Hassan
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
ಹಾಸನ: ಗ್ರಾಮದಿಂದ ಓಡಿಸಿ ನನ್ನ ಆಸ್ತಿ ಲಪಾಟಿಯಿಸುವ ನಿಟ್ಟಿನಲ್ಲಿ ಅನೇಕ ದೇವರ ಕೈಮುಗಿದು ನನಗೆ ಹಿಂಸೆ ಕೊಡುತ್ತಿದ್ದು, ಸ್ಥಳಕ್ಕೆ ಅಧಿಕಾರಿಗಳು ಬಂದು ನನಗೆ ನ್ಯಾಯ ದೊರಕಿಸಿಕೊಡಬೇಕು ಎಂದು ವೃದ್ಧೆ ಓರ್ವಳು ಡಿಸಿ ಕಛೇರಿ ಮುಂದೆ ತಹಸೀಲ್ದಾರಲ್ಲಿ ಮನವಿ ಮಾಡಿಕೊಂಡು ಕಣ್ಣಿರು ಹಿಟ್ಟಿದ ಪ್ರಸಂಗ ನಡೆಯಿತು.
ನಂತರ ಮಾನವಿಯತೆ ದೃಷ್ಠಿಯಲ್ಲಿ ಹಾಗೂ ನ್ಯಾಯಕೊಡಿಸುವುದಾಗಿ ಅರಸೀಕೆರೆ ತಹಸೀಲ್ದಾರ್ ಸಂತೋಷ್ ಅವರು ತಮ್ಮ ವಾಹನದಲ್ಲೆ ಕೂರಿಸಿಕೊಂಡು ಆಕೆಯ ಸ್ಥಳಕ್ಕೆ ಕರೆದೊಯ್ದರು.
ಅರಸೀಕೆರೆ ತಾಲೂಕಿನ ಕಣಕಟ್ಟೆಹಳ್ಳಿ ಗ್ರಾಮದ ನಂಜುಂಡಮ್ಮ ಎಂಬುವರೇ ನನಗೆ ರಕ್ಷಣೆ ನೀಡಿ ನನ್ನ ಆಸ್ತಿ ನಮಗೆ ಕೊಡಿಸುವಂತೆ ಮನವಿ ಮಾಡಿದ ವೃದ್ಧೆಯಾಗಿದ್ದಾರೆ. ನಡೆಯಲು ಸಾಧ್ಯವಾಗದೇ ತೆವಲುತ್ತಲೆ ಡಿಸಿ ಕಛೇರಿಗೆ ಬಂದಿದ್ದು, ಈ ವೇಳೆ ತಹಸೀಲ್ದಾರ್ ವಿಚಾರಿಸಿದಾಗ ಆಕೆ ಹೇಳಿದ್ದು ಕೇಳಿ ಅಧಿಕಾರಿಗಳು ಬೇಸರಗೊಂಡರು.
ತಹಸೀಲ್ದಾರ್ ಎದುರು ಮಾತನಾಡಿದ ವೃದ್ಧೆ, ನಮ್ಮ ಗ್ರಾಮದ ರಾಜ, ಪಾಲಾಕ್ಷಮ್ಮ, ದಿವ್ಯ, ಯೋಗೇಶ್, ಜ್ಯೋತಿ, ನಂಜುಂಡೇಗೌಡ, ಬಸವರಾಜಪ್ಪ, ಬಸವರಾಜ ಹೆಂಡತಿ ತಾಯಮ್ಮ, ಬಸವರಾಜ, ತಾಯಮ್ಮನ ಮಕ್ಕಳುಗಳು ಇಬ್ಬರು ಗಂಡು ಮಕ್ಕಳು, ಯೋಗೇಶ್ನ ಎರಡು ಹೆಣ್ಣು ಮಕ್ಕಳು, ಶಾರದಮ್ಮ, ಸ್ವಾಮಿ, ಭಾಗ್ಯ, ಶೇಖರ, ಹಾಗೂ ಶೇಖರನ ಹೆಂಡತಿ ಜ್ಯೋತಿ, ಹಾಗೂ ಅವರ ಮಗ, ಇವರುಗಳು ಸೇರಿಕೊಂಡು ನನ್ನನ್ನು ಗ್ರಾಮ ಬಿಡಿಸಿ ನನ್ನ ಆಸ್ತಿ ಲಪಟಾಯಿಸಲು ಹಾಗೂ ದೇವರುಗಳಾದ ಟಿ.ಕೋಡಿಹಳ್ಳಿ ದ್ಯಾವಮ್ಮ, ತಳ್ಳುರಮ್ಮ, ಚೌಡೇಶ್ವರಿ, ಪಂಡಿತರು, ಕಲ್ಲು ಮಕಾಡೆ ಹಾಕಿಕೊಂಡು ನಮ್ಮ ಗ್ರಾಮಕ್ಕೆ ಬರದಂತೆ ಹೋಗದಂತೆ ದೊಣ್ಣೆ, ಹಾಗೂ ಮಚ್ಚು. ಎಲ್ಲ ಹಿಡಿದುಕೊಂಡು ನನಗೆ ಬೆದರಿಕೆ ಹಾಕುತ್ತಿರುತ್ತಾರೆ ಎಂದು ದೂರಿದರು.
ನಾನು ಸುಮಾರು ಬಾರಿ ಅರ್ಜಿಯನ್ನು ಎಲ್ಲಾ ಅಧಿಕಾರಿಗಳಿಗೆ ಕೊಟ್ಟರು ಸಹ ಯಾರು ನ್ಯಾಯ ಕೊಡಿಸುತ್ತಿಲ್ಲ. ಎಸ್.ಪಿ. ಸಹ ಬರುವುದಿಲ್ಲವೆಂದು ನನಗೆ ತುಂಬಾ ತೊಂದರೆ ಕೊಡುತ್ತಿರುತ್ತಾರೆ. ಆದ್ದರಿಂದ ನನಗೆ ನ್ಯಾಯ ದೊರಕಿಸಿಕೊಡಬೇಕಾಗಿ ಹಾಗೂ ನನ್ನ ಜಮೀನನ್ನು ನನಗೆ ಬಿಡಿಸಿಕೊಡಬೇಕಾಗಿ ತಮ್ಮಲ್ಲಿ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಅರಸೀಕೆರೆ ತಹಸೀಲ್ದಾರರಲ್ಲಿ ಕೈಮುಗಿದು ವೃದ್ಧೆ ಬೇಡಿದರು.
Hassan
ಪೊಲೀಸರ ಭರ್ಜರಿ ಕಾರ್ಯಚರಣೆ: ಮಟ್ಕಾ ಆಡುತ್ತಿದ್ದ 17 ಮಂದಿ ಬಂಧನ
ಹಾಸನ: ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಪೆನ್ಷನ್ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ಜೂಜಾಟವಾಡಿಸುತ್ತಿದ್ದ 17 ಜನ ಆರೋಪಿಗಳನ್ನು ಬಂಧಿಸಿ 65,140 ರೂ. ನಗದು ಹಣ, 20 ಮೊಬೈಲ್, 2 ಸ್ಕೂಟಿ ಹಾಗು 2 ಆಟೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರ ಮಾರ್ಗದರ್ಶನದಲ್ಲಿ, ಹಾಸನ ಉಪ ವಿಭಾಗ ಪೊಲೀಸ್ ಉಪಾಧೀಕ್ಷಕ ಗಂಗಾಧರಪ್ಪ ಅವರ ನೇತೃತ್ವದಲ್ಲಿ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸ್ವಾಮಿನಾಥ, ಹಾಸನ ನಗರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಕೇಶವಪ್ರಸಾದ್, ಪ್ರಿಯಾಂಕ, ಪೊಲೀಸ್ ಶಾಂತಿಗ್ರಾಮ ಠಾಣೆ ಸಬ್ ಇನ್ಸ್ಪೆಕ್ಟರ್ ಅರುಣ್, ಮಂಜುನಾಥ, ಅಂತಿಮ, ಹಾಗು ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಿ ಒಟ್ಟು ಆರು ಪ್ರರಕಣದಲ್ಲಿ 17 ಜನ ಆರೋಪಿಗಳನ್ನು ಬಂಧಿಸಿದ್ದು 65,140 ನಗದು ಹಣ, 20 ಮೊಬೈಲ್, 2 ಸ್ಕೂಟಿ ಹಾಗೂ 2 ಆಟೋಗಳನ್ನು ವಶಪಡಿಸಿಕೊಳ್ಳಲಾಗಿದೆ.
Hassan
ಸಾಲಬಾಧೆ ತಾಳಲಾರದೆ ನಾಲೆಗೆ ಹಾರಿ ಓರ್ವ ರೈತ ಆತ್ಮಹ*ತ್ಯೆ
ಚನ್ನರಾಯಪಟ್ಟಣ : ತಾಲೂಕಿನ ಡಿ.ಚಿಕ್ಕಗೊಂಡನಹಳ್ಳಿ ಗ್ರಾಮದ ಓರ್ವ ರೈತರೊಬ್ಬರು ಸಾಲಬಾಧೆ ತಾಳಲಾರದೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ತಾಲೂಕಿನ ಕಸಬಾ ಹೋಬಳಿ ಡಿ.ಚಿಕ್ಕಗೊಂಡನಹಳ್ಳಿ ಗ್ರಾಮದ ರೈತ ಕಾಳೇಗೌಡ (57) ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎಸ್ಎಂಎಫ್ಜಿ ಗ್ರಾಮಶಕ್ತಿಯಲ್ಲಿ 50 ಸಾವಿರು, ಬಿಎಸ್ಎಸ್ ಮೈಕ್ರೋ ವೈನಾನ್ಸ್ನಲ್ಲಿ 1.2 ಲಕ್ಷ ರೂ. ಚೈತನ್ಯ ಇಂಡಿಯಾ ಪಿನ್ ಕ್ರೆಡಿಟ್ ನಲ್ಲಿ 1.39 ಲಕ್ಷ ರೂ. ಡಿಂಡಗೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 10 ಸಾವಿರ, ಗ್ರಾಮೀಣ ಕೂಟ 1.50 ಲಕ್ಷ ರೂ. ಶ್ರೀಸಂತ್ಯಮ್ಮ ಸ್ವಸಹಾಯ ಮಹಿಳಾ ಸಂಘದಲ್ಲಿ 1.50 ಲಕ್ಷ ರೂ. ಧರ್ಮಸ್ಥಳ ಸಂಘದಲ್ಲಿ 2 ಲಕ್ಷ ರೂ. ಸಾಲ ಮಾಡಿದ್ದಾರೆ. ಸಾಕಷ್ಟು ಪೈನಾನ್ಸ್ಗೆ ಶೇ.50 ರಷ್ಟು ಸಾಲ ತೀರಿಸಿದ್ದಾರೆ ಇನ್ನೂ ಕೆಲ ಕಡೆಯಲ್ಲಿ ಸಾಲ ಬಾಕಿ ಉಳಿಸಿಕೊಂಡಿದ್ದಾರೆ.
ಡಿ.ಚಿಕ್ಕಗೊಂಡನಹಳ್ಳಿ ಗ್ರಾಮದ ಸರ್ವೆ ನಂ. 59 ರಲ್ಲಿ 1.10 ಎಕರೆ ಕೃಷಿ ಭೂಮಿಯನ್ನು ಹೊಂದಿದ್ದು ಕಳೆದ 40 ವರ್ಷಗಳಿಂದ ಸಾಗುವಳಿ ಮಾಡುಕೊಂಡು ಬರುತ್ತಿದ್ದು ಈ ಕೃಷಿ ಭೂಮಿಯನ್ನು ತಮ್ಮ ಹೆಸರಿಗೆ ಮಂಜೂರು ಮಾಡಿಕೊಡುವಂತೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತಕ್ಕೆ ನಾಲ್ಕು ದಶಕದಲ್ಲಿ 10ಕ್ಕೂ ಹೆಚ್ಚು ಸಲ ಸಾಗುವಳಿ ಮಂಜೂರು ಅರ್ಜಿ ಸಲ್ಲಿಸಿದ್ದರೂ 1982 ರಿಂದ ಮಂಜೂರಾತಿ ಮಾಡದೇ ಇರುವುದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈತ ಕಾಳೇಗೌಡ ನ.24 ರಂದು ಮನೆಯಿಂದ ಹೊರ ಹೋಗಿದ್ದಾರೆ ರಾತ್ರಿಯಾದರೂ ಮನೆಗೆ ಹಿಂದುರುಗದೆ ಇದುದ್ದರಿಂದ ಕುಟುಂಬಸ್ಥರು ಗ್ರಾಮದಲ್ಲಿ ಹುಡುಕಿದ್ದಾರೆ ಸ್ನೇಹಿತರನ್ನು ವಿಚಾರಿಸಿದಾಗ ಹೇಮಾವತಿ ಎಡದಂಡೆ ನಾಲೆ ಸಮೀಪದಲ್ಲಿ ಪಾದರಕ್ಷೆಗಳು, ಟವಲ್ ಹಾಗೂ ಜರ್ಕಿನ್ ಇರುವುದು ಪತ್ತೆಯಾಗಿದೆ, ನಾಲೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಿ ನಾಲೆ ನೀರಿನಲ್ಲಿ ಹುಡುಕಿದರೂ ಮೃತ ದೇಹ ಪತ್ತೆಯಾಗಿಲ್ಲ.
ತಾಲೂಕಿನ ಶ್ರವಣಬೆಳಗೊಳ ಹೋಬಳಿ ಹೊಸಹಳ್ಳಿ ಗ್ರಾಮ ಬಳಿ ಹೇಮಾವತಿ ನಾಲೆಯಲ್ಲಿ 18 ದಿವಸದ ನಂತರ ಮೃತ ದೇಹ ಪತ್ತೆಯಾಗಿದೆ. ಶ್ರವಣಬೆಳಗೊಳ ಠಾಣೆಯ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿ ಮೃತರ ಮಡದಿ ಮಂಗಳಮ್ಮ ಪುತ್ರ ಸುನಿಲ್ಕುಮಾರ್, ಪುತ್ರಿ ಸುನಿತಾರಿಗೆ ಮೃತ ದೇಹ ಹಸ್ತಾಂತರ ಮಾಡಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Hassan
ಡಾ. ತೃಪ್ತಿ ದಾಸ್ ಅಪರೂಪದ ಸಾಧನೆ: ಒಂದೇ ತಿಂಗಳಲ್ಲಿ 2 ಪ್ರತಿಷ್ಠಿತ ಯೂರೋಪ್ ಪದವಿ ಪಡೆದ ವೈದ್ಯೆ
ಹಾಸನ: ಜಿಲ್ಲೆಯ ಖ್ಯಾತ ವೈದ್ಯರಾದ ಡಾ. ದೇವದಾಸು ಹೆಚ್.ಆರ್. (ಆನಂದದಾಸ್ ಡಯಾಗ್ನೋಸ್ಟಿಕ್ ಲ್ಯಾಬ್) ಹಾಗೂ ಡಾ. ಕೆ.ವಿ. ಸುಜಾತಾ (ದಾಸ್ ಸ್ಕ್ಯಾನಿಂಗ್ ಸೆಂಟರ್) ಅವರ ಪುತ್ರಿ ಡಾ. ತೃಪ್ತಿ ದಾಸ್ ಅವರು ಯುರೋಪಿಯನ್ ಡಿಪ್ಲೊಮಾ ಇನ್ ರೇಡಿಯಾಲಜಿ (EDiR) ಪರೀಕ್ಷೆಯನ್ನು ಯಶಸ್ವಿಯಾಗಿ ಉತ್ತೀರ್ಣರಾಗುವ ಮೂಲಕ ಜಿಲ್ಲೆಯ ಮೊದಲ ಮಹಿಳಾ ವೈದ್ಯೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಡಾ. ತೃಪ್ತಿ ಅವರು ಇದೀಗ ಯುರೋಪಿಯನ್ ಬೋರ್ಡ್ ಪ್ರಮಾಣಿತ ತಜ್ಞರಾಗಿ ಗುರುತಿಸಲ್ಪಟ್ಟಿದ್ದಾರೆ. ಇದೇ ವೇಳೆ, ಅವರು ಡಯಾಗ್ನೊಸ್ಟಿಕ್ ರೇಡಿಯಾಲಜಿ (EDiR) ಮತ್ತು ಇಂಟರ್ವೇನ್ಶನ್ ರೇಡಿಯಾಲಜಿ (EBIR) ಎಂಬ ಎರಡೂ ಕ್ಷೇತ್ರಗಳಲ್ಲಿ ಕೇವಲ ಒಂದು ತಿಂಗಳಲ್ಲಿ ಯುರೋಪಿಯನ್ ಮಟ್ಟದ ಎರಡು ಪ್ರಮಾಣಪತ್ರಗಳನ್ನು ಪಡೆದಿರುವುದು ವಿಶೇಷ ಸಾಧನೆಯಾಗಿದೆ.

MBBS, MD, DNB, FVIR, EBIR, EDiR ಸೇರಿದಂತೆ ಅಂತರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಪದವಿಗಳನ್ನು ಗಳಿಸಿರುವ ಅವರು ಪ್ರತಿಭಾವಂತ ರೇಡಿಯಾಲಜಿಸ್ಟ್ ಆಗಿ ಗುರುತಿಸಿಕೊಂಡಿದ್ದಾರೆ. ಈ ರೀತಿ ಸಾಧನೆ ಮಾಡಿದಂತಹ ಬೆರಳೆಣಿಕೆ ಮಂದಿಯಲ್ಲಿ ಇವರು ಕೂಡ ಒಬ್ಬರು
ಮಂಗಳೂರಿನ ಯೆನೆಪೋಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಶಿಕ್ಷಣ ಪೂರ್ಣಗೊಳಿಸಿದ ಡಾ. ತೃಪ್ತಿ ದಾಸ್ ಅವರು ನಾಲ್ಕೂ ವರ್ಷಗಳಲ್ಲಿ ಡಿಸ್ಟಿಂಕ್ಷನ್ ಸಾಧಿಸುವುದರ ಜೊತೆಗೆ ವಿಶ್ವವಿದ್ಯಾಲಯ ಮಟ್ಟದಲ್ಲಿ ಅಗ್ರ ಶ್ರೇಣಿಯ ರ್ಯಾಂಕ್ ಪಡೆದು ಗಮನ ಸೆಳೆದಿದ್ದರು.
ನಂತರ ದಾವಣಗೆರೆಯ ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ರೇಡಿಯಾಲಜಿಯಲ್ಲಿ ಎಂಡಿ ಪದವಿ ಪಡೆದ ಅವರು, ಕಾಲೇಜಿಗೆ ಚಿನ್ನದ ಪದಕವನ್ನು ಗಳಿಸಿದ್ದು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ 4ನೇ ರ್ಯಾಂಕ್ ಪಡೆಯುವ ಮೂಲಕ ತಮ್ಮ ಶೈಕ್ಷಣಿಕ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದರು.ಇದಲ್ಲದೆ ರೇಡಿಯಾಲಜಿಯಲ್ಲಿ ಡಿಪ್ಲೊಮೇಟ್ ಆಫ್ ನ್ಯಾಷನಲ್ ಬೋರ್ಡ್ (DNB) ಪದವಿಯನ್ನೂ ಅವರು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಹಲವು ಯುವ ವೈದ್ಯರಿಗೆ ಪ್ರೇರಣೆಯಾಗಿದ್ದಾರೆ.

ಇಂಟರ್ವೆನ್ಷನಲ್ ರೇಡಿಯಾಲಜಿ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಡಾ. ತೃಪ್ತಿ ದಾಸ್ ಅವರು 2013 ರಿಂದ 2025ರವರೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ FVIR (ಫೆಲೋಶಿಪ್ ಇನ್ ವಾಸ್ಕುಲರ್ ಅಂಡ್ ಇಂಟರ್ವೆನ್ಷನಲ್ ರೇಡಿಯಾಲಜಿ) ತರಬೇತಿಯನ್ನು ಪೂರ್ಣಗೊಳಿಸಿದ್ದಾರೆ. ಇದೇ ವೇಳೆ ಕೇವಲ ಒಂದೇ ತಿಂಗಳ ಅವಧಿಯಲ್ಲಿ ಯುರೋಪಿನ ಎರಡು ಅತ್ಯಂತ ಪ್ರತಿಷ್ಠಿತ ಮತ್ತು ಕಠಿಣವೆಂದು ಪರಿಗಣಿಸಲ್ಪಡುವ ಪದವಿಗಳಾದ ಯುರೋಪಿಯನ್ ಡಿಪ್ಲೊಮಾ ಇನ್ ರೇಡಿಯಾಲಜಿ (EDiR) ಹಾಗೂ ಯುರೋಪಿಯನ್ ಬೋರ್ಡ್ ಆಫ್ ಇಂಟರ್ವೆನ್ಷನಲ್ ರೇಡಿಯಾಲಜಿ (EBIR) ಗಳಿಸುವ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. ಈ ಪ್ರಮಾಣಪತ್ರಗಳನ್ನು ಪಡೆದಿರುವ ಭಾರತದ ಕೆಲವೇ ಕೆಲವು ಮಹಿಳಾ ರೇಡಿಯಾಲಜಿಸ್ಟ್ಗಳಲ್ಲಿ ಡಾ. ತೃಪ್ತಿ ದಾಸ್ ಒಬ್ಬರಾಗಿದ್ದಾರೆ.
ಪ್ರಸ್ತುತ ಡಾ. ತೃಪ್ತಿ ದಾಸ್ ಅವರು ಬೆಂಗಳೂರಿನ ಪೀಪಲ್ ಟ್ರೀ ಆಸ್ಪತ್ರೆಯಲ್ಲಿ ಪೂರ್ಣಕಾಲಿಕ ಕನ್ಸಲ್ಟೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದು, ಅಲ್ಲಿನ ಇಂಟರ್ವೆನ್ಷನಲ್ ರೇಡಿಯಾಲಜಿ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಜೊತೆಗೆ ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂದರ್ಶಕ ಕನ್ಸಲ್ಟೆಂಟ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ರೇಡಿಯಾಲಜಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ, ಶೈಕ್ಷಣಿಕ ಸಂಶೋಧನೆ ಹಾಗೂ ರೋಗಿಗಳಿಗೆ ಸುಧಾರಿತ ಮತ್ತು ಕಡಿಮೆ ಅಪಾಯದ ಚಿಕಿತ್ಸೆ ನೀಡುವಲ್ಲಿ ಅವರು ವಿಶೇಷ ಆಸಕ್ತಿ ಹೊಂದಿದ್ದಾರೆ. ಇಮೇಜ್ ಗೈಡೆಡ್ ಇಂಟರ್ವೆನ್ಷನ್ ಕ್ಷೇತ್ರದಲ್ಲಿ ನೂತನ ತಂತ್ರಜ್ಞಾನ ಮತ್ತು ಆವಿಷ್ಕಾರಗಳನ್ನು ಅಳವಡಿಸುವ ನಿಟ್ಟಿನಲ್ಲಿ ಅವರು ನಿರಂತರವಾಗಿ ಶ್ರಮಿಸುತ್ತಿದ್ದಾರೆ.
ಜಿಲ್ಲೆಯ ಹೆಮ್ಮೆಯ ಪುತ್ರಿಯಾಗಿರುವ ಡಾ. ತೃಪ್ತಿ ದಾಸ್ ಅವರ ಈ ಸಾಧನೆಗಳು ಯುವ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ. ಇವರ ಈ ಸಾಧನೆಗೆ ಪೋಷಕರು ಸಂಬಂಧಿಕರು ಸ್ನೇಹಿತರು ಸೇರಿದಂತೆ ಜಿಲ್ಲೆಯ ಹಲವು ವೈದ್ಯರು ಕೂಡ ಅಭಿನಂದಿಸಿ ಶುಭ ಹಾರೈಸಿದ್ದಾರೆ.
-
Chikmagalur18 hours agoಬೆಳ್ಳಿ ಪದಕ ಪಡೆದ ಹೆಡ್ ಕಾನ್ಸ್ ಟೇಬಲ್ ಗಿರೀಶ್ ಟಿ ಎಸ್ ರವರಿಗೆ ಅಭಿನಂದನೆ ಸಲ್ಲಿಸಿದ ಚಿಕ್ಕಮಗಳೂರು ಜಿಲ್ಲಾ ಪೊಲೀಸ್
-
Chamarajanagar11 hours agoನಾಳೆ ರಂಗವಾಹಿನಿ ಜಾನಪದ ಕಾಲೇಜು ಉದ್ಘಾಟನೆ ಕಾರ್ಯಕ್ರಮ
-
State14 hours agoರಾಜ್ಯ ಸರ್ಕಾರದಿಂದ 15 ವರ್ಷ ಮೀರಿದ ವಾಹನಗಳ ಸ್ಕ್ರ್ಯಾಪ್ ಅನುಮೋದನೆ: ರಾಮಲಿಂಗಾರೆಡ್ಡಿ
-
Chikmagalur10 hours agoಡಿ.20 ರಿಂದ ಜ.6ರವರೆಗೆ ಜಿಲ್ಲೆಯಲ್ಲಿ ಹೆಲಿಟೂರಿಸಂ ಚಟುವಟಿಕೆ
-
Mandya10 hours agoSSLC ಪರೀಕ್ಷಾ ಫಲಿತಾಂಶ ಹೆಚ್ಚಿಸಲು ಕಾರ್ಯೋನ್ಮುಖರಾಗಲು ಸೂಚಿಸಿದ ಕೆ.ಆರ್.ನಂದಿನಿ
-
Hassan17 hours agoಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕನ ಬ್ರೈನ್ ಡೆಡ್ : ಅಂಗಾಂಗಗಳನ್ನು ದಾನ ಮಾಡಿದ ಪೋಷಕರು
-
State9 hours agoಗೃಹಲಕ್ಷ್ಮೀ ಯೋಜನೆಯಲ್ಲಿ ಮೋಸ: ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಸಿ.ಟಿ.ರವಿ
-
Hassan8 hours agoಪೊಲೀಸರ ಭರ್ಜರಿ ಕಾರ್ಯಚರಣೆ: ಮಟ್ಕಾ ಆಡುತ್ತಿದ್ದ 17 ಮಂದಿ ಬಂಧನ
