Sports
ನ್ಯೂ ಮಂಗಳೂರು ಪೋರ್ಟ್ ನಲ್ಲಿ ಮರೈನ್ ಇಂಜಿನಿಯರ್ ಹುದ್ದೆಗಳ ನೇಮಕಾತಿ : ಸಂಬಳ ₹83,000 ರವರೆಗೆ

ನ್ಯೂ ಮಂಗಳೂರು ಪೋರ್ಟ್ ನಲ್ಲಿ ಮರೈನ್ ಇಂಜಿನಿಯರ್ ಹುದ್ದೆಗಳ ನೇಮಕಾತಿ : ಸಂಬಳ ₹83,000 ರವರೆಗೆ
New Mangalore Port Authority Recruitment 2024 –
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ಮಂಗಳೂರಿನಲ್ಲಿ ಖಾಲಿ ಇರುವಂತ ಮೆರೈನ್ ಇಂಜಿನಿಯರ್ ಮತ್ತು ಇಂಜಿನಿಯರ್ ಗ್ರೇಡ್ II ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈ ನೇಮಕಾತಿಗಾಗಿ ನೀವು ಅರ್ಹರಿದ್ದರೆ, ಅಗತ್ಯ ದಾಖಲಾತಿಗಳೊಂದಿಗೆ ಕೆಳಗಿನ ವಿಳಾಸಕ್ಕೆ ಫೆಬ್ರವರಿ 14, 2025 ರಂದು ನೇರ ಸಂದರ್ಶನಕ್ಕೆ ಹಾಜರಾಗಬೇಕು.
ವಿಳಾಸ :
The Chamber of The Person,
New Mangalore Port Authority,
Panambur, Mangaluru, Karnataka – 575010

ನೇಮಕಾತಿಯ ಆಯ್ಕೆ ಪ್ರಕ್ರಿಯೆಯಲ್ಲಿ ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನದ ವಿವರ :
• ಮೆರೈನ್ ಇಂಜಿನಿಯರ್ ಹುದ್ದೆಗಳಿಗೆ – 83,000ರೂ.
• ಇಂಜಿನಿಯರ್ ಗ್ರೇಡ್ II ಹುದ್ದೆಗಳಿಗೆ – 60,000ರೂ.
ಈ ಹುದ್ದೆಗಳ ನೇಮಕಾತಿಗಾಗಿ ನಿಗದಿಪಡಿಸಿದ ಅರ್ಹತೆಗಳ ವಿವರ, ಶೈಕ್ಷಣಿಕ ಅರ್ಹತೆಗಳು ಹಾಗೂ ಹುದ್ದೆಗಳ ನೇಮಕಾತಿಯ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
ಅಧಿಕೃತ ಜಾಲತಾಣ –
https://newmangaloreport.gov.in/vacancy

Sports
ಕೊನೆರು ಹಂಪಿಗೆ ಸೋಲುಣಿಸಿ ಚೆಸ್ ವಿಶ್ವಕಪ್ ಗೆದ್ದ 19ರ ಹರೆಯದ ದಿವ್ಯಾ ದೇಶ್ಮುಖ್
ಬಟುಮಿ(ಜಾರ್ಜಿಯಾ): ಭಾರತದ ಅನುಭವಿ ಗ್ರಾಂಡ್ಮಾಸ್ಟರ್ ಕೊನೆರು ಹಂಪಿಯನ್ನು ರೋಚಕವಾಗಿ ಮಣಿಸಿದ 19 ವರ್ಷದ ದಿವ್ಯಾ ದೇಶ್ಮುಖ್ 2025ರ ಫಿಡೆ ಮಹಿಳಾ ಚೆಸ್ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಈ ಮೂಲಕ ಮಹಿಳಾ ಚೆಸ್ ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತದ ಮೊದಲ ಮಹಿಳಾ ಚೆಸ್ ಪಟು ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ಮೊದಲ ಟೈ ಬ್ರೇಕರ್ ಯಾಪಿಡ್ ಗೇಮ್ ಕೂಡಾ ರೋಚಕ ಡ್ರಾನಲ್ಲಿ ಅಂತ್ಯವಾಗಿತ್ತು. ಹೀಗಾಗಿ ಫಲಿತಾಂಶಕ್ಕಾಗಿ ಎರಡನೇ ಟೈ ಬ್ರೇಕರ್ನಲ್ಲಿ ಅನುಭವಿ ಚೆಸ್ ಗ್ರಾಂಡ್ಮಾಸ್ಟರ್ ಕೊನೆರು ಹಂಪಿ ಸಮಯದ ಒತ್ತಡದಲ್ಲಿ ಕೊಂಚ ಎಡವಿದರು.

ಇದರ ಲಾಭ ಪಡೆದ ದಿವ್ಯಾ ದೇಶ್ಮುಖ್ 1.5-0.5 ಅಂತರದಲ್ಲಿ ಜಯಭೇರಿ ಬಾರಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದರು. ಇದರ ಜತೆಗೆ ದಿವ್ಯಾ ದೇಶ್ಮುಖ್ ಗ್ರಾಂಡ್ಮಾಸ್ಟರ್ ಪಟ್ಟವನ್ನು ಅಲಂಕರಿಸಿದರು. ವಿಶ್ವ ಬ್ಯಾಂಕಿಂಗ್ನಲ್ಲಿ 16ನೇ ಸ್ಥಾನ ಪಡೆದಿದ್ದ ದಿವ್ಯಾ ದೇಶ್ಮುಖ್ ಇದೀಗ ಭಾರತದ 88ನೇ ಟ್ರ್ಯಾಂಡ್ ಮಾಸ್ಟರ್ ಆಗಿ ಹೊರಹೊಮ್ಮಿದ್ದಾರೆ.
Sports
ಭಾರತ-ಇಂಗ್ಲೆಂಡ್ 4th ಟೆಸ್ಟ್: ಟೀಂ ಇಂಡಿಯಾ ಆಟಗಾರರಾದ ಶುಭಮನ್, ರಾಹುಲ್ ಉತ್ತಮ ಜೊತೆಯಾಟದ ಮೂಲಕ ತಿರುಗೇಟು
ಮ್ಯಾಂಚಿಸ್ಟರ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದ 4th ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹಾಗೂ ಕೆ.ಎಲ್.ರಾಹುಲ್ ಅವರು ಉತ್ತಮ ಮೊತ್ತ ದಾಖಲಿಸುವ ಮೂಲಕ ಇಂಗ್ಲೆಂಡ್ ಆಟಗಾರರಿಗೆ ಭರ್ಜರಿ ತಿರುಗೇಟು ನೀಡಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯ ಮ್ಯಾಂಚಿಸ್ಟರ್ನಲ್ಲಿ ನಡೆಯುತ್ತಿದ್ದು, ಶನಿವಾರ(ಜು.26) ದಿನದಾಟದಲ್ಲಿ ಇಂಗ್ಲೆಂಡ್ ಮೊದಲ ಇನಿಂಗ್ಸ್ನಲ್ಲಿ 7 ವಿಕೆಟ್ಗೆ 544ರನ್ಗಳಿಂದ ಆಟ ಮುಂದುವರೆಸಿತ್ತು. ಲಿಯಾಮ್ ಡಾಸನ್(26) ಅವರಿಗೆ ವೇಗಿ ಜಸ್ಪ್ರೀತ್ ಬುಮ್ರಾ ಪೆವಿಲಿಯನ್ನ ವಿಕೆಟ್ ಪಡೆದು ದಾರಿ ತೋರಿಸಿದರು. 9ನೇ ವಿಕೆಟ್ಗೆ ನಾಯಕ ಬೆನ್ ಸ್ಟೋಕ್ಸ್ ಮತ್ತು ಬ್ರೈಡನ್ ಕಾರ್ಸೆ ಜೋಡಿ ಅಮೋಘ ಜೊತೆಯಾಟದ ಮೂಲಕ ಉತ್ತಮ ಮೊತ್ತವನ್ನು ಗಳಿಸಿದ್ದರು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಭಾರತದ ಬೌಲರ್ಗಳು ವಿಫಲರಾದರು. ಇವರಿಬ್ಬರು 97 ಎಸೆತಗಳಲ್ಲಿ 95 ರನ್ ಗಳಿಸಿದ್ದರು.

ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಪ್ರಮುಖ ಸಮಯದಲ್ಲಿ ಫಾರ್ಮ್ಗೆ ಮರಳಿ ತಂಡಕ್ಕೆ ಆಧಾರವಾಗಿದ್ದಾರೆ. ಸ್ಟೋಕ್ಸ್ 198 ಎಸೆತಗಳಲ್ಲಿ 11 ಬೌಂಡರಿ, 3 ಸಿಕ್ಸರ್ ಮತ್ತು 141 ರನ್ ಕಲೆಹಾಕಿದ್ದರು. ಅಂತಿಮವಾಗಿ ಇಂಗ್ಲೆಂಡ್ 669 ರನ್ಗಳಿಗೆ ಆಲೌಟ್ ಆಗಿದೆ. ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ 4 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ ಮತ್ತು ವಾಷಿಂಗ್ಟನ್ ಸುಂದರ್ ತಲಾ 2 ವಿಕೆಟ್ ಪಡೆದು ಮಿಂಚಿದರು.
ಇನಿಂಗ್ಸ್ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ ಭಾರತ ಆರಂಭದಲ್ಲಿ ಕಳಪೆಯಾಟವಾಡಿತ್ತು. ಮೊದಲ ಓವರ್ನಲ್ಲೇ ಟೀಂ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಮತ್ತು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಸಾಯಿ ಸುದರ್ಶನ್ ಅವರು ಔಟಾದರು.
ಭಾರತ ತಂಡ ಖಾತೆ ತೆರೆಯುವ ಮುನ್ನವೇ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ಸಂದರ್ಭದಲ್ಲಿ ತಂಡಕ್ಕೆ ನಾಯಕ ಶುಭಮನ್ ಗಿಲ್ ಮತ್ತು ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಅವರ ಜೊತೆಯಾಟ ಉತ್ತಮ ಪ್ರದರ್ಶನ ನೀಡಿತ್ತು.

ಈ ಇಬ್ಬರು ಆಟಗಾರು 377 ಎಸೆತಗಳನ್ನು ಎದುರಿಸಿ ಅಜೇಯರಾಗಿ 174 ರನ್ಗಳ ಜೊತೆಯಾಟವನ್ನು ಆಡಿದರು. ಇನ್ನೂ ಕೆ.ಎಲ್.ರಾಹುಲ್ 8 ಬೌಂಡರಿ ಬಾರಿಸಿದ್ದು, 87 ರನ್ಗಳನ್ನು ಕಲೆ ಹಾಕಿದ್ದಾರೆ. ನಾಯಕ ಶುಭಮನ್ 10 ಬೌಂಡರಿ ಬಾರಿಸಿ 78 ರನ್ ಗಳಿಸುವ ಮೂಲಕ ಕೊನೆಯ ದಿನಕ್ಕೆ ಬ್ಯಾಟಿಂಗ್ ಅನ್ನು ಕಾಯ್ದುಕೊಂಡಿದ್ದಾರೆ. ಅಲ್ಲದೇ ಭಾರತ ಇನ್ನಿಂಗ್ಸ್ ಮುನ್ನಡೆ ಸಾಧಿಸಲು 137 ರನ್ಗಳ ಅವಶ್ಯಕತೆ ಇದೆ.
Sports
ಏಷ್ಯಾಕಪ್-2025: ಆಪರೇಷನ್ ಸಿಂಧೂರ ಬಳಿಕ ಸೆ.14ಕ್ಕೆ ಭಾರತ-ಪಾಕ್ ಮುಖಾಮುಖಿ
ನವದೆಹಲಿ: ಏಷ್ಯಾಕಪ್-2025 ಆಯೋಜನೆಗೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿ ಹೊರಬಿದ್ದಿದ್ದು, 8 ತಂಡಗಳ ನಡುವೆ ನಡೆಯಲ್ಲಿರುವ ಈ ಪಂದ್ಯಾವಳಿ ಯುಎಇಯಲ್ಲಿ ನಡೆಯಲ್ಲಿದೆ.

ಈ ಟೂರ್ನಿಯ ಆಯೋಜಕತ್ವದ ಹಕ್ಕು ಬಿಸಿಸಿಐ ಬಳಿ ಇರಲಿದ್ದು, ಸೆಪ್ಟೆಂಬರ್. 9 ರಿಂದ ಪ್ರಾರಂಭವಾಗಿ ಸೆಪ್ಟೆಂಬರ್. 28 ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಮೊದಲೇ ವರದಿಯಾದಂತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಈ ಪಂದ್ಯಾವಳಿಯಲ್ಲಿ ಒಂದೇ ಗುಂಪಿನಲ್ಲಿರಲಿದ್ದು, ಬದ್ಧವೈರಿಗಳು ಸೆಪ್ಟೆಂಬರ್. 14 ರಂದು ಮುಖಾಮುಖಿಯಾಗಲಿವೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು, ಇಂದು (ಜು. 26) ತಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ನಲ್ಲಿ ಏಷ್ಯಾಕಪ್ ದಿನಾಂಕವನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೇ ಪಂದ್ಯಾವಳಿ ಯುಎಇಯಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 9 ರಂದು ಪ್ರಾರಂಭವಾಗಲಿರುವ ಈ ಪಂದ್ಯಾವಳಿಯ ಫೈನಲ್ ಸೆಪ್ಟೆಂಬರ್. 28 ರಂದು ನಡೆಯಲಿದೆ ಎಂದು ತಿಳಿಸಿದ್ದಾರೆ.
-
Manglore13 hours agoತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಣ್ಣನೂ ಹೃದಯಾಘಾತಕ್ಕೆ ಬಲಿ
-
Hassan9 hours agoಹಾಸನ : ರಸ್ತೆ ವಿಭಜಕಕ್ಕೆ ಸ್ವಿಫ್ಟ್ ಕಾರು ಡಿಕ್ಕಿ :ಇಬ್ಬರು ಯುವಕರ ಧಾರುಣ ಸಾ*ವು
-
Mandya1 hour agoಮಹಿಳೆಯರಿಗೆ ಬಾಗಿನ ನೀಡುವುದು ಹಿಂದೂ ಸಂಪ್ರದಾಯದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ : ಮಾಜಿ ಸಚಿವ ಶ್ರೀರಾಮುಲು
-
Chamarajanagar11 hours ago*ಪ್ರೀತಿ ನಿರಾಕರಣೆ: ಚಾಕುವಿನಿಂದ ಇರಿದುಕೊಂಡ ಯುವಕ*
-
Hassan3 hours agoಧರ್ಮಸ್ಥಳ ಪ್ರಕರಣ| ಸರ್ಕಾರ ಎಚ್ಚೆತ್ತುಕೊಳ್ಳಬೇಕು: ಬಿ.ವೈ.ವಿಜಯೇಂದ್ರ
-
Manglore11 hours agoಬೆಳ್ತಂಗಡಿ: ವಿಜಯೇಂದ್ರ ನೇತೃತ್ವದಲ್ಲಿ ‘ಬಿಜೆಪಿ’ ಧರ್ಮಸ್ಥಳಕ್ಕೆ ಭೇಟಿ
-
Mysore5 hours agoಖಾಸಗಿ ಇವಿ ಚಾರ್ಜಿಂಗ್ ಸ್ಟೇಷನ್ ಉದ್ಘಾಟಿಸಿದ ಸೆಸ್ಕ್ ಎಂಡಿ
-
Hassan8 hours agoಹುಡಾ ಗೆ ಭೂಮಿ ಕೊಟ್ಟ ಗ್ರಾಮಸ್ಥರಿಗೆ ಶೀಘ್ರ ನಿವೇಶನ : ಗೇಕರವಳ್ಳಿ ಗ್ರಾಮದಲ್ಲಿ ಶಾಸಕ ಸ್ವರೂಪ್ ಪ್ರಕಾಶ್
