Connect with us

Location

ಪ್ರೇಕ್ಷಕರ ಮನಗೆದ್ದ ಬೊಮ್ಮನಹಳ್ಳಿ ಕಿಂದರಿಜೋಗಿ

Published

on

ಪ್ರೇಕ್ಷಕರ ಮನಗೆದ್ದ ಬೊಮ್ಮನಹಳ್ಳಿ ಕಿಂದರಿಜೋಗಿ

ಕುವೆಂಪು ಅವರ ಜನ್ಮದಿನಾಚರಣೆಯ ಅಂಗವಾಗಿ ಏರ್ಪಡಿಸಿರುವ ನಾಟಕೋತ್ಸವದಲ್ಲಿ ಸರಿಸುಮಾರು ಎಂಬತ್ತು ಜನ ಮಕ್ಕಳು ಅಭಿನಯಿಸಿದ ಬೊಮ್ಮನಹಳ್ಳಿ ಕಿಂದರಿಜೋಗಿ ನಾಟಕವು ಪ್ರೇಕ್ಷಕರ ಗಮನ ಸೆಳೆಯಿತು.
ಇಡೀ ನಾಟಕ ಹಾಡಿನ ಮೂಲಕವೇ ಸಾಗುತ್ತಾ ನಡುನಡುವೆ ಬರುವ ಸಂಭಾಷಣೆಗಳನ್ನು ಪೋಷಿಸುವಂತಿದ್ದವು.
ನಾಟಕ ಮುಗಿಯುವ ತನಕ ಪ್ರೇಕ್ಷಕರ ಮೊಗದಲ್ಲಿ ನಗುವನ್ನು ಮಾಸದಂತೆ ರಂಗಕಹಳೆ ಸಂಸ್ಥೆಯ ಮಕ್ಕಳು ಅದ್ಭುತವಾಗಿ ಅಭಿನಯಿಸಿದರು.
ಒಂದು ಗಂಟೆ ಅವಧಿಯ ಬೊಮ್ಮನಹಳ್ಳಿ ಕಿಂದರಿಜೋಗಿ ನಾಟಕ ಮುಗಿದ ನಂತರ ಎರಡನೇ ನಾಟಕ ಮೋಡಣ್ಣನ ತಮ್ಮ ಪ್ರದರ್ಶನವಾಯಿತು.
ಒಂದೊಂದು ಗಂಟೆಗಳ ಈ ಎರಡು ನಾಟಕಗಳು ಮಕ್ಕಳಿಗೆ ಮಾತ್ರವಲ್ಲ, ಹಿರಿಯ ಪ್ರೇಕ್ಷಕರನ್ನು ರಂಜಿಸಿದವು.
ಇಂದೂ ಕೂಡ ನಾಟಕೋತ್ಸವ ಮುಂದುವರೆಯಲಿದ್ದು ಯಮನಸೋಲು ನಾಟಕವಿದೆ. ನಂತರ ನನ್ನ ಗೋಪಾಲ ಚಲನಚಿತ್ರ ಪ್ರದರ್ಶನವಿದೆ.
ಸಾರ್ವಜನಿಕರು ತಮ್ಮ ಮಕ್ಕಳೊಂದಿಗೆ ಆಗಮಿಸಿ ಕುವೆಂಪು ಅವರ ನಾಟಕೋತ್ಸವದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಂಘಟಕರು ಮನವಿ ಮಾಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Mysore

ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೂ ಮಾರಾಟ ಮಾಡಲು ಅವಕಾಶ ನೀಡಿ

Published

on

ಮೈಸೂರು : ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೆ ಮಾರಾಟಕ್ಕೆ ಅವಕಾಶ ಮಾಡಿಕೊಡಲು ಹಾಗೂ ಅವರ ಮೇಲೆ ವಿಧಿಸಲಾಗುತ್ತಿದ್ದ ದಂಡವನ್ನು ಮನ್ನಾ ಮಾಡಬೇಕೆಂದು ಮನವಿ ಸಲ್ಲಿಸಿದ್ದೇನೆ ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಒಡೆಯರ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಗುರುವಾರ ಭೇಟಿ ಮಾಡಿದ ನಂತರ ಸಂಸದರು ಈ ವಿಷಯ ತಿಳಿಸಿದ್ದಾರೆ.

ಇದಕ್ಕೆ ಸೂಕ್ತವಾಗಿ ಸ್ಪಂದನೆ ವ್ಯಕ್ತಪಡಿಸಿದ ವಾಣಿಜ್ಯ ಸಚಿವರಾದ ಪಿಯೂಷ್ ಗೋಯಲ್, ಕಾರ್ಡ್ ಹೊಂದಿರದ (ಪರವಾನಗಿ ರಹಿತ) ತಂಬಾಕು ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸುವ ಕುರಿತು ಭರವಸೆ ನೀಡಿದ್ದಾರೆ ಎಂದು ಸಂಸದರು ತಿಳಿಸಿದರು.

ಪರವಾನಗಿ ತಂಬಾಕು ಬೆಳೆಗಾರರಿಗೆ ವಿಧಿಸುತ್ತಿದ್ದ ದಂಡವನ್ನು ಮನ್ನಾ ಮಾಡುವ ಸಂಬಂಧ ತಂಬಾಕು ಮಂಡಳಿಗೆ ಸೂಕ್ತ ನಿರ್ದೇಶನ ನೀಡುವ ಭರವಸೆಯನ್ನೂ ನೀಡಿದ್ದಾರೆ ಎಂದು ಯದುವೀರ್ ಸ್ಪಷ್ಟಪಡಿಸಿದ್ದಾರೆ.

ಅತಿ ಶೀಘ್ರದಲ್ಲೇ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ ಎಂದು ಸಂಸದರು ತಿಳಿಸಿದರು.

ನಮ್ಮ ಕ್ಷೇತ್ರದ ಬೆಳಗಾರರ ಪರವಾಗಿ ದನಿ ಎತ್ತಲು ನಾನು ಸದಾ ಬದ್ಧನಾಗಿದ್ದೇನೆ ಎಂದು ಯದುವೀರ್ ಹೇಳಿದ್ದಾರೆ.

Continue Reading

Hassan

ದೊಡ್ಡಕಣಗಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ

Published

on

ವರದಿ: ಸತೀಶ್ ಚಿಕ್ಕಕಣಗಾಲು

ಆಲೂರು: ತಾಲ್ಲೂಕಿನ ದೊಡ್ಡಕಣಗಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆಯಿತು. ಎಲ್ಲಾ ಸ್ಥಾನಗಳಿಗೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಕುಮಾರ್‌ ಅವರು ಅವಿರೋಧ ಆಯ್ಕೆ ಘೋಷಿಸಿದರು.

ಸಾಮಾನ್ಯ ಕ್ಷೇತ್ರದಿಂದ ಕೆ.ಕೆ. ಜಯರಾಮ, ಹೆಚ್‌.ಎಂ. ನಾರಾಯಣ, ಕೆ.ಟಿ. ಬೋರೇಗೌಡ, ಸುಬ್ಬೇಗೌಡ, ವೆಂಕಟೇಗೌಡ, ಮಹಿಳಾ ಕ್ಷೇತ್ರದಿಂದ ಶಕುಂತಲ, ಪ್ರತಿಮ, ನಂಜಶೆಟ್ಟಿ (ಹಿಂದುಳಿದ ವರ್ಗ ಎ), ಕೆ. ಜಗದೀಶ್‌ (ಹಿಂದುಳಿದ ವರ್ಗ ಬಿ), ರಂಗಸ್ವಾಮಿ (ಪ.ಜಾ.) ಹಾಗು ಪರಿಶಿಷ್ಟ ಪಂಗಡದ ಒಂದು ಸ್ಥಾನಕ್ಕೆ ಯಾರೂ ಅರ್ಜಿ ಸಲ್ಲಿಸದ ಹಿನ್ನಲೆಯಲ್ಲಿ ಸ್ಥಾನ ಖಾಲಿಯಿದೆ. ಸಾಲಗಾರರಲ್ಲದ ಕ್ಷೇತ್ರದಿಂದ ಕೆ.ಸಿ. ಸಂತೋಷ್‌ ಅವರು ಆಯ್ಕೆಯಾದರು. 2030ರ ಫೆ. 9ರ ವರೆಗೆ ಚುನಾಯಿತರು ನಿರ್ದೇಶಕರಾಗಿ ಮುಂದುವರೆಯುತ್ತಾರೆ.

ತಾಲ್ಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಕುಮಾರ್‌, ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಹೆಚ್‌ಡಿಸಿಸಿ ಬ್ಯಾಂಕ್‌ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್‌, ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಕುಮಾರಸ್ವಾಮಿ, ನಂಜೇಶ್‌ ಸೇರಿದಂತೆ ಗ್ರಾಮದ ಹಿರಿಯ ಮುಖಂಡರು ಹಾಜರಿದ್ದರು.

Continue Reading

Kodagu

ಸುಂಟ್ಟಿಕೊಪ್ಪ: ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನೂಪ್ ಕುಮಾರ್ ರಾಜೀನಾಮೆ?

Published

on

ಮಡಿಕೇರಿ: ಸುಂಟಿಕೊಪ್ಪ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನೂಪ್ ಕುಮಾರ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ತಮ್ಮ ರಾಜೀನಾಮೆ ಬಗ್ಗೆ ಮುಂದಿನ ಮೂರು ದಿನಗಳೊಳಗೆ, ತಮ್ಮ ಹಿತೈಷಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದೆಂದು ಅನೂಪ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅನೂಪ್ ಕುಮಾರ್, ನಾನು ಕಳೆದ ಹಲವು ವರ್ಷಗಳಿಂದ ಯುವ ಕಾಂಗ್ರೆಸ್ ಕಾರ್ಯರ್ತನಾಗಿ ನಂತರ ಸುಂಟಿಕೊಪ್ಪ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ನಿಷ್ಠಾವಂತನಾಗಿ ಕಾರ್ಯನಿರ್ವಹಿಸಿದ್ದೇನೆ. ಅದಲ್ಲದೇ ಸುಂಟಿಕೊಪ್ಪ ಭಾಗದಲ್ಲಿ ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆದು ಯುವ ಕಾಂಗ್ರೆಸ್ ಬಲಪಡಿಸುವ ಕೆಲಸ ಮಾಡಿದ್ದೇನೆ.

ಆದರೆ ಕಿಡಿಗೇಡಿಗಳ ಗುಂಪೊಂದು ನನ್ನ ಮೇಲೆ ಹಲ್ಲೆ ಮಾಡಿದ ಸಂದರ್ಭ, ಸುಂಟಿಕೊಪ್ಪ ಠಾಣೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಲತೀಫ್ ಸುಂಟಿಕೊಪ್ಪ ಮತ್ತು ಸಿಸಿಬಿ ವಿರಾಜಪೇಟೆ ತಂಡದ ಯುವಕರು ಹೊರತುಪಡಿಸಿ ಯಾರು ಕೂಡ ನನ್ನ ಬೆಂಬಲಕ್ಕೆ ನಿಂತಿಲ್ಲ.

ಘಟನೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಸುಂಟ್ಟಿಕೊಪ್ಪ ನಗರ ಕಾಂಗ್ರೆಸ್ ನಾಯಕರ ಗಮನಕ್ಕೆ ತಂದರು ಕೂಡ, ನನ್ನ ಬೆಂಬಲಕ್ಕೆ ನಿಲ್ಲದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅನೂಪ್ ಕುಮಾರ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಮುಖಂಡರ ಈ ಧೋರಣೆಯಿಂದ ಬೇಸತ್ತು ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಮುಂದಿನ ಮೂರು ದಿನಗಳಲ್ಲಿ ನಿರ್ಧಾರ ತಿಳಿಸುವುದಾಗಿ ಅನೂಪ್ ಕುಮಾರ್ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಅನೂಪ್ ಕುಮಾರ್ ಚಾರಿಟೇಬಲ್ ಟ್ರಸ್ಟ್ ಮೂಲಕ ಜನಸೇವೆಗೆ ಸದಾ ಸಿದ್ಧನಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡಿದ್ದ ಯುವ ಕಾಂಗ್ರೆಸ್ ಆಂತರಿಕ ಚುನಾವಣೆಯಲ್ಲಿ ಯುವ ಕಾಂಗ್ರೆಸ್ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸ್ಥಾನಕ್ಕೆ ಅನೂಪ್ ಕುಮಾರ್ ಸ್ಪರ್ಧಿಸಿದ್ದರು. ಅದಲ್ಲದೇ ಅನೂಪ್ ಕುಮಾರ್ ಅವರ ಗೆಲುವು ಕೂಡ ಬಹುತೇಕ ಖಚಿತಗೊಂಡಿತ್ತು. ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುವ ಮುನ್ನ ಅನೂಪ್ ಕುಮಾರ್ ಅವರ ರಾಜೀನಾಮೆ ನೀಡಲು ಮುಂದಾಗಿರುವುದು ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ.

ಸುಂಟಿಕೊಪ್ಪ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಅನೂಪ್ ಕುಮಾರ್ ಪ್ರಬಲ ಆಕಾಂಕ್ಷಿಯಾಗಿದ್ದರು.

Continue Reading

Trending

error: Content is protected !!