Connect with us

National - International

NISAR ಉಪಗ್ರಹ ಉಡಾವಣೆ ಯಶ್ವಸಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಹತ್ವ ಮೈಲಿಗಲ್ಲು

Published

on

ಶ್ರೀಹರಿಕೋಟ: ಪ್ರಥಮ ಬಾರಿಗೆ ಭಾರತದ ಇಸ್ರೊ ಹಾಗೂ ಅಮೆರಿಕದ ನಾಸಾ  ಜಂಟಿಯಾಗಿ ಅಭಿವೃದ್ಧಿಪಡಿಸಿದ ಭೂಮಿ ಸಮೀಕ್ಷೆಯ ಸಿಂಥೆಟಿಕ್‌ ಅಪರ್ಚರ್ ರೇಡಾರ್ (NISAR) ಉಪಗ್ರಹ ಉಡಾವಣೆ ಯಶಸ್ವಿಯಾಗಿದೆ.

ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಇಂದು ಸಂಜೆ 5:40 ಗಂಟೆಗೆ ಜಿಎಸ್‌ಎಲ್‌ವಿ- ಎಫ್‌16 ರಾಕೆಟ್‌ ಮೂಲಕ ನಾಸಾ-ಇಸ್ರೋ ಸಿಂಥೆಟಿಕ್‌ ಅಪರ್ಚರ್ ರೇಡಾರ್ (NISAR) ಉಡಾವಣೆ ಮಾಡಲಾಯಿತು. ಉಪಗ್ರಹ ಯಶಸ್ವಿಯಾಗಿ ಕಕ್ಷೆಗೆ ತಲುಪುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮಹತ್ವದ ಮೈಲಿಗಲ್ಲು ನಿರ್ಮಿಸಿದೆ.
 NISAR ಉಪಗ್ರಹ 2,392 ಕೆ.ಜಿ. ತೂಕದ ಹಾಗೂ ಡ್ಯುಯಲ್-ಫ್ರೀಕ್ವೆನ್ಸಿ ರೇಡಾರ್‌ ವ್ಯವಸ್ಥೆಗಳಿಂದ (L-ಬ್ಯಾಂಡ್ ಮತ್ತು S-ಬ್ಯಾಂಡ್) ಚಾಲಿತಯಾಗಿದ್ದು, ವಿಪತ್ತುಗಳು, ಹವಾಮಾನ ಬದಲಾವಣೆಗಳು ಹಾಗೂ ಪರಿಸರ ಬದಲಾವಣೆಗಳ ಬಗ್ಗೆ ನೈಜ-ಸಮಯದ ಡೇಟಾವನ್ನು ಒದಗಿಸಲಿದೆ. ಎಲ್ಲಾ ಹವಮಾನದಲ್ಲಿ ಹಗಲು ಮತ್ತು ರಾತ್ರಿಯ ವೇಳೆ ಹೆಚ್ಚಿನ ರೆಸಲ್ಯೂಶನ್ ಇರುವ ಚಿತ್ರವನ್ನು ಸೆರೆ ಹಿಡಿಯಲಿದೆ.

ಎಲ್‌–ಬ್ಯಾಂಡ್ ಅನ್ನು ನಾಸಾ ತಯಾರಿಸಿದ್ದರೆ ಎಸ್‌–ಬ್ಯಾಂಡ್‌ ಅನ್ನು ಇಸ್ರೊ ತಯಾರಿಸಿದೆ. ಎಸ್‌–ಬ್ಯಾಂಡ್‌ ಅನ್ನು ಸಿಂಥೆಟಿಕ್‌ ಅಪರ್ಚರ್ ರೇಡಾರ್‌ನಲ್ಲಿ ಅಳವಡಿಸಲಾಗುತ್ತದೆ. ಇದರಿಂದ ಭೂಮಿಗೆ ಸಂಬಂಧಿಸಿದಂತೆ ದತ್ತಾಂಶ ಸಂಗ್ರಹ ಸಾಧ್ಯವಾಗಲಿದೆ.

NISAR 13,000 ಕೋಟಿ ರೂ. ವೆಚ್ಚ 
ಇನ್ನೂ ನಿಸಾರ್‌ ಭೂಸರ್ವೇಕ್ಷಣಾ ಉಪಗ್ರಹಕ್ಕೆ 13,000 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ವಿಶ್ವದ ಅತ್ಯಂತ ದುಬಾರಿ ಕಣ್ಗಾವಲು ಉಪಗ್ರಹವಾಗಿ ಗುರುತಿಸಿಕೊಂಡಿದೆ. ಅಲ್ಲದೇ ನಿಸಾರ್‌ ಉಪಗ್ರಹವು ಒಂದು ಬಾರಿಗೆ 242 ಕಿಮೀ ಭೂವಿಸ್ತೀರ್ಣವನ್ನು ನೋಡುವ ಸಾಮರ್ಥ್ಯ ಹೊಂದಿದೆ. 97 ನಿಮಿಷಕ್ಕೆ ಭೂಮಿಗೆ ಒಂದು ಸುತ್ತು ಬರಲಿದೆ. ಮುಖ್ಯವಾಗಿ ನಿಸಾರ್‌ ಉಪಗ್ರಹವು ಕಳುಹಿಸುವ ಎಲ್ಲ ಮಾಹಿತಿಗಳು ಹಾಗೂ ದತ್ತಾಂಶಗಳನ್ನು ಉಚಿತವಾಗಿ ಎಲ್ಲಾ ದೇಶಗಳು ಅಧ್ಯಯನಕ್ಕೆ ಬಳಸಿಕೊಳ್ಳಬಹುದಾಗಿದೆ. 

NISAR ಉಪಹ್ರಹದಿಂದ ಏನು ಲಾಭ?

ಅರಣ್ಯ ಹಾಗೂ ಜೀವವೈವಿಧ್ಯ ಸಂರಕ್ಷಣೆ: ದಟ್ಟವಾದ ಸಸ್ಯವರ್ಗವನ್ನು ಭೇದಿಸುವ ಸಾಮರ್ಥ್ಯವನ್ನು NISAR ಹೊಂದಿರುವುದು ವಿಶೇಷ. ಅರಣ್ಯನಾಶ, ಅರಣ್ಯದಲ್ಲಿ ಆಗುವ ಬದಲಾವಣೆಯನ್ನು ನಕ್ಷೆ ಮಾಡುವಲ್ಲಿ ಪ್ರಬಲ ಸಾಧನವಾಗಿ ಬಳಕೆಯಾಗಲಿದೆ. ಅಕ್ರಮ ಮರ ಕಡಿಯುವಿಕೆಯನ್ನು ಪತ್ತೆಹಚ್ಚಲು, ಅಳಿವಿನಂಚಿನಲ್ಲಿರುವ ಪರಿಸರ ವ್ಯವಸ್ಥೆಗಳನ್ನು ರಕ್ಷಿಸಲು ಡೇಟಾವನ್ನು ಬಳಸಬಹುದು.

ವಿಪತ್ತು ನಿರ್ವಹಣೆ: ಭೂಕಂಪಗಳು, ಭೂಕುಸಿತಗಳು, ಪ್ರವಾಹಗಳು, ಜ್ವಾಲಾಮುಖಿ ಚಟುವಟಿಕೆಗಳು ಮತ್ತು ಇತರ ನೈಸರ್ಗಿಕ ವಿಕೋಪಗಳ ಬಗ್ಗೆ NISAR ರಿಯಲ್‌ ಟೈಂ ಡೇಟಾವನ್ನು ಒದಗಿಸಲಿದೆ.ಅಧಿಕಾರಿಗಳು ಈ ಡೇಟಾವನ್ನು ಬಳಸಿಕೊಂಡು ಹಾನಿಯನ್ನು ನಕ್ಷೆ ಮಾಡಲು, ವಿಪತ್ತಿನ ಪ್ರಗತಿಯನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ.

ಹವಾಮಾನ ಮೇಲ್ವಿಚಾರಣೆ: ಉಪಗ್ರಹವು ಹಿಮನದಿ ಕರಗುವಿಕೆ, ಸಮುದ್ರ ಮಟ್ಟ ಏರಿಕೆ, ಮಣ್ಣಿನ ತೇವಾಂಶ ಟ್ರ್ಯಾಕ್ ಮಾಡುತ್ತದೆ.  ವಿಜ್ಞಾನಿಗಳಿಗೆ ಜಾಗತಿಕ ತಾಪಮಾನ ಏರಿಕೆಯ ವೇಗ ಮತ್ತು ಅದರ ಪ್ರಾದೇಶಿಕ ಪರಿಣಾಮಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ.

ಕೃಷಿ ಮುನ್ಸೂಚನೆ: NISAR ಬೆಳೆ ಬೆಳವಣಿಗೆ, ಮಣ್ಣಿನ ಸ್ಥಳಾಂತರ, ನೀರಾವರಿ ಮಟ್ಟಗಳು ಮತ್ತು ಭೂ ಬಳಕೆಯ ಬದಲಾವಣೆಗಳನ್ನು ಮೇಲ್ವಿಚಾರಣೆ ಮಾಡಬಹುದು. ಇದು ಸರ್ಕಾರಗಳು ಇಳುವರಿಯನ್ನು ಊಹಿಸಲು, ನೀರಿನ ಬಳಕೆಯನ್ನು ನಿರ್ವಹಿಸಲು ಮತ್ತು ಬರ ಬರಬಹುದಾ? ಇಲ್ಲವೋ ಎಂಬುದನ್ನು ಮೊದಲೇ ಪತ್ತೆಹಚ್ಚಲು ಅನುವು ಮಾಡಿಕೊಡುತ್ತದೆ.

ನಗರ ಮತ್ತು ಮೂಲಸೌಕರ್ಯ ಯೋಜನೆ: ವಿಶೇಷವಾಗಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಭೂ ಕುಸಿತ ಮತ್ತು ರಚನಾತ್ಮಕ ಬದಲಾವಣೆಗಳ ಮಾಹಿತಿ ಸಿಗಲಿದೆ. ಅಣೆಕಟ್ಟುಗಳು, ರಸ್ತೆಗಳು, ಸೇತುವೆಗಳು ಮತ್ತು ಕಟ್ಟಡಗಳ ಮೇಲ್ವಿಚಾರಣೆಯಲ್ಲಿ ಉಪಗ್ರಹ ಸಹಾಯ ಮಾಡಲಿದೆ.

National - International

ಭಾರತ-ರಷ್ಯಾ ಆರ್ಥಿಕ ಬಲ ಹೆಚ್ಚಿಸಲು ವಿಷನ್- 2030: ಪಿಎಂ ಮೋದಿ-ಪುಟಿನ್‌ ಮಧ್ಯೆ ದ್ವಿಪಕ್ಷೀಯ ಒಪ್ಪಂದ

Published

on

ನವದೆಹಲಿ: ಭಾರತ ಮತ್ತು ರಷ್ಯಾ ಎರಡೂ ದೇಶಗಳ ನಡುವಿನ ಆರ್ಥಿಕ ಸಹಕಾರ ಹೆಚ್ಚಿಸಲು ವಿಷನ್ 2030  ದಾಖಲೆಗೆ ಸಹಿ ಹಾಕಿವೆ. ಈ ಮೂಲಕ ಉಭಯ ರಾಷ್ಟ್ರಗಳು ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಹೆಚ್ಚಿಸುವ  ಹಲವಾರು ವ್ಯಾಪಾರ ಮಾರ್ಗಗಳನ್ನ ತೆರೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ  ತಿಳಿಸಿದರು.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋದಿ ಅವರು, ಆರ್ಥಿಕ ಸಹಕಾರವನ್ನು ಇನ್ನಷ್ಟು ಹೆಚ್ಚಿಸಲು, ನಾವು ʻವಿಷನ್ 2030ʼ ದಾಖಲೆಗೆ ಸಹಿ ಹಾಕಿದ್ದೇವೆ. ಇಂದು, ನಾವಿಬ್ಬರೂ ಭಾರತ-ರಷ್ಯಾ ವ್ಯಾಪಾರ ವೇದಿಕೆಯಲ್ಲಿ ಭಾಗವಹಿಸಿದ್ದೇವೆ. ಈ ಒಪ್ಪಂದವು ಆದ್ಯತೆಯ ಕ್ಷೇತ್ರಗಳಲ್ಲಿ ಬೆಳವಣಿಗೆಯನ್ನು ವೇಗಗೊಳಿಸುತ್ತದೆ. ಅಲ್ಲದೇ ಎರಡೂ ದೇಶಗಳ ನಡುವಿನ ದೀರ್ಘಕಾಲೀನ ಆರ್ಥಿಕ ಸಂಬಂಧವನ್ನು ಇನ್ನಷ್ಟು ಬಲಪಡಿಸುತ್ತದೆ. ಅಲ್ಲದೇ ಸಹ-ಉತ್ಪಾದನೆ ಮತ್ತು ಸಹ-ನಾವೀನ್ಯತೆಗಾಗಿ ಹೊಸ ಮಾರ್ಗಗಳನ್ನು ತೆರೆಯುತ್ತವೆ ಎಂಬ ವಿಶ್ವಾಸ ನನಗಿದೆ ಎಂದು  ಹೇಳಿದರು.

ಯುರೇಷಿಯನ್ ಆರ್ಥಿಕ ಒಕ್ಕೂಟದೊಂದಿಗೆ FTA ಅನ್ನು ಸಾಕಾರಗೊಳಿಸಲು ಎರಡೂ ದೇಶಗಳು ಹೊಸ ಕ್ರಮಗಳನ್ನ ತೆಗೆದುಕೊಳ್ಳುತ್ತಿವೆ ಎಂದರು. ಇದೇ ಸಮಯದಲ್ಲಿ ಭಯೋತ್ಪಾದನೆಯ ವಿಷಯದಲ್ಲಿ ಜಾಗತಿಕ ಏಕತೆಯನ್ನು ಕೋರಿದ ಪ್ರಧಾನಿ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ – ರಷ್ಯಾ ಒಟ್ಟಾಗಿ ಸಾಗಲಿವೆ ಎಂದು ತಿಳಿಸಿದರು.

ಇನ್ನೂ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಪುಟಿನ್, ಭಾರತದಲ್ಲಿ ತಮಗೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ಅಧ್ಯಕ್ಷೆ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು. ಭಾರತ ಮತ್ತು ರಷ್ಯಾ ನಡುವಿನ ಅಭಿವೃದ್ಧಿ ಹೆಚ್ಚಿಸಲು ನಾನು, ಪ್ರಧಾನಿ ಮೋದಿ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

Continue Reading

National - International

ರಷ್ಯಾದ ನಾಗರಿಕರಿಗೆ 30 ದಿನಗಳ ಉಚಿತ ಇ-ಟೂರಿಸ್ಟ್‌ ವೀಸಾ : ಪಿಎಂ ಮೋದಿ

Published

on

ನವದೆಹಲಿ:  ಶೀಘ್ರದಲ್ಲೇ ಭಾರತವೂ,  ರಷ್ಯಾದ ನಾಗರಿಕರಿಗೆ 30 ದಿನಗಳ ಉಚಿತ ಇ-ಟೂರಿಸ್ಟ್‌ ವೀಸಾ  ಹಾಗೂ 30 ದಿನಗಳ ಗುಂಪು ಪ್ರವಾಸಿ (ಗ್ರೂಪ್‌ ಟೂರಿಸ್ಟ್‌ ವೀಸಾ – Group Tourist Visa) ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ನವದೆಹಲಿಯಲ್ಲಿ ಇಂದು ನಡೆದ‌ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮಕ್ಕೆ) ಸಂಬಂಧಿಸಿದಂತೆ ಮಹತ್ವದ ಘೋಷಣೆ ಹೊರಡಿಸಿದರು. ರಷ್ಯಾದ ನಾಗರಿಕರಿಗೆ ಇ-ಟೂರಿಸ್ಟ್‌ ವೀಸಾ ಮತ್ತು ಗುಂಪು ಪ್ರವಾಸಿ ವೀಸಾ ಸೇವೆಗಳನ್ನ ಶೀಘ್ರದಲ್ಲೇ ಆರಂಭಿಸಲಿದ್ದೇವೆ. ಈ ತೀರ್ಮಾನ ಪ್ರಕಟಿಸಲು ನನಗೆ ತುಂಬಾ ಹರ್ಷವಾಗಿದ್ದು, ಮುಂದಿನ 30 ದಿನಗಳಲ್ಲಿ ಸಕ್ರಿಯಗೊಳಿಸಲಾಗುವುದು ಎಂದು ಹೇಳಿದರು.

ಉಭಯ ದೇಶದ ನಾಗರಿಕರಿಗೆ ಇದು ನಿರ್ಣಾಯಕವಾಗಿದೆ. ಈ ನಿಟ್ಟಿನಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ, ಈ ನಿರ್ಧಾರವು ಭಾರತ-ರಷ್ಯಾದ ಸಂಬಂಧವನ್ನು ಅದರಲ್ಲೂ ವಿಶೇಷವಾಗಿ ಪ್ರವಾಸೋದ್ಯಮ ಮತ್ತು ವ್ಯಾಪಾರ ಕ್ಷೇತ್ರದಲ್ಲಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಎಂದು  ತಿಳಿಸಿದರು.

ಇ-ಟೂರಿಸ್ಟ್‌ ವೀಸಾ ಎಂದರೇನು?
ಇ-ಪ್ರವಾಸಿ ವೀಸಾ ಅಂದರೆ ವಿದೇಶಿ ಪ್ರವಾಸಿಗರು ಭಾರತಕ್ಕೆ ಭೇಟಿ ನೀಡಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಪಡೆಯುವ ಎಲೆಕ್ಟ್ರಾನಿಕ್ ವೀಸಾ. ಇದು ಸಂಪೂರ್ಣ ಆನ್‌ಲೈನ್‌ ಪ್ರಕ್ರಿಯೆ ಆಗಿರುತ್ತದೆ. ಇದನ್ನು ಪಡೆಯಲು ನೀವು ವೀಸಾ ಕಚೇರಿಗೆ ಭೇಟಿ ನೀಡುವ ಅಗತ್ಯ ಇರೋದಿಲ್ಲ. ಪ್ರವಾಸಿಗರು ಮನರಂಜನೆ, ಪ್ರಯಾಣ ಅಥವಾ ಸಂಬಂಧಿಕರನ್ನ ಭೇಟಿ ಮಾಡುವಂತಹ ಉದ್ದೇಶಗಳಿಗಾಗಿ ಇ-ಟೂರಿಸ್ಟ್‌ ವೀಸಾ ಪಡೆಯಲು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಬಳಿಕ ಮುಂದೇನು?
ಇ-ಪ್ರವಾಸಿ ವೀಸಾಗಾಗಿ ಅರ್ಜಿ ಸಲ್ಲಿಸಿದ ಬಳಿಕ, ನೀವು ಇಮೇಲ್ ಮೂಲಕ ಎಲೆಕ್ಟ್ರಾನಿಕ್ ಪ್ರಯಾಣ ಅಧಿಕಾರವನ್ನು (ETA) ಅನ್ನು ಸ್ವೀಕರಿಸುತ್ತೀರಿ. ಈ ಅಧಿಕಾರವು ನಿಮ್ಮ ಪಾಸ್‌ಪೋರ್ಟ್‌ಗೆ ಎಲೆಕ್ಟ್ರಾನಿಕ್ ಆಗಿ ಲಿಂಕ್ ಮಾಡಲಾಗಿರುತ್ತದೆ. ಜೊತೆಗೆ ಭಾರತದ ಪ್ರವಾಸ ಕೈಗೊಳ್ಳಲು ಅನುವು ಮಾಡಿಕೊಡುತ್ತದೆ. ಈ ಪ್ರಕ್ರಿಯೆಯು ಸಾಂಪ್ರದಾಯಿಕ ವೀಸಾಗಳಿಗಿಂತ ಅಧಿಕ ಸರಳ ಮತ್ತು ವೇಗವಾಗಿ ನಡೆಯುತ್ತದೆ.
Continue Reading

National - International

ರಾಜಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

Published

on

ನವದೆಹಲಿ:  ಭಾರತದ ಪ್ರವಾಸದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮನ್ ಪುಟಿನ್ ಅವರು ಇಂದು ರಾಜಘಾಟ್ ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿ  ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿರುವ ರಾಜಘಾಟ್ ಗೆ ವ್ಲಾಡಿಮನ್ ಪುಟಿನ್ ಪುಷ್ಪ ನಮನ ಸಲ್ಲಿಸಿದ ಬಳಿಕ ದೆಹಲಿಯ ಹೈದರಾಬಾದ್ ಭವನಕ್ಕೆ ತೆರಳಿದ್ದಾರೆ.

ಇದಕ್ಕೂ ಮುನ್ನ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ವ್ಲಾಡಿಮನ್ ಪುಟಿನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ  ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ನಂತರ ಪುಟಿನ್ ಭಾರತೀಯ ಸೇನೆಯಿಂದ ಗೌರವ ವಂದನೆ ಸ್ವೀಕಾರ ಮಾಡಿದ್ದಾರೆ.

Continue Reading

Trending

error: Content is protected !!