State
ನೀಟ್: ಮರುಪರೀಕ್ಷೆಗೆ ಹಾಗೂ ತನಿಖೆಗೆ ಸಿಎಂ ಆಗ್ರಹ
ಅಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ : ಸಿಎಂ ಸಿದ್ದರಾಮಯ್ಯ
ಮೈಸೂರು, ಜೂನ್ 15: ನೀಟ್ ಪರೀಕ್ಷೆಯಲ್ಲಿ ಕೆಲವು ರ್ಯಾಂಕ್ ನೀಡುವುದರಲ್ಲಿ ಹಾಗೂ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರುಪರೀಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ
ಎನ್ . ಟಿ .ಎ ಪರೀಕ್ಷೆಯನ್ನು ಸರಿಯಾಗಿ ಮಾಡದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ ಎಂದರು.ಬರಪರಿಹಾರದ ಬಾಕಿ ಮೊತ್ತವನ್ನು ರೈತರಿಗೆ ವಿತರಿಸಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ
ದಕ್ಷಿಣ ಭಾರತದ ಏಳು ಜನರು ಕೇಂದ್ರದಲ್ಲಿ ಸಚಿವರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಏನು ಮಾಡಿದರೂ ದಕ್ಷಿಣ ಭಾರತದಲ್ಲಿ ಏನು ಮಾಡಿದರು ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಏಕೆಂದರೆ ಆರ್.ಎಸ್.ಎಸ್ ನಾ ರಾಜಕೀಯ ಮುಖವಾಡ ಅದು ಹಾಗಾಗಿ ಉತ್ತರ ಭಾರತದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆರ್.ಎಸ್.ಎಸ್ ನ ಮುಖ್ಯಸ್ಥರು ಅಹಂಕಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ ಎಂದರು.
ರಾಯ್ ಎಂಬುವರಿಗೆ 2010 ರ್ಯಾಲಿ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬಂಧಿಸಲು ಆದೇಶ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಯದ್ದು ದ್ವೇಷದ ರಾಜಕಾರಣ. ಹೆದರಿಸುವುದು ಬೆದರಿಸುವುದು, ಇಡಿ, ಸಿಬಿಐ ಬಳಕೆ ಮಾಡುವುದನ್ನು ಮೊದಲಿನಿಂದಲೂ ಮಾಡಿಕೊಂಡು ಬರುತ್ತಿದ್ದಾರೆ. ಅದಕ್ಕಾಗಿ ಜನ ಈ ಬಾರಿ ಅವರಿಗೆ ಬಹುಮತ ಕೊಡಲಿಲ್ಲ ಎಂದರು.
ದ್ವೇಷದ ರಾಜಕಾರಣ ಬಿಜೆಪಿ ಕೆಲಸ
ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನಮ್ಮ ಮೇಲೆ, ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು ಎಂದು ಪ್ರಶ್ನಿಸಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು. ದ್ವೇಷದ ರಾಜಕಾರಣವೂ ಇಲ್ಲ ಪ್ರೀತಿಯ ರಾಜಕ್ಕಾರಣ ಎಂದು ಕರೆಯಬೇಕೋ. ಸೇಡಿನ ರಾಜಕಾರಣ ಮಾಡುವುದು ಅವರು ನಾವು ಯಾವತ್ತೂ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದರು.
ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ
ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ. ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ಅದು ಬಿಜೆಪಿಯವರ ಕೆಲಸ ಎಂದರು.
ಎಸ್.ಸಿ.ಎಸ್.ಟಿ ವಿದ್ಯಾರ್ಥಿವೇತಬದ ಸೀಲಿಂಗ್ ಬಗ್ಗೆ ಚರ್ಚೆ
ಎಸ್.ಸಿ.ಎಸ್.ಟಿ ಮೆರಿಟ್ ವಿದ್ಯಾರ್ಥಿವೇತನವನ್ನು ಶೇ. 60ರಿಂದ ಶೇ 75 ಕ್ಕೆ ಏರಿಸಿದ್ದು, 6 ಲಕ್ಷ ಸೀಲಿಂಗ್ ಲಿಮಿಟ್ ನಿಗದಿಪಡಿಸಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂಬ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನ ಶುಲ್ಕ ಶೇ.10%ರಷ್ಟು ಹೆಚ್ಚಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನನಗೆ ಗೊತ್ತಿಲ್ಲ ವಿಚಾರ ಮಾಡುವುದಾಗಿ ತಿಳಿಸಿದರು.
ಶೀರ್ಘದಲ್ಲಿ ಜಿ.ಪಂ/ ತಾ.ಪಂ ಚುನಾವಣೆ
ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗಳ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿ ಚುನಾವಣೆಯನ್ನು ಆದಷ್ಟೂ ಶೀಘ್ರದಲ್ಲಿ ಮಾಡುತ್ತೇವೆ ಎಂದರು.
State
ಬೆಂಗಳೂರು ಅರಮನೆ ಮೈದಾನದ ಜಾಗಕ್ಕೆ ಟಿ.ಡಿ.ಆರ್ ವಿತರಿಸುವುದು ರಾಜ್ಯದ ಹಿತಾಸಕ್ತಿಗೆ ಪ್ರತಿಕೂಲ: ಎಚ್.ಕೆ ಪಾಟೀಲ
ಬೆಂಗಳೂರು: ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ, 1996ಕ್ಕೆ ಸಂಬಂಧಪಟ್ಟ ಸಿವಿಲ್ ಅಪೀಲುಗಳು ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ವಿತರಿಸಿದ್ದಲ್ಲಿ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಅದಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು ತಿಳಿಸಿದರು.
ಬೆಂಗಳೂರು ಅರಮನೆ ಮೈದಾನದ ಒಟ್ಟು 472 ಎಕರೆ 16 ಗುಂಟೆ ಜಾಗಕ್ಕೆ ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ 1996ರ ಕಂಡಿಕೆ 8 ಮತ್ತು 9ರಲ್ಲಿ ರೂ.11.00 ಕೋಟಿಗಳನ್ನು ನಿಗದಿಗೊಳಿಸಲಾಗಿತ್ತು.13-3-1997 ರಂದು ಸದರಿ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯವು ಎತ್ತಿಹಿಡಿದಿರುತ್ತದೆ. 27 ವರ್ಷಗಳ ನಂತರ ಈ ವ್ಯಾಜ್ಯ ಮುಂಚೂಣಿಗೆ ಬಂದಿದ್ದು, 1996 ರಲ್ಲಿ 472 ಎಕರೆ 16 ಗುಂಟೆ ಜಾಗಕ್ಕೆ ರೂ.11.00 ಕೋಟಿಗಳನ್ನು (ಪ್ರತಿ ಎಕರೆಗೆ 2.30ಲಕ್ಷ ರೂ. ಅಂದಾಜು ಮೊತ್ತ)ನಿಗದಿಗೊಳಿಸಲಾಗಿತ್ತು. 1996ರ ಈ ಕಾಯ್ದೆಗೆ ಮಾನ್ಯ ಸರ್ವೋಚ್ಛ ನ್ಯಾಯಾಲಯದಿಂದ ಯಾವುದೇ ತಡೆಯಾಜ್ಞೆ ಇಲ್ಲ. ಆದರೆ, ದಿನಾಂಕ: 10.12.2024ರ ಮಾನ್ಯ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ಮತ್ತುಇತರೆ ಪ್ರಕರಣಗಳಲ್ಲಿ ಕರ್ನಾಟಕ ಸ್ಟಾಂಪ್ ಕಾಯ್ದೆಯ ಸೆಕ್ಷನ್ 45ಬಿ ಗೆ ಅನುಗುಣವಾಗಿ ಬೆಂಗಳೂರು ಅರಮನೆ ಮೈದಾನಕ್ಕೆ ಹೊಂದಿಕೊಂಡಂತಹ ಪ್ರದೇಶಗಳಿಗೆ ಚಾಲ್ತಿಯಲ್ಲಿರುವ ಮಾರ್ಗಸೂಚಿ ಮೌಲ್ಯಕ್ಕೆ ಅನುಗುಣವಾಗಿ ರಸ್ತೆ ಅಗಲೀಕರಣ ಉದ್ದೇಶಕ್ಕಾಗಿ ಬೆಂಗಳೂರು ಅರಮನೆ ಜಾಗವನ್ನು ಮೌಲ್ಯೀಕರಿಸಿ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ನೀಡುವಂತೆ ನಿರ್ದೇಶಿಸಿದೆ.
ರಾಜ್ಯದಲ್ಲಿ ಕೇವಲ 2 ಕಿ.ಮೀ ರಸ್ತೆ ಅಭಿವೃದ್ಧಿಗೆ ರೂ.3014.00 ಕೋಟಿ ಅಂದರೆ ಪ್ರತಿ ಎಕರೆಗೆ ರೂ.200.00 ಕೋಟಿ ನೀಡಿದರೆ ಆರ್ಥಿಕ ಪರಿಸ್ಥಿತಿ ಗಂಡಾಂತರ ಉಂಟಾಗಿ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣವಾಗದೇ ಪ್ರಗತಿ ವಿರೋಧವಾದ ಕ್ರಮವಾಗುತ್ತದೆ. 1996ರ ಕಾಯ್ದೆಗೆ ಪೂರಕವಾದ ಈ ಸುಗ್ರಿವಾಜ್ಞೆಯನ್ನು ರಾಜ್ಯಪಾಲರಿಗೆ ಮಂಡಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಸಚಿವರು ತಿಳಿಸಿದರು.
ಮಾರುಕಟ್ಟೆ ಮೊತ್ತ ಒಂದು ಕಡೆಯಾದರೆ, ಸರ್ಕಾರ ಈಗಾಗಲೇ ಪಡೆದಿರುವುದಕ್ಕೆ ನಿಗದಿ ಮಾಡಿರುವ ಮೊತ್ತ ಬೇರೆಯಿದೆ. ಅಭಿವೃದ್ಧಿ ಕಾಮಗಾರಿಗಳು ಜಾರಿಯಲ್ಲಿರುವಾಗ ಈ ವ್ಯಾಜ್ಯದಿಂದ ಕರ್ನಾಟಕ ಸರ್ಕಾರ ಸುಮಾರು 3014 ಕೋಟಿ ರೂಪಾಯಿ ಗಳನ್ನು 15.36 ಗಂಟೆ ಭೂಮಿಗೆ ಕೊಡಬೇಕಾಗಿ ಬರುತ್ತದೆ. ಇದು ಅತ್ಯಂತ ಅವ್ಯವಹಾರಿಕ.ಇದನ್ನು ಜಾರಿ ಮಾಡಿದರೆ ಅಭಿವೃದ್ಧಿಗೆ ಗಂಡಾಂತರ ಬರಲಿದೆ. 3014 ಕೋಟಿ ಕಡಿಮೆ ಮೊತ್ತವಲ್ಲ. ಈ ಮೊತ್ತವನ್ನು ಕೊಡಲಾಗುವುದಿಲ್ಲವಾದ್ದರಿಂದ ಅರಮನೆಯ ಭೂಮಿಯನ್ನು ತೆಗೆದುಕೊಳ್ಳುವುದು ಅಥವಾ ಬಿಡುವುದರ ಬಗ್ಗೆ ಅಧ್ಯಾದೇಶದ ಮೂಲಕ ನಿರ್ಧಾರ ಮಾಡಲು ಅಧ್ಯಾದೇಶ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದ ಬೊಕ್ಕಸವನ್ನು ಗಮನದಲ್ಲಿರಿಸಿಕೊಂಡು ರಾಜ್ಯ ಸರ್ಕಾರ ಹಿಂದೆ ಮಾಡಿರುವ ಕಾನೂನು ಅನ್ವಯ ಅದನ್ನು ಮುಂದುವರೆಸುವ ದೃಷ್ಟಿಯಿಂದ ಅಧ್ಯಾದೇಶ ಹೊರಡಿಸಿದೆ ಎಂದು ಸಚಿವರು ತಿಳಿಸಿದರು.
ಕರ್ನಾಟಕ ಕಾರ್ಯಕಲಾಪ ನಿರ್ಣಯಗಳ ಪ್ರಕಾರ ಯಾವುದಾದರೂ ನಿರ್ಣಯ ಅಥವಾ ಪ್ರಸ್ತಾವನೆಗಳನ್ನು .ನಮ್ಮ ನಿರ್ಧಾರ ರಾಜ್ಯ ಸರ್ಕಾರದ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮಾಡಲಾಗಿದೆ.
ಸುಗ್ರಿವಾಜ್ಞೆ ಜಾರಿ ಮಾಡುವುದರಿಂದ ಅಗತ್ಯವಿರುವಷ್ಟು ಜಾಗವನ್ನು ಬಳಸಿಕೊಳ್ಳಲು ಮತ್ತು ಉದ್ದೇಶಿತ ಪ್ರಸ್ತಾವನೆಯನ್ನು ಕೈಬಿಡಲು ರಾಜ್ಯ ಸರ್ಕಾರಕ್ಕೆ ಅಧಿಕಾರ ದೊರೆಯುತ್ತದೆ. ಯಾವುದೇ ನ್ಯಾಯಾಲಯದ ತೀರ್ಪು ಅಥವಾ ಸರ್ಕಾರವು ಈ ಮೊದಲು ಕೈಗೊಂಡ ಯಾವುದೇ ತೀರ್ಮಾನದಂತೆ ಯಾವುದೇ ಮೂಲಸೌಕರ್ಯ ಯೋಜನೆಯಿಂದ ಭಾಗಶ: ಅಥವಾ ಸಂಪೂರ್ಣವಾಗಿ ಹಿಂದೆ ಸರಿಯಲು ಈ ಸುಗ್ರಿವಾಜ್ಞೆ ಅವಕಾಶ ಕಲ್ಪಿಸುತ್ತದೆ ಎಂದು ಸಚಿವರು ವಿವರಿಸಿದರು.
15 ಎಕರೆಗೆ 3000 ಕೋಟಿಗಳನ್ನು ಕೊಡಲು ಸಾಧ್ಯವಿಲ್ಲ. 11 ಎಕರೆ ಜಾಗವನ್ನು 1996ರಲ್ಲಿಯೇ ಕೋಟಿಗಳನ್ನು ಕೊಟ್ಟು ಪಡೆಯಲಾಗಿದೆ. ಈ ಸಮಸ್ಯೆಗಳು ವ್ಯಾಜ್ಯಗಳು ಪರಿಹಾರವಾಗದ ಕಾರಣ ಉಂಟಾಗಿದೆ. ಟಿ.ಡಿ.ಆರ್ ಕೊಡದಿರಲು ಸುಗ್ರೀವಾಜ್ಞೆ ಹೊರಡಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
2011ರಲ್ಲಿ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ ಆಸ್ತಿಯ 15 ಎಕರೆ 39 ಗುಂಟೆ ಜಾಗವನ್ನು ಬಳಸಿಕೊಂಡು ಬೆಂಗಳೂರು ಅರಮನೆ ಮೈದಾನಕ್ಕೆ ಹೊಂದಿಕೊಂಡಿರುವ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಯನ್ನು ಅಗಲೀಕರಣಗೊಳಿಸುವ ಸಂಬಂಧ ಮಧ್ಯಂತರ ಅರ್ಜಿ ದಾಖಲಿಸಿದಾಗ ಸದರಿ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯವು 2014 ರಲ್ಲಿ ಟಿ.ಡಿ.ಆರ್ ನಿಯಮಗಳ ಪ್ರಕಾರ ಟಿ.ಡಿ.ಆರ್ ಷರತ್ತಿಗೊಳಪಡಿಸಿ, ಜಾಗವನ್ನು ಬಳಸಿಕೊಳ್ಳಲು ಅನುಮತಿ ನೀಡಿರುತ್ತದೆ.
ಮಾನ್ಯ ಸರ್ವೋಚ್ಛ ನ್ಯಾಯಾಲಯವು ನಿಗದಿಪಡಿಸಿರುವ ಭೂಸ್ವಾಧಿನ ಮೊತ್ತವು ರಾಜ್ಯದ ಮೇಲೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದ್ದು, ಆರ್ಥಿಕ ಶಿಸ್ತಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಆರ್ಥಿಕ ಶಿಸ್ತಿನ ತತ್ವಗಳನ್ನು ಅನುಸರಿಸದೇ ಅಂತಹ ಮೂಲಸೌಕರ್ಯ ಯೋಜನೆಗಳ ಮೇಲೆ ನೀತಿ-ನಿರ್ಣಯಗಳನ್ನು ತೆಗೆದುಕೊಳ್ಳುವುದು ಕಷ್ಟಸಾಧ್ಯ. ನೀತಿ-ನಿಯಮಕ ವಿಷಯಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ನಿರ್ಧರಿಸುವಾಗ ರಾಜ್ಯದ ಆರ್ಥಿಕ ನೀತಿಯನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಆರ್ಥಿಕವಾಗಿ ಕಾರ್ಯಸಾಧುವಲ್ಲದ ಯಾವುದೇ ಯೋಜನೆಯು ಸಾರ್ವಜನಿಕ ಹಿತಾಸಕ್ತಿಗೆ ಮತ್ತು ಸಾರ್ವಜನಿಕ ನೀತಿಗೆ ವಿರುದ್ಧವಾಗಿರುತ್ತದೆ.
ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಿವಿಲ್ ಅಪಿಲ್ನಲ್ಲಿ ರಾಜ್ಯದ ಪರವಾಗಿ ಆದೇಶವಾದಲ್ಲಿ ಮಾರಾಟ ಅಥವಾ ಇನ್ನಾವುದೇ ರೀತಿಯಲ್ಲಿ ಬಳಕೆಯಾದ ಟಿ.ಡಿ.ಆರ್ ಗಳನ್ನು ಹಿಂಪಡೆಯಲಾಗಲೀ ಅಥವಾ ಮರುಪಡೆಯಲಾಗಲೀ ಅಸಾಧ್ಯವಾಗುವುದರಿಂದ ಸುಗ್ರಿವಾಜ್ಞೆಯ ಮೂಲಕ ಅಧಿಕಾರ ಪಡೆಯಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
• ಕರ್ನಾಟಕ ಸರ್ಕಾರ ಕಾರ್ಯಕಲಾಪಗಳ ನಿರ್ವಹಣೆ ನಿಯಮಗಳಿಗೆ ತಿದ್ದುಪಡಿ:
“ಅಧ್ಯಾದೇಶಗಳು ಒಳಗೊಂಡಂತೆ ಶಾಸನಗಳ ಪ್ರಸ್ತಾವಗಳು, ಆದರೆ ಪೂರ್ಣವಾಗಿ ಔಪಚಾರಿಕ ಸ್ವರೂಪದ ಅಥವಾ ಅತೀ ಕಡಿಮೆ ಪ್ರಾಮುಖ್ಯತೆ ಹೊಂದಿರುವ ವಿಷಯಗಳೆಂದು ಮುಖ್ಯಮಂತ್ರಿಯವರು ಅಭಿಪ್ರಾಯ ಪಡುವ ಪ್ರಸ್ತಾವಗಳನ್ನು ಹೊರತುಪಡಿಸಿ” ಎಂಬ ನಿಯಮವನ್ನು ತಿದ್ದುಪಡಿ ಮಾಡಿ ತುರ್ತು ಸಂದರ್ಭಗಳಲ್ಲಿ ರಾಜ್ಯ ಸಚಿವ ಸಂಪುಟದ ಪೂರ್ವಾನುಮೋದನೆ ಇಲ್ಲದೇ ರಾಜ್ಯ ವಿಧಾನ ಮಂಡಲದಲ್ಲಿ ವಿಧೇಯಕಗಳನ್ನು ಮಂಡಿಸಲು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡುತ್ತದೆ. ಇಂತಹ ಪ್ರಸ್ತಾವನೆಗಳಿಗೆ ಘಟನೋತ್ತರ ಮಂಜೂರಾತಿ ಪಡೆಯಲು ಈ ತಿದ್ದುಪಡಿಯಲ್ಲಿ ಅವಕಾಶ ನೀಡುತ್ತದೆ.
ಅಭಿವೃದ್ಧಿ ಕಾಮಗಾರಿಗಳಿಗೆ ದೊಡ್ಡ ಮೊತ್ತದ ಹಣ ಕೊಟ್ಟು ರಾಜ್ಯದ ಬೊಕ್ಕಸಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ನ್ಯಾಯಯುತವಾದ ಅಭಿವೃದ್ಧಿ ಕೆಲಸಗಳಾಗಲು ಉತ್ತಮ ವಾತಾವರಣ ಸೃಷ್ಟಿಯಾಗಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಮುಖ್ಯಮಂತ್ರಿಗಳು ನಿರ್ಧಾರ ಮಾಡಿ ಬಿಲ್ ಅಥವಾ ಅಧ್ಯಾದೇಶ ಕಳಿಸುವ ಸಂದರ್ಭ ಬಂದಾಗ ಸಚಿವ ಸಚಿವ ಸಂಪುಟ ದಲ್ಲಿಟ್ಟು ನಂತರವೇ ಹೋಗಬೇಕಿತ್ತು. ರಾಜ್ಯಪಾಲರು ಮುಖ್ಯಮಂತ್ರಿಗಳ ಹಂತದಲ್ಲಿಯೇ ಆಗಬಹುದು ಎಂದಾದರೆ Transaction of Business Rules ನ್ನು ತಿದ್ದುಪಡಿ ಮಾಡಿಕೊಳ್ಳುವಂತೆ ಸಲಹೆ ಕೊಟ್ಟ ಮೇರೆಗೆ ವ್ಯವಹಾರ ಸುಗಮ ನಿರ್ವಹಣೆ -Transaction of Business Rules ನ್ನು ತಿದ್ದುಪಡಿ ಮಾಡಿ ಅದರ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದರು.
ಮೈಕ್ರೋ ಫೈನಾನ್ಸ್: ವಿಶೇಷ ಕಾನೂನು ರಚಿಸಲು ಸಿಎಂ ಅಧ್ಯಕ್ಷತೆಯಲ್ಲಿ ಸಭೆ
ಮೈಕ್ರೋ ಫೈನಾನ್ಸ್ ಕುರಿತು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಮುಖ್ಯಮಂತ್ರಿಗಳು ನಾಳೆಯೇ ಈ ಕುರಿತು ತುರ್ತು ಸಭೆ ಕರೆದಿದ್ದಾರೆ. ವಿಶೇಷ ಕಾನೂನು ರಚಿಸಲು ಹಾಗೂ ಶೋಷಣೆಯ ಪ್ರಕರಣಗಳನ್ನು ಮಟ್ಟ ಹಾಕಲು ಏನು ಮಾಡಬೇಕೆಂದು ನಿರ್ಧರಿಸಬೇಕಿದೆ. ಮೈಕ್ರೊ ಫೈನಾನ್ಸ್ ಏಜೆನ್ಸಿಗಳಿಂದಾಗುತ್ತಿರುವ ಶೋಷಣೆಯ ಬಗ್ಗೆ ಕಾನೂನು ರಚಿಸಲು ಸಾಧ್ಯವಾಗಿಲ್ಲ. ಕರ್ನಾಟಕ ಮೈಕ್ರೋ ಫೈನಾನ್ಸ್ ಇನ್ಸ್ಟಿಟ್ಯೂಷನ್ ರೆಗ್ಯೂಲೇಶನ್ ಆಫ್ ಮನಿ ಲೆಂಡಿಂಗ್ ಬಿಲ್ ರೂಪಿಸಲು ಸರ್ಕಾರ ಚಿಂತನೆ ಮಾಡುತ್ತಿದೆ. ನಾಳೆ ಇದನ್ನು ಮಂಡನೆ ಮಾಡಿ ಹಲವಾರು ವಿಷಯಗಳ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗುವುದು ಎಂದರು.
ರಾಜ್ಯಪಾಲರು ಹಲವಾರು ಬಿಲ್ಲುಗಳನ್ನು ಹಿಂತಿರುಗಿಸಿರುವ ಬಗ್ಗೆ ಸ್ಪಷ್ಟೀಕರಣ ನೀಡಲಾಗುವುದು ಎಂದು ಸಚಿವರು ಇದೆ ಸಂದರ್ಭದಲ್ಲಿ ತಿಳಿಸಿದರು.
State
ಖೋ-ಖೋ ವಿಶ್ವಕಪ್ ವಿಜೇತೆ ಚೈತ್ರಾರನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ
2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಲು ಅತ್ಯುತ್ತಮ ಪ್ರದರ್ಶನ ನೀಡಿದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರು ನರಸೀಪುರದ ಕುರಬೂರಿನ ಚೈತ್ರಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಪಟುಗಳಿಗೆ ತಲಾ 5 ಲಕ್ಷ ರೂಪಾಯಿಯ ಬಹುಮಾನ ಘೋಷಿಸಿದರು.ಸಚಿವರಾದ ಚಲುವರಾಯಸ್ವಾಮಿ ಮತ್ತು ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.
State
ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್ಗೆ ನಿರ್ಧಾರವೇ ಅಂತಿಮ ಎಂದ ಸಿದ್ದರಾಮಯ್ಯ
ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆ ಕೂಗು ಕೇಳಿ ಬರುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಮುಖ್ಯಮಂತ್ರಿಯಾಗುವಂತೆ ಆಶಿಸುತ್ತಿದ್ದಾರೆ.
ನಿನ್ನೆಯಷ್ಟೇ ಡಿಸಿಎಂ ಡಿಕೆಶಿ ಅವರನ್ನು ಭೇಟಿ ಮಾಡಿದ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು, ಡಿಕೆಶಿ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದಿದ್ದರು.
ಈ ಎಲ್ಲಾ ಬೆಳವಣಿಗೆಗಳ ನಡುವೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ಈ ಬಗ್ಗೆ ಪಕ್ಷದ ವರಿಷ್ಠರು ಏನು ತೀರ್ಮಾನ ಮಾಡುತ್ತಾರೋ ಅದೇ ಅಂತಿಮ ಎಂದರು.
ಇನ್ನು ನಿಗಮ ಹಾಗೂ ಮಂಡಳಿಗಳ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂಬ ಬಿಜೆಪಿಗರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನಾವು ಅಧಿಕಾರಕ್ಕೆ ಬಂದ ದಿನದಿಂದಲೂ ಪದೇ ಪದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
-
Mysore17 hours ago
ಹೃದಯಾಘಾತದಿಂದ ಯುವರಾಜ ಕಾಲೇಜಿನ ಪ್ರಾಂಶುಪಾಲ ನಿಧನ
-
Kodagu18 hours ago
ಎ.ಸಿ.ಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
-
Mysore14 hours ago
ಲೋಕಾಯುಕ್ತ ಸರ್ಕಾರದ ಕೈಗೊಂಬೆ: ಸಿಎಂ ಕ್ಲೀನ್ ಚೀಟ್ಗೆ ಹಳ್ಳಿಹಕ್ಕಿ ಪ್ರತಿಕ್ರಿಯೆ
-
Kodagu15 hours ago
ಕಡಂಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಬಿಡ್ಡಿಂಗ್ ಪ್ರಕ್ರಿಯೆ
-
Kodagu18 hours ago
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
-
Hassan12 hours ago
ಈ ಸಲದ ಗಣರಾಜ್ಯೋತ್ಸವ ಸನ್ಮಾನಕ್ಕೆ ಅಪರೂಪದ ವೈದ್ಯ ಡಾ.ನಿತಿನ್ ಆಯ್ಕೆ
-
Kodagu13 hours ago
ಬೆಂಗಳೂರು ಒಕ್ಕಲಿಗ ಸಂಘದ ಸಹಯೋಗದೊಂದಿಗೆ ಪ್ರತಿಭಟನೆ ಸಿದ್ದತೆ
-
Mysore13 hours ago
ಸುತ್ತೂರು ಜಾತ್ರಾ ಮಹೋತ್ಸದಂದು ಹಸೆಮಣೆ ಏರಲಿದ್ದಾರೆ 155 ಜೋಡಿಗಳು