲ್ಲಿರುವ ಕರ್ನಾಟಕ-ಕೇರಳ ಗಡಿ ಭಾಗವಾದ ಕುಟ್ಟ ಪ್ರದೇಶಕ್ಕೆ ಕೊಡಗು ಎಸ್ಪಿ ರಾಮರಾಜನ್ ಭೇಟಿ ನೀಡಿದ್ದು, ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೊಡಗಿನಲ್ಲಿ ನಕ್ಸಲ್ ಚಟುವಟಿಕೆ ಇಲ್ಲವಾದರೂ ಕೇರಳ ಗಡಿಗೆ ಹೊಂದಿಕೊಂಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗಿನ ಗಡಿಭಾಗ ಕುಟ್ಟ, ಬಿರುನಾಣಿ, ತೆರಾಲು ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ‌.
ಮುಂಜಾಗ್ರತಾ ಕ್ರಮವಾಗಿ ಗಡಿಭಾಗದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಕುಟ್ಟ ಗಡಿಯ ಚೆಕ್‌ ಪೋಸ್ಟ್‌ನಲ್ಲಿ ಪೊಲೀಸರು ವಾಹನ ತಪಾಸಣೆ ಬಿಗಿಗೊಳಿಸಿದ್ದಾರೆ.
ದಿನದ 24 ಗಂಟೆ ಪೊಲೀಸರು ಕರ್ತವ್ಯದಲ್ಲಿದ್ದು, ಯಾವುದೇ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡುಬಂದಲ್ಲಿ ವಿಚಾರಣೆಗೆ ಒಳಪಡಿಸುವಂತೆ ಪೊಲೀಸರಿಗೆ ಎಸ್.ಪಿ. ರಾಮರಾಜನ್ ನಿರ್ದೇಶನ ನೀಡಿದ್ದಾರೆ. ಕುಟ್ಟ ಭಾಗದಲ್ಲಿ ಎ.ಎನ್.ಎಫ್. ತಂಡ ಕಳೆದ ಹಲವು ಸಮಯದಿಂದ ಕೆಲಸ ನಿರ್ವಹಿಸುತ್ತಿದೆ. ಅಲ್ಲದೆ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ತೊಡಗಿದೆ.

Kodagu

ಮನೆಗೆ ನುಗ್ಗಿದ ರಾಕೇಟ್ ಪಟಾಕಿ ಬಟ್ಟೆ, ಸಾಮಾಗ್ರಿ ದಹಿಸಿದ ಬೆಂಕಿ

Published

on

ದೀಪಾವಳಿ ಹಬ್ಬಕ್ಕೆ ಹಚ್ಚಿದ ರಾಕೇಟ್ ಪಟಾಕಿ ಮನೆಯೊಳಗೆ ನುಸುಳಿದ ಪರಿಣಾಮ ಬಟ್ಟೆ ಹಾಗೂ ಇತರೆ ಸಾಮಾಗ್ರಿಗಳು ಸುಟ್ಟು ನಷ್ಟಉಂಟಾಗಿರುವ ಘಟನೆ ವರದಿಯಾಗಿದೆ. ಮಡಿಕೇರಿಯ ಮಹದೇವಪೇಟೆ ರಸ್ತೆಯಲ್ಲಿರುವ ಕನಿಕಾ ಪರಮೇಶ್ವರಿ ದೇವಾಲಯ ಮುಂಭಾಗದಲ್ಲಿ ಬಶೀರ್ ಎಂಬುವವರಿಗೆ ಸೇರಿದ ಕಟ್ಟಡವಿದ್ದು ಈ ಮನೆಯಲ್ಲಿ ನಯಾಜ್ ಎಂಬುವರು ಬಾಡಿಗೆಗೆ ವಾಸವಾಗಿದ್ದಾರೆ. ರಾತ್ರಿ ಯಾರೋ ಬೆಂಕಿ ಹೊತ್ತಿಸಿ ಹಾರಿ ಬಿಟ್ಟ ರಾಕೇಟ್ ಪಟಾಕಿ ಮನೆಯ ಕಿಟಕಿ ಮೂಲಕ ಹಾದು ಬಂದು ಸಿಡಿದಿದೆ. ಇದರಿಂದ ಬಟ್ಟೆ ಹಾಗೂ ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅಂದಾಜು ರೂ. 15000 ನಷ್ಟ ಸಂಭವಿಸಿದೆ. ಮಾಹಿತಿ ಅರಿತು ಸಕಾಲಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ಸಂಭವನೀಯ ಹೆಚ್ಚಿನ ಅನಾಹುತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

Continue Reading

Kodagu

ಕರಡ ಕೀಮಲೆಕಾಡುವಿನ ಮನೆಯ ಸಮೀಪದಲ್ಲಿ ಕಾಡಾನೆ ಮರಿ ಜನ್ಮ .

Published

on

ನರಿಯಂದಡ ಗ್ರಾಮ ಪಂಚಾಯಿತಿಯ ಕರಡ ಗ್ರಾಮದ ಕೀಮಲೆ ಕಾಡುವಿನಲ್ಲಿ ಕಾಡಾನೆಯೊಂದು ಜನ್ಮ ನೀಡಿದೆ.

ಕೀಮಲೆ ಕಾಡುವಿನ ಮೊಣ್ಣಕುಟ್ಟ0ಡ ಮಂಜು ಅವರ ಮನೆಯ ಬಳಿ ಕಾಡಾನೆಯೊಂದು ನಿನ್ನೆ ರಾತ್ರಿ ಹೆಣ್ಣುಮರಿಗೆ ಜನ್ಮ ನೀಡಿದೆ.

ಕಾಡಾನೆ ಮರಿ ನೋಡಲು ಸ್ಥಳಕ್ಕೆ ತಂಡೊಪ ತಂಡವಾಗಿ ಆಗಮಿಸುತ್ತಿರುವ ಜನ.

ಕಾಡಾನೆ ಮರಿ ಹಾಕಿದ ಸುದ್ದಿ ತಿಳಿದ ಕೂಡಲೇ ಗ್ರಾಮಕ್ಕೆ ತಂಡೊಪ ತಂಡವಾಗಿ ಜನರು ಆಗಮಿಸಿ ಮರಿಯಾನೆಯನ್ನು ವೀಕ್ಷಿಸಿದರು.

ತಾಯಿ ಆನೆ ಸಮೀಪದ ತೋಟದಲ್ಲಿ ಮರಿಯಾನೆಗೆ ಕಾಯುತ್ತಾ ನಿಂತಿದೆ.

ಸ್ಥಳಕ್ಕೆ ಅರಣ್ಯಧಿಕಾರಿ ಭೇಟಿ ವಿಷಯ ತಿಳಿದ ವಿರಾಜಪೇಟೆ ಅರಣ್ಯ ವಲಯಾದಿಕಾರಿಗಳಾದ ಕಳ್ಳಿರ ದೇವಯ್ಯ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

Continue Reading

Kodagu

ಈಶ್ವರ ದೇವಾಲಯದ ಕಾಮಗಾರಿ ನಡೆದಾಗ ಚಿನ್ನಾಭರಣ ಹೋಲುವ ವಸ್ತುಗಳು ಪತ್ತೆ

Published

on

ಅಮ್ಮತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನಂದಪುರದಲ್ಲಿ ಈಶ್ವರ ದೇವಾಲಯದ ಕಾಮಗಾರಿ ನಡೆದಾಗ ಚಿನ್ನಾಭರಣ ಹೋಲುವ ವಸ್ತುಗಳು ಪತ್ತೆಯಾಗಿವೆ.

ಆನಂದಪುರದ ಟಾಟಾ ಸಂಸ್ಥೆಯ ಈಶ್ವರ ದೇವಾಲಯದ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದು, ಕಾರ್ಮಿಕರಾದ ಸುಬ್ರಮಣಿ ಹಾಗೂ ಇತರರು ಕೆಲಸ ಮಾಡುತ್ತಿದ್ದರು ಈ ವೇಳೆ ಮಣ್ಣಿನ ಅಡಿಯಿಂದ ಎರಡು ಡಬ್ಬಗಳು ಪತ್ತೆಯಾಗಿವೆ. ಕಾರ್ಮಿಕರು ಕೂಡಲೇ ವ್ಯವಸ್ಥಾಪಕರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಎರಡು ಡಬ್ಬಗಳಲ್ಲಿ ಚಿನ್ನಾಭರಣಗಳ ಲೋಹ ಪತ್ತೆಯಾಗಿದೆ. ಅಂದಾಜು 900 ಗ್ರಾಂ ಲೋಹ ಪತ್ತೆಯಾಗಿದ್ದು, ಕಂದಾಯ ಅಧಿಕಾರಿಗಳು ಮಣ್ಣಿನಿಂದ ದೊರೆತ ಲೋಹವನ್ನು ತಾಲ್ಲೂಕು ಖಜಾನೆಗೆ ಕೊಂಡೊಯ್ದರು.

‘ದೊರೆತ ಲೋಹವನ್ನು ಚಿನ್ನ ಎಂಬುದು ಸ್ಪಷ್ಟವಾಗಿಲ್ಲ. ಪುರಾತತ್ವ ಇಲಾಖೆಯ ಮೂಲಕ ಜಿಲ್ಲಾಧಿಕಾರಿಗೆ ನೀಡಲಾಗುವುದು’ ಎಂದು ತಾಲ್ಲೂಕು ಉಪ ತಹಶೀಲ್ದಾರ್ ಪ್ರದೀಪ್ ತಿಳಿಸಿದರು.

ಈ ಸಂದರ್ಭ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿ ಓಮಪ್ಪ ಬಣಕಾರ್, ಸಿದ್ದಾಪುರ ಪಿಎಸ್‌ಐ ರಾಘವೇಂದ್ರ, ಕಂದಾಯ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.

 

Continue Reading

Trending